Kundapura ಎಸ್‌ಐ ವ್ಯತಿರಿಕ್ತ ಹೇಳಿಕೆ; ಚಾಲಕ ನಿರ್ದೋಷಿಯೆಂದ ಕೋರ್ಟ್‌


Team Udayavani, May 28, 2024, 7:40 AM IST

Kundapura ಎಸ್‌ಐ ವ್ಯತಿರಿಕ್ತ ಹೇಳಿಕೆ; ಚಾಲಕ ನಿರ್ದೋಷಿಯೆಂದ ಕೋರ್ಟ್‌

ಕುಂದಾಪುರ: ಪೊಲೀಸ್‌ ಇಲಾಖೆಯ ಜೀಪು ಲಾರಿಗೆ ಹಿಂಬದಿಯಿಂದ ಢಿಕ್ಕಿ ಹೊಡೆದು, ಜೀಪುನಲ್ಲಿದ್ದ ಎಸ್‌ಐ ಹಾಗೂ ಚಾಲಕ ಗಾಯಗೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯಾಗಿದ್ದ ಜೀಪು ಚಾಲಕ ರಾಮ ಅವರನ್ನು ಸಾಕ್ಷ್ಯಾಧಾರ ಕೊರತೆಯಿಂದ ನಿರ್ದೋಷಿಯೆಂದು ಕುಂದಾಪುರದ ಹೆಚ್ಚುವರಿ ಸಿವಿಲ್‌ ನ್ಯಾಯಾಧೀಶೆ ಮತ್ತು ಪ್ರಥಮ ದರ್ಜೆ ನ್ಯಾಯಿಕ ದಂಡಾಧಿಕಾರಿ ರೋಹಿಣಿ ಡಿ. ತೀರ್ಪು ನೀಡಿದ್ದಾರೆ.

2013 ರ ಮಾ. 29 ರಂದು ಕುಂದಾಪುರದ ಗಾಂಧಿ ಮೈದಾನ ಬಳಿ ನಡೆದ ಅಪಘಾತ ಪ್ರಕರಣ ಇದಾಗಿದ್ದು, ಪೊಲೀಸ್‌ ಜೀಪಿನಲ್ಲಿ ಸಂಚರಿಸುತ್ತಿದ್ದ ಆಗಿನ ಕುಂದಾಪುರ ನಗರ ಠಾಣಾ ಎಸ್‌ಐ ರೇವತಿ ಅವರು ಜೀಪು ಚಾಲಕ, ಪೊಲೀಸ್‌ ಸಿಬಂದಿ ರಾಮ ವಿರುದ್ಧವೇ ದೂರು ನೀಡಿದ್ದರು. ಅದರಂತೆ ಕುಂದಾಪುರ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಆಗಿನ ಸಂಚಾರ ಠಾಣಾ ಎಸ್‌ಐ ಬಿ. ಪರಮೇಶ್ವರಪ್ಪ ಅವರು ತನಿಖೆ ನಡೆಸಿ, ಪೊಲೀಸ್‌ ಜೀಪು ಚಾಲಕ ರಾಮ ವಿರುದ್ಧ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು.

ಏನಿದು ಪ್ರಕರಣ?
ಕುಂದಾಪುರ ನಗರ ಠಾಣಾ ಎಸ್‌ಐ ಆಗಿದ್ದ ರೇವತಿ ಅವರು 2013ರ ಮಾ. 28 ರ ರಾತ್ರಿ ಇಲಾಖೆ ಜೀಪಿನಲ್ಲಿ ಕುಂದಾಪುರ, ಕೋಟೇಶ್ವರ, ಕುಂಭಾಶಿ ಕಡೆ ರೌಂಡ್ಸ್‌ ಮುಗಿಸಿ, ಮಾ. 29 ರ ಬೆಳಗ್ಗಿನ ಜಾವ 2.20 ರ ಸುಮಾರಿಗೆ ವಾಪಾಸು ಕುಂದಾಪುರದ ಗಾಂಧಿ ಮೈದಾನ ಬಳಿಯ ಹೆದ್ದಾರಿಗೆ ಬಂದಾಗ ಎದುರಿನಿಂದ ವಾಹನವೊಂದು ಬಂದ ಪರಿಣಾಮ, ಅದಕ್ಕೆ ಢಿಕ್ಕಿಯಾಗುವುದನ್ನು ತಪ್ಪಿಸಲು ಹೋಗಿ ಜೀಪು ಚಾಲಕ ಅಲ್ಲಿಯೇ ಪಾರ್ಕಿಂಗ್‌ ಲೈಟ್‌ ಹಾಕದೇ ನಿಲ್ಲಿಸಿದ್ದ ಲಾರಿಗೆ ಢಿಕ್ಕಿ ಹೊಡೆದಿದೆ. ಈ ಅಪಘಾತದಲ್ಲಿ ಎಸ್‌ಐ ರೇವತಿ ಹಾಗೂ ಚಾಲಕ ರಾಮ ಇಬ್ಬರೂ ಗಾಯಗೊಂಡಿದ್ದರು. ರೇವತಿ ಅವರು ಚಾಲಕ ರಾಮ ವಿರುದ್ಧವೇ ದೂರು ನೀಡಿದ್ದರು. ಇದೇ ವೇಳೆ ರೇವತಿ ಅವರು ಅಪಘಾತ ಪರಿಹಾರ ಕೋರಿ ಮೋಟಾರು ವಾಹನ ಅಪಘಾತ ಪರಿಹಾರ ನ್ಯಾಯಾಲಯಕ್ಕೆ ಎಂವಿಸಿ ಅರ್ಜಿ ಸಲ್ಲಿಸಿದ್ದರು.

