Kundapura: ಪೊಲೀಸರ ಹೆಸರಿನಲ್ಲಿ ಕರೆ ಮಾಡಿ 8.8 ಲ.ರೂ. ವಂಚನೆ
Team Udayavani, Sep 23, 2024, 1:11 AM IST
ಕುಂದಾಪುರ: ಹಂಗಳೂರಿನ ಭವಿಷ್ಯ ಎ. (30) ಅವರಿಗೆ ಮುಂಬಯಿ ಪೊಲೀಸರ ಹೆಸರಿನಲ್ಲಿ ಕರೆ ಮಾಡಿದ ವ್ಯಕ್ತಿ 8.8 ಲಕ್ಷ ರೂ. ವಂಚಿಸಿದ್ದಾನೆ.
ಕರೆ ಮಾಡಿದ ವ್ಯಕ್ತಿಯು ಫೆಡೆಕ್ಸ್ ನಿಂದ ಮಾತನಾಡುತ್ತಿರುವುದಾಗಿ ತಿಳಿಸಿ ಭವಿಷ್ಯ ಅವರ ಆಧಾರ್ ನಂಬರ್ನಿಂದ ಮುಂಬಯಿಯಿಂದ ಇರಾನ್ಗೆ ಒಂದು ಪಾರ್ಸೆಲ್ ಹೋಗುತ್ತಿದ್ದು, ಅದರಲ್ಲಿ ಕಾನೂನುಬದ್ಧವಲ್ಲದ ವಸ್ತುಗಳು ಇರುವುದರಿಂದ ಪ್ರಕರಣ ದಾಖಲಿಸುವುದಾಗಿ ತಿಳಿಸಿದ್ದ. ಸೈಬರ್ ಕ್ರೈಂಗೆ ದೂರು ನೀಡುವಂತೆ ತಿಳಿಸಿ ಮುಂಬಯಿ ಕ್ರೈಂ ಬ್ರ್ಯಾಂಚ್ಗೆ ಕರೆ ಸಂಪರ್ಕಗೊಳಿಸುವುದಾಗಿ ಹೇಳಿ, ಮಹಿಳೆಯೊಬ್ಬರ ಬಳಿ ಮಾತನಾಡಿಸಿದ್ದಾನೆ.
ಭವಿಷ್ಯ ಅವರ ಆಧಾರ್ ಕಾರ್ಡ್ ಇತ್ಯಾದಿ ವಿವರಗಳನ್ನು ಕಳುಹಿಸುವಂತೆ ತಿಳಿಸಿ, ಆಧಾರ್ ನಂಬರ್ನಿಂದ 25 ಬ್ಯಾಂಕ್ ಆಕೌಂಟ್ ಇದ್ದು, ನಿಮ್ಮ ಖಾತೆಯಿಂದ ಮನಿ ಲ್ಯಾಂಡರಿಂಗ್ ಆಗುತ್ತಿರುವುದಾಗಿ ಹೇಳಿದ್ದಾರೆ. ಆ ಅಕೌಂಟ್ನಿಂದ ಇನ್ಸ್ಟಂಟ್ ಲೋನ್ ಮಾಡಿದರೆ ಮೋಸಗಾರರನ್ನು ಪತ್ತೆ ಮಾಡಬಹುದು ಎಂದು ಯಾಮಾರಿಸಿ 8,78,760 ರೂ. ಲೋನ್ ಮಾಡಿಸಿದ್ದಾರೆ. ಬಳಿಕ ಸಾಮಾಜಿಕ ಜಾಲತಾಣ ಉಪಯೋಗಿಸಿಕೊಂಡು ಭವಿಷ್ಯ ಅವರ ಬ್ಯಾಂಕ್ ಖಾತೆಯಲ್ಲಿದ್ದ 8,87,307 ರೂ. ಅನ್ನು ವಂಚಕರು ಖಾತೆಗೆ ವರ್ಗಾವಣೆ ಮಾಡಿಕೊಂಡು ಮೋಸ ಮಾಡಿದ್ದಾಗಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi: ಗೀತಾರ್ಥ ಚಿಂತನೆ-43; ದೈವೀಸಂಪತ್ತಿನವರಿಗೆ ಭಗವದನುಗ್ರಹ
Thirupathi Laddu: ಹಿಂದೂಗಳ ಭಾವನೆಗೆ ಧಕ್ಕೆ ಹುನ್ನಾರ: ಶಾಸಕ ಯಶ್ಪಾಲ್
Vishwa Hindu Parishad: ದೇಗುಲಗಳಲ್ಲಿ ಮಾರ್ಗದರ್ಶನ ಮಂಡಳಿ ರಚನೆಯಾಗಲಿ: ಭಂಡಾರಕೇರಿ ಶ್ರೀ
Election Schedule: ದಕ್ಷಿಣ ಕನ್ನಡ ಸ್ಥಳೀಯ ಪ್ರಾಧಿಕಾರ ಚುನಾವಣೆ ನೀತಿ ಸಂಹಿತೆ: ಮಾರ್ಗಸೂಚಿ
Dense Forest: ಹೆಬ್ರಿಯ ಕಬ್ಬಿನಾಲೆ, ತಿಂಗಳೆ ವ್ಯಾಪ್ತಿಯಲ್ಲಿ ಕಾಡಾನೆ ದಾಂಧಲೆ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.