ಪಂಚಮಹಾಭೂತ ಲೋಕೋತ್ಸವದಲ್ಲಿ ಮಹಿಳೆಯರ ದಂಡು


Team Udayavani, Feb 25, 2023, 10:56 AM IST

jolle 2

ಮಹಾದೇವ ಪೂಜೇರಿ
ಚಿಕ್ಕೋಡಿ: ಕಣ್ಣು ಹಾಯಿಸಿದಷ್ಟು ಜನ ಜಂಗುಳಿ, ಎಲ್ಲಿ ನೋಡಿದರಲ್ಲಿ ವಾಹನಗಳ ಸಾಲು, ಕರ್ನಾಟಕ-ಮಹಾರಾಷ್ಟ್ರ ಬಾಂಧವ್ಯದ ಜೊತೆಗೆಯೇ ಇಡೀ ಭಾರತದ ಸಂತರು, ತಜ್ಞರು ಸಮಾಗಮದಲ್ಲಿ ಮಹಿಳೆಯರದ್ದೇ ಸಿಂಹಪಾಲು. ಕರ್ನಾಟಕ ಗಡಿ ಭಾಗಕ್ಕೆ ಹೊಂದಿಕೊಂಡಿರುವ ಮಹಾರಾಷ್ಟ್ರದ ಕೊಲ್ಲಾಪೂರ ಜಿಲ್ಲೆಯ ಕನೇರಿ ಅದೃಶ್ಯ ಕಾಡಸಿದ್ದೇಶ್ವರ ಮಠದಲ್ಲಿ ಹಮ್ಮಿಕೊಂಡಿರುವ ಬೃಹತ್‌ ಪಂಚಮಹಾಭೂತ ಲೋಕೋತ್ಸವದಲ್ಲಿ ಶುಕ್ರವಾರ ನಡೆದ ಮಹಿಳಾ ಲೋಕೋತ್ಸವದಲ್ಲಿ ಕಂಡು ಬಂದ ಚಿತ್ರಣವಿದು.

ಉತ್ತರ ಕರ್ನಾಟಕ ಮತ್ತು ದಕ್ಷಿಣ ಮಹಾರಾಷ್ಟ್ರದ ಲಕ್ಷಾಂತರ ಮಹಿಳೆಯರು ಕನೇರಿ ಮಠದತ್ತ ಆಗಮಿಸಿ ಲೋಕೋತ್ಸವಕ್ಕೆ ಸಾಕ್ಷಿಯಾಗುತ್ತಿದ್ದಾರೆ. ಇಡೀ ಕನೇರಿ ಮಠದ ಸುತ್ತಮುತ್ತ ಸುಮಾರು 600 ಎಕರೆ ಪ್ರದೇಶದಲ್ಲಿ ಭೂಮಿ, ನೀರು, ವಾಯು, ಅಗ್ನಿ, ಆಕಾಶದ ಚಿತ್ರಣ ಅನಾವರಣಗೊಂಡಿದೆ. ಐದು ಪಂಚಮಹಾಭೂತ ವೀಕ್ಷಣೆಗೆ ಜನ ಮುಗಿಬಿದ್ದಿದ್ದಾರೆ. ಶುಕ್ರವಾರ ಒಂದೇ ದಿನ ಅಂದಾಜು ನಾಲ್ಕೈದು ಲಕ್ಷದಷ್ಟು ಜನ ಸೇರಿದ್ದಾರೆ. ದಿನದಿಂದ ದಿನಕ್ಕೆ ಲೋಕೋತ್ಸವ ನೋಡಲು ಜನರ ಸಂಖ್ಯೆ ಹೆಚ್ಚುತ್ತಿದೆ.

