Kundapura:ಕಾಲು ಸಂಕ: ಪೂರ್ಣಗೊಂಡದ್ದು ಒಂದೇ; 21 ಬಾಕಿ


Team Udayavani, Feb 6, 2024, 3:03 PM IST

Kundapura:ಕಾಲು ಸಂಕ: ಪೂರ್ಣಗೊಂಡದ್ದು ಒಂದೇ; 21 ಬಾಕಿ

ಕುಂದಾಪುರ: ಬೈಂದೂರು ವಿಧಾನಸಭಾ ಕ್ಷೇತ್ರದ ಗ್ರಾಮೀಣ ಪ್ರದೇಶದ ಅಪಾಯಕಾರಿ ಸ್ಥಳಗಳಲ್ಲಿ ಹೊಸದಾದ ಸುಸಜ್ಜಿತ ಕಾಲು ಸಂಕಗಳನ್ನು ನಿರ್ಮಿಸಲು ರೂಪಿಸಿದ ಯೋಜನೆ ಹಳ್ಳ ಹಿಡಿದಿದೆ. 5 ಕೋ.ರೂ. ವೆಚ್ಚದಲ್ಲಿ 22 ಕಾಲು ಸಂಕಗಳ ನಿರ್ಮಾಣ ಯೋಜನೆ ಸಿದ್ಧಪಡಿಲಾಗಿದ್ದು, ಈ ಪೈಕಿ ಈವರೆಗೆ ಆಗಿದ್ದು ಕೇವಲ ಒಂದು ಕಾಲು ಸಂಕ ಮಾತ್ರ.

ಕಾಲ್ತೋಡು ಗ್ರಾಮದ ಬೋಳಂಬಳ್ಳಿ ಸಮೀಪದ ಬೀಜಮಕ್ಕಿ ಎಂಬಲ್ಲಿ 2022ರ ಆ. 8 ರಂದು ಶಾಲೆಯಿಂದ ಮನೆಗೆ ಬರುತ್ತಿದ್ದ ಪುಟ್ಟ ಹೆಣ್ಣು ಮಗುವೊಂದು ಹಳ್ಳಕ್ಕೆ ಬಿದ್ದು ಸಾವನ್ನಪ್ಪಿದ ದುರ್ಘ‌ಟನೆ ಸಂಭವಿಸಿತ್ತು. ಈ ಘಟನೆಯಿಂದ ಎಚ್ಚೆತ್ತುಕೊಂಡು, ಈ ರೀತಿ ಹೊಳೆ ದಾಟಲು ಅಪಾಯಕಾರಿಯಾಗಿರುವ ಪ್ರದೇಶಗಳನ್ನು ಗುರುತಿಸಿ, ಅಲ್ಲಿ ಸುಸಜ್ಜಿತ ಕಾಲು ಸಂಕ ನಿರ್ಮಿಸಲು ಪಶ್ಚಿಮ ಘಟ್ಟದ ಹಾಮ್‌ಲೆಟ್‌ ಪ್ರದೇಶಗಳಲ್ಲಿ ಸಂಪರ್ಕ ಕಲ್ಪಿಸುವ ಯೋಜನೆಯನ್ನು ಜಿಲ್ಲಾಡಳಿತ ಹಾಗೂ ತಾಲೂಕು ಆಡಳಿತ ರೂಪಿಸಿತು.

