ಗಣಪತಿ ಕೆರೆ ಅಭಿವೃದ್ಧಿಯಲ್ಲಿ ಭ್ರಷ್ಟಾಚಾರ- ತನಿಖೆಗೆ ಚಿಂತನೆ: ಬೇಳೂರು ಗೋಪಾಲಕೃಷ್ಣ


Team Udayavani, Nov 21, 2023, 6:07 PM IST

ganapathi lake

ಸಾಗರ: ಇತಿಹಾಸ ಪ್ರಸಿದ್ಧವಾದ ಗಣಪತಿ ಕೆರೆ ಅಭಿವೃದ್ಧಿಯಲ್ಲಿ ದೊಡ್ಡಮಟ್ಟದ ಭ್ರಷ್ಟಾಚಾರ ನಡೆದಿದ್ದು, ಇದನ್ನು ತನಿಖೆ ನಡೆಸಲು ಸಂಬಂಧಪಟ್ಟ ಇಲಾಖೆ ಸಚಿವರು ಚಿಂತನೆ ನಡೆಸಿದ್ದಾರೆ. ಕೆರೆ ಅಭಿವೃದ್ಧಿಯಲ್ಲಿ ಅವ್ಯವಹಾರ ನಡೆದಿರುವ ಕುರಿತು ಸಾರ್ವಜನಿಕರು ಸಚಿವರಿಗೆ ಪತ್ರ ಬರೆದಿದ್ದಾರೆ ಎಂದು ಶಾಸಕ ಗೋಪಾಲಕೃಷ್ಣ ಬೇಳೂರು ತಿಳಿಸಿದರು.

ಇಲ್ಲಿನ ಗಣಪತಿ ಕೆರೆ, ಸಣ್ಣಮನೆ ಸೇತುವೆ ಸೇರಿದಂತೆ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಮಂಗಳವಾರ ಪರಿಶೀಲನೆ ನಡೆಸಿ ಮಾತನಾಡಿದ ಅವರು, ಗಣಪತಿ ಕೆರೆಯನ್ನು ಪುನರ್ ಸರ್ವೇ ಮಾಡಿಸುವತ್ತ ಗಮನ ಹರಿಸಲಾಗುತ್ತಿದೆ. ಈಗಾಗಲೇ ಸಾಕಷ್ಟು ಹಣ ವ್ಯಯ ಮತ್ತು ದುರುಪಯೋಗವಾಗಿರುವ ಗುಮಾನಿಗಳಿವೆ. ಕೆರೆ ಒತ್ತುವರಿ ತೆರವುಗೊಳಿಸುವಂತೆ ನ್ಯಾಯಾಲಯ ಆದೇಶಿಸಿದಲ್ಲಿ ಯಾವುದೇ ಹಿಂಜರಿಕೆಯಿಲ್ಲದೆ ಕ್ರಮ ತೆಗೆದುಕೊಳ್ಳಲು ಅಧಿಕಾರಿಗಳಿಗೆ ಸೂಚಿಸುತ್ತೇನೆ ಎಂದು ಹೇಳಿದರು.

ರಾಷ್ಟ್ರೀಯ ಹೆದ್ದಾರಿ 206 ಚತುಷ್ಪಥ ರಸ್ತೆಯ ಅಭಿವೃದ್ಧಿ ಯೋಜನೆಗೆ ಸುಮಾರು ೪೫ ಕೋಟಿ ರೂ. ಹೆಚ್ಚುವರಿಯಾಗಿ ಮಂಜೂರಾಗಿದ್ದು ರಸ್ತೆಯ ವಿಭಜಕದಲ್ಲಿ 0.9 ಮೀಟರ್ ಮೆರಿಡಿಯನ್ ನಿರ್ಮಾಣ ಮಾಡಲಾಗುವುದು. ಯೋಜನೆಯಡಿ ಸಣ್ಣಮನೆ ಸೇತುವೆಯನ್ನು ಅಭಿವೃದ್ಧಿಪಡಿಸುವ ಕಾಮಗಾರಿ ಚುರುಕಾಗಿ ನಡೆಯುತ್ತಿದೆ. ಮಾರ್ಕೆಟ್ ರಸ್ತೆ ಅಗಲೀಕರಣಕ್ಕೆ ಸಂಬಂಧಪಟ್ಟಂತೆ ಸ್ಥಳೀಯರು ಸ್ವಯಂಪ್ರೇರಿತರಾಗಿ ಮುಂದೆ ಬಂದಿದ್ದು ಶೀಘ್ರದಲ್ಲಿಯೆ ಕಾಮಗಾರಿ ಕೈಗೆತ್ತಿಕೊಳ್ಳಲಾಗುತ್ತದೆ. ಹಿಂದಿನ ಶಾಸಕರು ತಮ್ಮ ಗೂಂಡಾಗಳ ಮೂಲಕ ಭೂಸ್ವಾಧೀನಕ್ಕೆ ಮುಂದಾಗಿದ್ದರು. ನಾನು ಸ್ನೇಹದಿಂದ ಅವರ ಬಳಿ ಅಗಲೀಕರಣಕ್ಕೆ ಸಹಕಾರ ನೀಡುವಂತೆ ಕೋರಿದ್ದು ಅವರು ಪೂರಕವಾಗಿ ಸ್ಪಂದಿಸಿದ್ದಾರೆ ಎಂದು ಹೇಳಿದರು.

