Kadaba ಕೆಮ್ಮಾರ: ಶಾರ್ಟ್ ಸರ್ಕ್ಯೂಟ್ನಿಂದ ಮನೆಗೆ ಬೆಂಕಿ
Team Udayavani, Jul 1, 2024, 1:01 AM IST
ಕಡಬ: ಕಡಬ ತಾಲೂಕಿನ ಕೊಯಿಲ ಗ್ರಾಮದ ಕೆಮ್ಮಾರ ಶಾಲೆಯ ಬಳಿಯ ಮನೆಯಲ್ಲಿ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ದುರಂತ ಸಂಭವಿಸಿದ್ದು, ಮನೆಯ ಒಳಭಾಗ ಸಂಪೂರ್ಣವಾಗಿ ಸುಟ್ಟು ಹೋಗಿರುವ ಘಟನೆ ರವಿವಾರ ಮಧ್ಯಾಹ್ನದ ಸಂಭವಿಸಿದೆ.
ಕೆಮ್ಮಾರ ಅಬ್ದುಲ್ ರಹಿಮಾನ್ ಅವರ ಮನೆಯಲ್ಲಿ ಘಟನೆ ಸಂಭವಿಸಿದೆ. ಬೆಡ್ ರೂಂನಲ್ಲಿ ಬೆಂಕಿ ಕಾಣಿಸಿಕೊಂಡು ಬಳಿಕ ಇಡೀ ಮನೆಗೆ ವ್ಯಾಪಿಸಿಕೊಂಡಿದೆ.
ಕಪಾಟು, ಮಂಚ, ಕಿಟಕಿ, ಬಾಗಿಲು, ಫ್ರಿಜ್, ವಾಶಿಂಗ್ ಮೆಷಿನ್ ಸಹಿತ ಒಳಗಿದ್ದ ಎಲ್ಲ ವಸ್ತುಗಳು ಸುಟ್ಟು ಕರಕಲಾಗಿವೆ. ಎರಡು ಕಡೆ ಗೋಡೆ ಬಿರುಕು ಬಿಟ್ಟಿದೆ.
ಬೆಂಕಿ ಕಾಣಿಸಿಕೊಂಡ ಕೋಣೆಯಲ್ಲಿ ಗ್ರಾನೈಟ್ ಮತ್ತು ಅಡುಗೆ ಕೋಣೆಯಲ್ಲಿ ಹಾಸಲಾಗಿದ್ದ ಟೈಲ್ಸ್ ಸಿಡಿದು ಹೋಗಿದೆ. ಸುಮಾರು 35 ಲಕ್ಷ ರೂಪಾಯಿ ನಷ್ಟ ಸಂಭವಿಸಿರುವುದಾಗಿ ಅಬ್ದುಲ್ ರಹಿಮಾನ್ ಕಂದಾಯ ಇಲಾಖೆಗೆ ನೀಡಿರುವ ದೂರಿನಲ್ಲಿ ತಿಳಿಸಿದ್ದಾರೆ.
ಮನೆ ಮಾಲಕ ಅಬ್ದುಲ್ ರಹಿಮಾನ್ ಅವರು ಪತ್ನಿ ಹಾಗೂ ಮಕ್ಕಳೊಂದಿಗೆ ಸಂಬಂಧಿಕರ ಮನೆಗೆ ತೆರಳಿದ್ದು, ಮನೆಯಲ್ಲಿ ವೃದ್ಧ ತಾಯಿ ಸಕೀನ ಮಾತ್ರ ಇದ್ದರು. ಮನೆಯೊಳಗೆ ಹೊಗೆ ತುಂಬುವುದನ್ನು ಗಮನಿಸಿದ ಅವರು ಹೊರಗೆ ಬಂದು ಸ್ಥಳೀಯರಿಗೆ ಮಾಹಿತಿ ನೀಡಿದ್ದಾರೆ. ಈ ಮನೆಯನ್ನು ವರ್ಷದ ಹಿಂದೆ ನಿರ್ಮಾಣ ಮಾಡಲಾಗಿತ್ತು.
ಸ್ಥಳೀಯರಾದ ಸಲೀಕತ್, ಅಬೂ ಬಕ್ಕರ್, ರಿಯಾರ್, ಜುನೈದ್ ಆಗಮಿಸಿ ಮನೆಯ ವಿದ್ಯುತ್ ಸಂಪರ್ಕದ ಸ್ವಿಚ್ ಆಫ್ ಮಾಡಿ ಹಾಗೂ ಗ್ಯಾಸ್ ಸಂಕರ್ಪ ಕಡಿತಗೊಳಿಸಿ ಹೊರ ಹಾಕಿ ಹೆಚ್ಚಿನ ದುರಂತವನ್ನು ತಪ್ಪಿಸಿದ್ದಾರೆ. ಪುತ್ತೂರಿನಿಂದ ಅಗ್ನಿ ಶಾಮಕ ದಳ ದವರು ಆಗಮಿಸಿ ಬೆಂಕಿಯನ್ನು ಸಂಪೂರ್ಣ ವಾಗಿ ನಂದಿಸಿದ್ದಾರೆ. ಘಟನಾ ಸ್ಥಳಕ್ಕೆ ಕೊçಲ ಗ್ರಾಮ ಪಂಚಾಯತ್ ಅಧ್ಯಕ್ಷೆ ಪುಷ್ಪಾ ಸುಭಾಸ್, ಸದಸ್ಯ ನಝೀರ್ ಪೂರಿಂಗ, ಕೊಯಿಲ ಗ್ರಾಮ ಆಡಳಿತಾಧಿಕಾರಿ ಶೇಷಾದ್ರಿ ಭೇಟಿ ನೀಡಿ ಪರಿಶೀಲಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Davanagere; ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಐವರಿಗೆ ಗಂಭೀರ ಗಾಯ
Government: ಗಟ್ಟಿತನ ಇದ್ದುದರಿಂದಲೇ ಜಾತಿಗಣತಿ ವರದಿ ಸ್ವೀಕಾರ- ತಂಗಡಗಿ
ಉ.ಪ್ರ.ದ 80 ಕ್ಷೇತ್ರ ಗೆದ್ದರೂ EVM ನಂಬಲ್ಲ: ಅಖೀಲೇಶ್
Lokasabha: ಚಿಕ್ಕಬಳ್ಳಾಪುರದಲ್ಲಿ ರಾಷ್ಟ್ರೀಯ ಪುಷ್ಪ ಮಂಡಳಿ; ಡಾ.ಕೆ.ಸುಧಾಕರ್ ಪ್ರಸ್ತಾಪ
NEET-PG ಪರೀಕ್ಷೆ ಆರಂಭಕ್ಕಿಂತ 2 ಗಂಟೆ ಮುಂಚೆ ಪ್ರಶ್ನೆಪತ್ರಿಕೆ ಸಿದ್ಧ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.