Kasturirangan; ಮಲೆನಾಡು ತಪ್ಪಲಿನ ಜನತೆ ಮತ್ತೆ ಹೋರಾಟಕ್ಕೆ ಸಜ್ಜು

ಕಸ್ತೂರಿ ವರದಿ ಅನುಷ್ಠಾನದ ಗುಮ್ಮ

Team Udayavani, Nov 18, 2023, 12:43 AM IST

Kasturirangan; ಮಲೆನಾಡು ತಪ್ಪಲಿನ ಜನತೆ ಮತ್ತೆ ಹೋರಾಟಕ್ಕೆ ಸಜ್ಜು

ಕಡಬ: ಕಸ್ತೂರಿರಂಗನ್‌ ವರದಿ ಅನುಷ್ಠಾನಕ್ಕೆ ಯಾವುದೇ ಕ್ಷಣದಲ್ಲಿ ಅನುಮೋದನೆ ಸಿಗಬಹುದು ಎನ್ನುವ ಆತಂಕದಲ್ಲಿರುವ ರಾಜ್ಯದ ಪಶ್ಚಿಮ ಘಟ್ಟದ ಗ್ರಾಮಗಳ ಜನರು ಮತ್ತೆ ಹೋರಾಟಕ್ಕೆ ಸಜ್ಜಾಗುತ್ತಿದ್ದಾರೆ.

ಇತ್ತೀಚೆಗೆ ಅರಣ್ಯ ಸಚಿವ ಈಶ್ವರ ಖಂಡ್ರೆ ವರದಿ ಅನುಷ್ಠಾನದ ಕುರಿತು ನೀಡಿರುವ ಹೇಳಿಕೆಯನ್ನು ವಿರೋಧಿಸಿ ಮಲೆನಾಡು ಜನ ಹಿತರಕ್ಷಣ ವೇದಿಕೆ ಸುಬ್ರಹ್ಮಣ್ಯದಿಂದ ಹೋರಾಟ ಪ್ರಾರಂಭಿಸಿದೆ.

ಕಸ್ತೂರಿ ವರದಿಯನ್ನು ಅನುಷ್ಠಾನ ಮಾಡಬಾರದು, ಪ್ರಸ್ತಾವಿತ ಸ್ಥಳದ ರೈತರನ್ನು ಒಕ್ಕಲೆಬ್ಬಿಸದೆ ಹಕ್ಕುಪತ್ರ ನೀಡಬೇಕು, ಜಂಟಿ ಸರ್ವೇ ನಡೆಸಬೇಕು, ಜನವಸತಿಯಿಲ್ಲದ ಪ್ರದೇಶಗಳಿಗೆ ಆನೆಗಳ ಸ್ಥಳಾಂತರ, ಅಡಿಕೆ ಹಳದಿ ರೋಗ ಹಾಗೂ ಎಲೆಚುಕ್ಕಿ ರೋಗದಿಂದ ಸಂತ್ರಸ್ತರಾದ ಬೆಳೆಗಾರರು ಅಸೌಖ್ಯಕ್ಕೀಡಾದಾಗ ಅವರು ಬಯಸಿದ ಆಸ್ಪತ್ರೆಗಳಲ್ಲಿ ಉಚಿತ ಚಿಕಿತ್ಸೆ. ವಿವಿಧ ಸಹಕಾರಿ ಸಂಘ, ಬ್ಯಾಂಕ್‌ಗಳಲ್ಲಿನ ಸಾಲ ಮನ್ನಾ, ಕಾಡು ಪ್ರಾಣಿಗಳಿಂದ ರಕ್ಷಣೆಗಾಗಿ ಕೋವಿ ಪರವಾನಿಗೆ ಇತ್ಯಾದಿ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಪ್ರತಿಭಟನೆ ನಡೆಸಲಾಗಿದೆ.

ಕಾರವಾರದಿಂದ ಚಾಮರಾಜನಗರ ತನಕ ರಾಜ್ಯದ 7 ಜಿಲ್ಲೆಗಳ ಪಶ್ಚಿಮ ಘಟ್ಟ ಭಾಗದ ಸಾವಿರಾರು ಗ್ರಾಮಗಳ ಲಕ್ಷಾಂತರ ಕುಟುಂಬದವರಿಗೆ ಈ ವರದಿ ಕಂಟಕಪ್ರಾಯವಾಗಿದೆ. ಇದನ್ನು ತಿರಸ್ಕರಿಸಬೇಕೆಂದು ಆಗ್ರಹಿಸಿ 17 ವರ್ಷಗಳಿಂದ ಪ್ರತಿಭಟನೆಗಳು ನಡೆಯುತ್ತಿವೆ. ಆದರೆ ಹಸುರು ಪೀಠವು ಹಿಂದಿನ ಆದೇಶವನ್ನೇ ಜಾರಿಗೊಳಿಸುವಂತೆ ಆದೇಶಿಸಿದ್ದು, ಸಂಬಂಧಪಟ್ಟ ಗ್ರಾಮಸ್ಥರು ಮತ್ತೆ ಭಯಕ್ಕೀಡಾಗುವಂತಾಗಿದೆ.