ಪ್ರಕರಣದ ಸಾಕ್ಷಿಗಳ
ವ್ಯತಿರಿಕ್ತ ಹೇಳಿಕೆ
ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯವು 6 ಜನ ಸಾಕ್ಷಿಗಳ ವಿಚಾರಣೆ ನಡೆಸಿದ್ದು, ಈ ವೇಳೆ ದೂರುದಾರೆ ರೇವತಿ ಒಂದು ಕಡೆ ಎದುರಿನಿಂದ ವಾಹನ ಬರುತ್ತಿತ್ತು ಎಂದು ಹೇಳಿಕೆ ಕೊಟ್ಟಿದ್ದರೆ, ಮತ್ತೊಂದು ಕಡೆ ಎದುರಿನಿಂದ ಯಾವುದೇ ವಾಹನ ಬರುತ್ತಿರಲಿಲ್ಲ ಎಂದು ಹೇಳಿಕೆ ಕೊಟ್ಟಿದ್ದರು. ಅಪಘಾತ ಪ್ರಕರಣಕ್ಕೆ ಸಂಬಂಧಿಸಿ ನೀಡಿದ ಹೇಳಿಕೆಗೂ, ಪರಿಹಾರ ಕೋರಿ ಮೋಟಾರು ವಾಹನ ಅಪಘಾತ ಪರಿಹಾರ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ ವಿಚಾರಣೆ ವೇಳೆ ನೀಡಿದ ಹೇಳಿಕೆಗಳೆರಡು ವ್ಯತಿರಿಕ್ತವಾಗಿತ್ತು. ಇದನ್ನೇ ಗಂಭೀರವಾಗಿ ಪರಿಗಣಿಸಿದ ನ್ಯಾಯಾಲಯ ಪೊಲೀಸ್‌ ಅಧಿಕಾರಿಯಾಗಿದ್ದು, ಒಂದಕ್ಕೊಂದು ವ್ಯತಿರಿಕ್ತವಾಗಿದ್ದು, ನಂಬರ್ಲವಾದ ಸಾಕ್ಷ್ಯವೆಂದು ಕಂಡುಬಂದಿರುವುದಿಲ್ಲ ಎಂದು ಪರಿಗಣಿಸಿದ ನ್ಯಾಯಾಲಯ ಆರೋಪಿ ರಾಮ ಅವರನ್ನ ನಿರ್ದೋಷಿಯೆಂದು ತೀರ್ಮಾನಿಸಿ, ಬಿಡುಗಡೆ ಮಾಡಿದೆ.

ಆರೋಪಿ ಪರ ಕುಂದಾಪುರದ ನ್ಯಾಯವಾದಿ ಬೇಳೂರು ಅವಿನಾಶ್‌ ಶೆಟ್ಟಿ ವಾದಿಸಿದ್ದಾರೆ.

ಟಾಪ್ ನ್ಯೂಸ್

Food-1

Food Adulteration: ನೀವೇ ಮನೆಯಲ್ಲಿ ಆಹಾರ ಕಲಬೆರಕೆಯನ್ನು ಪತ್ತೆ ಹಚ್ಚಿ!

001

BBK11: ಬಿಗ್‌ ಬಾಸ್‌ ಕನ್ನಡ-11ರ ಮೊದಲ ಅಧಿಕೃತ ಸ್ಪರ್ಧಿ ಇವರೇ ನೋಡಿ..

Dharwad; ಸಿದ್ದರಾಮಯ್ಯ ಮುಡಾ ಪ್ರಕರಣವನ್ನು ಸಿಬಿಐಗೆ ವಹಿಸಬೇಕು: ಪ್ರಹ್ಲಾದ ಜೋಶಿ

Dharwad; ಸಿದ್ದರಾಮಯ್ಯ ಮುಡಾ ಪ್ರಕರಣವನ್ನು ಸಿಬಿಐಗೆ ವಹಿಸಬೇಕು: ಪ್ರಹ್ಲಾದ ಜೋಶಿ

Manorama-Bhat

Theater, Stage Artist: ನಗುವಿನ ಸವಿ ಹಂಚಿದ ಅಮ್ಮ ಮನೋರಮಾ

Rajiv-Kumar

Maharashtra ವಿಧಾನಸಭಾ ಚುನಾವಣೆ: ಸಿದ್ಧತೆ ಪರಿಶೀಲಿಸಿದ ಚುನಾವಣ ಆಯೋಗ

033

Urmila Matondkar To Jayam Ravi.. ಈ ವರ್ಷ ವಿಚ್ಛೇದನ ಪಡೆದ ಸೆಲೆಬ್ರಿಟಿಗಳು ಜೋಡಿಗಳಿವು..

