Kushtagi: ಸಾಲಬಾದೆ ತಾಳಲಾರದೆ ಆತ್ಮಹತ್ಯೆಗೆ ಶರಣಾದ ರೈತ
Team Udayavani, Jul 1, 2023, 11:35 AM IST
ಕುಷ್ಟಗಿ: ಮಳೆ ಕೈ ಕೊಟ್ಟಿರುವ ಪರಿಣಾಮ ಟ್ರಾಕ್ಟರ್ ಹಾಗೂ ಖಾಸಗಿ ಸಾಲ ತೀರಿಸುವ ಚಿಂತನೆಯಲ್ಲಿ ರೈತರೊಬ್ಬರು ನೇಣಿಗೆ ಶರಣಾದ ಘಟನೆ ಜು.1ರ ಶನಿವಾರ ತಾಲೂಕಿನ ಬೋದೂರು ತಾಂಡದಲ್ಲಿ ನಡೆದಿದೆ.
ವಿಠ್ಠಪ್ಪ ಗೋವಿಂದಪ್ಪ ಚೌವ್ಹಾಣ (62) ಮೃತ ರೈತ.
ಗೋವಿಂದಪ್ಪ ಅವರಿಗೆ ಬೋದೂರು ತಾಂಡದಲ್ಲಿ ಜಮೀನು 3 ಎಕರೆ 20 ಗುಂಟೆ ಜಮೀನಿದ್ದು, ಜಮೀನು ಅಡಿಯಲ್ಲಿ 5 ಲಕ್ಷ ರೂ. ಟ್ರಾಕ್ಟರ್ ಸಾಲ ಇನ್ನೂ 5 ಲಕ್ಷ ರೂ. ಖಾಸಗಿ ಸಾಲ ಸೇರಿದಂತೆ ಒಟ್ಟು10 ಲಕ್ಷ ರೂ. ಮಾಡಿದ್ದರು.
ವಿಠ್ಠಪ್ಪನಿಗೆ ಮೂವರು ಪುತ್ರರರು ಹಾಗೂ ಐವರು ಪುತ್ರಿಯರಿದ್ದು, ಇವರೆಲ್ಲರೂ ಕಬ್ಬು ಕಟಾವಿಗೆ ಮಂಡ್ಯ ಜಿಲ್ಲೆಗೆ ಹೋಗಿದ್ದಾರೆ. ಗ್ರಾಮದಲ್ಲಿ ಪತ್ನಿಯೊಂದಿಗೆ ವಾಸವಾಗಿದ್ದ ವಿಠ್ಠಪ್ಪ ಮಳೆ ಸಕಾಲಿಕವಾಗಿ ಬಾರದ ಹಿನ್ನೆಲೆ ಮಾಡಿಕೊಂಡಿರುವ ಸಾಲ ತೀರಿಸುವ ಬಗ್ಗೆ ಚಿಂತೆಯಲ್ಲಿದ್ದರು. ಶನಿವಾರ ಬೆಳಗ್ಗೆ ಜಮೀನು ಕಡೆ ಹೋಗುವುದಾಗಿ ಹೇಳಿ ಮರಕ್ಕೆ ನೇಣಿಗೆ ಶರಣಾಗಿದ್ದಾರೆ.
ಈ ಸುದ್ದಿ ತಿಳಿಯುತ್ತಿದ್ದಂತೆ ಪಿಎಸೈ ಮೌನೇಶ ರಾಠೋಡ್ ಅವರು ಪರಿಶೀಲಿಸಿ ಮೃತ ಪಾರ್ಥಿವ ಶರೀರವನ್ನು ಕುಷ್ಟಗಿ ತಾಲೂಕು ಸರ್ಕಾರಿ ಆಸ್ಪತ್ರೆಗೆ ಮರಣೋತ್ತರ ಪರೀಕ್ಷೆಗೆ ಕರೆದೊಯ್ಯಲಾಗಿದೆ.
