ಈ ತಿಂಗಳು ಮಳೆ ಕಮ್ಮಿ- ಹವಾಮಾನ ಇಲಾಖೆ ಮುನ್ಸೂಚನೆ: ರೈತರಿಗೆ ಸಂಕಷ್ಟದ ಆತಂಕ


Team Udayavani, Aug 2, 2023, 10:04 PM IST

RAIN KARNATAKA

ಬೆಂಗಳೂರು: ರಾಜ್ಯಾದ್ಯಂತ ಈ ತಿಂಗಳಲ್ಲಿ ವಾಡಿಕೆಗಿಂತ ಕಡಿಮೆ ಮಳೆಯಾಗುವ ಕುರಿತು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಮಳೆಯನ್ನೇ ಅವಲಂಬಿಸಿರುವ ರೈತರಿಗೆ ಸಂಕಷ್ಟ ಎದುರಾಗುವ ಲಕ್ಷಣ ಗೋಚರಿಸಿದೆ.

ರಾಜ್ಯದಲ್ಲಿ ಪ್ರತಿ ವರ್ಷ ಜೂನ್‌ ಪ್ರಾರಂಭವಾಗುತ್ತಿದ್ದಂತೆ ಮುಂಗಾರು ಪ್ರವೇಶಿಸಿ ಮಳೆಯ ಅಬ್ಬರ ಜೋರಾಗಿರುತ್ತದೆ. ಆದರೆ, ಈ ಬಾರಿ ಮುಂಗಾರು ರಾಜ್ಯಕ್ಕೆ ತಡವಾಗಿ ಕಾಲಿಟ್ಟಿದೆ. ಪರಿಣಾಮ ವಿವಿಧ ಜಿಲ್ಲೆಗಳಲ್ಲಿ ಸಮಪ್ರಮಾಣದಲ್ಲಿ ಮಳೆಯಾಗದೆ, ರೈತರು ಉತ್ತಮ ಬೆಳೆ ತೆಗೆಯದೆ ಕಂಗೆಟ್ಟಿದ್ದಾರೆ. ಜುಲೈನಲ್ಲಿ ವಾಡಿಕೆಗಿಂತ ಅಧಿಕ ಮಳೆಯಾಗಿತ್ತು. ಹಾಲಿ ತಿಂಗಳಲ್ಲಿ ಪೂರ್ತಿ ರಾಜ್ಯವ್ಯಾಪಿ ವಾಡಿಕೆಗಿಂತ ಭಾರಿ ಕಡಿಮೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ನೆಚ್ಚರಿಕೆ ಕೊಟ್ಟಿದೆ. ತರಕಾರಿ, ಹಣ್ಣು, ರಾಗಿ, ಭತ್ತ, ಜೋಳ ಬೆಳೆಯುವ ರೈತರಿಗೂ ಈ ತಿಂಗಳಲ್ಲಿ ಬಿಸಿ ತಟ್ಟಲಿದೆ.

2 ಜಿಲ್ಲೆಗಳಲ್ಲಿ ಮಾತ್ರ:
ಉತ್ತರ ಕರ್ನಾಟಕ, ಉತ್ತರ ಒಳನಾಡಿನಲ್ಲಿ ಇದುವರೆಗೆ ವಾಡಿಕೆಗಿಂತ ಹೆಚ್ಚಿನ ಮಳೆ ಸುರಿದಿದೆ. ಸದ್ಯ ದಕ್ಷಿಣ ಒಳನಾಡಿನ ರಾಮನಗರ, ಕೊಡಗು ಜಿಲ್ಲೆಗಳಲ್ಲಿ ಮಾತ್ರ ಮಳೆ ಕೊರತೆ ಇದೆ. ಉಳಿದಂತೆ ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಮಳೆಯಾಗಿದೆ. ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಸೇರಿ ಕರಾವಳಿ ಜಿಲ್ಲೆಗಳಲ್ಲಿ ವಾಡಿಕೆಗಿಂತ ಭಾರಿ ಅಧಿಕ ಮಳೆಯಾಗಿದೆ.
ಇದೇ ವೇಳೆ, ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಿಗೆ ಆ.5ರ ವರೆಗೆ ಎಲ್ಲೋ ಅಲರ್ಟ್‌ ಘೋಷಿಸಲಾಗಿದೆ. ರಾಜ್ಯದ ಒಂದೆರಡು ಕಡೆ ಬಿರುಗಾಳಿಯ ವೇಗವು ಗಂಟೆಗೆ 40 ರಿಂದ 50 ಕಿ.ಮೀ ಇರಲಿದೆ. ಉಳಿದಂತೆ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮುಂದಿನ ಒಂದು ವಾರ ಮಳೆಯಾಗುವ ಸಾಧ್ಯತೆಗಳಿಲ್ಲ

