Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

87 ಲಕ್ಷ ರೂ. ಮೌಲ್ಯದ ಚಿನ್ನ ಸಹಿತ ಕಾಸರಗೋಡು ನಿವಾಸಿ ವಶಕ್ಕೆ

Team Udayavani, Jul 2, 2024, 1:19 AM IST

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

ಕಾಸರಗೋಡು: ಕಣ್ಣೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಂಸ್‌ ಅಧಿಕಾರಿಗಳು ನಡೆಸಿದ ಕಾರ್ಯಾಚರಣೆಯಲ್ಲಿ ಕೊಲ್ಲಿಯಿಂದ ಅಕ್ರಮವಾಗಿ ಸಾಗಿಸಿದ 87,52,220 ರೂ. ಮೌಲ್ಯದ 1,223 ಗ್ರಾಂ ಚಿನ್ನವನ್ನು ವಶಪಡಿಸಿಕೊಂಡಿದ್ದಾರೆ.

ಈ ಸಂಬಂಧ ಕಾಸರಗೋಡು ಪಡನ್ನ ಕೊವ್ವಲ್‌ ವೀಟಿಲ್‌ ನಿವಾಸಿ ಪ್ರತೀಶ್‌ನನ್ನು ವಶಕ್ಕೆ ತೆಗೆದುಕೊಂಡು ವಿಚಾರಣೆ ನಡೆಸುತ್ತಿದ್ದಾರೆ. ಈತ ಶಾರ್ಜಾದಿಂದ ಬಂದಿದ್ದ. ಚಾಕೊಲೇಟ್‌ ಕವರ್‌ನಲ್ಲಿ ಪೇಸ್ಟ್‌ ರೂಪದಲ್ಲಿ ಚಿನ್ನವನ್ನು ಬಚ್ಚಿಟ್ಟು ತರಲಾಗಿತ್ತು.

ಶಾಲಾ ಕೊಠಡಿಗೆ ಬೆಂಕಿ:
ಪುಸ್ತಕ, ಕಲಿಕೋಪಕರಣ ಭಸ್ಮ
ಕಾಸರಗೋಡು: ಬೋವಿಕ್ಕಾನ ಬಿ.ಎ.ಆರ್‌. ಹೈಯರ್‌ ಸೆಕೆಂಡರಿ ಶಾಲೆಯ ಎ.ಯು.ಪಿ. ಶಾಲೆಯ ಪ್ರಿಪ್ರೈಮರಿ ತರಗತಿ ಕೊಠಡಿಗೆ ಬೆಂಕಿ ಹಚ್ಚಿದ ಘಟನೆ ನಡೆದಿದೆ. ಕಿಟಿಕಿ ಮೂಲಕ ಆದಿತ್ಯವಾರ ರಾತ್ರಿ ಬೆಂಕಿ ಹಚ್ಚಲಾಗಿದೆ ಎಂದು ಶಂಕಿಸಲಾಗಿದೆ.

