Flood ಭೀತಿ ಹುಟ್ಟಿಸಿದ ಕೃಷ್ಣೆ…..!ಎರಡು ದಶಕಗಳು ಕಳೆದರೂ ಸಿಗದ ಪುನರ್ವಸತಿ

ಪ್ರತಿ ವರ್ಷ ಸಮಸ್ಯೆಯಲ್ಲಿಯೇ ಜೀವನ ಸಾಗಿಸುತ್ತಿರುವ ತಮದಡ್ಡಿ ಮತ್ತು ಅಸ್ಕಿ ಗ್ರಾಮಸ್ಥರು

Team Udayavani, Jul 29, 2024, 8:44 PM IST

Flood ಭೀತಿ ಹುಟ್ಟಿಸಿದ ಕೃಷ್ಣೆ…..!ಎರಡು ದಶಕಗಳು ಕಳೆದರು ಸಿಗದ ಪುರ್ನವಸತಿ

ರಬಕವಿ-ಬನಹಟ್ಟಿ : ಮಹಾರಾಷ್ಟ್ರದ ಜಲಾನಯನ ಪ್ರದೇಶಗಳಲ್ಲಿ ಭಾರೀ ಪ್ರಮಾಣದ ಮಳೆ ಹಾಗೂ ಮಹಾರಾಷ್ಟ್ರದ ಇತರೆ ಜಲಾಶಯಗಳಿಂದ ಅಪಾರ ಪ್ರಮಾಣದ ನೀರನ್ನು ಹೊರ ಹಾಕುತ್ತಿರುವುದರಿಂದ ತಾಲೂಕಿನ ಕೆಲವು ಗ್ರಾಮಗಳು ಪ್ರವಾಹ ಭೀತಿಯನ್ನು ಎದುರಿಸುತ್ತಿವೆ.

ಕೃಷ್ಣಾ ನದಿ ಪಾತ್ರದ ಗ್ರಾಮಗಳಾದ ತಮದಡ್ಡಿ, ಹಳಿಂಗಳಿ(ಗುಳ್ಳಿಮನೆ), ಮದನಮಟ್ಟಿ, ಆಸಂಗಿ, ಅಸ್ಕಿ, ಕುಲಹಳ್ಳಿ ಹಾಗೂ ಹಿಪ್ಪರಗಿ ಗ್ರಾಮದ ಸುತ್ತಮುತ್ತಲೀನ ನದಿ ತೀರದ ರೈತಸರಲ್ಲಿ ಮಳೆಗಾಲ ಆರಂಭಗೊಂಡರೆ ಒಂದೆಡೆ ಖುಷಿ ಇನ್ನೊಂದೆಡೆ ಆತಂಕದ ನಡುವೆ ಜೀವನ ಸಾಗಿಸಬೇಕಾದ ಅನಿವಾರ್ಯತೆ ನಿರಂತರವಾಗಿದೆ.

ಕೃಷ್ಣಾನದಿ ಉಕ್ಕಿ ಹರಿದು ನೀರಿನ ಪ್ರವಾಹ ಹೆಚ್ಚಾದಾಗ ಆತಂಕ ಸೃಷ್ಠಿ ಮಾಡಿ ರೈತರು ಮತ್ತು ಸಾರ್ವಜನಿಕರನ್ನು ಭಾಗಶಃ ಕಾಡುತ್ತಿರುವುದಂತು ವಾಸ್ತವ.