ಶಾಸಕ ದೊಡ್ಡನಗೌಡ ಪಾಟೀಲ ಸರ್ಕಾರಿ ಆಸ್ಪತ್ರೆಗೆ ಭೇಟಿ ನೀಡಿ ಮೃತರ ಕುಟುಂಬಕ್ಕೆ ಸಾಂತ್ವನ ಹೇಳಿದರು. ಸರ್ಕಾರದಿಂದ ಪರಿಹಾರ ಕೊಡಿಸುವ ಭರವಸೆ ನೀಡಿದರು.
ತಾಲೂಕಿನಲ್ಲಿ ಮುಂಗಾರು ವಿಫಲವಾಗಿದ್ದು ಬರದ ಛಾಯೆ ಆವರಿಸಿದ್ದು, ಸರ್ಕಾರ ಬರ ಎಂದು ಘೋಷಿಸಿಲ್ಲ. ರೈತ ಆತ್ಮಹತ್ಯೆಯ ಈ ಸನ್ನಿವೇಶ ಇತರ ರೈತರನ್ನು ಆತಂಕಕ್ಕೀಡು ಮಾಡಿದೆ.
ಕುಷ್ಟಗಿ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gangavathi: ಸತತ ಮಳೆಗೆ ಕುಸಿದ ಮನೆ; ಮಣ್ಣಿನಲ್ಲಿ ಸಿಲುಕಿದ ವ್ಯಕ್ತಿ-ಗ್ರಾಮಸ್ಥರಿಂದ ರಕ್ಷಣೆ
CM ಸಿದ್ದರಾಮಯ್ಯನವರಿಗೆ ಗಂಗಾವತಿಯಲ್ಲಿ ಅದ್ದೂರಿಯ ಸ್ವಾಗತ
Koppala; ‘ಒಂದು ವರ್ಷ ಅವಕಾಶ ಕೊಡಿ’ ಹೇಳಿಕೆಗೆ ಸ್ಪಷ್ಟನೆ ನೀಡಿದ ಸಿಎಂ ಸಿದ್ದರಾಮಯ್ಯ
ಕುಷ್ಟಗಿ: ಹೆಚ್ಚಿದ ಕಾರ್ಯಭಾರ-ಒತ್ತಡದಲ್ಲಿ ಪೊಲೀಸ್ ಸಿಬ್ಬಂದಿ
Koppala: ಆದಷ್ಟು ಬೇಗ ಆರ್ಥಿಕ- ಜಾತಿ ಗಣತಿ ವರದಿ ಜಾರಿಯಾಗಲಿ: ಬಸವರಾಜ ರಾಯರಡ್ಡಿ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Middle East latest; ನಿರಾಶ್ರಿತರ ಶಿಬಿರದ ಮೇಲೆ ಇಸ್ರೇಲ್ ದಾಳಿ: ಹಮಾಸ್ ಅಧಿಕಾರಿ ಸಾ*ವು
Women’s T20 World Cup: ಆಸೀಸ್ಗೆ ಸುಲಭದ ತುತ್ತಾದ ಲಂಕಾ
J-K Election: ಚುನಾವಣೆ ಫಲಿತಾಂಶಕ್ಕೂ ಮೊದಲೇ 5 ಶಾಸಕರ ನಾಮನಿರ್ದೇಶನ: ಕಾಂಗ್ರೆಸ್ ಆಕ್ಷೇಪ
Asian Youth Archery: ಮಹಿಳಾ ತಂಡಕ್ಕೆ ಬೆಳ್ಳಿ ಪದಕ
Risk; ಚಾರ್ ಮಿನಾರ್ ಕಿಟಕಿಗಳಲ್ಲಿ ನಡೆದು ಅಪಾಯಕಾರಿ ಸಾಹಸ: ವೈರಲ್ ವಿಡಿಯೋ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.