![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
Team Udayavani, May 19, 2020, 4:27 AM IST
ನಟ ರಾಕಿಂಗ್ ಸ್ಟಾರ್ ಯಶ್ ಅಭಿನಯದ ಕೆಜಿಎಫ್-2 ಚಿತ್ರದ ಕೆಲಸಗಳು ಮತ್ತೆ ಶುರುವಾಗಿದ್ದು, ಈ ಕುರಿತು ಚಿತ್ರತಂಡ ಅಪ್ಡೇಟ್ ನೀಡಿದೆ. ಈ ಮೂಲಕ ಅಭಿಮಾನಿಗಳಿಗೆ ಲಾಕ್ ಡೌನ್ ನಡುವೆಯೇ ಚಿತ್ರತಂಡ ಮತ್ತೂಂದು ಗುಡ್ ನ್ಯೂಸ್ ಕೊಟ್ಟಿದೆ. ಅಭಿಮಾನಿಗಳ ಕಾತುರದ ನಡುವೆಯೇ ಈ ಹಿಂದೆ ಚಿತ್ರತಂಡ ಚಿತ್ರಕ್ಕೆ ಬಿಡುಗಡೆ ದಿನಾಂಕವನ್ನು ಪ್ರಕಟಿಸಿದ್ದು, ಅಕ್ಟೊಬರ್ 23ರಂದು ಚಿತ್ರ ಬಿಡುಗಡೆಯಾಗುವುದಾಗಿ ತಿಳಿಸಿತ್ತು.
ಇದೀಗ ಕೆಜಿಎಫ್ ಚಿತ್ರದ ಕಾರ್ಯಕಾರಿ ನಿರ್ಮಾಪಕ ಕಾರ್ತಿಕ್ ಗೌಡ ಹೊಸ ಮಾಹಿತಿ ಹಂಚಿಕೊಂಡಿದ್ದು, ಈ ಕುರಿತು ಟ್ವೀಟ್ ಮಾಡಿ ತಿಳಿಸಿದ್ದಾರೆ. ಸಂಗೀತ ನಿರ್ದೇಶಕ ರವಿ ಬಸ್ರೂರ್ ಅವರ ಮ್ಯೂಸಿಕ್ ಸ್ಟುಡಿಯೋದಲ್ಲಿನ ಚಿತ್ರವನ್ನು ಹಂಚಿಕೊಂಡಿದ್ದು, ಇದರಲ್ಲಿ ಪ್ರಶಾಂತ್ ನೀಲ್, ರವಿ ಬಸ್ರೂರ್ ಹಾಗೂ ಕಾರ್ತಿಕ್ ಗೌಡ ಇದ್ದಾರೆ. ಹ್ಯಾಶ್ ಟ್ಯಾಗ್ನೊಂದಿಗೆ ಕೆಜಿಎಫ್ ಚಾಪ್ಟರ್-2 ಮ್ಯೂಸಿಕ್ ಸೆಶನ್ಸ್ ಎಂಬ ಸಾಲುಗಳನ್ನು ಬರೆದಿದ್ದಾರೆ.
ಅಲ್ಲದೆ ಪ್ರಶಾಂತ್ ನೀಲ್, ಹೊಂಬಾಳೆ ಫೀಲಮ್ಸ್, ಯಶ್ ಶ್ರೀ ನಿಧಿ ಶೆಟ್ಟಿ, ಭುವನ್ ಗೌಡ, ವಿಜಯ್ ಕಿರಗಂದೂರ್, ಸಂಜಯ್ ದತ್ ಹಾಗೂರವೀನಾ ಟಂಡನ್ ಅವರಿಗೆ ಟ್ಯಾಗ್ ಮಾಡಿದ್ದಾರೆ. ಈ ಫೋಟೋ ಚಿತ್ರದ ಸಂಗೀತಕ್ಕೆ ಸಂಬಂಧಿಸಿದ ಕೆಲಸದಲ್ಲಿ ತೊಡಗಿದ್ದಾರೆ ಎಂಬ ಸುಳಿವನ್ನು ನೀಡಿದ್ದು, ಕೆಜಿಎಫ್ 2 ಸಿನಿಮಾದ ಕೆಲಸ ಪ್ರಾರಂಭವಾಯಿತು ಎಂದು ಅಭಿಮಾನಿಗಳು ಖುಷ್ ಆಗಿದ್ದಾರೆ.
ಪ್ರೇಕ್ಷಕರ ನಿರೀಕ್ಷೆಗೆ ತಕ್ಕಂತೆ ಚಿತ್ರತಂಡ ಸಹ ಅಷ್ಟೇ ವೇಗವಾಗಿ ಚಿತ್ರೀಕರಣ ನಡೆಸಿತ್ತು. ಈಗಾಗಲೇ ಶೂಟಿಂಗ್ ಕೊನೇಹಂತ ತಲುಪಿದೆ. ಹೀಗಿರುವಾಗಲೇ ಕೊರೊನಾ ವೈರಸ್ನಿಂದಾಗಿ ಲಾಕ್ಡೌನ್ ಘೋಷಣೆಯಾಯಿತು. ಅಂದಿನಿಂದ ಚಿತ್ರೀಕರಣ ಸ್ಥಗಿತಗೊಂಡಿತ್ತು. ಕೆಜಿಎಫ್ ಚಾಪ್ಟರ್ 1ಗಿಂತಲೂ ಚಾಪ್ಟರ್ 2ಎಫೆಕ್ಟಿವ್ ಆಗಿ ಮೂಡಿ ಬಂದಿದ್ದು, ಪ್ರೇಕ್ಷಕರ ನಿರೀಕ್ಷೆಗೂ ಮೀರಿ ಸಿನಿಮಾ ತಯಾರಿಸಲಾಗಿದೆಯಂತೆ.
Bollywood: ವಿಕ್ಕಿ ಕೌಶಲ್ To ರಶ್ಮಿಕಾ.. ʼಛಾವಾʼಕ್ಕೆ ಕಲಾವಿದರು ಪಡೆದ ಸಂಭಾವನೆ ಎಷ್ಟು?
ಹೇಗಿದೆ ಬಹುನಿರೀಕ್ಷಿತ ʼಛಾವಾʼ? ವಿಕ್ಕಿ ‘ಸಂಭಾಜಿ’ ಅವತಾರಕ್ಕೆ ಪ್ರೇಕ್ಷಕರು ಹೇಳಿದ್ದೇನು?
Chhaava: ‘ಚಾವಾ’ಗೆ ಧ್ವನಿಯಾದ ಅಜಯ್ ದೇವಗನ್
ಗಂಡು ಮೊಮ್ಮಗನೇ ಬೇಕು ಎಂಬ ಅಭಿಲಾಷೆ: ಚಿರಂಜೀವಿ ಹೇಳಿಕೆಗೆ ಭಾರಿ ವಿರೋಧ
Spiritual journey: ಕಿನ್ನರ್ ಅಖಾಡ ತೊರೆದು ಹೊರಬಂದ ಮಾಜಿ ನಟಿ, ಸಾಧ್ವಿ ಮಮತಾ ಕುಲಕರ್ಣಿ
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Pro Hockey: ಇಂಗ್ಲೆಂಡ್ ವಿರುದ್ಧ ಭಾರತ ವನಿತೆಯರಿಗೆ ಸೋಲು
You seem to have an Ad Blocker on.
To continue reading, please turn it off or whitelist Udayavani.