ಜುಲೈನಲ್ಲಿ ಅತಿ ಮಳೆ ಏಕೆ?
ಜೂನ್‌ನಲ್ಲಿ ಮಳೆ ಕೊರತೆ ಅಧಿಕವಾಗಿತ್ತು. ಆದರೆ, ಜುಲೈನಲ್ಲಿ ವಾಡಿಕೆಗಿಂತ ಹೆಚ್ಚಿನ ಮಳೆ ಸುರಿದಿದೆ. ಗಾಳಿ ದಿಕ್ಕಿನ ಬದಲಾವಣೆ ವಲಯವು ಅನೇಕ ದಿನ 20, 18, 17 ಡಿಗ್ರಿ ಉತ್ತರ ಅಕ್ಷಾಂಶದಲ್ಲಿ ಹಾದು ಹೋಗಿತ್ತು. ರಾಜ್ಯಕ್ಕೆ ಈ ಬಾರಿ 10 ದಿನ ತಡವಾಗಿ ಮುಂಗಾರು ಪ್ರವೇಶಿಸಿತ್ತು. ಮಾನ್ಸೂನ್‌ ಟ್ರಫ್ನ ಸ್ಥಿತಿ ಅನೇಕ ದಿನಗಳ ಕಾಲ ವಾಡಿಕೆಗಿಂತ ದಕ್ಷಿಣ ದಿಕ್ಕಿನಲ್ಲಿತ್ತು. ಬಿಪೋರ್‌ಜಾಯ್‌ ಚಂಡಮಾರುತದಿಂದ ಮುಂಗಾರಿನ ಪಶ್ಚಿಮ ದಿಕ್ಕಿನಿಂದ ಬೀಸಿದ ಗಾಳಿ ಸೇರಿದಂತೆ ವಿವಿಧ ಹವಾಮಾನ ಬದಲಾವಣೆಯಿಂದಾಗಿ ಜುಲೈನಲ್ಲಿ ಉತ್ತರ ಒಳನಾಡು, ಮಧ್ಯ ಭಾರತದಲ್ಲಿ ಉತ್ತಮ ಮಳೆಯಾಯಿತು. ಮತ್ತೂಂದೆಡೆ ಪಶ್ಚಿಮ ಕರಾವಳಿ ಟ್ರಫ್ಗಳು ಅನೇಕ ದಿನಗಳ ಕಾಲ ಇದ್ದ ಹಿನ್ನೆಲೆಯಲ್ಲಿ ಕರಾವಳಿ ಸೇರಿದಂತೆ ಪಶ್ಚಿಮ ದಿಕ್ಕಿನಲ್ಲಿ ಹೆಚ್ಚಿನ ಮಳೆಯಾಗಿದೆ. ಹೀಗಾಗಿ ಜೂನ್‌ನಲ್ಲಿದ್ದ ಮಳೆ ಕೊರತೆ ಸಮಸ್ಯೆ ನೀಗಿತ್ತು.

ಕರ್ನಾಟಕದಲ್ಲಿ ಆಗಸ್ಟ್‌ ತಿಂಗಳಿನಲ್ಲಿ ಕಡಿಮೆ ಮಳೆಯಾಗುವ ಶೇ.50ರಷ್ಟು ಸಾಧ್ಯತೆಗಳಿವೆ. ಇದುವರೆಗೆ ರಾಜ್ಯದಲ್ಲಿ ವಾಡಿಕೆಯಷ್ಟೆ ಮಳೆಯಾಗಿದೆ. ಕಳೆದ ವರ್ಷಕ್ಕೆ ಹೋಲಿಸಿದರೆ ಈ ಬಾರಿ ಮಳೆ ಪ್ರಮಾಣ ಕಡಿಮೆ ಇದೆ.
| ಎ.ಪ್ರಸಾದ್‌, ವಿಜ್ಞಾನಿ “ಡಿ”, ರಾಜ್ಯ ಹವಾಮಾನ ಇಲಾಖೆ.