3 ಕೋಟಿ ರೂ. ವೆಚ್ಚದಲ್ಲಿ ಬೈಪಾಸ್ ನಿರ್ಮಾಣ, ಎಪಿಎಂಸಿ ಪ್ರಾಂಗಣ ಅಭಿವೃದ್ಧಿಗೆ 3 ಕೋಟಿ ರೂ., ಸಾಗರದ ಜೈಲಿನ ಕಾಂಪೌಂಡ್ ಉನ್ನತೀಕರಣಕ್ಕೆ 1.33 ಕೋಟಿ ರೂ. ಮಂಜೂರಾಗಿದೆ. ಗ್ರಾಮಾಂತರ ಶಾಲೆಗಳಿಗೆ ಪೀಠೋಪಕರಣ ಸೇರಿದಂತೆ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ 1.99 ಕೋಟಿ ರೂ. ಅನುದಾನ ಮಂಜೂರಾಗಿದೆ. ಸಾಗರ ಅಗ್ರಹಾರದಿಂದ ಹೆಗಡೆ ಫಾರ‍್ಮ್‌ವರೆಗೆ ಹೊಸನಗರ ರಸ್ತೆಯ ಅಗಲೀಕರಣಕ್ಕೆ ಆರು ಕೋಟಿ ರೂ. ಬಿಡುಗಡೆಯಾಗಿದೆ. ಸಾಗರ ನಗರದ ಕೆಳದಿ ರಾಣಿ ಚೆನ್ನಮ್ಮ ವೃತ್ತದಿಂದ ಶ್ರೀಗಂಧ ಕಾಂಪ್ಲೆಕ್ಸ್‌ವರೆಗೆ ರಸ್ತೆ ಅಗಲೀಕರಣಕ್ಕೆ ಚಾಲನೆ ನೀಡಲಾಗುತ್ತದೆ. ಚೆನ್ನಮ್ಮ ವೃತ್ತದಲ್ಲಿ ಕೆಳದಿ ರಾಣಿ ಚೆನ್ನಮ್ಮ ವಿಗ್ರಹವನ್ನು ಸ್ಥಾಪಿಸುವ ಚಿಂತನೆ ಇದೆ. ಈ ರಸ್ತೆಯನ್ನು ಯಾವುದೇ ತೆರವು ಪ್ರಕ್ರಿಯೆ ನಡೆಸದೆ ಚರಂಡಿ ಮೊದಲಾದ ಅಭಿವೃದ್ಧಿ ಕೆಲಸ ನಡೆಯಲಿದೆ ಎಂದರು.

