ಕುಷ್ಟಗಿ: ತಳವಗೇರಾ ಶ್ರೀ ಶರಣಬಸವೇಶ್ವರ ಜಾತ್ರಾ ಮಹೋತ್ಸವ


Team Udayavani, Mar 9, 2023, 11:38 AM IST

3–kushtagi

ಕುಷ್ಟಗಿ: ತಾಲೂಕಿನ ತಳವಗೇರಾ ಶ್ರೀ ಶರಣಬಸವೇಶ್ವರ ಜಾತ್ರಾ ಮಹೋತ್ಸವದ ಹಿನ್ನೆಲೆಯಲ್ಲಿ ಜರಗುವ ಭಾವೈಕ್ಯತೆ ಬೆಸೆಯುವ ಬೆಳದಿಂಗಳ ಬುತ್ತಿ ಜಾತ್ರೆಯಲ್ಲಿ ಬುತ್ತಿಯ ನೆಪದಲ್ಲಿ ಹಲವು ಮನಸ್ಸುಗಳು ಸಂಗಮವಾಯಿತು.

ಅನ್ನದಾಸೋಹಿ ತಳವಗೇರಾ ಶ್ರೀ ಶರಣಬಸವೇಶ್ವರ ಜಾತ್ರಾ ಮಹೋತ್ಸವದ ವಿಶೇಷತೆಯೇ ಬೆಳದಿಂಗಳ ಬುತ್ತಿ ಜಾತ್ರೆ. ಈ ಜಾತ್ರೆಯಲ್ಲಿ ಬಡವ, ಬಲ್ಲಿದ, ಮೇಲ್ಜಾತಿ, ಕೆಳಜಾತಿ ಅಂತರ ಇಲ್ಲದೇ ಒಂದೆಡೆ ಕುಳಿತು, ಹಂಚಿ ತಿನ್ನುವ ಭೋಜನವೇ ಈ ಬೆಳದಿಂಗಳ ಬುತ್ತಿ ಜಾತ್ರೆಯಾಗಿದೆ.

ಪ್ರತಿ ವರ್ಷ ಹೋಳಿ ಹುಣ್ಣಿಮೆಯ ಮಾರನೇ ದಿನದ ಬೆಳಕಲ್ಲಿ ನಡೆಯುವ ಈ ಜಾತ್ರೆಗೆ ಗ್ರಾಮದ ಸುತ್ತಮುತ್ತಲಿನ ಜನರು, ತಮ್ಮ ಮನೆಯಲ್ಲಿ ತಯಾರಿಸಿದ ಬಿಳಿಜೋಳ, ಸಜ್ಜೆಯ ಖಡಕ್ ರೊಟ್ಟಿ, ತರಹೇವಾರಿ ಪಲ್ಲೆ, ಮೊಸರು, ಕಡಲೆ, ಗುರೆಳ್ಳು ಒಂದೆ ಎರಡೇ ವಿವಿಧ ಐಟಂಗಳು ರೊಟ್ಟಿ ಕಾಣದಷ್ಟು ತುಂಬಿರುತ್ತವೆ.

ಈ ಬುತ್ತಿ ಜಾತ್ರೆಗೆ ವನಕಾಂಡ, ಬೆಳದಿಂಗಳ ಬುತ್ತಿ ಜಾತ್ರೆ ಎಂದು ಕರೆಯಲಾಗುತ್ತಿದ್ದು, ಈ ಬೆಳದಿಂಗಳ ಬುತ್ತಿ ಜಾತ್ರೆಯ ಐದು ದಿನಗಳಲ್ಲಿ ಶ್ರೀ ಶರಣಬಸವೇಶ್ವರ ಜಾತ್ರಾ ಮಹೋತ್ಸವದ ರಥೋತ್ಸವಕ್ಕೆ ಸಜ್ಜಾಗುವ ಸಂಬಂಧ ಈ ಬುತ್ತಿ ಜಾತ್ರೆ ಜಾತ್ರೋತ್ಸವ ಬುತ್ತಿ ಜಾತ್ರೆಯಾಗಿದೆ.

ಈ ಬುತ್ತಿ ಜಾತ್ರೆ ಸಂಧರ್ಭದಲ್ಲಿ ತೋಪಲಕಟ್ಟಿ, ಬ್ಯಾಲಿಹಾಳ, ಬೆಂಚಮಟ್ಟಿ, ಕೊರಡಕೇರಾ, ಕವಲ ಬೋದೂರು, ವಣಗೇರಾ, ನಿಡಶೇಸಿ, ಚಳಗೇರಾದಿಂದ ಸಾವಿರಾರು ಬುತ್ತಿಯನ್ನು ಎತ್ತಿನ ಬಂಡಿಯಲ್ಲಿ ತಂದು ತಳವಗೇರಾ ಶ್ರೀ ಶರಣಬಸವೇಶ್ವರ ದೇವಸ್ಥಾನ ಆವರಣದಲ್ಲಿ ಇಡುತ್ತಾರೆ.

ನಂತರ ತಳವಗೇರಾ ಜನರ ಬುತ್ತಿಗಳು ಸೇರಿದಂತೆ ಸಾವಿರಾರು ಬುತ್ತಿಗಳು ಕರಡಿ ಮಜಲು ಮೆರವಣಿಗೆಯೊಂದಿಗೆ ಆದರ್ಶ ಶಾಲೆಯ ಮೈದಾನದಲ್ಲಿ ಕುಳಿತು, ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣದ ತ್ರೀನೇತ್ರ ಮಹಾಂತ ಶಿವಯೋಗಿ ಸ್ವಾಮೀಜಿ ಆದ್ಮಾತ್ಮಿಕ ಪ್ರವಚನ ನೀಡಿದರು.