Basangouda Patil Yatnal

BJP: ಹೈಕಮಾಂಡ್ ಅನುಮತಿಸಿದರೆ ಬಸವಕಲ್ಯಾಣದಿಂದ ಬೆಂಗಳೂರಿಗೆ ಪಾದಯಾತ್ರೆ: ಶಾಸಕ ಯತ್ನಾಳ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gurudath Kamath: ಖ್ಯಾತ ಫೋಟೋಗ್ರಾಫರ್ ಗುರುದತ್ ಕಾಮತ್ ನಿಧನ

Gurudath Kamath: ಖ್ಯಾತ ಫೋಟೋಗ್ರಾಫರ್ ಗುರುದತ್ ಕಾಮತ್ ನಿಧನ

Udupi: ರಸ್ತೆ ಮಾರ್ಜಿನ್‌ ಮಾಹಿತಿ ಇಲ್ಲದೆ ಸಂಕಷ್ಟ: ನಗರಕ್ಕೆ 21ಮೀ.,ಗ್ರಾಮಾಂತರಕ್ಕೆ 40 ಮೀ.

Udupi: ರಸ್ತೆ ಮಾರ್ಜಿನ್‌ ಮಾಹಿತಿ ಇಲ್ಲದೆ ಸಂಕಷ್ಟ: ನಗರಕ್ಕೆ 21ಮೀ.,ಗ್ರಾಮಾಂತರಕ್ಕೆ 40 ಮೀ.

Coconut: ಅಧಿಕ ಮಳೆ, ರೋಗಬಾಧೆ: ಕೆ.ಜಿ.ಗೆ 50 ರೂ. ಗಡಿ ದಾಟಿದ ತೆಂಗಿನಕಾಯಿ

Coconut: ಅಧಿಕ ಮಳೆ, ರೋಗಬಾಧೆ: ಕೆ.ಜಿ.ಗೆ 50 ರೂ. ಗಡಿ ದಾಟಿದ ತೆಂಗಿನಕಾಯಿ

Udupi: ತಾಯಿ ಮರಣ ಪ್ರಮಾಣ ಶೂನ್ಯಗೊಳಿಸಲು ಒತ್ತು ನೀಡಿ

Udupi: ತಾಯಿ ಮರಣ ಪ್ರಮಾಣ ಶೂನ್ಯಗೊಳಿಸಲು ಒತ್ತು ನೀಡಿ

Udupi: ಗೀತಾರ್ಥ ಚಿಂತನೆ-48: ಕರ್ಮ ಬಿಡುವಂತಿಲ್ಲ, ಫ‌ಲ ಬಿಡಬಹುದು

Udupi: ಗೀತಾರ್ಥ ಚಿಂತನೆ-48: ಕರ್ಮ ಬಿಡುವಂತಿಲ್ಲ, ಫ‌ಲ ಬಿಡಬಹುದು

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Food-1

Food Adulteration: ನೀವೇ ಮನೆಯಲ್ಲಿ ಆಹಾರ ಕಲಬೆರಕೆಯನ್ನು ಪತ್ತೆ ಹಚ್ಚಿ!

001

BBK11: ಬಿಗ್‌ ಬಾಸ್‌ ಕನ್ನಡ-11ರ ಮೊದಲ ಅಧಿಕೃತ ಸ್ಪರ್ಧಿ ಇವರೇ ನೋಡಿ..

Dharwad; ಸಿದ್ದರಾಮಯ್ಯ ಮುಡಾ ಪ್ರಕರಣವನ್ನು ಸಿಬಿಐಗೆ ವಹಿಸಬೇಕು: ಪ್ರಹ್ಲಾದ ಜೋಶಿ

Dharwad; ಸಿದ್ದರಾಮಯ್ಯ ಮುಡಾ ಪ್ರಕರಣವನ್ನು ಸಿಬಿಐಗೆ ವಹಿಸಬೇಕು: ಪ್ರಹ್ಲಾದ ಜೋಶಿ

Manorama-Bhat

Theater, Stage Artist: ನಗುವಿನ ಸವಿ ಹಂಚಿದ ಅಮ್ಮ ಮನೋರಮಾ

Rajiv-Kumar

Maharashtra ವಿಧಾನಸಭಾ ಚುನಾವಣೆ: ಸಿದ್ಧತೆ ಪರಿಶೀಲಿಸಿದ ಚುನಾವಣ ಆಯೋಗ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.