ಸೋಮವಾರ ಬೆಳಗ್ಗೆ ಶಾಲೆ ತೆರೆದಾಗ ಬೆಂಕಿ ಹಚ್ಚಿರುವುದು ಶಾಲಾ ಸಿಬಂದಿಗೆ ತಿಳಿಯಿತು. ಪ್ರಾಥಮಿಕ ತರಗತಿಯ ಪಠ್ಯ ಪುಸ್ತಕಗಳು, ಕಲಿಕೋಪಕರಣಗಳು, ಬೆಂಚ್‌ ಇತ್ಯಾದಿ ಸುಟ್ಟುಹೋಗಿವೆ. ಪ್ರಕರಣಕ್ಕೆ ಸಂಬಂಧಿಸಿ ಮುಖ್ಯೋಪಾಧ್ಯಾಯಿನಿ ಪ್ರೇಮಬಿಂದು ಅವರು ಪೊಲೀಸರಿಗೆ ದೂರು ನೀಡಿದ್ದಾರೆ. ಆದೂರು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಸಮಾಜದ್ರೋಹಿಗಳು ಈ ಕೃತ್ಯ ಎಸಗಿದ್ದು, ಪದೇಪದೆ ಇಂತಹ ಕೃತ್ಯಗಳು ಇಲ್ಲಿ ನಡೆಯುತ್ತಿವೆ. ಕುಡಿಯುವ ನೀರಿನ ಟ್ಯಾಪ್‌ ಹಾನಿಗೊಳಿಸುವುದು, ಗ್ರಿಲ್ಸ್‌ನ ಬೀಗ ಮುರಿಯುವುದು, ಶಾಲಾ ಕಟ್ಟಡದ ಹೆಂಚು ಹಾನಿ ಮಾಡುವುದು ಮೊದಲಾದ ಸಮಾಜದ್ರೋಹಿ ಕೃತ್ಯಗಳು ನಿರಂತರ ನಡೆಯುತ್ತಿದೆ ಎಂದು ಆರೋಪಿಸಲಾಗಿದೆ. ಮಳೆಗೆ ಮುನ್ನ ಶಾಲೆಯ ಹೂದೋಟಕ್ಕೆ ಬೆಂಕಿ ಹಚ್ಚಲಾಗಿತ್ತು. ಈ ಬಗ್ಗೆ ದೂರು ನೀಡಿದ್ದರೂ ಈ ವರೆಗೂ ಯಾವುದೇ ಪ್ರಯೋಜವಾಗಿಲ್ಲ.

ಮನೆಗೆ ಗುಂಡು ಹಾರಾಟ
ಕಾಸರಗೋಡು: ಚೀಮೇನಿ ತೆರೆದ ಬಂದೀಖಾನೆಯ ಸಮೀಪದ ತುರು ನಿವಾಸಿ ಎ.ಟಿ.ವಿ.ಪದ್ಮನಾಭನ್‌ ಅವರ ಮನೆಯ ಕಿಟಕಿ ಬಾಗಿಲಿನ ಗಾಜಿಗೆ ಗುಂಡು ಹಾರಾಟ ನಡೆದ ಘಟನೆ ಜೂ.30 ರಂದು ರಾತ್ರಿ ನಡೆದಿದ್ದು, ಪರಿಸರದಲ್ಲಿ ಆತಂಕ ಸೃಷ್ಟಿಯಾಗಿದೆ.
ಈ ಪ್ರದೇಶ ಕಾಡು ಹಂದಿಗಳ ಉಪಟಳವಿರುವ ಪ್ರದೇಶವಾಗಿದೆ. ಆದ್ದರಿಂದ ರಾತ್ರಿ ಕಾಡು ಹಂದಿಗಳನ್ನು ಬೇಟೆಯಾಡಲು ಬಂದ ತಂಡ ಗುಂಡು ಹಾರಿಸಿದಾಗ ಅದು ಗುರಿತಪ್ಪಿ ಮನೆಗೆ ತಗಲಿರಬಹುದೆಂದು ಶಂಕಿಸಲಾಗಿದೆ. ಪದ್ಮನಾಭನ್‌ ನಿದ್ದೆ ಮಾಡುವ ಕೊಠಡಿಯ ಕಿಟಕಿ ಬಾಗಿಲಿಗೆ ಗುಂಡು ತಗಲಿದೆ. ಗುಂಡು ತಗಲಿದ ಶಬ್ದ ಕೇಳಿ ಭಯ ಗೊಂಡ ಪದ್ಮನಾಭನ್‌ ಮತ್ತು ಪತ್ನಿ ಹೊರ ಬಂದು ನೋಡಿದಾಗ ಗುಂಡು ಪತ್ತೆಯಾಗಿದೆ. ರಾತ್ರಿ ವೇಳೆ ಈ ಪ್ರದೇಶದಲ್ಲಿ ಪದೇಪದೆ ಗುಂಡು ಹಾರಿಸುವ ಶಬ್ದ ಕೇಳಿ ಬರುತ್ತಿದೆ ಎಂದು ಮನೆಯವರು ಹೇಳಿದ್ದಾರೆ.

