ಕೊಳಂಬೆ: ತಡೆಗೋಡೆ ಪುನರ್‌ ರಚನೆ ಆರಂಭ


Team Udayavani, Apr 3, 2021, 1:45 AM IST

ಕೊಳಂಬೆ: ತಡೆಗೋಡೆ ಪುನರ್‌ ರಚನೆ ಆರಂಭ

ಬೆಳ್ತಂಗಡಿ: ತಾಲೂಕಿನಲ್ಲಿ 2019ರ ಆಗಸ್ಟ್‌ನಲ್ಲಿ ಸಂಭವಿಸಿದ ಭೀಕರ ಜಲ ಪ್ರಳಯದಿಂದಾಗಿ ಮೃತ್ಯುಂಜಯ ನದಿ ನೀರಿನ ರಭಸಕ್ಕೆ ಚಾರ್ಮಾಡಿ ಗ್ರಾಮದ ಕೊಳಂಬೆ ಭೂ ಪ್ರದೇಶ ಕೊಚ್ಚಿ ಹೋಗಿತ್ತು. ಈ ಪ್ರದೇಶದಲ್ಲಿ ಸಣ್ಣ ನೀರಾವರಿ ಇಲಾಖೆಯ ಅನುದಾನದಡಿ ನಿರ್ಮಿಸಿದ ತಡೆಗೋಡೆ ಕಳೆದ ಒಂದೇ ವರ್ಷದ ಮಳೆಗಾಲದ ಅವಧಿಯಲ್ಲಿ ನದಿ ನೀರಿನ ಸೆಳೆತ ತಡೆಯಲಾಗದೆ ಬಿದ್ದುಹೋಗಿತ್ತು.

ಈ ಕುರಿತು “ಉದಯವಾಣಿ’ ಸುದಿನ ಆವೃತ್ತಿಯಲ್ಲಿ ಮಾ. 20ರಂದು “ಪ್ರವಾಹ ತಡೆಗೆ ರಚಿಸಿದ ತಡೆಗೋಡೆ ನೀರುಪಾಲು’ ಎಂಬ ಶೀರ್ಷಿಕೆಯಡಿ ವರದಿ ಪ್ರಕಟಿಸಿತ್ತು. ಪ್ರತಿ 100 ಮೀಟರ್‌ಗೆ 49 ಲಕ್ಷ ರೂ.ನಂತೆ ಒಟ್ಟು 300 ಮೀಟರ್‌ ತಡೆಗೋಡೆಗೆ 1.47 ಕೋ.ರೂ. ಮಂಜೂರಾಗಿ ಕಾಸರಗೋಡು ಗುತ್ತಿಗೆದಾರ ಕುಂಞಿ ಕೊಯತ್ತಂಗಲ್‌ ಅವರಿಗೆ ನೀಡಲಾಗಿತ್ತು.

ತಡೆಗೋಡೆಯೇನೋ ಸಮಯಕ್ಕೆ ಸರಿ ಯಾಗಿ ರಚನೆಯಾಗಿದ್ದರೂ, ಕಳೆದ ಮಳೆ ಗಾಲದಲ್ಲಿ 12 ಅಡಿ ಒಂದು ಪಾರ್ಶ್ವ ನದಿ ಪಾಲಾಗಿತ್ತು. ಉಳಿದ ತಡೆಗೋಡೆಯೂ ನದಿ ಬದಿಗೆ ವಾಲಿ ನಿಂತಿದ್ದು, ಮುಂದಿನ ಮಳೆಗಾಲಕ್ಕೆ ಅಪಾಯ ಎದುರಾಗುವ ಸಾಧ್ಯತೆ ಕುರಿತು ವರದಿಯಲ್ಲಿ ಎಚ್ಚರಿಸಲಾಗಿತ್ತು. ಸ್ಪಂದಿಸಿದ ಶಾಸಕ ಹರೀಶ್‌ ಪೂಂಜ, ಸಣ್ಣ ನೀರಾ ವರಿ ಇಲಾಖೆ ಅಧಿಕಾರಿಗಳ ಮೂಲಕ ಗುತ್ತಿಗೆದಾರರಿಗೆ ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದರು. ಅದರಂತೆ ಎ. 2ರಂದು ಸ್ಥಳದಲ್ಲಿ ಕಾಮಗಾರಿ ಆರಂಭಿಸ ಲಾಗಿದೆ.

ಬಿದ್ದಿರುವ 12 ಮೀಟರ್‌ ತಡೆ ಗೋಡೆಯನ್ನು ಗುತ್ತಿಗೆದಾರರೇ ಸಂಪೂರ್ಣ ವೆಚ್ಚ ಭರಿಸಿ ಮಳೆಗಾಲಕ್ಕೂ ಮುನ್ನ ಸರಿಪಡಿಸುವಂತೆ ಹಾಗೂ ಈಗಾಗಲೇ ಬಿರುಕು ಬಿಟ್ಟಿರುವ ಇನ್ನುಳಿದ ತಡೆಗೋಡೆಯನ್ನು ದುರಸ್ತಿ ಪಡಿಸುವಂತೆ ಇಲಾಖೆ ಸೂಚಿಸಿದೆ.

ಸೂಚಿಸಲಾಗಿದೆ
ಕೊಳಂಬೆ ಸಮೀಪ ಮೃತ್ಯುಂಜಯ ನದಿಗೆ ಕಟ್ಟಿದ ತಡೆಗೋಡೆ ಕಾರಣಾಂತರಗಳಿಂದ ಬಿದ್ದಿದ್ದು, 12 ಮೀಟರ್‌ ತಡೆಗೋಡೆ ಪುನರ್‌ ರಚನೆ ಹಾಗೂ ಬಿರುಕು ಬಿದ್ದಲ್ಲಿ ಸೂಕ್ತ ರೀತಿ ಕಾಮಗಾರಿ ನಿರ್ವಹಿಸುವಂತೆ ಗುತ್ತಿಗೆದಾರರಿಗೆ ಸೂಚಿಸಲಾಗಿದೆ.
-ರಾಕೇಶ್‌, ಎಇ, ಸಣ್ಣ ನೀರಾವರಿ ಇಲಾಖೆ, ಬೆಳ್ತಂಗಡಿ ವಿಭಾಗ

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vitla: Bolanthur Narsha robbery case: Four more arrested including Kerala police

Vitla: ಬೋಳಂತೂರು ನಾರ್ಶ ದರೋಡೆ ಪ್ರಕರಣ: ಕೇರಳದ ಪೊಲೀಸ್‌ ಸೇರಿ ಮತ್ತೆ ನಾಲ್ವರ ಬಂಧನ

8-kukke

Subrahmanya: ಮುಜರಾಯಿ ಸಚಿವರ ನೇತೃತ್ವದಲ್ಲಿ ಕುಕ್ಕೆ ದೇಗುಲದ ಅಭಿವೃದ್ಧಿ ಸಭೆ

3(1

Sullia: ಜಳಕದಹೊಳೆ ಸೇತುವೆ; ಸಂಚಾರ ನಿಷೇಧ

2(1

Uppinangady: ಕಾಂಕ್ರೀಟ್‌ ರಸ್ತೆಯೇ ಕಿತ್ತೋಗಿದೆ

1

Bantwal: ಕೃಷಿಕರ ತೋಟಗಳಿಗೆ ನುಗ್ಗಿದ ಜಕ್ರಿಬೆಟ್ಟು ಅಣೆಕಟ್ಟು ನೀರು!

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

1-namm-mannu-1

Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.