5 ಕೋ.ರೂ. ಅನುದಾನ ಅದರಂತೆ ಸಂಸದ ಬಿ.ವೈ. ರಾಘವೇಂದ್ರ ಹಾಗೂ ಆಗ ಶಾಸಕರಾಗಿದ್ದ ಬಿ.ಎಂ. ಸುಕುಮಾರ್‌ ಶೆಟ್ಟರ
ಪ್ರಯತ್ನದಿಂದ ಲೋಕೋಪಯೋಗಿ ಇಲಾಖೆಯಡಿ ಪ್ರಮುಖ ಜಿಲ್ಲಾ ರಸ್ತೆ- ಸೇತುವೆ  ಹೆಸರಲ್ಲಿ 5 ಕೋ. ರೂ. ವೆಚ್ಚದಲ್ಲಿ 7 ಪ್ಯಾಕೇಜ್‌ನಲ್ಲಿ ಒಟ್ಟು 22 ಕಾಲು ಸಂಕ ನಿರ್ಮಿಸುವ ಗುರಿ ಹೊಂದಲಾಗಿತ್ತು. ಈ ಪೈಕಿ ಪೂರ್ಣಗೊಂಡಿರುವುದು ಅದೇ ದುರ್ಘ‌ಟನೆ ಸಂಭವಿಸಿದ ಕಾಲೊ¤àಡಿನ ಬೀಜಮಕ್ಕಿ ಬಳಿ 20 ಲಕ್ಷ ರೂ. ವೆಚ್ಚದಲ್ಲಿ ಕಾಲು ಸಂಕ ನಿರ್ಮಾಣವಾಗಿದೆ. ರಾಜ್ಯ ಸರಕಾರ ಚುನಾವಣೆ ಅನಂತರ ಅನುದಾನವನ್ನು ಬಿಡುಗಡೆಗೊಳಿಸದೇ ಬಾಕಿ ಇಟ್ಟಿರುವುದರಿಂದ 6 ಪ್ಯಾಕೇಜ್‌ಗಳ 21 ಕಡೆಗಳ
ಕಾಮಗಾರಿ ಬಾಕಿಯಾಗಿದೆ.

ಪ್ರಸ್ತಾವನೆ ಸಲ್ಲಿಕೆ
ಹಿಂದೆ ಪ್ರಸ್ತಾವನೆ ಸಲ್ಲಿಸಲಾಗಿದ್ದು, ಅದರಲ್ಲಿ 1 ಕಾಮಗಾರಿ ಪೂರ್ಣಗೊಂಡಿದೆ. ಬಾಕಿ ಇರುವ 21 ಕಡೆಗಳಲ್ಲಿ ಕಾಲು ಸಂಕ ನಿರ್ಮಾಣ ಸಂಬಂಧ ಪ್ರಸ್ತಾವನೆ ಸಲ್ಲಿಸಲು ಸರಕಾರ ಸೂಚಿಸಿದೆ. ಮತ್ತೆಪ್ರಸ್ತಾವನೆ ಸಲ್ಲಿಸಲಾಗುವುದು. ಅದರಲ್ಲಿ ಕೆಲವೊಂದು ಕಡೆ ಅನುದಾನ ಹೆಚ್ಚಳದ ಬೇಡಿಕೆಯೂ ಇದೆ. ಅದನ್ನು ಸರಕಾರದ ಗಮನಕ್ಕೆ ತರಲಾಗುವುದು. ಮತ್ತೆ ಈ ಕಾಮಗಾರಿ ಆರಂಭಕ್ಕೆ ಪ್ರಯತ್ನಿಸಲಾಗುವುದು ಎಂದು ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳು “ಉದಯವಾಣಿ’ಗೆ ತಿಳಿಸಿದ್ದಾರೆ.

ಎಲ್ಲೆಲ್ಲ ಕಾಲು ಸಂಕ ಬಾಕಿ?