2005, 2009 ಮತ್ತು 2019ರಲ್ಲಿ ಉಂಟಾಗಿದ್ದ ಪ್ರವಾಹದ ರುದ್ರನರ್ತನವನ್ನು ಇಲ್ಲಿಯ ಗ್ರಾಮಸ್ಥರು ಇಂದಿಗೂ ಮರೆತಿಲ್ಲ. 2005ರಲ್ಲಿ ಉಂಟಾದ ಪ್ರವಾಹ ಈ ಭಾಗದ ಮನೆ, ಬೆಳೆ, ಕೋಟ್ಯಾಂತರ ಮೊತ್ತದ ಸಾರ್ವಜನಿಕ ಆಸ್ತಿ ಪಾಸ್ತಿ ಕೊಚ್ಚಿಕೊಂಡು ಹೋಗುವಂತೆ ಮಾಡಿತ್ತು. ಪ್ರವಾಹಕ್ಕೆ ತುತ್ತಾಗಿದ್ದ ಹಳ್ಳಿಗರಿಗೆ ಅಂದು ರಾಜ್ಯ ಸರಕಾರ, ಹಲವಾರು ಸಂಘ ಸಂಸ್ಥೆಗಳ, ದಾನಿಗಳ ನೆರವಿಗೂ ಮನವಿ ಮಾಡಿತ್ತು. ಅದರ ಫಲವಾಗಿ ಹಲವಾರು ಸಂಸ್ಥೆಗಳು ಜಿಲ್ಲಾಡಳಿತ ಪ್ರವಾಹಕ್ಕೆ ಸಿಲುಕಿ ನಲುಗಿದವರಿಗೆ ಆಹಾರ ಪೊಟ್ಟಣ, ಶಾಲು, ಜಮಖಾನೆ, ಕುಡಿಯುವ ನೀರು, ಶೆಟಡ್‌ನಲ್ಲಿ ಆಶ್ರಯ ಕಲ್ಪಿಸಲಾಗಿತ್ತು. ಆಗ ಆದ ನಷ್ಟ ಪರಿಹಾರದ ಜೊತೆ ಮುಳುಗಡೆ ಪ್ರದೇಶಗಳನ್ನು ಗುರುತಿಸಿ ಪರಿಹಾರ ಧನ ಕೂಡಾ ನೀಡಿತ್ತು. ಇಲ್ಲಿನ ಬಹುತೇಕ ಗ್ರಾಮಗಳ ಜನರ ಜಮೀನುಗಳು ಮುಳಗಡೆ ವ್ಯಾಪ್ತಿಯಲ್ಲಿ ಬರುತ್ತಿದ್ದು, ಆಶ್ರಯ ವಿಷಯಕ್ಕೆ ಸಂಬಂದಿಸಿದಂತೆ ಅಸ್ಕಿ ಹಾಗೂ ತಮದಡ್ಡಿ ಗ್ರಾಮಸ್ಥರ ತಕರಾರು ಸರಕಾರದ ಜೊತೆ ಮುಂದುವರೆದಿದೆ.

ಅಸ್ಕಿ ಗ್ರಾಮಕ್ಕೆ ಸಂಬಂಧಿಸಿದಂತೆ ಹಲವಾರು ಪ್ರದೇಶಗಳನ್ನು ಗುರುತಿಸಿದ್ದರು ಸಮಸ್ಯೆ ನಿವಾರಣೆಯಾಗಿಲ್ಲ. ಇದೀಗ ಅರಣ್ಯ ಇಲಾಖೆ ಜಾಗೆ ತೋರಿಸಿದ್ದು, ಸರಕಾರ ಮಟ್ಟದಲ್ಲಿ ಕಂದಾಯ ಭೂಮಿ ಹಸ್ತಾಂತರಿಸಿ ಅರಣ್ಯ ಭೂಮಿ ಪಡೆದುಕೊಳ್ಳುವ ಪ್ರಕ್ರಿಯೆ ಸರಕಾರ ಮಟ್ಟದಲ್ಲಿದೆ. ಅದೇ ರೀತಿ ಸಂಪೂರ್ಣ ಮುಳಗಡೆಯಾಗುವ ತಮದಡ್ಡಿ ಗ್ರಾಮಕ್ಕೆ ಸಂಬಂಧಿಸಿದಂತೆ ಈಗಾಗಲೇ ಹಳಿಂಗಳಿ ಗ್ರಾಮದ ಗುಡ್ಡದಲ್ಲಿ ಸುಮಾರು 89 ಎಕರೆ ಕಂದಾಯ ಭೂಮಿ ನೀಡಲಾಗಿದೆ. ಆದರೆ ಹಳಿಂಗಳಿ ಗ್ರಾಮಸ್ಥರು ಅದು ಪ್ರಾಚೀನ ಇತಿಹಾಸದ ಕುರುಹುಗಳಿರುವ ಜಾಗೆ ಅದನ್ನು ಅವರಿಗೆ ಬಿಟ್ಟು ಕೊಡಬೇಡಿ ಎಂದು ನ್ಯಾಯಾಲಯದ ತಡೆಯಾಜ್ಞೆಯನ್ನು ತಂದಿರುವುದರಿಂದ ಅದು ನೆನೆಗುದಿಗೆ ಬಿದ್ದಿದೆ.