ನೆತ್ತಿ ಸುಡುವ ಬಿಸಿಲು ಲೆಕ್ಕಿಸದೇ ಜನರು ಉತ್ಸಾಹದಿಂದ ಲೋಕೋತ್ಸವ ಉತ್ಸವದಲ್ಲಿ ಪಾಲ್ಗೊಳ್ಳುತ್ತಿದ್ದಾರೆ. ಸಾವಯವ ಕೃಷಿಯಲ್ಲಿ ಅತ್ಯುತ್ತಮ ಸಾಧನೆ ಮಾಡಿರುವ ಅದೃಶ್ಯ ಕಾಡಸಿದ್ದೇಶ್ವರ ಸ್ವಾಮೀಜಿ ಕೃಷಿ ದರ್ಶನದ ಚಿತ್ರಣ ರೈತಾಪಿ ವರ್ಗದ ಜನರನ್ನು ಆಕರ್ಷಿಸುತ್ತಿದೆ. ಬೃಹತ್‌ ಕಾರ್ಯಕ್ರಮ ಯಾವ ಮೈದಾನದಲ್ಲಿ ನಡೆದಿಲ್ಲ, ಇದೊಂದು ಕೃಷಿ ಭೂಮಿಯಲ್ಲಿ ನಡೆದಿರುವ ವಿಶೇಷ. ಸಾವಯವ ಪದ್ಧತಿಯಲ್ಲಿ ಬೆಳೆದಿರುವ ವಿವಿಧ ಜಾತಿ ಗಿಡಗಳ ಸಮ್ಮುಖದಲ್ಲಿ ಲೋಕೋತ್ಸವದ ಮಳಿಗೆ ಇವೆ. ತಂಪಾದ ಗಿಡಗಳ ನೆರಳಿನ ಮಧ್ಯದಲ್ಲಿ ಭೂಮಿ, ನೀರು, ವಾಯು, ಅಗ್ನಿ, ಆಕಾಶದ ಪಂಚಮಹಾಭೂತ ಚಿತ್ರಣ ವೀಕ್ಷಿಸಲು ಅನುಕೂಲ ಕಲ್ಪಿಸಲಾಗಿದೆ.

ಸಾವಯವ ಅಡುಗೆ ತಯಾರಿ: ಪಂಚಮಹಾಭೂತ ಲೋಕೋತ್ಸವಕ್ಕೆ ಆಗಮಿಸುವ ಲಕ್ಷೋಪಲಕ್ಷ ಜನರಿಗೆ ಊಟದ ವ್ಯವಸ್ಥೆ ಕಲ್ಪಿಸಿದ್ದಾರೆ. ಸಾವಯವ ಪದ್ಧತಿಯಲ್ಲಿಯೇ ಬೆಳೆದ ತರಕಾರಿಯಿಂದ ಅಡುಗೆ ಸಿದ್ಧವಾಗುತ್ತಿದೆ. ನಾಡಿನಾದ್ಯಂತ ಭಕ್ತರು ಕೊಟ್ಟ ರೊಟ್ಟಿ, ಚಪಾತಿ ಹೊರತುಪಡಿಸಿ ಉಳಿದೆಲ್ಲ ಪದಾರ್ಥಗಳು ಭೋಜನ ಮಳಿಗೆಯಲ್ಲಿಯೇ ಸಿದ್ಧಪಡಿಸಲಾಗುತ್ತಿದೆ. ಗಣ್ಯರು, ಸಂತರು, ಸಾರ್ವಜನಿಕರಿಗೆ ಪ್ರತ್ಯೇಕ ಊಟದ ಮಳಿಗೆಯಲ್ಲಿ ಭೋಜನದ ವ್ಯವಸ್ಥೆ ಮಾಡಿದ್ದಾರೆ. ಕಾರ್ಯಕ್ರಮಕ್ಕೆ ಬರುವ ಪ್ರತಿಯೊಬ್ಬರೂ ಶೇಂಗಾ ಹೋಳಿಗೆ, ಮಾದಲಿ, ಜೋಳದ ರೊಟ್ಟಿ, ಚಪಾತಿ, ಎರಡರಿಂದ ಮೂರು ಪಲೆÂ, ಮಜ್ಜಿಗೆ, ಮೊಸರು, ಅನ್ನ ಸಾಂಬಾರಿನ ಭೋಜನದ ಸವಿ ಸವಿಯುತ್ತಿದ್ದಾರೆ.

ಪಂಚಮಹಾಭೂತ ಲೋಕೋತ್ಸವ ಜಾತ್ರೆಯಾಗದೇ ಇದೊಂದು ಸಾಮಾಜಿಕ ಹೊಣೆಗಾರಿಕೆ ಆಗಬೇಕು. ಭೂಮಿ, ನೀರು, ವಾಯು, ಅಗ್ನಿ, ಆಕಾಶ ಉಳಿಸುವತ್ತ ಯುವಕರು ಚಿಂತಿಸಬೇಕಿದೆ. ಪರಿಸರ ಉಳಿದರೆ ಮಾತ್ರ ಜೀವನ ಎನ್ನುವುದು ಜನರಿಗೆ ತಿಳಿಸುವ ಉದ್ದೇಶದಿಂದ ಪಂಚಮಹಾಭೂತ ಲೋಕೋತ್ಸವ ಹಮ್ಮಿಕೊಳ್ಳಲಾಗಿದೆ.
ಅದೃಶ್ಯ ಕಾಡಸಿದ್ದೇಶ್ವರ ಸ್ವಾಮೀಜಿ, ಕನೇರಿ

