![mohan bhagwat](https://www.udayavani.com/wp-content/uploads/2025/02/mohan-bhagwat-415x249.jpg)
![mohan bhagwat](https://www.udayavani.com/wp-content/uploads/2025/02/mohan-bhagwat-415x249.jpg)
Team Udayavani, Nov 16, 2019, 3:08 AM IST
ಬೆಂಗಳೂರು: ಅಥಣಿ ಕ್ಷೇತ್ರದ ಉಪಚುನಾ ವಣೆಗೆ ಸ್ಪರ್ಧಿಸಲು ಟಿಕೆಟ್ ಸಿಗದ ಕಾರಣ ಮುನಿಸಿಕೊಂಡಿದ್ದ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಅವರೊಂದಿಗೆ ಮುಖ್ಯ ಮಂತ್ರಿ ಯಡಿಯೂರಪ್ಪ ಹಾಗೂ ಗೃಹ ಸಚಿವ ಬಸವರಾಜ ಬೊಮ್ಮಾಯಿ ಪ್ರತ್ಯೇಕವಾಗಿ ನಡೆಸಿದ ಮಾತುಕತೆ ಯಶಸ್ವಿಯಾಗಿದೆ.
ಅಥಣಿ ಹಾಗೂ ಕಾಗವಾಡ ಕ್ಷೇತ್ರದ ಅಭ್ಯರ್ಥಿಗಳ ಗೆಲುವಿಗೆ ಶ್ರಮಿಸುವುದಾಗಿ ಲಕ್ಷ್ಮಣ ಸವದಿ ಹೇಳುವ ಮೂಲಕ ಗೊಂದಲಕ್ಕೆ ತೆರೆ ಎಳೆದಿದ್ದಾರೆ. ಹಾಗಾಗಿ ಲಕ್ಷ್ಮಣ ಸವದಿ ಉಪಮುಖ್ಯಮಂತ್ರಿಯಾಗಿ ಮುಂದುವರಿಯಬೇಕಾದರೆ ವಿಧಾನ ಪರಿಷತ್ ಸದಸ್ಯರಾಗಿ ನೇಮಕವಾಗುವುದು ಅನಿವಾರ್ಯವಾಗಿದ್ದು, ಕುತೂಹಲ ಮೂಡಿಸಿದೆ.
ಅಥಣಿ ಕ್ಷೇತ್ರದಿಂದ ಅನರ್ಹ ಶಾಸಕ ಮಹೇಶ್ ಕುಮಟಳ್ಳಿಗೆ ಬಿಜೆಪಿ ಟಿಕೆಟ್ ಘೋಷಿಸಿರುವುದರಿಂದ ಬೇಸರ ಗೊಂಡಿದ್ದ ಲಕ್ಷ್ಮಣ ಸವದಿ ಗುರುವಾರ ರಾತ್ರಿ ಯಡಿಯೂ ರಪ್ಪ ಅವರನ್ನು ಭೇಟಿಯಾಗಿ ಟಿಕೆಟ್ಗೆ ಮನವಿ ಮಾಡಿದ್ದರೂ ಪ್ರಯೋಜನವಾಗಿರಲಿಲ್ಲ. ಶುಕ್ರವಾರವೂ ಯಡಿಯೂರಪ್ಪ ಅವರನ್ನು ಭೇಟಿಯಾದ ಸವದಿ ತಮಗೇ ಟಿಕೆಟ್ ನೀಡಬೇಕು ಎಂದು ಮನವಿ ಮಾಡಿದರು ಎನ್ನಲಾಗಿದೆ.
ಈ ವೇಳೆ ಯಡಿಯೂರಪ್ಪ, ತಮ್ಮ ಸ್ಥಾನದ ಬಗ್ಗೆ ಯಾವುದೇ ಆತಂಕ ಬೇಡ. ಪಕ್ಷದ ಅಭ್ಯರ್ಥಿಗಳ ಗೆಲುವಿಗೆ ಶ್ರಮಿಸಿ ಎಂದು ಸೂಚಿಸಿದರು. ಜತೆಗೆ ವಸ್ತುಸ್ಥಿತಿ ತಿಳಿಸಿ ಸಮಾಧಾನಪಡಿಸುವಂತೆ ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರಿಗೆ ಸೂಚಿಸಿದರು. ಅದರಂತೆ ಬಸವರಾಜ ಬೊಮ್ಮಾಯಿ ತಮ್ಮ ಕಾರಿನಲ್ಲೇ ಲಕ್ಷ್ಮಣ ಸವದಿ ಅವರನ್ನು ಮನೆಗೆ ಕರೆದೊಯ್ದು ನಡೆಸಿದ ಮಾತುಕತೆ ಯಶಸ್ವಿಯಾಯಿತು.
