ಕೊಂಕಣಿ ಭವನ ನಿರ್ಮಾಣಕ್ಕೆ ಶೀಘ್ರ ಶಿಲಾನ್ಯಾಸ :ಕೊಂಕಣಿಯ 42 ಜಾತಿ-ಸಮುದಾಯಗಳ ಕನಸು ನನಸಾಗಲಿ


Team Udayavani, Feb 12, 2022, 12:50 PM IST

ಕೊಂಕಣಿ ಭವನ ನಿರ್ಮಾಣಕ್ಕೆ ಶೀಘ್ರ ಶಿಲಾನ್ಯಾಸ :ಕೊಂಕಣಿಯ 42 ಜಾತಿ-ಸಮುದಾಯಗಳ ಕನಸು ನನಸಾಗಲಿ

ಉರ್ವಸ್ಟೋರ್‌ : ಕೊಂಕಣಿ ಭಾಷಿಗರ ಬಹು ಕಾಲದ ಬೇಡಿಕೆ ಕೊಂಕಣಿ ಭವನ ನಿರ್ಮಾಣದ ಕನಸು ನನಸಾಗುವ ಕಾಲ ಸನ್ನಿಹಿತವಾಗಿದೆ.

ಕೊಂಕಣಿ ಭವನ ನಿರ್ಮಾಣಕ್ಕೆ ಮಂಗ ಳೂರಿನ ಉರ್ವಸ್ಟೋರ್‌ನಲ್ಲಿ ಅಂಬೇಡ್ಕರ್‌ ಭವನದ ಸಮೀಪ 35 ಸೆಂಟ್ಸ್‌ ಸರಕಾರಿ ಜಾಗ ಮಂಜೂರಾಗಿದ್ದು, ಅಲ್ಲಿ ಭವನ ನಿರ್ಮಾಣಕ್ಕಾಗಿ ಗಿಡಗಂಟಿಗಳನ್ನು ಕಡಿದು ಸ್ವತ್ಛಗೊಳಿಸುವ ಕಾಮಗಾರಿ ನಡೆದಿದೆ. ಈ ಯೋಜನೆಗೆ 5 ಕೋಟಿ ರೂ. ಅನು ದಾನ ರಾಜ್ಯ ಸರಕಾರದಿಂದ 2019ರಲ್ಲಿಯೇ ಮಂಜೂರಾಗಿದ್ದು, ಈ ಪೈಕಿ 3 ಕೋಟಿ ರೂ. ಬಿಡುಗಡೆಯಾಗಿದೆ. ಕಾಮಗಾರಿ ಆರಂಭಿಸುವ ಬಗ್ಗೆ ಜಿಲ್ಲಾಧಿಕಾರಿ ಗಳ ಅನುಮತಿ ಈಗಾಗಲೇ ಲಭಿಸಿದೆ.

ಸುಸಜ್ಜಿತ ಭವನ
ಕೊಂಕಣಿ ಭವನ ಕಟ್ಟಡವು ನೆಲ ಮಹಡಿ ಮತ್ತು ಎರಡು ಮಹಡಿಗಳನ್ನು ಹೊಂದಿರುತ್ತದೆ. ನೆಲ ಮಹಡಿಯಲ್ಲಿ ವಾಹನ ಪಾರ್ಕಿಂಗ್‌, 1ನೇ ಮಾಳಿಗೆಯಲ್ಲಿ ಅಕಾಡೆಮಿಯ ಕಚೇರಿ ಮತ್ತು ಗ್ರಂಥಾಲಯ, 2ನೇ ಮಾಳಿಗೆಯಲ್ಲಿ ಸಭಾಂಗಣ ಮತ್ತು ವಸ್ತು ಸಂಗ್ರಹಾಲಯ (ಮ್ಯೂಸಿಯಂ) ಇರುತ್ತದೆ. ಮ್ಯೂಸಿ ಯಂನಲ್ಲಿ 42 ಕೊಂಕಣಿ ಸಮುದಾಯಗಳ ವಿವಿಧ ಸಂಸ್ಕೃತಿಗೆ ಸಂಬಂಧಿಸಿದ ಹಾಗೂ ಬಳಕೆಯ ವಸ್ತುಗಳನ್ನು ಇರಿಸಲಾಗುತ್ತದೆ. ಕಟ್ಟಡದ ಒಟ್ಟು ವಿಸ್ತೀರ್ಣ 4735 ಚದರ ಅಡಿ (1435.16 ಚ. ಮೀ.).