ಕನೇರಿ ಕಾಡಸಿದ್ದೇಶ್ವರ ಮಠದಲ್ಲಿ ಅದೃಶ್ಯ ಕಾಡಸಿದ್ದೇಶ್ವರ ಸ್ವಾಮೀಜಿ ನೇತೃತ್ವದಲ್ಲಿ ನಮ್ಮ ಇಡೀ ಪೃಥ್ವಿ, ದೇಹ ಪಂಚಮಹಾಭೂತದಿಂದ ನಿರ್ಮಾಣವಾಗಿದ್ದು, ಐದು ತತ್ವಗಳಿಂದ ಕೂಡಿದ ಈ ಪ್ರಕೃತಿ ಉಳಿಸಿಕೊಂಡು ಹೋಗುವುದು ಮುಖ್ಯ. 600 ಎಕರೆ ಪ್ರದೇಶದಲ್ಲಿ ಐದು ತತ್ವಗಳ ಪ್ರದರ್ಶನ ನಡೆಯುತ್ತಿದೆ. ದಿನದಿಂದ ದಿನಕ್ಕೆ 5 ಲಕ್ಷಕ್ಕಿಂತ ಹೆಚ್ಚಿನ ಜನ ವೀಕ್ಷಣೆ ಮಾಡುತ್ತಿದ್ದಾರೆ. ಮುಂದಿನ ಪೀಳಿಗೆಗೆ ಒಳ್ಳೆಯ ಪರಿಸರ ಕೊಡಬೇಕೆನ್ನುವುದು ಇದರ ಉದ್ದೇಶ. ಈ ಪಂಚಮಹಾಭೂತ ಲೋಕೋತ್ಸವ ಸುವರ್ಣಾಕ್ಷರದಲ್ಲಿ ಬರೆದಿಡುವ ಕಾರ್ಯಕ್ರಮವಾಗಿದೆ.
ಶಶಿಕಲಾ ಜೊಲ್ಲೆ, ಸಚಿವೆ

ಯಕ್ಸಂಬಾ ಜೊಲ್ಲೆ ಗ್ರುಪ್‌ ಸೇವೆ: ಚಿಕ್ಕೋಡಿ ತಾಲೂಕಿನ ಯಕ್ಸಂಬಾ ಪಟ್ಟಣದ ಜೊಲ್ಲೆ ಗ್ರುಪ್‌ನ ಸುಮಾರು 400 ಸಿಬ್ಬಂದಿ ಪಂಚಮಹಾಭೂತ ಲೋಕೋತ್ಸವದಲ್ಲಿ ಸ್ವಯಂಸೇವಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಇಡೀ ಲೋಕೋತ್ಸವದ ಭೋಜನ ವ್ಯವಸ್ಥೆಯಲ್ಲಿ ಜೊಲ್ಲೆ ಗ್ರುಪ್‌ ಸಿಬ್ಬಂದಿ ಮುಂಚೂಣಿಯಲ್ಲಿ ನಿಂತು ಕೆಲಸ ನಿರ್ವಹಿಸುತ್ತಿದ್ದಾರೆ.

ಟಾಪ್ ನ್ಯೂಸ್

ಅವನು ಇಷ್ಟ ಪಟ್ಟಳನ್ನು ನಾನು ಒಪ್ಪುವೆ… ತರುಣ್‌ ಮದುವೆ ಕುರಿತು ತಾಯಿ ಮಾಲತಿ ಮಾತು

ಅವನು ಇಷ್ಟ ಪಟ್ಟಳನ್ನು ನಾನು ಒಪ್ಪುವೆ… ತರುಣ್‌ ಮದುವೆ ಕುರಿತು ತಾಯಿ ಮಾಲತಿ ಮಾತು

ಮುಂದಿನ ವರ್ಷವೇ ʼಕಲ್ಕಿ 2898 ಎಡಿʼ ಸೀಕ್ವೆಲ್ ರಿಲೀಸ್; ನಿರ್ಮಾಪಕರೇ ಕೊಟ್ರು ಸುಳಿವು

ಮುಂದಿನ ವರ್ಷವೇ ʼಕಲ್ಕಿ 2898 ಎಡಿʼ ಸೀಕ್ವೆಲ್ ರಿಲೀಸ್; ನಿರ್ಮಾಪಕರೇ ಕೊಟ್ರು ಸುಳಿವು

Bihar: ಬಿಹಾರದಲ್ಲಿ ಕುಸಿದು ಬಿದ್ದ ಮತ್ತೊಂದು ಸೇತುವೆ- 15 ದಿನಗಳಲ್ಲಿ 10 ಸೇತುವೆ ಕುಸಿತ!