ಸವದಿ ಸ್ಥಾನಕ್ಕೆ ತೊಂದರೆಯಾಗದು: ಬಳಿಕ ಪ್ರತಿಕ್ರಿಯಿಸಿದ ಬಸವರಾಜ ಬೊಮ್ಮಾಯಿ, ಲಕ್ಷ್ಮಣ ಸವದಿ ಅವರ ಮನವೊಲಿಸುವ ಪ್ರಶ್ನೆ ಏನೂ ಇಲ್ಲ. ಮೊದಲಿ ನಿಂದಲೂ ಅವರು ಪಕ್ಷದ ಹಿರಿಯ ನಾಯಕರು. ರಾಜೀನಾಮೆ ನೀಡುವು ದಾಗಿ ಲಕ್ಷ್ಮಣ ಸವದಿ ಎಲ್ಲಿಯೂ ಹೇಳಿಲ್ಲ. ಅದೆಲ್ಲಾ ಸುಳ್ಳು. ಅವರ ಸ್ಥಾನಕ್ಕೆ ಯಾವುದೇ ತೊಂದ ರೆಯಾಗದಂತೆ ಪಕ್ಷ ನಿರ್ಧಾರ ಕೈಗೊಂಡಿದೆ. ಚುನಾವಣೆ ಸಂದರ್ಭ ಅಸಮಾಧಾನ ಸಹಜ. ಅದನ್ನು ನಿಭಾಯಿಸಲು ಮುಖ್ಯ ಮಂತ್ರಿಗಳು ಸಮರ್ಥರಿದ್ದಾರೆ ಎಂದು ಹೇಳಿದರು.
ರೋಷನ್ ಬೇಗ್ ಅವರಿಗೆ ಟಿಕೆಟ್ ನೀಡದಿರುವ ಬಗ್ಗೆ ಪ್ರತಿಕ್ರಿಯಿಸಿದ ಬಸವರಾಜ ಬೊಮ್ಮಾಯಿ, ಪಕ್ಷದ ಹೈಕಮಾಂಡ್ ರಾಜ್ಯ ಕೋರ್ ಕಮಿಟಿಯೊಂದಿಗೆ ಸುದೀರ್ಘ ಚರ್ಚೆ ನಡೆಸಿ ನಿರ್ಧಾರ ಕೈಗೊಂಡಿದೆ. ರೋಷನ್ ಬೇಗ್ ಅವರು ಪಕ್ಷ ಸೇರಲು ಐಎಂಎ ಹಾಗೂ ರುದ್ರೇಶ್ ಕೊಲೆ ಪ್ರಕರಣ ಕಾರಣವಲ್ಲ. ಅವರು ಸೇರ್ಪಡೆಯಾಗ ದಿರುವುದಕ್ಕೆ ರಾಜಕೀಯ ಕಾರಣವಿದೆ. ಪಕ್ಷೇತರವಾಗಿ ಸ್ಪರ್ಧೆ ಮಾಡಲು ರೋಷನ್ ಬೇಗ್ ಸ್ವತಂತ್ರರು ಎಂದು ತಿಳಿಸಿದರು.
ಡಿಸಿಎಂ ಲಕ್ಷ್ಮಣ ಸವದಿ ಮಾತನಾಡಿ, ನಮ್ಮ ಕಾರ್ಯಕರ್ತರು ಪಾದಯಾತ್ರೆ ನಡೆಸಲು ಉದ್ದೇಶಿಸಿದ್ದರು. ಕಾರ್ಯಕರ್ತರಿಗೆ ಅಸಮಾಧಾನ ಸಹಜ. ಆದರೆ ನಾನು ಪಕ್ಷದ ಶಿಸ್ತಿನ ಸಿಪಾಯಿ. ಪಾದಯಾತ್ರೆ ಬೇಡ ಎಂದು ತಡೆದಿದ್ದೇನೆ. ಅಥಣಿ, ಕಾಗವಾಡ ಕ್ಷೇತ್ರದಲ್ಲಿ ಅಭ್ಯರ್ಥಿಗಳ ಪರ ಕೆಲಸ ಮಾಡುತ್ತೇನೆಂದು ತಿಳಿಸಿದರು.