ಟಾಪ್ ನ್ಯೂಸ್

Elephant Corridor: ಅಭಿವೃದ್ಧಿ ಯೋಜನೆಗಳಿಂದ ಆನೆ ಕಾರಿಡಾರ್‌ಗೆ ಹಾನಿ

Elephant Corridor: ಅಭಿವೃದ್ಧಿ ಯೋಜನೆಗಳಿಂದ ಆನೆ ಕಾರಿಡಾರ್‌ಗೆ ಹಾನಿ

Gayana

Music Programme: ಸಂಗೀತ ರಸಿಕರನ್ನು ರಂಜಿಸಿದ ಮಳೆಗಾಲದ ರಾಗಗಳ ಗಾಯನ

Mangaluru: ರಾಹುಲ್‌ ಗಾಂಧಿಯನ್ನು ಪೇಜಾವರ ಶ್ರೀ ಟೀಕಿಸಿದ್ದು ಸರಿಯಲ್ಲ : ಪದ್ಮರಾಜ್‌

Mangaluru: ರಾಹುಲ್‌ ಗಾಂಧಿಯನ್ನು ಪೇಜಾವರ ಶ್ರೀ ಟೀಕಿಸಿದ್ದು ಸರಿಯಲ್ಲ : ಪದ್ಮರಾಜ್‌

Udupi: ಕಾರ್ಮಿಕ ಸುರಕ್ಷೆಗೆ ಜಿಲ್ಲಾಧಿಕಾರಿ ಸೂಚನೆ

Udupi: ಕಾರ್ಮಿಕ ಸುರಕ್ಷೆಗೆ ಜಿಲ್ಲಾಧಿಕಾರಿ ಸೂಚನೆ

Mangaluru: ಮುಖ್ಯಮಂತ್ರಿ ರಾಜೀನಾಮೆ ಅನಿವಾರ್ಯ: ರವಿಕುಮಾರ್‌ ಆಗ್ರಹ

Mangaluru: ಮುಖ್ಯಮಂತ್ರಿ ರಾಜೀನಾಮೆ ಅನಿವಾರ್ಯ: ರವಿಕುಮಾರ್‌ ಆಗ್ರಹ

Heavy Rain: ದಕ್ಷಿಣ ಕನ್ನಡ ಜಿಲ್ಲಾದ್ಯಂತ ಉತ್ತಮ ಮಳೆ… ಕೆಲವೆಡೆ ಹಾನಿ

Heavy Rain: ದಕ್ಷಿಣ ಕನ್ನಡ ಜಿಲ್ಲಾದ್ಯಂತ ಉತ್ತಮ ಮಳೆ… ಕೆಲವೆಡೆ ಹಾನಿ

Udupi: ದಿನಪೂರ್ತಿ ಮಳೆ… ತಗ್ಗು ಪ್ರದೇಶಗಳು ಜಲಾವೃತ

Udupi: ದಿನಪೂರ್ತಿ ಮಳೆ… ತಗ್ಗು ಪ್ರದೇಶಗಳು ಜಲಾವೃತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Police-Head