Bihar: ಬಿಹಾರದಲ್ಲಿ ಕುಸಿದು ಬಿದ್ದ ಮತ್ತೊಂದು ಸೇತುವೆ- 15 ದಿನಗಳಲ್ಲಿ 10 ಸೇತುವೆ ಕುಸಿತ!

Sagara: ಗಾಳಿ ಮಳೆಯ ಆರ್ಭಟಕ್ಕೆ ಸಾಲು ಸಾಲು ವಿದ್ಯುತ್ ಕಂಬಗಳು ಧರಾಶಾಹಿ

Sagara: ಮಳೆಯ ಆರ್ಭಟಕ್ಕೆ ಸಾಲು ಸಾಲು ವಿದ್ಯುತ್ ಕಂಬಗಳು ಧರಾಶಾಹಿ

Flashing lights of vehicles; ಮೂರು ದಿನದಲ್ಲಿ 3700 ಪ್ರಕರಣ: ಅಲೋಕ್ ಕುಮಾರ್

Flashing lights of vehicles; ಮೂರು ದಿನದಲ್ಲಿ 3700 ಪ್ರಕರಣ: ಅಲೋಕ್ ಕುಮಾರ್

Rajasthan: ಚುನಾವಣೆ ವೇಳೆ ನೀಡಿದ ಭರವಸೆಯಂತೆ ಸಚಿವ ಸ್ಥಾನಕ್ಕೆ ಕಿರೋಡಿ ಲಾಲ್‌ ರಾಜೀನಾಮೆ!

Rajasthan: ಚುನಾವಣೆ ವೇಳೆ ನೀಡಿದ ಭರವಸೆಯಂತೆ ಸಚಿವ ಸ್ಥಾನಕ್ಕೆ ಕಿರೋಡಿ ಲಾಲ್‌ ರಾಜೀನಾಮೆ!

Charmadi: ಭಾರಿ ಮಳೆಗೆ ಚಾರ್ಮಾಡಿ ಘಾಟಿಯ ರಸ್ತೆ, ತಡೆಗೋಡೆಯಲ್ಲಿ ಬಿರುಕು… ಕುಸಿಯುವ ಭೀತಿ

Charmadi: ಭಾರಿ ಮಳೆಗೆ ಚಾರ್ಮಾಡಿ ಘಾಟಿಯ ರಸ್ತೆ, ತಡೆಗೋಡೆಯಲ್ಲಿ ಬಿರುಕು… ಕುಸಿಯುವ ಭೀತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

