![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
Team Udayavani, Jan 30, 2020, 7:38 PM IST
ಬೆಂಗಳೂರು:ಕೆಎಂಎಫ್ ಹಾಲು ಹಾಗೂ ಮೊಸರು ದರ ಪ್ರತಿ ಲೀಟರ್ಗೆ 2 ರೂ. ಹೆಚ್ಚಳಕ್ಕೆ ತೀರ್ಮಾನಿಸಲಾಗಿದ್ದು ಫೆ.1 ರಿಂದಲೇ ಹೊಸ ದರ ಅನ್ವಯವಾಗಲಿದೆ.
ಪ್ರತಿ ಲೀಟರ್ಗೆ 3 ರೂ. ಹೆಚ್ಚಳ ಮಾಡಲು ರಾಜ್ಯ ಸರ್ಕಾರಕ್ಕೆ ಕೆಎಂಎಫ್ ಪ್ರಸ್ತಾವನೆ ಸಲ್ಲಿಸಲಾಗಿತ್ತು. ಆದರೆ, 2 ರೂ. ಹೆಚ್ಚಳಕ್ಕೆ ಒಪ್ಪಿಗೆ ನೀಡಲಾಗಿದೆ. ಗ್ರಾಹಕರಿಗೆ ಪ್ರಸ್ತುತ ಪ್ರತಿ ಲೀಟರ್ 35 ರೂ. ಇದ್ದು ಇದೀಗ ಬೆಲೆ ಹೆಚ್ಚಳದ ನಂತರ 37 ರೂ. ಆಗಲಿದೆ.
ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಗುರುವಾರ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ದೆಹಲಿಗೆ ತೆರಳುವ ಮುನ್ನ ಭೇಟಿ ಮಾಡಿ ದರ ಹೆಚ್ಚಳಕ್ಕೆ ಅನುಮತಿ ಪಡೆದುಕೊಂಡರು.
ಇತ್ತೀಚೆಗೆ ಕೆಎಂಎಫ್ ಆಡಳಿತ ಮಂಡಳಿ ಸಭೆಯಲ್ಲಿ ದರ ಹೆಚ್ಚಳ ಬಗ್ಗೆ ತೀರ್ಮಾನ ಕೈಗೊಳ್ಳಲಾಗಿತ್ತು. ಇದೀಗ ಸರ್ಕಾರದ ಒಪ್ಪಿಗೆ ಸಿಕ್ಕಿದ್ದು ಫೆ.1 ರಿಂದ ದರ ಜಾರಿಗೆ ಬರಲಿದೆ.
ಪ್ರತಿ ಲೀಟರ್ಗೆ ಹೆಚ್ಚಿಸಲಾಗಿರುವ 2 ರೂ. ಪೈಕಿ ಒಂದು ರೂ. ರೈತರಿಗೆ, 40 ಪೈಸೆ ರೈತರು ಸಾಕುವ ಹಸುಗಳ ವಿಮೆಗೆ, 20 ಪೈಸೆ ಹಾಲು ಉತ್ಪಾದಕರ ಸಂಘಗಳ ನೌಕರರಿಗೆ ಇನ್ಸೆಂಟೀವ್, ಉಳಿದ 40 ಪೈಸೆ ಹಾಲು ಮಾರಾಟ ಮಾಡುವ ಏಜೆಂಟರಿಗೆ ಹಂಚಿಕೆಯಾಗಲಿದೆ.
ಗ್ರಾಹಕರಿಂದ ಪಡೆಯುವ ಹೆಚ್ಚುವರಿ ದರ ಕೆಎಂಎಫ್ ಇಟ್ಟುಕೊಳ್ಳುವುದಿಲ್ಲ ಬದಲಿಗೆ ಹಾಲು ಉತ್ಪಾದಕರಿಗೆ ಪ್ರತ್ಯಕ್ಷ ಹಾಗೂ ಪರೋಕ್ಷವಾಗಿ ತಲುಪಲಿದೆ ಎಂದು ಕೆಎಂಎಫ್ ವ್ಯವಸ್ಥಾಪಕ ನಿರ್ದೇಶಕ ಬಿ.ಸಿ. ಸತೀಶ್ “ಉದಯವಾಣಿ’ಗೆ ತಿಳಿಸಿದರು.
ಪ್ರಸ್ತುತ ಹಾಲು ಉತ್ಪಾದಕರಿಗೆ ಪ್ರತಿ ಲೀಟರ್ಗೆ 24 ರಿಂದ 28 ರೂ.ವರೆಗೆ (ಎಸ್ಎನ್ಎಫ್ ಆಧಾರದಲ್ಲಿ) ನೀಡಲಾಗುತ್ತಿದೆ. ಇದರ ಜತೆಗೆ ಸರ್ಕಾರದ ವತಿಯಿಂದ ಪ್ರತಿ ಲೀಟರ್ಗೆ 5 ರೂ. ಪ್ರೋತ್ಸಾಹ ಧನ ನೀಡುತ್ತದೆ. ಈಗ ದರ ಹೆಚ್ಚಳದಿಂದ ಮತ್ತೂಂದು ರೂಪಾಯಿ ರೈತರಿಗೆ ದೊರೆಯಲಿದೆ. ಆಯಾ ಜಿಲ್ಲಾ ಯೂನಿಯನ್ಗಳು ರೈತರಿಗೆ ನೀಡುವ ಹಾಲಿನ ದರ ನಿಗದಿಮಾಡುತ್ತವೆ.
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Pro Hockey: ಇಂಗ್ಲೆಂಡ್ ವಿರುದ್ಧ ಭಾರತ ವನಿತೆಯರಿಗೆ ಸೋಲು
You seem to have an Ad Blocker on.
To continue reading, please turn it off or whitelist Udayavani.