Train: ಕುಂದಾಪುರದಿಂದ ತಿರುಪತಿಗೆ ರೈಲು: ವಿಜಯ ದಶಮಿಯಂದು ಚಾಲನೆ

ವಾರಕ್ಕೆ ಎರಡು ದಿನ ಓಡಾಟ; ಸ್ಲೀಪರ್ ಕೋಚ್‌ಗೆ 510 ರೂ. ಟಿಕೆಟ್‌ ದರ; ಹವಾನಿಯಂತ್ರಿತ ಕೋಚ್‌ಗೆ 1,100 ರೂ. ನಿಗದಿ

Team Udayavani, Oct 11, 2024, 2:46 PM IST

Train: ಕುಂದಾಪುರದಿಂದ ತಿರುಪತಿಗೆ ರೈಲು: ವಿಜಯ ದಶಮಿಯಂದು ಚಾಲನೆ

ಕುಂದಾಪುರ: ವಿಜಯದಶಮಿಯ ದಿನದಂದು ಕರಾವಳಿಯಿಂದ ತಿರುಪತಿಗೆ ರೈಲು ಸಂಪರ್ಕ ಆರಂಭವಾಗಲಿದ್ದು, ಆ ಮೂಲಕ ಕರಾವಳಿಗರ ದೀರ್ಘ‌ ಕಾಲದ ಬೇಡಿಕೆ ಈಡೇರಿದಂತಾಗಲಿದೆ.

ವಿಸ್ತರಣೆಗೊಂಡ ಕಾಚಿಗುಡ ರೇಣಿಗುಂಟ ತಿರುಪತಿ ಮಂಗಳೂರು ರೈಲಿನ ಮೊದಲ ಓಡಾಟವು ಶನಿವಾರ ಆರಂಭಗೊಳ್ಳಲಿದೆ.
ಈ ರೈಲು ಕೊಯಮತ್ತೂರು ಮೂಲಕವೂ ಓಡಲಿರುವುದರಿಂದ ಸದ್ಗುರು ಜಗ್ಗಿ ವಾಸುದೇವರ ಈಶ ಯೋಗ ಕೇಂದ್ರ ಮತ್ತು ಆದಿ ಯೋಗಿ ದರ್ಶನಕ್ಕೂ ಸಹಾಯವಾಗಲಿದೆ.

ವೇಳಾಪಟ್ಟಿ
ಮುರುಡೇಶ್ವರದಿಂದ ಬುಧವಾರ, ಶನಿವಾರ, ತಿರುಪತಿಯಿಂದ ಮಂಗಳವಾರ, ಶುಕ್ರವಾರ ಎಂದು ವಾರಕ್ಕೆರಡು ದಿನ ಓಡಲಿದೆ. ಅ.12ರ ಶನಿವಾರ ಮುರುಡೇಶ್ವರದಿಂದ ಮಧ್ಯಾಹ್ನ 3.20ಕ್ಕೆ ಹೊರಡುವ ರೈಲು 3.54ಕ್ಕೆ ಬೈಂದೂರು, ಕುಂದಾಪುರಕ್ಕೆ 4. 40, ಬಾರಕೂರು 5, ಉಡುಪಿ 5.20ಕ್ಕೆ, ಮಂಗಳೂರು 7.55ಕ್ಕೆ ತಲುಪಲಿದೆ.

ಮಂಗಳೂರಿನಿಂದ ರಾತ್ರಿ 8.05 ಗಂಟೆಗೆ ಹೊರಟ ರೈಲು ತಿರುಪತಿಗೆ ರವಿವಾರ ಬೆಳಗ್ಗೆ 11.30ಕ್ಕೆ ರೇಣಿಗುಂಟ (ತಿರುಪತಿಗೆ )ಹಾಗೂ ಹೈದರಾಬಾದ್‌ನ ಕಾಚಿಗುಡಕ್ಕೆ ಸಂಜೆ 6 ಗಂಟೆಗೆ ತಲುಪಲಿದೆ.

ಕುಂದಾಪುರದಿಂದ ತಿರುಪತಿಗೆ ಸ್ಲೀಪರ್ ಕೋಚ್‌ನಲ್ಲಿ 510 ರೂ. ಹವಾನಿಯಂತ್ರಿತ ಕೋಚ್‌ನಲ್ಲಿ 1,100 ರೂ. ಟಿಕೆಟ್‌ ದರ ಇದೆ. ಮಂತ್ರಾಲಯಕ್ಕೆ ಹೋಗುವವರಿಗೂ ಇದು ಅನುಕೂಲಕರವಾಗಿದ್ದು, ದೋನೆ ಜಂಕ್ಷನ್‌ ಸಹಿತ ಹೈದರಾಬಾದ್‌ಗೂ ರೈಲು ಸಂಪರ್ಕ ಪಡೆಯಬಹುದು.

