Kasaragod ಚರಂಡಿಗೆ ಬಿದ್ದು ಗಾಯಗೊಂಡ ಪತಿಯ ಸ್ಥಿತಿ ಕಂಡ ಪತ್ನಿ ಕುಸಿದು ಬಿದ್ದು ಸಾವು
Team Udayavani, Jun 1, 2024, 11:48 PM IST
ಕಾಸರಗೋಡು: ಚರಂಡಿಗೆ ಬಿದ್ದು ಗಾಯಗೊಂಡ ಪತಿಯನ್ನು ಕಂಡು ಪತ್ನಿ ಕುಸಿದು ಬಿದ್ದು ಸಾವಿಗೀಡಾದ ಘಟನೆ ನಡೆದಿದೆ. ಹೊಸದುರ್ಗ ಶ್ರೀಕೃಷ್ಣ ದೇವಸ್ಥಾನ ಬಳಿಯ ದೀಪಾ ನಿವಾಸದ ಮೀರಾ ಕಾಮ್ದೇವ್ (65) ಸಾವಿಗೀಡಾದರು.
ಇವರ ಪತಿ ಎಚ್.ಎನ್. ಕಾಮ್ದೇವ್ (71) ಮೇ 31ರಂದು ಬೆಳಗ್ಗೆ ಸ್ಥಳೀಯ ದೇವಸ್ಥಾನ ಬಳಿ ನಡೆದು ಹೋಗುತ್ತಿದ್ದಾಗ ರಸ್ತೆ ಬದಿಯ ಚರಂಡಿಗೆ ಬಿದ್ದು ಗಾಯಗೊಂಡಿದ್ದರು. ಅದನ್ನು ಕಂಡ ಸ್ಥಳೀಯರು ಅವರನ್ನು ಚರಂಡಿಯಿಂದ ಮೇಲಕ್ಕೆತ್ತಿ ಮನೆಗೆ ತಲುಪಿಸಿದ್ದರು. ಬಿದ್ದ ಆಘಾತಕ್ಕೆ ಕೈಗೆ ಗಾಯವಾಗಿತ್ತು. ದೇಹವಿಡೀ ಚರಂಡಿಯ ಕೆಸರು ಆವರಿಸಿತ್ತು. ಅದನ್ನು ಕಂಡ ಪತ್ನಿ ಮೀರಾ ಅಲ್ಲೇ ಕುಸಿದು ಬಿದ್ದರು.
ಕೂಡಲೇ ಅವರನ್ನು ಆಸ್ಪತ್ರೆಗೆ ಸಾಗಿಸಿ ಚಿಕಿತ್ಸೆ ನೀಡಿದರೂ ರಕ್ಷಿಸಲು ಸಾಧ್ಯವಾಗಲಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Gurudath Kamath: ಖ್ಯಾತ ಫೋಟೋಗ್ರಾಫರ್ ಗುರುದತ್ ಕಾಮತ್ ನಿಧನ
Moksha Kushal: ಹಾಟ್ ಫೋಟೋಶೂಟ್ನಲ್ಲಿ ಮೋಕ್ಷಾ ಮಿಂಚು
MUDA; ಅವರು-ಇವರು ಕಳ್ಳರು ಎನ್ನೋದು ಬೇಡ, ರಾಜೀನಾಮೆ ಕೊಟ್ಟು ನೀವು ಸ್ವಚ್ಛವಾಗಿರಿ: ಯತ್ನಾಳ್
Hubli: ರಾಡ್ ಬಿದ್ದು ಎಎಸ್ಐ ಸಾವು ಪ್ರಕರಣದಲ್ಲಿ ಮತ್ತೋರ್ವನ ಬಂಧನ
Haryana: ಅಕ್ರಮ ಪಟಾಕಿ ಕಾರ್ಖಾನೆಯಲ್ಲಿ ಭೀಕರ ಸ್ಫೋಟ: 3 ಮೃತ್ಯು, 7 ಮಂದಿಗೆ ಗಾಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.