ಸ್ಥಳಕ್ಕೆ ತೆರಳಿದ ಪೊಲೀಸರು ಗುಂಡನ್ನು ವಶ ಪಡಿಸಿ ಕೊಂಡಿದ್ದಾರೆ. ಅದು ಬಂದೂಕಿಗೆ ಬಳಸುವ ವಸ್ತುವಲ್ಲ ಎಂದು ಪೊಲೀಸರು ತಿಳಿಸಿದ್ದು, ತನಿಖೆ ನಡೆಯುತ್ತಿದೆ.

ಟಾಪ್ ನ್ಯೂಸ್

Mangaluru ಮಣ್ಣು ಕುಸಿತ: ಕೆಲಸ ಹೊಸತಲ್ಲ, ದುರದೃಷ್ಟ ಹೊಸತು !

Mangaluru ಮಣ್ಣು ಕುಸಿತ: ಕೆಲಸ ಹೊಸತಲ್ಲ, ದುರದೃಷ್ಟ ಹೊಸತು !

Rain ಕಬ್ಬಿನಾಲೆ, ಸಿದ್ದಾಪುರ: ಸುಂಟರಗಾಳಿಗೆ ಅಪಾರ ಹಾನಿ

Rain ಕಬ್ಬಿನಾಲೆ, ಸಿದ್ದಾಪುರ: ಸುಂಟರಗಾಳಿಗೆ ಅಪಾರ ಹಾನಿ

Bantwal: ಅರಣ್ಯ ಮಿತ್ರ ಪ್ರಶಸ್ತಿ ಪ್ರದಾನ

Bantwal: ಅರಣ್ಯ ಮಿತ್ರ ಪ್ರಶಸ್ತಿ ಪ್ರದಾನ

Railway ಕರಾವಳಿ ರೈಲ್ವೇ ಸಮಸ್ಯೆ ಪರಿಹಾರಕ್ಕೆ ಸಂಸದರ ಮನವಿ

Railway ಕರಾವಳಿ ರೈಲ್ವೇ ಸಮಸ್ಯೆ ಪರಿಹಾರಕ್ಕೆ ಸಂಸದರ ಮನವಿ

Ajekar ಪುಸ್ತಕ ಮನೆ ಪ್ರಕಾಶನದ ವಿವಿಧ ಪುಸ್ತಕಗಳ ಅನಾವರಣ

Ajekar ಪುಸ್ತಕ ಮನೆ ಪ್ರಕಾಶನದ ವಿವಿಧ ಪುಸ್ತಕಗಳ ಅನಾವರಣ

BJP-Member

Congress Government: ರಾಜ್ಯ ಸರಕಾರದ ವಿರುದ್ಧ ಮುಗಿಬಿದ್ದ ಬಿಜೆಪಿ 

Mangaluru ಪ್ರತ್ಯೇಕ ರೈಲ್ವೇ ವಿಭಾಗಕ್ಕೆ ಅಭಿಯಾನ ಆರಂಭ

Mangaluru ಪ್ರತ್ಯೇಕ ರೈಲ್ವೇ ವಿಭಾಗಕ್ಕೆ ಅಭಿಯಾನ ಆರಂಭ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Woman’s body found in Kasaragod Quattros; Beloved who surrendered to hanging

Kasaragod ಕ್ವಾಟ್ರಸ್‌ನಲ್ಲಿ ಮಹಿಳೆಯ ಶವ ಪತ್ತೆ; ನೇಣಿಗೆ ಶರಣಾದ ಪ್ರಿಯತಮ

Kodagu: ಆನೆ ದಾಳಿ; ರಿಕ್ಷಾ ಜಖಂ, ತೋಟಕ್ಕೆ ಹಾನಿ

Kodagu: ಆನೆ ದಾಳಿ; ರಿಕ್ಷಾ ಜಖಂ, ತೋಟಕ್ಕೆ ಹಾನಿ

Madikeri ಅಂಗಡಿ, ದೇವಾಲಯ ಕಳವು ಪ್ರಕರಣದ ಆರೋಪಿ ಬಂಧನ

Madikeri ಅಂಗಡಿ, ದೇವಾಲಯ ಕಳವು ಪ್ರಕರಣದ ಆರೋಪಿ ಬಂಧನ

3-crime

Crime News: ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Kasaragod ಬೈಕ್‌ ಅಪಘಾತ : ಗಾಯಾಳು ಯುವಕ ಸಾವು