ಇಂದು ಸೋಮವಾರ ಕೃಷ್ಣಾ ನದಿಗೆ 2,77,820 ಕ್ಯೂಸೆಕ್ ನೀರು ಹರಿದು ಬಂದಿದ್ದು ಮತ್ತಷ್ಟು ಪ್ರವಾಹದ ಬೀತಿ ಗ್ರಾಮಸ್ಥರಲ್ಲಿ ಆವರಿಸಿದೆ. ಆಸಂಗಿ ಗ್ರಾಮ ಪಂಚಾಯತಿ ವ್ಯಾಪ್ತಿಗೆ ಬರುವ ಅಸ್ಕಿ ಗ್ರಾಮ ಕೃಷ್ಣಾ ನದಿ ತೀರದ ಗ್ರಾಮವಾಗಿದ್ದು ಗ್ರಾಮದ ತೋಟದ ವಸತಿಯಲ್ಲಿನ ಹಲವಾರು ಕುಟುಂಬಗಳ ತೋಟದ ಪ್ರದೇಶ ಜಲಾವೃತವಾಗಿದ್ದು, ನೀರು ಗ್ರಾಮವನ್ನು ಸುತ್ತುವರೆಯುತ್ತಿದ್ದು, ಆ ನಿಟ್ಟಿನಲ್ಲಿ ಸರಕಾರಿ ಅಧಿಕಾರಿಗಳು ಅವರ ಮನವೊಲಿಸಿ ಅವರನ್ನು ಹಾಗೂ ಜಾನವಾರುಗಳನ್ನು ಗ್ರಾಮದ ಮನೆಗಳಿಗೆ ಹಾಗೂ ತಮ್ಮ ಸಂಬಂಧಿಕರ ಮನೆಗಳಿಗೆ ಸ್ಥಳಾಂತರಿಸಿದ್ದಾರೆ. ಹಾಗೂ ಗಂಜಿ ಕೇಂದ್ರವನ್ನು ಪ್ರಾರಂಭಿಸಿದ್ದಾರೆ. ಹಳಿಂಗಳಿ ತೋಟದ ಮನೆಯ ಹತ್ತಿರ ಪ್ರವಾಹ ಬಾಧಿತವಾಗಿರುವ ಪ್ರದೇಶದಲ್ಲಿನ 40 ಕುಟುಂಬ 175 ಜನ, 208 ಜಾನುವಾರುಗಳನ್ನು ಸ್ಥಳಾಂತರಿಸಿದ್ದು, ಹಳಿಂಗಳಿಯ ಮಹಾವೀರ ಪ್ರಾಥಮಿಕ ಶಾಲೆಯಲ್ಲಿ ಕಾಳಜಿ ಕೇಂದ್ರ ಸ್ಥಾಪಿಸಿ ಅದರಲ್ಲಿ 15ಕುಟುಂಬಗಳ 74 ಜನ ಆಶ್ರಯ ಪಡೆದುಕೊಂಡಿದ್ದಾರೆ. ಉಳಿದ ಕುಟುಂಬಗಳು ಸಮೀಪದ ಸಂಬಂಧಿಕರ ಮನೆ ಹಾಗೂ ಸ್ವಂತ ಮನೆಗಳಲ್ಲಿ ವಸತಿ ಪಡೆದಿದ್ದಾರೆ. ಸುಮಾರು 5,000ಸಾವಿರ ಜನಸಂಖ್ಯೆಯ ತಮದಡ್ಡಿಯ 1,100 ಕುಟುಂಬಗಳು ವಾಸವಿದ್ದಾರೆ. ಸದ್ಯ ತಮದಡ್ಡಿಯ ಸರಕಾರಿ ಪ್ರೌಢಶಾಲೆಯಲ್ಲಿ ಕಾಳಜಿ ಕೇಂದ್ರ ಆರಂಭಿಸಿದ್ದು, ನದಿ ಪಾತ್ರದಲ್ಲಿರುವ 6 ಕುಟುಂಬಗಳ 20 ಜನ ಮತ್ತು 78 ಜಾನುವಾರುಗಳು ಆಶ್ರಯ ಪಡೆದುಕೊಂಡಿದ್ದಾರೆ. ನೀರಿನ ತೀವ್ರತೆ ಇನ್ನೂ ಹೆಚ್ಚಾದಲ್ಲಿ ಆದಷ್ಟು ಬೇಗನೆ ಗಂಜಿ ಕೇಂದ್ರ ತೆರೆಯಲು ಎಲ್ಲ ಸಿದ್ದತೆಗಳನ್ನು ಮಾಡಿಕೊಂಡಿರುವುದಾಗಿ ಅಧಿಕಾರಿಗಳು ಹೇಳುತ್ತಾರೆ.