ಸಂಸದರ ಮೂಲಕ ಈ ಭಾಗದ ಪ್ರಯಾಣಿಕರ ಬೇಡಿಕೆಯಂತೆ ರೈಲು ವಿಸ್ತರಣೆಯಾಗಿದ್ದು, ನೀತಿ ಸಂಹಿತೆ ಮುಗಿದ ಬಳಿಕ ರೈಲ್ವೇ ಖಾತೆ ಸಹಾಯಕ ಸಚಿವ ಸೋಮಣ್ಣ ಅವರ ಜತೆ ಕುಂದಾಪುರ ನಿಲ್ದಾಣದಲ್ಲಿ ದೊಡ್ಡ ಸಭೆ ನಡೆಯಲಿದ್ದು, ಅಂದು ಹಲವು ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ ಎಂದು ಕುಂದಾಪುರ ರೈಲು ಹಿತರಕ್ಷಣ ಸಮಿತಿ ಅಧ್ಯಕ್ಷ ಗಣೇಶ್‌ ಪುತ್ರನ್‌ ಅವರು ತಿಳಿಸಿದ್ದಾರೆ.

ದರ್ಶನಕ್ಕೆ ಅನುಕೂಲ
ಕುಂದಾಪುರದಿಂದ ಸಂಜೆ 4.45ರ ಸುಮಾರಿಗೆ ರೈಲು ಹತ್ತಿದರೆ ಮರುದಿನ ಬೆಳಗ್ಗೆ 11.45ಕ್ಕೆ ರೇಣಿಗುಂಟ ನಿಲ್ದಾಣ ತಲುಪಲಿದೆ. ಅಲ್ಲಿ ರೈಲಿಳಿದು ಸಂಜೆಯ ದರ್ಶನ ಅಥವಾ ಮರುದಿನ ಬೆಳಗ್ಗೆ ತಿಮ್ಮಪ್ಪನ ದರ್ಶನ ಪಡೆದರೆ, ಮರು ದಿನ ಸಂಜೆ 4.45ಕ್ಕೆ ಇದೇ ರೈಲು ರೇಣಿಗುಂಟಕ್ಕೆ ಬಂದು ಉಡುಪಿ ಕಡೆ ಹೊರಡಲಿದೆ. ರೇಣಿಗುಂಟದಿಂದ ತಿರುಪತಿ ಕೇವಲ 9 ಕಿ.ಮೀ. ದೂರದಲ್ಲಿದೆ.

ವಿವಿಧೆಡೆ ಸ್ವಾಗತ
ಈ ರೈಲಿನ ಮೊದಲ ಓಡಾಟವನ್ನು ಸ್ವಾಗತಿಸಲು ಕರಾವಳಿಯ ವಿವಿಧ ನಿಲ್ದಾಣಗಳಲ್ಲಿ ಕಾರ್ಯಕ್ರಮ ಆಯೋಜಿಸಲಾಗಿದ್ದು, ಈ ರೈಲಿಗಾಗಿ ಸಂಸದರ ಮೂಲಕ ನಿರಂತರ ಹೋರಾಟ ಸಂಘಟಿಸಿದ ಕುಂದಾಪುರ ರೈಲು ಹಿತರಕ್ಷಣ ಸಮಿತಿಯೂ ಶನಿವಾರ 4 ಗಂಟೆಗೆ ರೈಲನ್ನು ಸ್ವಾಗತಿಸಲು ಕುಂದಾಪುರ ನಿಲ್ದಾಣದಲ್ಲಿ ಸಿದ್ಧತೆ ಮಾಡಿಕೊಂಡಿದೆ.

