Karnataka: ಗ್ರಾಮೀಣ ಆವಿಷ್ಕಾರ ನಿಧಿ ಸ್ಥಾಪನೆಗೆ ನಿರ್ಧಾರ: ಪ್ರಿಯಾಂಕ್ ಖರ್ಗೆ
ಸಾಮಾಜಿಕವಾಗಿ ಪರಿಣಾಮ ಬೀರುವ ನವೋದ್ಯಮಗಳ ಆವಿಷ್ಕಾರ ಉತ್ತೇಜನೆ ಉದ್ದೇಶ
Team Udayavani, Dec 1, 2023, 11:52 PM IST
ಬೆಂಗಳೂರು: ಎಲಿವೇಟ್ ಕರ್ನಾಟಕ ಮಾದರಿಯಲ್ಲೇ ಗ್ರಾಮೀಣ ಪ್ರದೇಶಗಳಲ್ಲಿ ಸಾಮಾಜಿಕವಾಗಿ ಪೂರಕವಾದ ಪರಿಣಾಮ ಬೀರುವಂಥ ನವೋದ್ಯಮಗಳ ಆವಿಷ್ಕಾರಗಳನ್ನು ಉತ್ತೇಜಿಸಲು “ಗ್ರಾಮೀಣ ಆವಿಷ್ಕಾರ ನಿಧಿ” ಸ್ಥಾಪಿಸಲು ಸರಕಾರ ನಿರ್ಧರಿಸಿದೆ.
ಎಲಿವೇಟ್ ಯೋಜನೆ ಅಡಿ ನವೋದ್ಯಮಗಳಿಗೆ ಅಗತ್ಯ ಪ್ರೋತ್ಸಾಹ ನೀಡಲಾಗುತ್ತಿದೆ. ಅದೇ ರೀತಿ, “ಗ್ರಾಮೀಣ ಆವಿಷ್ಕಾರ ನಿಧಿ’ ಕಾರ್ಯನಿರ್ವಹಿಸಲಿದೆ. ಗ್ರಾಮೀಣ ಪ್ರದೇಶಗಳ ಅಭಿವೃದ್ಧಿಗೆ ಪೂರಕವಾದ ಯೋಚನೆಗಳು, ಯೋಜನೆಗಳನ್ನು ಹೊಂದಿರುವ ನವೋದ್ಯಮಗಳನ್ನು ಇದರಡಿ ಪ್ರೋತ್ಸಾಹಿಸಲಾಗುವುದು. ಇದೊಂದು ವಿನೂತನ ಕಾರ್ಯಕ್ರಮವಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ರಾಜ್ ಹಾಗೂ ಐಟಿ-ಬಿಟಿ ಸಚಿವ ಪ್ರಕಟಿಸಿದರು.
ನಗರದ ಅರಮನೆ ಆವರಣದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಖ್ಯವಾಗಿ ಶುದ್ಧ ಕುಡಿಯುವ ನೀರು, ರಸ್ತೆ ಒಳಗೊಂಡಂತೆ ಗ್ರಾಮೀಣ ಪ್ರದೇಶಗಳ ಸಮಸ್ಯೆಗಳಿಗೆ ಪರಿಹಾರ ಕಲ್ಪಿಸುವ ಯಾವುದೇ ಸ್ಟಾರ್ಟ್ಅಪ್ ಆಗಿರಬಹುದು. ಅವುಗಳನ್ನು ಉತ್ತೇಜಿಸಲು ಉದ್ದೇಶಿತ ನಿಧಿ ಅಡಿ 5 ಕೋಟಿ ರೂ. ನೀಡಲಾಗುವುದು ಎಂದು ಹೇಳಿದರು.