ಮುಳುಗಡೆ : ರಬಕವಿ-ಬನಹಟ್ಟಿ ಸಮೀಪದ ಜಾಕವೆಲ್ ರಸ್ತೆ, ಮದನಮಟ್ಟಿ ರಬಕವಿ ಬನಹಟ್ಟಿ ರಸ್ತೆಯ ಸೇತುವೆ ಮೇಲೆ ನೀರು ಬಂದಿದ್ದರಿಂದ ಮದನಮಟ್ಟಿಯ ಗುಡ್ಡದಲ್ಲಿರುವ ಸರಕಾರಿ ಪದವಿ ವಿದ್ಯಾಲಯದ ವಿದ್ಯಾರ್ಥಿಗಳಿಗೆ ಸಾಕಷ್ಟು ತೊಂದರೆಯಾಗಿದೆ. ಅಲ್ಲದೆ. ಕುಲಹಳ್ಳಿಯಿಂದ ಹಿಪ್ಪರಗಿಗೆ ತೆರಳುವ ರಸ್ತೆ ಹಿನ್ನೀರಿನಿಂದ ಜಲಾವೃತವಾಗಿದ್ದು ರಸ್ತೆ ಸಂಚಾರಕ್ಕೆ ತೊಂದರೆಯಾಗಿದೆ.

ಬೆಳೆ ಹಾನಿ : ತಮದಡ್ಡಿ, ಹಳಿಂಗಳಿ(ಗುಳ್ಳಿಮನೆ), ಮದನಮಟ್ಟಿ, ಆಸಂಗಿ, ಅಸ್ಕಿ, ಕುಲಹಳ್ಳಿ ಹಾಗೂ ಹಿಪ್ಪರಗಿ ಗ್ರಾಮದ ಕೃಷ್ಣಾ ನದಿ ತೀರದ ಬಹುತೇಕ ರೈತರ ಜಮೀನಿಗೆ ನೀರು ನುಗ್ಗಿರುವುದರಿಂದ ಅಪಾರ ಪ್ರಮಾಣದ ಬೆಳೆ ಹಾನಿಯಾಗಿದೆ.

ಪ್ರವಾಹದ ಕುರಿತು ಜಾಗೃತಿ ಮೂಡಿಸಲು ಸರಕಾರದಿಂದ ಡಂಗೂರಗಳನ್ನು ಹಾಕಲಾಗುತ್ತಿದ್ದು, ಜೊತೆಗೆ ಆಯಾ ಗ್ರಾಮದ ವ್ಯಾಪ್ತಿಯಲ್ಲಿ ಆರೋಗ್ಯಾಧಿಕಾರಿಗಳು ಹಾಗೂ ಪಶುವೈದ್ಯಾಧಿಕಾರಿಗಳು ತುರ್ತು ಚಿಕಿತ್ಸೆಗಾಗಿ ಬೀಡು ಬಿಟ್ಟಿದ್ದು ಸಾರ್ವಜನಿಕರ ಆರೋಗ್ಯದ ದೃಷ್ಠಿಯಿಂದ ಎಲ್ಲ ಮುಂಜಾಗೃತ ಕ್ರಮಗಳನ್ನು ಕೈಗೊಂಡಿದ್ದಾರೆ.