ಲಕ್ಷ್ಮಣ ಸವದಿಯವರು ಉಪಮುಖ್ಯ ಮಂತ್ರಿಯಾಗಿ ಎರಡೂವರೆ ತಿಂಗಳು ಕಳೆದಿದ್ದು, ಆರು ತಿಂಗಳೊಳಗೆ ವಿಧಾನಸಭೆ ಇಲ್ಲವೇ ವಿಧಾನ ಪರಿಷತ್ ಸದಸ್ಯರಾಗಬೇಕಿದೆ. ಸದ್ಯ ಅಥಣಿ ಕ್ಷೇತ್ರದ ಟಿಕೆಟ್ ಸಿಗದ ಕಾರಣ ಉಪಮುಖ್ಯಮಂತ್ರಿಯಾಗಿ ಮುಂದುವರಿ ಯಲು ಅವರು ವಿಧಾನ ಪರಿಷತ್ ಸದಸ್ಯರಾಗಿ ಆಯ್ಕೆಯಾಗಬೇಕಿದೆ. ಅದಕ್ಕಾಗಿ ಬಿಜೆಪಿ ವಿಧಾನ ಪರಿಷತ್ ಸದಸ್ಯರೊಬ್ಬರ ರಾಜೀನಾಮೆ ಪಡೆಯುವ ಮಾತುಗಳೂ ಇವೆ ಎನ್ನಲಾಗಿದೆ.
ತಮ್ಮನ್ನೇ ಹೊಣೆ ಮಾಡದಂತೆ ಮನವಿ: ಅಥಣಿ ಕ್ಷೇತ್ರದ ಚುನಾವಣಾ ಉಸ್ತುವಾರಿಯಾಗಿದ್ದು, ಒಂದೊಮ್ಮೆ ಚುನಾವಣೆಯಲ್ಲಿ ಸೋಲಾದರೆ ತನ್ನೊಬ್ಬನನ್ನೇ ಹೊಣೆ ಮಾಡಬಾರದು. ಬದಲಿಗೆ ಉಸ್ತುವಾರಿ ಯಾಗಿರುವ ಇತರರೂ ಹೊಣೆ ಹೊರಬೇಕು. ಪಕ್ಷದ ಅಭ್ಯರ್ಥಿಗಳ ಗೆಲುವಿಗೆ ನಾನು ಶ್ರಮಿಸುತ್ತೇನೆ ಎಂಬುದಾಗಿ ಲಕ್ಷ್ಮಣ ಸವದಿ ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರ ಬಳಿ ಹೇಳಿದ್ದಾರೆ ಎನ್ನಲಾಗಿದೆ.
ನಾನು ಆಲೋಚನೆ ಮಾಡುವ ಮೊದಲೇ ವರಿಷ್ಠರು ಆಲೋಚನೆ ಮಾಡಿದ್ದಾರೆ. ಚುನಾವಣೆಯಲ್ಲಿ ಸೋತವನನ್ನೇ ಉಪಮುಖ್ಯಮಂತ್ರಿ ಮಾಡಿದ್ದಾರೆ ಎಂದಾದರೆ ನನ್ನ ಭವಿಷ್ಯವನ್ನೂ ಅವರೇ ನೋಡಿಕೊಳ್ಳುತ್ತಾರೆ. ರಾಜಕೀಯದಲ್ಲಿ ಏರಿಳಿತಗಳು ಇರುತ್ತವೆ. ಏನೂ ಮಾಡಲಾಗದು.
-ಲಕ್ಷ್ಮಣ ಸವದಿ, ಉಪಮುಖ್ಯಮಂತ್ರಿ
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ
Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ
Bengaluru: 9 ವರ್ಷದಿಂದ ತಪ್ಪಿಸಿಕೊಂಡಿದ್ದ ಆರೋಪಿ ಪತ್ತೆಗೆ ಸುಳಿವು ನೀಡಿದ ಇನ್ಸ್ಟಾಗ್ರಾಮ್
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
You seem to have an Ad Blocker on.
To continue reading, please turn it off or whitelist Udayavani.