ಹೊಸನಗರದ ಕುಡಿಯುವ ನೀರಿನ ಯೋಜನೆಗೆ 290 ಕೋಟಿ ರೂ. ಮಂಜೂರಾಗಿದ್ದು, ಗುತ್ತಿಗೆದಾರರ ನೇಮಕ ಆಗಿ ಈಗಾಗಲೇ ಕೆಲಸ ಆರಂಭವಾಗಿದೆ. ಎಂಎಡಿಬಿಯಿಂದ 32 ಲಕ್ಷ ಅಭಿವೃದ್ಧಿ ಕೆಲಸಕ್ಕೆ ಬಿಡುಗಡೆಯಾಗಿದೆ. ಎನ್‌ಎಚ್‌ನಲ್ಲಿ ಹಿಂದಿನ ಅವಧಿಯಲ್ಲಿ ಹಾಕಲಾಗಿರುವ ಕಳಪೆ ಗುಣಮಟ್ಟದ ದೀಪಗಳನ್ನು ತೆಗೆದು, ಹೊಸ ಮಾದರಿಯ ವಿದ್ಯುತ್ ಕಂಬ ಹಾಕುವುದು, ಮುಖ್ಯವಾಗಿ ಸುರಕ್ಷತೆಗೆ ಆದ್ಯತೆ ನೀಡಿ ರಸ್ತೆ ಕಾಮಗಾರಿ ಮುಗಿಸಲು ತೀರ್ಮಾನಿಸಲಾಗಿದ್ದು, ಗುತ್ತಿಗೆದಾರರೊಂದಿಗೂ ಸಭೆ ನಡೆಸಿದ್ದೇನೆ ಎಂದರು.

ನಮ್ಮ ಸರ್ಕಾರ ಅಧಿಕಾರಕ್ಕೆ ಬಂದು ಆರು ತಿಂಗಳು ಕಳೆದಿದೆ. ರಾಜ್ಯದಲ್ಲಿ ವಿವಿಧ ಯೋಜನೆಗಳಿಗಾಗಿ ಸರ್ಕಾರ 32 ಸಾವಿರ ಕೋಟಿ ರೂ. ಖರ್ಚು ಮಾಡಿದೆ. ಆರಂಭದಲ್ಲಿ ಸ್ವಲ್ಪ ಅಭಿವೃದ್ಧಿ ಹಿನ್ನೆಡೆ ಉಂಟಾಗಿದ್ದರೂ ಈಗ ಸರ್ಕಾರ ಸಮಗ್ರ ಪ್ರಗತಿ ಬಗ್ಗೆ ಹೆಚ್ಚಿನ ಗಮನ ಹರಿಸುತ್ತಿದೆ. ಸಾಗರಕ್ಕೆ ಮೆಡಿಕಲ್ ಕಾಲೇಜು, ಇಂಜಿನಿಯರಿಂಗ್ ಕಾಲೇಜು ತರುವ ಪ್ರಯತ್ನ ನಡೆಸಲಾಗುತ್ತಿದೆ ಎಂದರು.
ಈ ಸಂದರ್ಭದಲ್ಲಿ ಗಣಪತಿ ಮಂಡಗಳಲೆ, ಸುರೇಶಬಾಬು, ರೇಖಾ, ಟಿ.ಪಿ. ರಮೇಶ್, ಲಿಂಗರಾಜ್ ಆರೋಡಿ, ಮಂಜು ಬೆಳಲಮಕ್ಕಿ, ನಾರಾಯಣಪ್ಪ, ಶ್ರೀಧರ್ ಪಟೇಲ್, ಚಂದ್ರಶೇಖರ್ ಕಂಬಳಿಕೊಪ್ಪ, ಬಸವರಾಜ್ ಕುಗ್ವೆ, ಯಶವಂತ ಫಣಿ, ಆಟೋ ದಿನೇಶ್, ರವಿಕುಮಾರ್ ವೈ.ಕೆ. ಇನ್ನಿತರರು ಹಾಜರಿದ್ದರು.

