Kasaragod: ಮಾವೋವಾದಿ ಕಮಾಂಡರ್ನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ ಪೊಲೀಸರು
ನಗರಸಭಾ ಅಧ್ಯಕ್ಷರಿಗೆ ಚಪ್ಪಲಿ ಹಾರ ಹಾಕಿದ ಪ್ರಕರಣ
Team Udayavani, Oct 26, 2024, 1:55 AM IST
ಕಾಸರಗೋಡು: 2007ರಲ್ಲಿ ಹೊಸದುರ್ಗ ನಗರಸಭಾ ಅಧ್ಯಕ್ಷರಾಗಿದ್ದ ನ್ಯಾಯವಾದಿ ಎಸ್.ಪಿ. ಖಾಲಿದ್ ಅವರ ಕುತ್ತಿಗೆಗೆ ಚಪ್ಪಲಿ ಹಾರ ಹಾಕಿ ಬೆದರಿಕೆ ಒಡ್ಡಿದ ಪ್ರಕರಣದ ಆರೋಪಿ ಮಾವೋವಾದಿಯ ಕಬನಿ ದಳ ಕಮಾಂಡರ್ ಕಲ್ಪೆಟ್ಟಾ ನಿವಾಸಿ ಸೋಮನ್ನನ್ನು ಪೊಲೀಸರು ಕಾಸರಗೋಡು ಹೆಚ್ಚುವರಿ ಜಿಲ್ಲಾ ಸೆಶನ್ಸ್ ನ್ಯಾಯಾಲಯ (ದ್ವಿತೀಯ) ದಲ್ಲಿ ಬಿಗಿ ಪೊಲೀಸ್ ಬಂದೋಬಸ್ತಿನಲ್ಲಿ ಹಾಜರುಪಡಿಸಲಾಯಿತು.
ಅಕ್ರಮವಾಗಿ ಅಧ್ಯಕ್ಷರ ಕಚೇರಿಗೆ ನುಗ್ಗಿ ಕುತ್ತಿಗೆಗೆ ಚಪ್ಪಲಿ ಹಾರ ಹಾಕಿದ ಪ್ರಕರಣ ನಡೆದಿತ್ತು. ಕಾನೂನು ಉಲ್ಲಂಘಿಸಿ ಕಟ್ಟಡವೊಂದಕ್ಕೆ ಲೈಸನ್ಸ್ ನೀಡಲಾಗಿದೆ ಎಂದು ಆರೋಪಿಸಿ ಸೋಮನ್ ಸಹಿತ ಒಂದು ತಂಡ ನಗರಸಭಾ ಅಧ್ಯಕ್ಷರ ಕಚೇರಿಗೆ ಅಕ್ರಮವಾಗಿ ಪ್ರವೇಶಿಸಿ ಚಪ್ಪಲಿ ಹಾರ ಹಾಕಿ ಪರಾರಿಯಾಗಿತ್ತು.
ಕಳೆದ ಜುಲೈ 28ರಂದು ಶೊರ್ನೂರು ರೈಲು ನಿಲ್ದಾಣ ಪರಿಸರದಿಂದ ಸೋಮನ್ನನ್ನು ನಕ್ಸಲ್ ನಿಗ್ರಹ ದಳ ಬಂಧಿಸಿತ್ತು. ಆತನನ್ನು ವಿಯೂರ್ ಸೆಂಟ್ರಲ್ ಜೈಲಿನಲ್ಲಿ ನ್ಯಾಯಾಂಗ ಬಂಧನದಲ್ಲಿರಿಸಲಾಗಿತ್ತು. ಸೋಮನ್ ವಿರುದ್ಧ ಕಾಸರಗೋಡು, ಕಣ್ಣೂರು, ಕಲ್ಲಿಕೋಟೆ, ಮಲಪ್ಪುರಂ ಮತ್ತು ಪಾಲ್ಘಾಟ್ ಜಿಲ್ಲೆಯಲ್ಲಿ ಮಾವೋವಾದಿ ಚಟುವಟಿಕೆಗಳಿಗೆ ಸಂಬಂಧಿಸಿ ಒಟ್ಟು 66 ಪ್ರಕರಣಗಳು ದಾಖಲಾಗಿವೆ.
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.