ಶೀಘ್ರದಲ್ಲಿಯೇ ಕನ್ನಡ ಮತ್ತು ಸಂಸ್ಕೃತಿ ಖಾತೆಯ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ವಿ. ಸುನಿಲ್‌ ಕುಮಾರ್‌ ಅವರಿಂದ ಕೊಂಕಣಿ ಭವನ ನಿರ್ಮಾಣದ ಶಿಲಾನ್ಯಾಸವನ್ನು ನೇರವೇರಿಸಲಾಗುವುದು ಎಂದು ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ಡಾ| ಜಗದೀಶ್‌ ಪೈ ಅವರು “ಉದಯವಾಣಿ’ಗೆ ಮಾಹಿತಿ ನೀಡಿದ್ದಾರೆ.
ಕೊಂಕಣಿ ಭವನ ನಿರ್ಮಾಣ ಯೋಜನೆ ಸಾಕಾರಗೊಳ್ಳಲು ಸಚಿವರಾದ ವಿ. ಸುನಿಲ್‌ ಕುಮಾರ್‌, ಕೋಟ ಶ್ರೀನಿವಾಸ್‌ ಪೂಜಾರಿ, ಸಿ.ಟಿ. ರವಿ, ಜಿಲ್ಲೆಯ ಇತರ ಜನಪ್ರತಿನಿಧಿಗಳು ಸಹಕರಿಸಿದ್ದಾರೆ. ನನ್ನ ಅಧಿಕಾರಾವಧಿಯಲ್ಲಿಯೇ ಈ ಕಟ್ಟಡದ ಕಾಮಗಾರಿಯನ್ನು ಪೂರ್ಣಗೊಳಿಸಿ ಉದ್ಘಾಟಿಸುವ ಉದ್ದೇಶ ಹೊಂದಿದ್ದೇನೆ ಎಂದು ಅಧ್ಯಕ್ಷರು ತಿಳಿಸಿದ್ದಾರೆ.

ವಿಶಾಲ ಸಭಾಂಗಣ
ನಾವು ಆಧಿಕಾರಕ್ಕೆ ಬಂದಾಗ ಅಕಾಡೆಮಿಗೆ 25 ವರ್ಷಗಳಾಗಿದ್ದು, ಇದೀಗ 27 ವರ್ಷಗಳಾಗಿವೆ. ಅಕಾಡೆಮಿಯ ಕಚೇರಿ ಈಗಲೂ ಬಾಡಿಗೆ ಕಟ್ಟಡದಲ್ಲಿದೆ. ಅಲ್ಲಿ ಸೀಮಿತ ಸ್ಥಳಾವಕಾಶದಲ್ಲಿ ಕಾರ್ಯಕ್ರಮಗಳನ್ನು ನಡೆಸುವುದು ಕಷ್ಟ ಸಾಧ್ಯ. ಹೊಸ ಕಟ್ಟಡದಲ್ಲಿ ವಿಶಾಲವಾದ ಸಭಾಂಗಣ ಇದ್ದು, ಕಾರ್ಯಕ್ರಮ ನಡೆಸಲು ಅನುಕೂಲವಾಗಲಿದೆ. ಕೊಂಕಣಿ ಭವನ ನಿರ್ಮಾಣ ಆಗುವುದರೊಂದಿಗೆ ಕೊಂಕಣಿಯ 42 ಜಾತಿ- ಸಮುದಾಯಗಳ ಕನಸು ನನಸಾಗಲಿದೆ.
– ಡಾ| ಜಗದೀಶ್‌ ಪೈ, ಕೊಂಕಣಿ ಅಕಾಡೆಮಿ ಅಧ್ಯಕ್ಷರು

– ಹಿಲರಿ ಕ್ರಾಸ್ತಾ

ಟಾಪ್ ನ್ಯೂಸ್

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vamanjoor Thiruvailuguthu Sankupoonja – Devupoonja Jodukare Kambala Result

Kambala Result: ವಾಮಂಜೂರು ತಿರುವೈಲುಗುತ್ತು ಸಂಕುಪೂಂಜ -ದೇವುಪೂಂಜ ಜೋಡುಕರೆ ಕಂಬಳ ಫಲಿತಾಂಶ

Dinesh-Gundurao

Congress: ದಲಿತ ಸಮಾವೇಶ ಯಾವ ರೀತಿ ಎಂಬ ಬಗ್ಗೆಯಷ್ಟೇ ಚರ್ಚೆ: ದಿನೇಶ್‌ ಗುಂಡೂರಾವ್‌

Mangaluru: ಮಾದಕ ವಸ್ತು ಸೇವನೆ; ಮೂವರು ವಶಕ್ಕೆ

Mangaluru: ಮಾದಕ ವಸ್ತು ಸೇವನೆ; ಮೂವರು ವಶಕ್ಕೆ

Mangaluru: ಬಾಲಕಿಗೆ ಕಿರುಕುಳ: ಅಂಗಡಿ ಮಾಲಕನಿಗೆ 5 ವರ್ಷ ಸಜೆ

Mangaluru: ಬಾಲಕಿಗೆ ಕಿರುಕುಳ: ಅಂಗಡಿ ಮಾಲಕನಿಗೆ 5 ವರ್ಷ ಸಜೆ

Arrested: ಜೂಜಾಟದ ಅಡ್ಡೆಗೆ ದಾಳಿ 20 ಮಂದಿಯ ಬಂಧನ

Arrested: ಜೂಜಾಟದ ಅಡ್ಡೆಗೆ ದಾಳಿ 20 ಮಂದಿಯ ಬಂಧನ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

de

Vitla: ಕಾಲು ಜಾರಿ ಕೆರೆಗೆ ಬಿದ್ದು ಯುವಕ ಸಾವು

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.