Kukke Shree Subrahmanya: ಭಕ್ತರಿಗೆ ವಸತಿ ಸಮಸ್ಯೆ; ತೊಂದರೆ ಆಗದಂತೆ ಕ್ರಮ
Team Udayavani, Jun 1, 2024, 1:28 AM IST
ಸುಬ್ರಹ್ಮಣ್ಯ: ಕುಕ್ಕೆ ಶ್ರೀ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ವಿಶೇಷ ದಿನಗಳ ಸಂದರ್ಭದಲ್ಲಿ ವಸತಿ ಸಮಸ್ಯೆಯಿಂದ ಯಾವುದೇ ಭಕ್ತರಿಗೆ ತೊಂದರೆ ಆಗದಂತೆ ಪೂರಕ ಕ್ರಮಕೈಗೊಳ್ಳಲು ದೇವಸ್ಥಾನದ ಅಧಿಕಾರಿಗಳಿಗೆ ದೇವಸ್ಥಾನದ ಆಡಳಿತಾಧಿಕಾರಿ ಹಾಗೂ ಪುತ್ತೂರು ಉಪವಿಭಾಗ ಸಹಾಯಕ ಆಯುಕ್ತ ಜುಬಿನ್ ಮೊಹಪಾತ್ರ ತಿಳಿಸಿದ್ದಾರೆ.
ಕೆಲವು ದಿನಗಳ ಹಿಂದೆ ಬೇಸಗೆ ರಜೆಯ ಸಂದರ್ಭ ಕುಕ್ಕೆಯ ರಥಬೀದಿಯ ಒಂದು ಬದಿಯಲ್ಲಿ ಹಲವಾರು ಭಕ್ತರು ಮಲಗಿರುವ ಫೋಟೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿತ್ತು. ಕ್ಷೇತ್ರದಲ್ಲಿ ವಸತಿ ಸಮಸ್ಯೆಯಿಂದ ಈ ರೀತಿ ಭಕ್ತರು ಬೀದಿಯಲ್ಲಿ ಮಲಗುತ್ತಿದ್ದಾರೆ ಎಂಬ ಆರೋಪ ವ್ಯಕ್ತವಾಗಿತ್ತು. ವಾರ್ಷಿಕ ನೂರಾರು ಕೋಟಿ ಆದಾಯ ತರುವ ದೇವಸ್ಥಾನದಲ್ಲಿ ಭಕ್ತರ ವಾಸ್ತವ್ಯಕ್ಕೆ ವ್ಯವಸ್ಥೆ ಇಲ್ಲವೇ ಎಂದು ನೆಟ್ಟಿಗರು, ಸಾಮಾಜಿಕ ಜಾಲತಾಣಗಳ ಮೂಲಕ ಪ್ರಶ್ನಿಸಿದ್ದರು.
ಈ ಬಗ್ಗೆ ಉದಯವಾಣಿ ಜತೆ ಮಾತನಾಡಿದ ಜುಬಿನ್ ಮೊಹಪಾತ್ರ, ಕುಕ್ಕೆಗೆ ರಾತ್ರಿ ಆಗಮಿಸುವ ಭಕ್ತರಿಗೆ ವಸತಿ ಸಿಗದೆ ತೊಂದರೆ ಆದಲ್ಲಿ, ದೇಗುಲದ ಭೋಜನ ಶಾಲೆಯಲ್ಲಿ ವ್ಯವಸ್ಥೆ ಮಾಡಲಾಗುತ್ತದೆ. ಈ ಬಗ್ಗೆ ಧ್ವನಿ ವರ್ಧಕದ ಮೂಲಕ ಈ ಹಿಂದಿನಿಂದಲೂ ಸೂಚನೆ ನೀಡಲಾಗುತ್ತಿತ್ತು. ಮುಂದಿನ ದಿನಗಳಲ್ಲಿ ಹೆಚ್ಚಿನ ಧ್ವನಿಯಲ್ಲಿ ಹಾಗೂ ನಿರಂತರ ಈ ಸೂಚನೆಗಳನ್ನು ನೀಡಲಾಗುವುದು. ಅಲ್ಲದೇ ರಸ್ತೆ ಬದಿ, ರಥಬೀದಿ ಬದಿ ಭಕ್ತರು ಮಲಗದಂತೆ ಹಾಗೂ ಅವರಿಗೆ ಮಲಗಲು ಭೋಜನ ಶಾಲೆಯ ಕೊಠಡಿಗೆ ತೆರಳಲು ಸೂಚಿಸುವಂತೆ ದೇವಳದ ಸಿಬಂದಿ, ಭದ್ರತಾ ಸಿಬಂದಿಗೆ ಸೂಚಿಸಲಾಗಿದೆ ಎಂದರು.
ಭಕ್ತರಿಗೆ ತಂಗಲು ಕಟ್ಟಡ ನಿರ್ಮಾಣದ ಬಗ್ಗೆ ಮಾಸ್ಟರ್ ಪ್ಲಾನ್ನಲ್ಲಿ ಯೋಜನೆ ರೂಪಿಸಲಾಗಿದೆ. ಅಲ್ಲದೇ ನಾವು ಕೂಡ ಕಟ್ಟಡ ನಿರ್ಮಿಸುವ ಬಗ್ಗೆ ಯೋಜನೆ ಸಿದ್ಧ ಪಡಿಸಿದ್ದೇವೆ. ಸದ್ಯ ನೀತಿ ಸಂಹಿತೆ ಇರುವುದರಿಂದ ಕೆಲಸ ಆರಂಭ ಸಾಧ್ಯವಾಗುತ್ತಿಲ್ಲ. ಮುಂದೆ ನಿರ್ಮಾಣವಾಗಲಿದೆ ಎಂದ ಅವರು ಪ್ರತಿಕ್ರಿಯೆ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Food Adulteration: ನೀವೇ ಮನೆಯಲ್ಲಿ ಆಹಾರ ಕಲಬೆರಕೆಯನ್ನು ಪತ್ತೆ ಹಚ್ಚಿ!
BBK11: ಬಿಗ್ ಬಾಸ್ ಕನ್ನಡ-11ರ ಮೊದಲ ಅಧಿಕೃತ ಸ್ಪರ್ಧಿ ಇವರೇ ನೋಡಿ..
Dharwad; ಸಿದ್ದರಾಮಯ್ಯ ಮುಡಾ ಪ್ರಕರಣವನ್ನು ಸಿಬಿಐಗೆ ವಹಿಸಬೇಕು: ಪ್ರಹ್ಲಾದ ಜೋಶಿ
Theater, Stage Artist: ನಗುವಿನ ಸವಿ ಹಂಚಿದ ಅಮ್ಮ ಮನೋರಮಾ
Maharashtra ವಿಧಾನಸಭಾ ಚುನಾವಣೆ: ಸಿದ್ಧತೆ ಪರಿಶೀಲಿಸಿದ ಚುನಾವಣ ಆಯೋಗ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.