ಮಹಾರಾಷ್ಟ್ರದ ಜಲಾನಯನ ಅಧಿಕಾರಿಗಳ ಜೊತೆ ಇಲ್ಲಿನ ಕೃಷ್ಣಾ ಮೇಲದಂಡೆ ಯೋಜನೆ ಅಧಿಕಾರಿಗಳು ನಿರಂತರ ಸಂಪರ್ಕದಲ್ಲಿರುವುದರಿಂದ ಹಾಗೂ ಮಹಾರಾಷ್ಟ್ರದಿಂದ ಹರಿದು ಬರುವ ಕೃಷ್ಣಾ ನದಿಯ ನೀರನ್ನು ಇಲ್ಲಿನ ಹಿಪ್ಪರಗಿ ಜಲಾಶಯದಿಂದ ಹಾಗೂ ಆಲಮಟ್ಟಿ ಜಲಾಶಯದಿಂದ ಹೆಚ್ಚಿನ ಪ್ರಮಾಣದಲ್ಲಿ ನೀರನ್ನು ಬೀಡುತ್ತಿರುವುದರಿಂದ ಪ್ರವಾಹ ಅಷ್ಟಾಗಿ ಬರಲಿಕ್ಕಿಲ್ಲ ಎಂಬುದು ಅಧಿಕಾರಿಗಳ ಅನಿಸಿಕೆ ಆದರೂ ಸದ್ಯಕ್ಕೆ ಪ್ರವಾಹ ಬೀತಿ ಅಧಿಕವಾಗಿದ್ದು ಇನ್ನೂ ಇದೇ ಪ್ರಮಾಣದಲ್ಲಿ ನೀರು ಹರಿದುಬರುವ ಸಂಭವವಿರುವುದರಿಂದ ತಾಲ್ಲೂಕು ಆಡಳಿತ ಎಲ್ಲ ಗ್ರಾಮಗಳಲ್ಲಿ ಕಟ್ಟೆಚ್ಚರ ವಹಿಸಿದೆ. ಆದರೂ ಹಿಪ್ಪರಗಿ ಜಲಾಶಯದ ಹಿನ್ನೀರಿನಿಂದಾಗಿ ರೈತಾಪಿ ಜನತೆ ಸದಾ ಆತಂಕದಲ್ಲಿರುವುದಂತು ಸತ್ಯ.

ಮಹಾರಾಷ್ಟ್ರದ ಕೃಷ್ಣಾ ಜಲಾನಯನ ಪ್ರದೇಶಗಳಲ್ಲಿ ಮಳೆಯಾಗುತ್ತಿದ್ದು ಹೆಚ್ಚಿನ ಪ್ರಮಾಣದಲ್ಲಿ ನೀರು ಹರಿದು ಬರುತ್ತಿರುವುದರಿಂದ ಮುನ್ನೆಚ್ಚರಿಕೆ ಕ್ರಮವಾಗಿ ಅಗತ್ಯವಿದ್ದ ಕಡೆ ಕಾಳಜಿ ಕೇಂದ್ರವನ್ನು ತೆರಯಲಾಗಿದ್ದು, ನದಿ ಪಾತ್ರದ ಜನರು ಜಾಗ್ರತರಾಗಿರಬೇಕು. ತಾಲೂಕು ಆಡಳಿತ ಸದಾ ತಮ್ಮ ಜೊತೆಗೆ ಇರುತ್ತದೆ
-ಗಿರೀಶ ಸ್ವಾದಿ ತಹಶೀಲ್ದಾರರು, ರಬಕವಿ ಬನಹಟ್ಟಿ