ಇದಲ್ಲದೆ, ಕೃಷಿಗೆ ಸಂಬಂಧಿಸಿದ ಆವಿಷ್ಕಾರಗಳನ್ನು ಉತ್ತೇಜಿಸಲು ಪರಿಚಯಿಸಲಾದ “ಅಗ್ರಿ ಗ್ರ್ಯಾಂಡ್ ಚಾಲೆಂಜ್-2’ರಡಿ ಕೂಡ ಅನುದಾನ ನೀಡಲಾಗುತ್ತಿದೆ. ಮುಖ್ಯವಾಗಿ ಸಸ್ಯ ಕೀಟ ಮತ್ತು ರೋಗಗಳ ನಿರ್ವಹಣೆ, ಕೊಯ್ಲೋತ್ತರ ನಷ್ಟ, ವಾಣಿಜ್ಯ ಬೆಳೆಗಳ ಸಂಸ್ಕರಣೆ ಮತ್ತು ಹೈನುಕೃಷಿಗೆ ಸಂಬಂಧಿಸಿದ ಯಾವುದೇ ಆವಿಷ್ಕಾರಗಳನ್ನು ಪ್ರೋತ್ಸಾಹಿಸಲು ಇದರಡಿ 15 ಕೋಟಿ ರೂ. ನೀಡಲಾಗುವುದು ಎಂದು ತಿಳಿಸಿದರು.
ಇದನ್ನು ಕೃಷಿ ಇಲಾಖೆ ಮತ್ತು ಕರ್ನಾಟಕ ಆವಿಷ್ಕಾರ ಮತ್ತು ತಂತ್ರಜ್ಞಾನ ಸಂಸ್ಥೆ ಹಾಗೂ ಸೆಂಟರ್ ಫಾರ್ ಸೆಲ್ಯುಲರ್ ಆಂಡ್ ಮಾಲ್ಯುಕ್ಯುಲರ್ ಪ್ಲಾಟ್ಫಾಮ್ಸ್ (ಸಿ-ಕ್ಯಾಂಪ್) ಸಹಯೋಗದಲ್ಲಿ ಅಗ್ರಿ ಗ್ರ್ಯಾಂಡ್ ಚಾಲೆಂಜ್ ಎರಡನೇ ಹಂತವನ್ನು ಪರಿಚಯಿಸಲಾಗುತ್ತಿದೆ. ಇದರಡಿ ಅನುದಾನ ನಿರೀಕ್ಷಿಸಲು ಸ್ಟಾರ್ಟ್ ಅಪ್ಗ್ಳು ಡಿ. 31ರ ಒಳಗೆ ನೋಂದಣಿ ಮಾಡಿಕೊಳ್ಳುವುದು ಕಡ್ಡಾಯ ಎಂದು ಸಚಿವರು ಮಾಹಿತಿ ನೀಡಿದರು.
ಗ್ಯಾರಂಟಿ: ಬಿಜೆಪಿ ನಿಲುವು ಪ್ರಕಟಿಸಲಿ
ರಾಜ್ಯದ ಜನರ ಸಾಮಾಜಿಕ- ಆರ್ಥಿಕ ಬದಲಾವಣೆಯಲ್ಲಿ ಪ್ರಮುಖ ಪಾತ್ರ ವಹಿಸುತ್ತಿರುವ ಐದು ಗ್ಯಾರಂಟಿಗಳ ವಿಚಾರದಲ್ಲಿ ದ್ವಂದ್ವ ನಿಲುವು ಹೊಂದಿರುವ ಬಿಜೆಪಿ, ಸ್ಪಷ್ಟವಾಗಿ ತನ್ನ ನಿಲುವು ಪ್ರಕಟಿಸಬೇಕು ಎಂದು ಸಚಿವ ಪ್ರಿಯಾಂಕ್ ಖರ್ಗೆ ಆಗ್ರಹಿಸಿದ್ದಾರೆ.
