Kasaragodu: ಬೆಂಕಿ ಹೊತ್ತಿಕೊಂಡು ಕಾರು ಸಂಪೂರ್ಣ ನಾಶ
Team Udayavani, Sep 17, 2024, 12:19 AM IST
ಕಾಸರಗೋಡು: ಕರ್ಮಂತೋಡಿಯ ಕಾವೇರಿ ಚಿತ್ರ ಮಂದಿರದ ಸಮೀಪ ನಿಲ್ಲಿಸಿದ್ದ ಕಾರಿಗೆ ಬೆಂಕಿ ಹತ್ತಿಕೊಂಡ ಘಟನೆ ಸೋಮವಾರ ಮಧ್ಯಾಹ್ನ ನಡೆದಿದೆ. ಕಾರು ಸಂಪೂರ್ಣ ಹಾನಿಗೀಡಾಗಿದೆ.
ಕುತ್ತಿಕ್ಕೋಲ್ ನಿವಾಸಿ ಅಶೋಕನ್ ಕಾರನ್ನು ನಿಲ್ಲಿಸಿ ಮರಣದ ಕಾರ್ಯಕ್ಕೆ ತೆರಳಿದ್ದರು. ಕಾರ್ಯಕ್ರಮ ಕಳೆದು ವಾಪಸು ಬಂದಾಗ ಕಾರು ಬೆಂಕಿ ಹತ್ತಿಕೊಂಡು ಸಂಪೂರ್ಣ ಹಾನಿಗೀಡಾದ ಸ್ಥಿತಿಯಲ್ಲಿ ಪತ್ತೆಯಾಯಿತು. ಸ್ಥಳೀಯರು ಬೆಂಕಿಯನ್ನು ಆರಿಸಲು ಪ್ರಯತ್ನಿಸಿದರೂ, ಸಾಧ್ಯವಾಗಲಿಲ್ಲ.
ಕಾಸರಗೋಡಿನಿಂದ ಅಗ್ನಿಶಾಮಕ ದಳ ಸ್ಥಳಕ್ಕೆ ಧಾವಿಸಿ ಬೆಂಕಿ ಆರಿಸಿದರೂ, ಕಾರು ಸಂಪೂರ್ಣ ಹಾನಿಗೀಡಾಗಿತ್ತು. ವಿದ್ಯುತ್ ಶಾರ್ಟ್ ಸರ್ಕ್ನೂಟ್ ಬೆಂಕಿ ಹತ್ತಿಕೊಳ್ಳಲು ಕಾರಣವೆಂದು ಶಂಕಿಸಲಾಗಿದೆ. ಆದೂರು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಹತ್ತಿರದಲ್ಲಿ ಇತರ ಕಾರುಗಳಿದ್ದು, ಅವುಗಳಿಗೆ ಬೆಂಕಿ ಹತ್ತಿಕೊಳ್ಳದಂತೆ ಸ್ಥಳೀಯರು ದೂರಕ್ಕೆ ಸರಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.