laxmi-hebbalkar

Belagavi; ಅಭಯ್ ಪಾಟೀಲ್ ‘ಕೇಂದ್ರದ ಮೊಬೈಲ್’ ಹೇಳಿಕೆಗೆ ಸಚಿವೆ ಹೆಬ್ಬಾಳ್ಕರ್ ಗರಂ

vijaya-sankeshwar1

ಮಾಟಮಂತ್ರದ ಕಾಟ: ಕುಟುಂಬದ ವಿರುದ್ಧವೇ ದೂರು ನೀಡಲು ಮುಂದಾದ ಉದ್ಯಮಿ ವಿಜಯ ಸಂಕೇಶ್ವರ ಪುತ್ರಿ

Road Mishap ಕಾರುಗಳ ಮುಖಾಮುಖಿ ಡಿಕ್ಕಿ: 8 ಮಂದಿಗೆ ಗಂಭೀರ ಗಾಯ

Road Mishap ಕಾರುಗಳ ಮುಖಾಮುಖಿ ಡಿಕ್ಕಿ: 8 ಮಂದಿಗೆ ಗಂಭೀರ ಗಾಯ

Kalammawadi Dam ಹಿನ್ನೀರಿನಲ್ಲಿ ಈಜಲು ತೆರಳಿದ್ದ ಯುವಕರಿಬ್ಬರು ನೀರು ಪಾಲು

Kalammawadi Dam ಹಿನ್ನೀರಿನಲ್ಲಿ ಈಜಲು ತೆರಳಿದ್ದ ಯುವಕರಿಬ್ಬರು ನೀರು ಪಾಲು

belagvi

Belagavi; ರೈತರಿಗೆ ಹಾಲಿನ ಪ್ರೋತ್ಸಾಹಧನ ಬಿಡುಗಡೆ ಮಾಡುವಂತೆ ಒತ್ತಾಯಿಸಿ ಬಿಜೆಪಿ ಪ್ರತಿಭಟನೆ

MUST WATCH

udayavani youtube

ಹತ್ರಾಸ್‌ನಲ್ಲಿ ಸತ್ಸಂಗದ ವೇಳೆ ಕಾಲ್ತುಳಿತ ಸಾವಿನ ಸಂಖ್ಯೆ 121 ಕ್ಕೆ ಏರಿಕೆ

udayavani youtube

ಕರ್ನಾಟಕ ಪ್ರವಾಸೋದ್ಯಮದ ಕುರಿತು ರಾಜ್ಯಸಭೆಯಲ್ಲಿ ಸುಧಾಮೂರ್ತಿ ಹೇಳಿದ್ದೇನು

udayavani youtube

ಹದಗೆಟ್ಟ ರಸ್ತೆಯಲ್ಲಿ ಜೀವ ಕೈಯಲ್ಲಿ ಹಿಡಿದು ಓಡಾಡುವ ವಾಹನ ಸವಾರರು!|

udayavani youtube

ಎಕ್ರೆಗಟ್ಟಲೆ ಹಡಿಲು ಭೂಮಿಗೆ ಜೀವ ತುಂಬಿದ ರೈತ

udayavani youtube

ಶ್ರೀ ಕ್ಷೇ.ಧ.ಗ್ರಾ.ಯೋಜನೆ | ಅರಣ್ಯ ಸಚಿವರಿಂದ ದಶಲಕ್ಷ ಗಿಡಗಳ ನಾಟಿಗೆ ಚಾಲನೆ

ಹೊಸ ಸೇರ್ಪಡೆ

ಅವನು ಇಷ್ಟ ಪಟ್ಟಳನ್ನು ನಾನು ಒಪ್ಪುವೆ… ತರುಣ್‌ ಮದುವೆ ಕುರಿತು ತಾಯಿ ಮಾಲತಿ ಮಾತು

ಅವನು ಇಷ್ಟ ಪಟ್ಟಳನ್ನು ನಾನು ಒಪ್ಪುವೆ… ತರುಣ್‌ ಮದುವೆ ಕುರಿತು ತಾಯಿ ಮಾಲತಿ ಮಾತು

ಮುಂದಿನ ವರ್ಷವೇ ʼಕಲ್ಕಿ 2898 ಎಡಿʼ ಸೀಕ್ವೆಲ್ ರಿಲೀಸ್; ನಿರ್ಮಾಪಕರೇ ಕೊಟ್ರು ಸುಳಿವು

ಮುಂದಿನ ವರ್ಷವೇ ʼಕಲ್ಕಿ 2898 ಎಡಿʼ ಸೀಕ್ವೆಲ್ ರಿಲೀಸ್; ನಿರ್ಮಾಪಕರೇ ಕೊಟ್ರು ಸುಳಿವು

Bihar: ಬಿಹಾರದಲ್ಲಿ ಕುಸಿದು ಬಿದ್ದ ಮತ್ತೊಂದು ಸೇತುವೆ- 15 ದಿನಗಳಲ್ಲಿ 10 ಸೇತುವೆ ಕುಸಿತ!

Bihar: ಬಿಹಾರದಲ್ಲಿ ಕುಸಿದು ಬಿದ್ದ ಮತ್ತೊಂದು ಸೇತುವೆ- 15 ದಿನಗಳಲ್ಲಿ 10 ಸೇತುವೆ ಕುಸಿತ!

Sagara: ಗಾಳಿ ಮಳೆಯ ಆರ್ಭಟಕ್ಕೆ ಸಾಲು ಸಾಲು ವಿದ್ಯುತ್ ಕಂಬಗಳು ಧರಾಶಾಹಿ

Sagara: ಮಳೆಯ ಆರ್ಭಟಕ್ಕೆ ಸಾಲು ಸಾಲು ವಿದ್ಯುತ್ ಕಂಬಗಳು ಧರಾಶಾಹಿ

Flashing lights of vehicles; ಮೂರು ದಿನದಲ್ಲಿ 3700 ಪ್ರಕರಣ: ಅಲೋಕ್ ಕುಮಾರ್

Flashing lights of vehicles; ಮೂರು ದಿನದಲ್ಲಿ 3700 ಪ್ರಕರಣ: ಅಲೋಕ್ ಕುಮಾರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.