ಟೆಕ್ ಸಮ್ಮಿಟ್ನಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯವನ್ನು ಆರ್ಥಿಕ ದುಃಸ್ಥಿತಿಗೆ ತಂದಿದ್ದು ಹಿಂದಿನ ರಾಜ್ಯ ಬಿಜೆಪಿ ಸರಕಾರ ಮತ್ತು ಕೇಂದ್ರ ಸರಕಾರದ ಆರ್ಥಿಕ ನೀತಿಗಳೇ ಹೊರತು ಗ್ಯಾರಂಟಿ ಯೋಜನೆಗಳಲ್ಲ. ಹಿಂದಿನ ರಾಜ್ಯ ಬಿಜೆಪಿ ಆಡಳಿತ ಅವಧಿಯಲ್ಲಿ ಕೋವಿಡ್ ಅಸಮರ್ಪಕ ನಿರ್ವಹಣೆ ಸಹಿತ ಹಲವು ಲೋಪದೋಷಗಳಿಂದ ಆರ್ಥಿಕ ದುಃಸ್ಥಿತಿ ಉಂಟಾಗಿದೆ ಹೊರತು, 2-3 ತಿಂಗಳ ಹಿಂದಷ್ಟೇ ಜಾರಿಗೆ ಬಂದ ಗ್ಯಾರಂಟಿಗಳಿಂದ ಅಲ್ಲ ಎಂದು ಸ್ಪಷ್ಟಪಡಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Thirthahalli: ಬಾಳೆಬೈಲು ಬೈಪಾಸ್ ಗೆ ಮತ್ತೆ ಬ್ಯಾರಿಕೇಡ್ ಅಳವಡಿಕೆ
Ramanagara: ತಾನು ಸಿದ್ದರಾಮಯ್ಯ ಸಂಬಂಧಿ ಎಂದು ಸೆಕ್ಯೂರಿಟಿ ಗಾರ್ಡ್ ಗೆ ಹೊಡೆದ ಯುವಕ!
ಕುಶಾಲನಗರ ಪ.ಪಂ ಚುನಾವಣೆ ಗೊಂದಲ: ವಿಪಕ್ಷ ನಾಯಕ ಅಶೋಕ್ ಅಸಮಾಧಾನ
Kunigal: ಪುರಸಭೆಯಲ್ಲಿ ಅವ್ಯವಹಾರ… ಮುಖ್ಯಾಧಿಕಾರಿ ಪಿ.ಶಿವಪ್ರಸಾದ್ ಸೇವೆಯಿಂದ ಅಮಾನತು
Mysuru: ದಸರಾ ಆನೆಗಳ ಕಾದಾಟ: ರೋಡಿಗೆ ದೌಡು, ದಿಕ್ಕೆಟ್ಟ ಜನ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Mangaluru: “ಜಾತ್ಯತೀತ’ ಬದಲು “ನಾಸ್ತಿಕ ಭಾರತ’ವಾಗಲಿ: ತುಷಾರ್ ಗಾಂಧಿ
Thirthahalli: ಬಾಳೆಬೈಲು ಬೈಪಾಸ್ ಗೆ ಮತ್ತೆ ಬ್ಯಾರಿಕೇಡ್ ಅಳವಡಿಕೆ
Sullia: ತೋಟಕ್ಕೆ ಕಾಡಾನೆ ಲಗ್ಗೆ… ಬಾಳೆ, ಅಡಿಕೆ, ತೆಂಗು ಕೃಷಿಗೆ ಹಾನಿ
Ramanagara: ತಾನು ಸಿದ್ದರಾಮಯ್ಯ ಸಂಬಂಧಿ ಎಂದು ಸೆಕ್ಯೂರಿಟಿ ಗಾರ್ಡ್ ಗೆ ಹೊಡೆದ ಯುವಕ!
ಕುಶಾಲನಗರ ಪ.ಪಂ ಚುನಾವಣೆ ಗೊಂದಲ: ವಿಪಕ್ಷ ನಾಯಕ ಅಶೋಕ್ ಅಸಮಾಧಾನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.