Kirimanjeshwara: ಕಾರು-ಟಿಪ್ಪರ್ ಢಿಕ್ಕಿ; ಮೂವರಿಗೆ ಗಾಯ, ಓರ್ವ ಗಂಭೀರ
Team Udayavani, Apr 21, 2024, 10:45 PM IST
ಉಪ್ಪುಂದ: ಕಿರಿಮಂಜೇಶ್ವರ ರಾಷ್ಟ್ರೀಯ ಹೆದ್ದಾರಿ 66ರ ಅರೆಹೊಳೆ ಕ್ರಾಸ್ನಲ್ಲಿ ಟಿಪ್ಪರ್ಗೆ ಕಾರು ಢಿಕ್ಕಿ ಹೊಡೆದು ಕಾರಿನ ಸವಾರರು ಗಂಭೀರ ಗಾಯಗೊಂಡ ಘಟನೆ ರವಿವಾರ ಸಂಭವಿಸಿದೆ.
ಮೂವರು ಗಾಯಗೊಂಡಿದ್ದು, ಓರ್ವನ ಸ್ಥಿತಿ ಗಂಭೀರವಾಗಿದೆ. ಅವರನ್ನು ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿದೆ.
ಕಾರಿನಲ್ಲಿ ಇದ್ದವರು ಕುಂದಾಪುರ ದಲ್ಲಿ ಮದುವೆ ಕಾರ್ಯಕ್ರಮ ಮುಗಿಸಿ ಕೊಂಡು ಗೋಕರ್ಣಕ್ಕೆ ಹೋಗುತ್ತಿದ್ದಾಗ ಅರೆಹೊಳೆ ಕ್ರಾಸ್ ಬಳಿ ಅಪಘಾತ ಸಂಭವಿಸಿತು.
ಕಾರಿನಲ್ಲಿ ಇದ್ದವರು ಬ್ಯಾಂಕ್ ಉದ್ಯೋಗಿಗಳು ಎಂದು ತಿಳಿದು ಬಂದಿದೆ. ಪ್ರತಾಪ್ ಅವರನ್ನು ಕುಂದಾಪುರ ಖಾಸಗಿ ಆಸ್ಪತ್ರೆಗೆ, ಪ್ರಜ್ವಲ್, ಅಂತೋನಿ ಅವರನ್ನು ಉಡುಪಿ ಆಸ್ಪತ್ರೆಗೆ, ವಿಘ್ನೇಶ್ವರ, ಸುರೇಶ್ ಅವರನ್ನು
ಮಣಿಪಾಲದ ಆಸ್ಪತ್ರೆಗೆ ದಾಖಲಿಸಲಾಗಿದೆ.
ಕಿರಿಮಂಜೇಶ್ವರದ 108 ಆ್ಯಂಬುಲೆನ್ಸ್ ಹಾಗೂ ಗಂಗೊಳ್ಳಿಯ 24×7 ಆಪದ್ಬಾಂಧವ ಆ್ಯಂಬುಲೆನ್ಸ್ ನವರು ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸುವಲ್ಲಿ ನೆರವಾದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ
Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ
Canada Vs India: ನಿಜ್ಜರ್ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ
Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್
Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.