ಬಳಿಕ ಬೆಳದಿಂಗ ಬುತ್ತಿ ಜಾತ್ರೆಯಲ್ಲಿ ಪರಸ್ಪರ ಹಂಚಿಕೊಂಡು ಭೋಜನ ಸವಿಯುತ್ತಾರೆ. ಈ ಜಾತ್ರೆಗೆ ಬಂದವರು ಯಾರೂ ಹಾಗೆಯೇ ಹೋಗುವುದಿಲ್ಲ ಇಲ್ಲಿ ಊಟ ಮಾಡಿ ಹೋಗಬೇಕು. ದೇವಸ್ಥಾನ ಸಮಿತಿಯಿಂದ ಬಾನ ಸಂಗಟಿ ಮಾಡಿಸುತ್ತಿದ್ದು ಈ ಬಾನ, ಸಂಗಟಿ ಸಾರು ಕೊರತೆಯಾಗಬಾರದು, ಉಳಿದರೆ ಸಮೃದ್ದಿ ಹೆಚ್ಚಲಿದೆ ಎಂಬ ವಾಡಿಕೆ ಜನಮಾನಸದಲ್ಲಿದೆ.

ಈ ಬಾರಿಯ ಬುತ್ತಿ ಜಾತ್ರೆಗೆ ಲಿಂಗೈಕ್ಯ ಶ್ರೀ ಸಿದ್ದೇಶ್ವರ ಅವರಿಗೆ ನಾಮಾಂಜಲಿಯ ಮೂಲಕ ಶ್ರಧ್ಧಾಂಜಲಿ ಸಲ್ಲಿಸಲಾಯಿತು.

ಇದೇ ವೇಳೆ ತಾವರಗೇರಾದ ಯುವ ಕಲಾವಿದ ಆನಂದ ಪತ್ರಿಮಠ ಅವರು, ಸಂತನೆಂದರೆ ಯಾರು.. ಎಂಬ ಹಾಡಿಗೆ, ಕ್ಯಾನವಾಸನಲ್ಲಿ ಶ್ರೀ ಸಿದ್ದೇಶ್ವರ ಸ್ವಾಮೀಜಿ ಚಿತ್ರ ಬಿಡಿಸಿ ಸೈ ಎನಿಸಿಕೊಂಡರು.

ಈ ಬುತ್ತಿ ಜಾತ್ರೆಯ ಕಾರ್ಯಕ್ರಮದಲ್ಲಿ ಶಾಸಕ ಅಮರೇಗೌಡ ಪಾಟೀಲ ಬಯ್ಯಾಪೂರ, ಮಾಜಿ ಸಾಸಕರಾದ ದೊಡ್ಡನಗೌಡ ಪಾಟೀಲ, ಕೆ.ಶರಣಪ್ಪ, ಕುರಿ ಮತ್ತು ಉಣ್ಣೆ ನಿಗಮದ ಅಧ್ಯಕ್ಷ ಶರಣು ತಳ್ಳಿಕೇರಿ, ದೇವೇಂದ್ರಪ್ಪ ಬಳೂಟಗಿ, ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಸಿ.ಎಂ. ಹಿರೇಮಠ, ಬೆಂಗಳೂರಿನ ಉದ್ಯಮಿ ಸಂಗಯ್ಯ ಹಿರೇಮಠ. ಜಿ.ಪಂ. ಮಾಜಿ ಸದಸ್ಯ ಕೆ.ಮಹೇಶ, ಬಿಜೆಪಿ ಮುಖಂಡ ಪ್ರಭಾಕಾರ ಚಿಣಿ ಮತ್ತಿತರರಿದ್ದರು.

ಟಾಪ್ ನ್ಯೂಸ್

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gangavati: 15 ದಿನದಲ್ಲೇ ಕಳ್ಳತನ ಪ್ರಕರಣ ಭೇದಿಸಿದ ಪೊಲೀಸರು…

Gangavati: 15 ದಿನದಲ್ಲೇ ಕಳ್ಳತನ ಪ್ರಕರಣ ಭೇದಿಸಿದ ಪೊಲೀಸರು…

Gangavathi: ಬ್ರಹ್ಮಾವರ ಮೂಲದ ದೇಗುಲ ಕಟ್ಟಡ ಎಂಜಿನಿಯರ್‌ ಕೊಪ್ಪಳದಲ್ಲಿ ಆತ್ಮಹ*ತ್ಯೆ

Gangavathi: ಬ್ರಹ್ಮಾವರ ಮೂಲದ ದೇಗುಲ ಕಟ್ಟಡ ಎಂಜಿನಿಯರ್‌ ಕೊಪ್ಪಳದಲ್ಲಿ ಆತ್ಮಹ*ತ್ಯೆ

13(1

Tawargera: ಲಾರಿ-ಬುಲೆರೋ ವಾಹನ ಡಿಕ್ಕಿ; ಇಬ್ಬರು ಸಾವು

12-

Kanakagiri: ಬ್ಯಾಂಕಿನಲ್ಲಿಯೇ ವೃದ್ಧ ಗ್ರಾಹಕನ ಹಣ ಎಗರಿಸಿದ ಖದೀಮರು

Shivaraj-Tangadagi

Koppal: ರಾಜ್ಯದಲ್ಲಿ ನಾವು ಸ್ಟ್ರಾಂಗ್‌ ಇದ್ದಿದ್ದರಿಂದ ಇವಿಎಂ ಕಿತಾಪತಿ ನಡೆದಿಲ್ಲ; ತಂಗಡಗಿ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.