Karnataka Police ಸುಳ್ಳು ಸುದ್ದಿ ತಡೆಗೆ ಎಐ ಬಳಸಿ: ಸಿಎಂ ಸಿದ್ದರಾಮಯ್ಯ ಸೂಚನೆ

Prahalad-Joshi

MUDA Scam ತನಿಖೆ ಸಿಬಿಐಗೆ ವಹಿಸಿ: ಕೇಂದ್ರ ಸಚಿವ ಪ್ರಹ್ಲಾದ ಜೋಶಿ

23

“140ಕ್ಕೂ ಹೆಚ್ಚು ಮುಡಾ ಕಡತ ಕದ್ದೊಯ್ದ ಅಧಿಕಾರಿಗಳು’ʼ: ಶಾಸಕ ಟಿ.ಎಸ್‌. ಶ್ರೀವತ್ಸ

Earthquake: ತಿಕೋಟಾ ಭಾಗದಲ್ಲಿ ಲಘು ಭೂಕಂಪ… ಮನೆಯಿಂದ ಹೊರ ಓಡಿಬಂದ ಜನ

Earthquake: ತಿಕೋಟಾ ಭಾಗದಲ್ಲಿ ಲಘು ಭೂಕಂಪ… ಮನೆಯಿಂದ ಹೊರ ಓಡಿಬಂದ ಜನ

RadhaMohan-das

Karnataka New Incharge: ಬಿಜೆಪಿ ನಾಯಕರಿಗೆ ಡಾ.ಅಗರ್ವಾಲ್‌ “ಇಂಜೆಕ್ಷನ್‌’

MUST WATCH

udayavani youtube

ಕೂಲ್ ಮೂಡ್ ನಲ್ಲಿ ಸ್ವಿಮ್ಮಿಂಗ್ ಮಾಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ : ಇಲ್ಲಿದೆ ವಿಡಿಯೋ

udayavani youtube

ಅಂಬಾನಿ ಕುಟುಂಬದಿಂದ ಆಟಗಾರರೊಂದಿಗೆ ವಿಶ್ವಕಪ್ ಗೆಲುವಿನ ಸಂಭ್ರಮಾಚರಣೆ

udayavani youtube

Team india

udayavani youtube

ಮರವಂತೆ ಬೀಚ್ ಅಪಾಯ ಲೆಕ್ಕಿಸದೆ ಪ್ರವಾಸಿಗರ ಹುಚ್ಚಾಟ

udayavani youtube

ಕಮಲಶಿಲೆ ದುರ್ಗೆಯ ಪಾದ ಸ್ಪರ್ಶಿಸಿದ ಕುಬ್ಜಾ ನದಿ

ಹೊಸ ಸೇರ್ಪಡೆ

Elephant Corridor: ಅಭಿವೃದ್ಧಿ ಯೋಜನೆಗಳಿಂದ ಆನೆ ಕಾರಿಡಾರ್‌ಗೆ ಹಾನಿ

Elephant Corridor: ಅಭಿವೃದ್ಧಿ ಯೋಜನೆಗಳಿಂದ ಆನೆ ಕಾರಿಡಾರ್‌ಗೆ ಹಾನಿ

Gayana

Music Programme: ಸಂಗೀತ ರಸಿಕರನ್ನು ರಂಜಿಸಿದ ಮಳೆಗಾಲದ ರಾಗಗಳ ಗಾಯನ

Mangaluru: ರಾಹುಲ್‌ ಗಾಂಧಿಯನ್ನು ಪೇಜಾವರ ಶ್ರೀ ಟೀಕಿಸಿದ್ದು ಸರಿಯಲ್ಲ : ಪದ್ಮರಾಜ್‌

Mangaluru: ರಾಹುಲ್‌ ಗಾಂಧಿಯನ್ನು ಪೇಜಾವರ ಶ್ರೀ ಟೀಕಿಸಿದ್ದು ಸರಿಯಲ್ಲ : ಪದ್ಮರಾಜ್‌

Udupi: ಕಾರ್ಮಿಕ ಸುರಕ್ಷೆಗೆ ಜಿಲ್ಲಾಧಿಕಾರಿ ಸೂಚನೆ

Udupi: ಕಾರ್ಮಿಕ ಸುರಕ್ಷೆಗೆ ಜಿಲ್ಲಾಧಿಕಾರಿ ಸೂಚನೆ

Mangaluru: ಮುಖ್ಯಮಂತ್ರಿ ರಾಜೀನಾಮೆ ಅನಿವಾರ್ಯ: ರವಿಕುಮಾರ್‌ ಆಗ್ರಹ

Mangaluru: ಮುಖ್ಯಮಂತ್ರಿ ರಾಜೀನಾಮೆ ಅನಿವಾರ್ಯ: ರವಿಕುಮಾರ್‌ ಆಗ್ರಹ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.