ಕಾಲೊ¤àಡು ಗ್ರಾಮದ ಆಚಾರಡಿ, ಬೋಳಂಬಳ್ಳಿ ದೇಗುಲ ಬಳಿ, ಗೋಳಿಹೊಳೆಯ ಮಾವಿನಹೊಳೆ ಕುಂದಲಗುಡ್ಡೆ, ಕೊಲ್ಲೂರಿನ ಹಳ್ಳಿಬೇರು ಬಳಿ ಒಟ್ಟು 66 ಲಕ್ಷ ರೂ. ವೆಚ್ಚದಲ್ಲಿ 4, ನಾಡ ಗ್ರಾಮದಲ್ಲಿ 2, ಜಡ್ಕಲ್‌ ಗ್ರಾಮದ ಹೊಸಮನೆ ಬಳಿ, ತಗ್ಗರ್ಸೆ ಗ್ರಾಮದ ನೀರೋಡಿ, ತಲ್ಮಕ್ಕಿಯಲ್ಲಿ ಒಟ್ಟು 63 ಲಕ್ಷ ರೂ. ವೆಚ್ಚದಲ್ಲಿ 5, ಚಿತ್ತೂರಿನ ನೈಕಂಬಳ್ಳಿ, ಬಿಜೂರಿನ ಬವಳಾಡಿ, ಪಡುವರಿಯ ಬೆಸ್ಕೂರು, ಕಾಶಿಕೊಡ್ಲುವಿನಲ್ಲಿ ಒಟ್ಟು 55 ಲಕ್ಷ ರೂ. ವೆಚ್ಚದಲ್ಲಿ 3, ಆಜ್ರಿಯ ಬೆಳುವಾಣ, ಯಡಮೊಗೆಯ ಕುಂಡ್ಲುಮನೆ, ರಾಂಪಯ್ಯನಜೆಡ್ಡು, ಹಕ್ಲಾಡಿಯ ಸಂತೆಗದ್ದೆ, ಮಚ್ಚಟ್ಟುವಿನ ತೊಂಬಟ್ಟುವಿನ ಸೂರಿಬೈಲು ಒಟ್ಟು 70 ಲಕ್ಷ ರೂ. ವೆಚ್ಚದಲ್ಲಿ 5, ಕಂಬದಕೋಣೆಯ ಕಪ್ಪಾಡಿ, ಗಂಗೊಳ್ಳಿ ಲೈಟ್‌ಹೌಸ್‌ ಅಂಗನವಾಡಿ ಬಳಿ, ಯಳಜಿತ್‌ನ ಸಾಂತೇರಿ, 75 ಲಕ್ಷ ರೂ. ವೆಚ್ಚದಲ್ಲಿ
ಒಟ್ಟು 3, ಕಟ್‌ಬೆಲೂ¤ರು ಸುಳೆÕಯ ನಂದಿ ಮಾಸ್ಟರ್‌ ಮನೆ ಬಳಿ 1.51 ಕೋ.ರೂ. ವೆಚ್ಚದಲ್ಲಿ 1 ಕಾಲು ಸಂಕ ಕಾಮಗಾರಿ ಬಾಕಿಯಾಗಿದೆ.

ತುರ್ತಾಗಿ ಬಿಡುಗಡೆಗೊಳಿಸಿ

ಹಿಂದಿನ ಸರಕಾರದ ಅವಧಿಯಲ್ಲಿ ಬೈಂದೂರು ಕ್ಷೇತ್ರದಲ್ಲಿ ಅಪಾಯಕಾರಿ ಸ್ಥಳಗಳಲ್ಲಿ ಕಾಲು ಸಂಕಗಳ ನಿರ್ಮಾಣಕ್ಕೆ 5 ಕೋ.ರೂ. ಅನುದಾನ ಮಂಜೂರುಗೊಳಿಸಲಾಗಿತ್ತು. ಆದರೆ ಈ ಸರಕಾರ ಬಾಕಿ ಇಟ್ಟಿದ್ದರಿಂದ ಕಾಮಗಾರಿ ಸ್ಥಗಿತಗೊಂಡಿದೆ. ಈ ಬಗ್ಗೆ ಉಡುಪಿಯಲ್ಲಿ ನಡೆದ ಕೆಡಿಪಿ ಸಭೆಯಲ್ಲಿ ಸಿಎಂ ಸಿದ್ದರಾಮಯ್ಯರ ಗಮನಕ್ಕೂ ತರಲಾಗಿದೆ. ಮೇ ತಿಂಗಳ ಮೊದಲು
ಪೂರ್ಣಗೊಳ್ಳಬೇಕಿದೆ. ಅಪಾಯಕಾರಿ ಸ್ಥಳಗಳಲ್ಲಿ ತುರ್ತಾಗಿ ಕಾಲು ಸಂಕ ಆಗಬೇಕಾಗಿದ್ದು, ಅದನ್ನು ಆದ್ಯತೆ ನೆಲೆಯಲ್ಲಿ ಬಿಡುಗಡೆಗೊಳಿಸಲಿ.
ಗುರುರಾಜ ಗಂಟಿಹೊಳೆ,
ಬೈಂದೂರು ಶಾಸಕರ

*ಪ್ರಶಾಂತ್‌ ಪಾದೆ

ಟಾಪ್ ನ್ಯೂಸ್

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

1-namm-mannu-1

Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ

1-neyge-1

Udayavani-MIC ನಮ್ಮ ಸಂತೆ:ಗಮನ ಸೆಳೆದ ನೇಯ್ಗೆ ಯಂತ್ರ

ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Namma Santhe: ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

crimebb

Kasaragod: ಹಲ್ಲೆ ಪ್ರಕರಣ; ಕೇಸು ದಾಖಲು

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

de

Vitla: ಕಾಲು ಜಾರಿ ಕೆರೆಗೆ ಬಿದ್ದು ಯುವಕ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.