ಅಸ್ಕಿ ಗ್ರಾಮಕ್ಕೆ ಸಂಬಂದಿಸಿದಂತೆ ಅರಣ್ಯ ಇಲಾಖೆ ಜಾಗೆ ತೋರಿಸಿದ್ದು, ಸರಕಾರ ಮಟ್ಟದಲ್ಲಿ ಕಂದಾಯ ಭೂಮಿ ಹಸ್ತಾಂತರಿಸಿ ಅರಣ್ಯ ಭೂಮಿ ಪಡೆದುಕೊಳ್ಳುವ ಪ್ರಕ್ರಿಯೆ ಸರಕಾರ ಮಟ್ಟದಲ್ಲಿದ್ದು ಆದಷ್ಟು ಬೇಗನೆ ಪೂರ್ಣ ಗೊಳಿಸಲು ಸರಕಾರದ ಮೇಲೆ ಒತ್ತಡ ಹಾಕಲಾಗುವುದು. ಅದೇ ರೀತಿ ತಮದಡ್ಡಿ ಗ್ರಾಮಕ್ಕೆ ಸಂಬಂಧಿಸಿದಂತೆ ಈಗಾಗಲೇ ಹಳಿಂಗಳಿ ಗ್ರಾಮದ ಗುಡ್ಡದಲ್ಲಿ ಸುಮಾರು 89 ಎಕರೆ ಕಂದಾಯ ಭೂಮಿ ನೀಡಲಾಗಿದೆ. ಆದರೆ ಹಳಿಂಗಳಿ ಗ್ರಾಮಸ್ಥರು ಅದು ಪ್ರಾಚೀನ ಇತಿಹಾಸದ ಕುರುಹುಗಳಿರುವ ಜಾಗೆ ಅದನ್ನು ಅವರಿಗೆ ಬಿಟ್ಟು ಕೊಡಬೇಡಿ ಎಂದು ನ್ಯಾಯಾಲಯದ ತಡೆಯಾಜ್ಞೆಯನ್ನು ತಂದಿರುವುದರಿಂದ ಅದು ನೆನೆಗುದಿಗೆ ಬಿದ್ದಿದೆ. ಆದರೂ ಆದಷ್ಟು ಬೇಗನೆ ಆ ಸಮಸ್ಯೆಯನ್ನು ಕೂಡಾ ಬಗೆ ಹರಿಸಲಾಗುವುದು. ನೀರಿನ ಪ್ರಮಾಣ ಹೆಚ್ಚಾಗುತ್ತಿರುವುದರಿಂದ ಬಾಧಿತವಾಗುವ ಗ್ರಾಮಗಳ ಜನತೆಗೆ ಊಟ, ವಸತಿ ಹಾಗೂ ಜಾನುವಾರುಗಳಿಗೆ ಮೇವು ವಿತರಿಸುವ ನಿಟ್ಟಿನಲ್ಲಿ ತಾಲೂಕು ಆಡಳಿತ ಕೆಲಸ ಮಾಡುತ್ತಿದೆ.
-ಸಿದ್ದು ಸವದಿ ಶಾಸಕರು ತೇರದಾಳ ಮತಕ್ಷೇತ್ರ

-ಕಿರಣ ಶ್ರೀಶೈಲ ಆಳಗಿ

ಟಾಪ್ ನ್ಯೂಸ್

Tragedy: ಜ್ಯೂಸ್ ಕುಡಿದು ಅನಾರೋಗ್ಯಕ್ಕೆ ಒಳಗಾಗಿದ್ದ ಜನಪ್ರಿಯ ಗಾಯಕಿ ನಿಧನ… ಕೊಲೆ ಶಂಕೆ

Tragedy: ಜ್ಯೂಸ್ ಕುಡಿದು ಅನಾರೋಗ್ಯಕ್ಕೆ ಒಳಗಾಗಿದ್ದ ಜನಪ್ರಿಯ ಗಾಯಕಿ ನಿಧನ… ಕೊಲೆ ಶಂಕೆ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

Belagavi: ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

1-horoscope

Horoscope: ಆರಿಸಿದ ಮಾರ್ಗದ ಬಗೆಗೆ ಆತಂಕ ಬೇಡ, ಉದ್ಯೋಗ ಅರಸುತ್ತಿರುವವರಿಗೆ ಶುಭ ವಾರ್ತೆ

MUDA: ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಹೊಸ ಸಂಕಷ್ಟ

MUDA: ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಹೊಸ ಸಂಕಷ್ಟ

canada

Canada ವಲಸಿಗರಿಗೆ ನಿಯಂತ್ರಣ: ಭಾರತೀಯರಿಗೆ ಸಂಕಷ್ಟ ಸಾಧ್ಯತೆ

Vimana 2

Immigration process;ಬೆಂಗಳೂರು ವಿಮಾನ ನಿಲ್ದಾಣದಲ್ಲಿನ್ನು ಕ್ಷಣಗಳಲ್ಲೇ ವಲಸೆ ಪ್ರಕ್ರಿಯೆ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-mudhola