ವರದಿ ಅನುಷ್ಠಾನಗೊಂಡರೆ?
ವರದಿ ಅನುಷ್ಠಾನಗೊಂಡರೆ ಜನರ ಸಂಪೂರ್ಣ ಕೃಷಿ ಭೂಮಿಯನ್ನು ಅರಣ್ಯ ಇಲಾಖೆ ವಶಪಡಿಸಿಕೊಳ್ಳುತ್ತದೆ. ಅಂತಹ ಭೂಮಿಗೆ ಯಾವುದೇ ಪರಿಹಾರ ಅಥವಾ ಸಂತ್ರಸ್ತ ಕುಟುಂಬಗಳಿಗೆ ಪುನರ್ವಸತಿಯ ಉಲ್ಲೇಖವಾಗಲಿ ವರದಿಯಲ್ಲಿ ಇಲ್ಲ. ವಸತಿ ಇತರ ಕಟ್ಟಡಗಳಿಗೂ ಪರಿಹಾರ ಘೋಷಿಸಿಲ್ಲ. ಈಗಾಗಲೇ ಅರಣ್ಯ ಹಾಗೂ ಸರಕಾರಿ ಜಮೀನಿನಲ್ಲಿ ಮನೆಕಟ್ಟಿ ವಾಸಿಸುತ್ತಿರುವವರನ್ನೂ ಒಕ್ಕಲೆಬ್ಬಿಸಲಾಗುತ್ತದೆ. ಈಗಾಗಲೇ ಪಡೆದ ಭೂಮಿಯ ಹಕ್ಕುಪತ್ರಗಳು, ರೈತರ ಕೋವಿ ಪರವಾನಿಗೆ ರದ್ದುಗೊಳ್ಳಲಿದೆ. ರಾಷ್ಟ್ರೀಯ ಹೆದ್ದಾರಿ 48, ರಾಜ್ಯ ಹೆದ್ದಾರಿಗಳಾದ ಬಿಸಿಲೆ ಹಾಗೂ ಚಾರ್ಮಾಡಿ ಘಾಟಿ ರಸ್ತೆಗಳು ಹಾಗೂ ಮಂಗಳೂರು- ಬೆಂಗಳೂರು ರೈಲು ಮಾರ್ಗಗಳು ಯೋಜನೆಯ ನೀಲ ನಕಾಶೆಯಲ್ಲಿ ಒಳಪಡುವುದರಿಂದ ಭವಿಷ್ಯದಲ್ಲಿ ಇವೆಲ್ಲ ಮಾರ್ಗಗಳು ಮುಚ್ಚಲಿವೆ. ಲಕ್ಷಾಂತರ ಮಂದಿ ನಿರ್ಗತಿಕರಾಗಲಿದ್ದಾರೆ ಎನ್ನಲಾಗುತ್ತಿದೆ.

ಈ ಹಿಂದಿನ ಬಿಜೆಪಿ ಸರಕಾರವು ಸಮಿತಿ ರಚಿಸಿ ಕೇಂದ್ರ ಸರಕಾರಕ್ಕೆ ಕಸ್ತೂರಿ ವರದಿಯನ್ನು ಅನುಷ್ಠಾನ ಮಾಡಬಾರದು; ಮಾಡಿದರೂ ಜನಪರವಾದ ಹಲವು ಮಾರ್ಪಾಟುಗಳನ್ನು ಮಾಡಬೇಕು ಎಂದು ತಿಳಿಸಿತ್ತು. ಈಗ ನಾವು ಅದರ ಪ್ರತಿಯನ್ನು ಮಾಹಿತಿ ಹಕ್ಕಿನಲ್ಲಿ ಕೇಳಿದರೆ ಕೊಡುತ್ತಿಲ್ಲ.ಯಾವುದೇ ಕ್ಷಣದಲ್ಲಿ ರಾಜ್ಯ ಸರಕಾರ ಕಸ್ತೂ¤ರಿ ವರದಿಯ ಅನುಷ್ಠಾನಕ್ಕೆ ಕ್ರಮ ಕೈಗೊಳ್ಳಬಹುದು ಎನ್ನುವ ಭೀತಿಯಿದ್ದು, ವರದಿಯನ್ನು ಕೈಬಿಡುವ ತನಕ ಹೋರಾಟ ನಿಲ್ಲದು.
– ಕಿಶೋರ್‌ ಶಿರಾಡಿ,
ಸಂಚಾಲಕರು, ಮಲೆನಾಡು ಜನಹಿತ ರಕ್ಷಣ ವೇದಿಕೆ,
ದ.ಕ. ಜಿಲ್ಲೆ.

 

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vitla: Bolanthur Narsha robbery case: Four more arrested including Kerala police

Vitla: ಬೋಳಂತೂರು ನಾರ್ಶ ದರೋಡೆ ಪ್ರಕರಣ: ಕೇರಳದ ಪೊಲೀಸ್‌ ಸೇರಿ ಮತ್ತೆ ನಾಲ್ವರ ಬಂಧನ

8-kukke

Subrahmanya: ಮುಜರಾಯಿ ಸಚಿವರ ನೇತೃತ್ವದಲ್ಲಿ ಕುಕ್ಕೆ ದೇಗುಲದ ಅಭಿವೃದ್ಧಿ ಸಭೆ

3(1

Sullia: ಜಳಕದಹೊಳೆ ಸೇತುವೆ; ಸಂಚಾರ ನಿಷೇಧ

2(1

Uppinangady: ಕಾಂಕ್ರೀಟ್‌ ರಸ್ತೆಯೇ ಕಿತ್ತೋಗಿದೆ

1

Bantwal: ಕೃಷಿಕರ ತೋಟಗಳಿಗೆ ನುಗ್ಗಿದ ಜಕ್ರಿಬೆಟ್ಟು ಅಣೆಕಟ್ಟು ನೀರು!

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.