 

ಟಾಪ್ ನ್ಯೂಸ್

1-reess

NDA ಮೈತ್ರಿಕೂಟಕ್ಕೆ ನೀಡಿದ ಬೆಂಬಲ ಹಿಂಪಡೆಯಿರಿ: ನಿತೀಶ್ ಗೆ ಅಖಿಲೇಶ್ ಒತ್ತಾಯ

16-mysore

Mysore: ನಾಳೆ ಅರಮನೆ ನಗರಿಯಲ್ಲಿ ಐತಿಹಾಸಿಕ ಜಂಬೂಸವಾರಿ

15-pg

Bengaluru: ಮಾರ್ಗಸೂಚಿ ಪಾಲಿಸದ ಪಿಜಿಗಳಿಗೆ ಪಾಲಿಕೆ ಬೀಗ

1-nobelll

Nobel; ಜಪಾನ್ ನ ಪರಮಾಣು ಬಾಂಬ್ ಸರ್ವೈವರ್ ಸಂಸ್ಥೆಗೆ ನೊಬೆಲ್ ಶಾಂತಿ ಪ್ರಶಸ್ತಿ

Uchila Dasara: ಉಡುಪಿ ಉಚ್ಚಿಲ ದಸರಾ 2024: ಶೋಭಾಯಾತ್ರೆಗೆ ಅಂತಿಮ ಸಿದ್ಧತೆ

Uchila Dasara: ಉಡುಪಿ ಉಚ್ಚಿಲ ದಸರಾ 2024: ಶೋಭಾಯಾತ್ರೆಗೆ ಅಂತಿಮ ಸಿದ್ಧತೆ

13-mysore

Mysore Dasara: ಮೈಸೂರು ದಸರಾಗೆ ದಾಖಲೆ ಜನ!

sullia

Sullia: ಬಣ್ಣದ ಮಾಲಿಂಗರ ಮಹಿರಾವಣನ ಯಕ್ಷ ಪ್ರತಿಮೆ ಅನಾವರಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Uchila Dasara: ಉಡುಪಿ ಉಚ್ಚಿಲ ದಸರಾ 2024: ಶೋಭಾಯಾತ್ರೆಗೆ ಅಂತಿಮ ಸಿದ್ಧತೆ

Uchila Dasara: ಉಡುಪಿ ಉಚ್ಚಿಲ ದಸರಾ 2024: ಶೋಭಾಯಾತ್ರೆಗೆ ಅಂತಿಮ ಸಿದ್ಧತೆ

Rathan Tata: 10 ವರ್ಷ ಹಿಂದೆ ಪುತ್ತಿಗೆ ಮೂಲ ಮಠಕ್ಕೆ ಆಗಮಿಸಿದ್ದ ರತನ್‌ ಟಾಟಾ

Ratan Tata: 10 ವರ್ಷ ಹಿಂದೆ ಪುತ್ತಿಗೆ ಮೂಲ ಮಠಕ್ಕೆ ಆಗಮಿಸಿದ್ದ ರತನ್‌ ಟಾಟಾ

8

ಇಂದ್ರಾಳಿ ಮೇಲ್ಸೇತುವೆ ನ.10ರೊಳಗೆ ಪೂರ್ಣಗೊಳಿಸಲು ಡಿಸಿ ನಿರ್ದೇಶನ

11-kemmannu

ಕೆಮ್ಮಣ್ಣು: ಗಣಪತಿ ಸಹಕಾರಿ ವ್ಯವಸ್ಥಾಪಕ ಸಂಘ ʼನಿʼ -ಶತಾಭಿವಂದನಂʼ

7

Udupi: ವನ್ಯಜೀವಿ, ಪರಿಸರ ಪ್ರೀತಿಗೆ ಕಾರಂತರೇ ಪ್ರೇರಣೆ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

1-reess

NDA ಮೈತ್ರಿಕೂಟಕ್ಕೆ ನೀಡಿದ ಬೆಂಬಲ ಹಿಂಪಡೆಯಿರಿ: ನಿತೀಶ್ ಗೆ ಅಖಿಲೇಶ್ ಒತ್ತಾಯ

16-mysore

Mysore: ನಾಳೆ ಅರಮನೆ ನಗರಿಯಲ್ಲಿ ಐತಿಹಾಸಿಕ ಜಂಬೂಸವಾರಿ

15-pg

Bengaluru: ಮಾರ್ಗಸೂಚಿ ಪಾಲಿಸದ ಪಿಜಿಗಳಿಗೆ ಪಾಲಿಕೆ ಬೀಗ

14-bng

ಮಾರುಕಟ್ಟೆಯಲ್ಲಿ ದಸರಾ ಹಬ್ಬದ ರಂಗು; ಕಳೆದ ವಾರಕ್ಕೆ ಹೋಲಿಸಿದರೆ ತರಕಾರಿ, ಹೂ ಬೆಲೆ ಹೆಚ್ಚಳ

1-nobelll

Nobel; ಜಪಾನ್ ನ ಪರಮಾಣು ಬಾಂಬ್ ಸರ್ವೈವರ್ ಸಂಸ್ಥೆಗೆ ನೊಬೆಲ್ ಶಾಂತಿ ಪ್ರಶಸ್ತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.