ಟಾಪ್ ನ್ಯೂಸ್

Sunil-kumar

Investigation: ಬಂಟ್ವಾಳ, ಮಂಡ್ಯ ಘಟನೆ ತನಿಖೆ ಎನ್‌ಐಎಗೆ ವಹಿಸಲಿ: ಶಾಸಕ ಸುನಿಲ್‌ ಕುಮಾರ್‌

Cap-Brijesh-Chowta

Mangaluru: ಶಾಂತಿಭಂಗಕ್ಕೆ ಯತ್ನಿಸುವವರ ವಿರುದ್ಧ ಕಠಿನ ಕ್ರಮ: ಸಂಸದ ಚೌಟ ಆಗ್ರಹ

Cashews

Invention: ಗೇರು ಗಿಡಗಳ ಮಾಹಿತಿ ಪಡೆಯಲು ಟ್ರ್ಯಾಕಿಂಗ್‌ ಸಿಸ್ಟಮ್‌

Ullala-Eid

Eid: ಈದ್‌ ಮಿಲಾದ್‌ ಪ್ರಯುಕ್ತ ಉಳ್ಳಾಲದಲ್ಲಿ ಕಾಲ್ನಡಿಗೆ ಜಾಥಾ

Eid-Milad

Eid Milad Festival: ಕರಾವಳಿಯಾದ್ಯಂತ ಸಂಭ್ರಮದ ಈದ್‌ ಮಿಲಾದ್‌

Udupi ಗೀತಾರ್ಥ ಚಿಂತನೆ-37: ಕೃಷಿ, ಆರೋಗ್ಯ, ಕ್ರೀಡಾ ಕ್ಷೇತ್ರಕ್ಕೂ ಗೀತೆಯ ಪ್ರಭಾವ

Udupi ಗೀತಾರ್ಥ ಚಿಂತನೆ-37: ಕೃಷಿ, ಆರೋಗ್ಯ, ಕ್ರೀಡಾ ಕ್ಷೇತ್ರಕ್ಕೂ ಗೀತೆಯ ಪ್ರಭಾವ

RSS

RSS ವಿಜಯದಶಮಿಗೆ ಇಸ್ರೋದ ಮಾಜಿ ಅಧ್ಯಕ್ಷ ಅತಿಥಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BYV

Talk Fight: ಯಾರು ಏನೇ ಅಂದ್ರೂ ಬಿಜೆಪಿ ಕಾರ್ಯಕರ್ತರು ನನ್ನ ಒಪ್ಪಿದ್ದಾರೆ: ವಿಜಯೇಂದ್ರ

Thirthahalli: ಡಿಜೆ ಶಬ್ದಕ್ಕೆ ವೃದ್ಧ ದುರ್ಮರಣ

Thirthahalli: ಡಿಜೆ ಶಬ್ದಕ್ಕೆ ವೃದ್ಧ ದುರ್ಮರಣ

Nagamangala ಗಲಭೆಗೆ ಪಿಎಫ್ಐ,ಎಸ್‌ಡಿಪಿಐ ಕುಮ್ಮಕ್ಕು: ಈಶ್ವರಪ್ಪ

Nagamangala ಗಲಭೆಗೆ ಪಿಎಫ್ಐ,ಎಸ್‌ಡಿಪಿಐ ಕುಮ್ಮಕ್ಕು: ಈಶ್ವರಪ್ಪ

Sagara: ಅಕ್ರಮ ಮದ್ಯ ಮಾರಾಟ… ಆರೋಪಿ ಬಂಧನ

Sagara: ಅಕ್ರಮ ಮದ್ಯ ಮಾರಾಟ… ಆರೋಪಿ ಬಂಧನ

Court-Symbol

Court Order: ಲೈಂಗಿಕ ದೌರ್ಜನ್ಯ ಸಾಬೀತು; 70 ವರ್ಷದ ವೃದ್ಧನಿಗೆ 20 ವರ್ಷ ಜೈಲು ಶಿಕ್ಷೆ!

MUST WATCH

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

udayavani youtube

ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ

ಹೊಸ ಸೇರ್ಪಡೆ

Sunil-kumar

Investigation: ಬಂಟ್ವಾಳ, ಮಂಡ್ಯ ಘಟನೆ ತನಿಖೆ ಎನ್‌ಐಎಗೆ ವಹಿಸಲಿ: ಶಾಸಕ ಸುನಿಲ್‌ ಕುಮಾರ್‌

Cap-Brijesh-Chowta

Mangaluru: ಶಾಂತಿಭಂಗಕ್ಕೆ ಯತ್ನಿಸುವವರ ವಿರುದ್ಧ ಕಠಿನ ಕ್ರಮ: ಸಂಸದ ಚೌಟ ಆಗ್ರಹ

Cashews

Invention: ಗೇರು ಗಿಡಗಳ ಮಾಹಿತಿ ಪಡೆಯಲು ಟ್ರ್ಯಾಕಿಂಗ್‌ ಸಿಸ್ಟಮ್‌

Ullala-Eid

Eid: ಈದ್‌ ಮಿಲಾದ್‌ ಪ್ರಯುಕ್ತ ಉಳ್ಳಾಲದಲ್ಲಿ ಕಾಲ್ನಡಿಗೆ ಜಾಥಾ

Eid-Milad

Eid Milad Festival: ಕರಾವಳಿಯಾದ್ಯಂತ ಸಂಭ್ರಮದ ಈದ್‌ ಮಿಲಾದ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.