Kasaragod ಬೈಕ್‌ ಅಪಘಾತ : ಗಾಯಾಳು ಯುವಕ ಸಾವು

MUST WATCH

udayavani youtube

ಹತ್ರಾಸ್‌ನಲ್ಲಿ ಸತ್ಸಂಗದ ವೇಳೆ ಕಾಲ್ತುಳಿತ ಸಾವಿನ ಸಂಖ್ಯೆ 121 ಕ್ಕೆ ಏರಿಕೆ

udayavani youtube

ಕರ್ನಾಟಕ ಪ್ರವಾಸೋದ್ಯಮದ ಕುರಿತು ರಾಜ್ಯಸಭೆಯಲ್ಲಿ ಸುಧಾಮೂರ್ತಿ ಹೇಳಿದ್ದೇನು

udayavani youtube

ಹದಗೆಟ್ಟ ರಸ್ತೆಯಲ್ಲಿ ಜೀವ ಕೈಯಲ್ಲಿ ಹಿಡಿದು ಓಡಾಡುವ ವಾಹನ ಸವಾರರು!|

udayavani youtube

ಎಕ್ರೆಗಟ್ಟಲೆ ಹಡಿಲು ಭೂಮಿಗೆ ಜೀವ ತುಂಬಿದ ರೈತ

udayavani youtube

ಶ್ರೀ ಕ್ಷೇ.ಧ.ಗ್ರಾ.ಯೋಜನೆ | ಅರಣ್ಯ ಸಚಿವರಿಂದ ದಶಲಕ್ಷ ಗಿಡಗಳ ನಾಟಿಗೆ ಚಾಲನೆ

ಹೊಸ ಸೇರ್ಪಡೆ

Mangaluru ಮಣ್ಣು ಕುಸಿತ: ಕೆಲಸ ಹೊಸತಲ್ಲ, ದುರದೃಷ್ಟ ಹೊಸತು !

Mangaluru ಮಣ್ಣು ಕುಸಿತ: ಕೆಲಸ ಹೊಸತಲ್ಲ, ದುರದೃಷ್ಟ ಹೊಸತು !

Rain ಕಬ್ಬಿನಾಲೆ, ಸಿದ್ದಾಪುರ: ಸುಂಟರಗಾಳಿಗೆ ಅಪಾರ ಹಾನಿ

Rain ಕಬ್ಬಿನಾಲೆ, ಸಿದ್ದಾಪುರ: ಸುಂಟರಗಾಳಿಗೆ ಅಪಾರ ಹಾನಿ

Bantwal: ಅರಣ್ಯ ಮಿತ್ರ ಪ್ರಶಸ್ತಿ ಪ್ರದಾನ

Bantwal: ಅರಣ್ಯ ಮಿತ್ರ ಪ್ರಶಸ್ತಿ ಪ್ರದಾನ

Railway ಕರಾವಳಿ ರೈಲ್ವೇ ಸಮಸ್ಯೆ ಪರಿಹಾರಕ್ಕೆ ಸಂಸದರ ಮನವಿ

Railway ಕರಾವಳಿ ರೈಲ್ವೇ ಸಮಸ್ಯೆ ಪರಿಹಾರಕ್ಕೆ ಸಂಸದರ ಮನವಿ

Ajekar ಪುಸ್ತಕ ಮನೆ ಪ್ರಕಾಶನದ ವಿವಿಧ ಪುಸ್ತಕಗಳ ಅನಾವರಣ

Ajekar ಪುಸ್ತಕ ಮನೆ ಪ್ರಕಾಶನದ ವಿವಿಧ ಪುಸ್ತಕಗಳ ಅನಾವರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.