ತಿಮ್ಮಾಪುರ ಮಾತಿಗೆ ಯತ್ನಾಳ‌ ಪರೋಕ್ಷ ಟಾಂಗ್;ನಾನು ಕಾನೂನಿಗೆ ಗೌರವ ನೀಡುವ ನಿಯತ್ತಿನ ನಾಯಿ

3-rabakavi

Rabkavi Banhatti: ತೇರಿನ ಮೇಲಿನಿಂದ ಬಿದ್ದ ವ್ಯಕ್ತಿ ಸ್ಥಳದಲ್ಲೇ ಸಾವು

ಮಹಾಲಿಂಗಪುರದ ಮಹಾಜಾತ್ರೆ…: ಲಕ್ಷಾಂತರ ಭಕ್ತರು ಭಾಗಿ..ರಾತ್ರಿಯಿಡಿ ಸಾಗುವ ರಥೋತ್ಸವ

ಮಹಾಲಿಂಗಪುರದ ಮಹಾಜಾತ್ರೆ…: ಲಕ್ಷಾಂತರ ಭಕ್ತರು ಭಾಗಿ… ರಾತ್ರಿಯಿಡಿ ಸಾಗುವ ರಥೋತ್ಸವ

Pak flag ಹಾರಾಡುವ ರೀಲ್ಸ್ ವಾಟ್ಸಪ್ ಸ್ಟೇಟಸ್: ಯುವಕ ಪೊಲೀಸರ ವಶಕ್ಕೆ; ಪ್ರಕರಣ ದಾಖಲು

Pak flag ಹಾರಾಡುವ ವಾಟ್ಸಪ್ ಸ್ಟೇಟಸ್: ಯುವಕ ಪೊಲೀಸರ ವಶಕ್ಕೆ

Mudhol: ಆರ್‌ಎಸ್‌ಎಸ್‌ನಿಂದ ದೇಶಕ್ಕೆ ಕಂಟಕ: ಆರ್‌.ಬಿ.ತಿಮ್ಮಾಪುರ

Mudhol: ಆರ್‌ಎಸ್‌ಎಸ್‌ನಿಂದ ದೇಶಕ್ಕೆ ಕಂಟಕ: ಆರ್‌.ಬಿ.ತಿಮ್ಮಾಪುರ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

2-mudhola

ತಿಮ್ಮಾಪುರ ಮಾತಿಗೆ ಯತ್ನಾಳ‌ ಪರೋಕ್ಷ ಟಾಂಗ್;ನಾನು ಕಾನೂನಿಗೆ ಗೌರವ ನೀಡುವ ನಿಯತ್ತಿನ ನಾಯಿ

Tragedy: ಜ್ಯೂಸ್ ಕುಡಿದು ಅನಾರೋಗ್ಯಕ್ಕೆ ಒಳಗಾಗಿದ್ದ ಜನಪ್ರಿಯ ಗಾಯಕಿ ನಿಧನ… ಕೊಲೆ ಶಂಕೆ

Tragedy: ಜ್ಯೂಸ್ ಕುಡಿದು ಅನಾರೋಗ್ಯಕ್ಕೆ ಒಳಗಾಗಿದ್ದ ಜನಪ್ರಿಯ ಗಾಯಕಿ ನಿಧನ… ಕೊಲೆ ಶಂಕೆ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

Belagavi: ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

1-horoscope

Horoscope: ಆರಿಸಿದ ಮಾರ್ಗದ ಬಗೆಗೆ ಆತಂಕ ಬೇಡ, ಉದ್ಯೋಗ ಅರಸುತ್ತಿರುವವರಿಗೆ ಶುಭ ವಾರ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.