Lead Bank ಸಿಡಿ ರೇಷಿಯೋ: ಕೊನೆಯ ಸ್ಥಾನದಲ್ಲಿ ಉಡುಪಿ

ಲೀಡ್‌ ಬ್ಯಾಂಕ್‌ ಪ್ರಗತಿ ಪರಿಶೀಲನ ಸಭೆಗೆ ಬ್ಯಾಂಕ್‌ ಪ್ರತಿನಿಧಿಗಳೇ ಗೈರು

Team Udayavani, Jun 25, 2024, 11:20 PM IST

Lead Bank ಸಿಡಿ ರೇಷಿಯೋ: ಕೊನೆಯ ಸ್ಥಾನದಲ್ಲಿ ಉಡುಪಿ

ಮಣಿಪಾಲ: ಜಿಲ್ಲೆಯ ಲೀಡ್‌ ಬ್ಯಾಂಕ್‌ ಪ್ರಗತಿ ಪರಿಶೀಲನೆ ಸಭೆಗೆ ಪ್ರಮುಖ ಬ್ಯಾಂಕ್‌ಗಳ ಪ್ರತಿನಿಧಿಗಳು ಗೈರುಹಾಜರಾಗಿರುವುದಕ್ಕೆ ಜಿಲ್ಲಾ ಪಂಚಾಯತ್‌ ಸಿಇಒ ಪ್ರತೀಕ್‌ ಬಾಯಲ್‌ ತೀವ್ರ ಅಸಮಾಧಾನ ಹೊರಹಾಕಿ, ಈ ಬಗ್ಗೆ ಕೇಂದ್ರ ಹಣಕಾಸು ಸಚಿವಾಲಯ ಮತ್ತು ಬ್ಯಾಂಕಿಂಗ್‌ ವ್ಯವಹಾರಗಳ ಜಂಟಿ ಕಾರ್ಯದರ್ಶಿಯವರಿಗೆ ಪತ್ರ ಬರೆಯಲಾಗುವುದು ಎಂದು ಹೇಳಿದರು.

ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದ ಜಿ.ಪಂ. ಕಚೇರಿಯ ಡಾ| ವಿ.ಎಸ್‌.ಆಚಾರ್ಯ ಸಭಾಂಗಣದಲ್ಲಿ ಮಂಗಳವಾರ ಜಿಲ್ಲಾ ಲೀಡ್‌ ಬ್ಯಾಂಕ್‌ ಪ್ರಗತಿ ಪರಿಶೀಲನೆ ಸಭೆ ಹಮ್ಮಿಕೊಳ್ಳಲಾಗಿತ್ತು. ಆದರೆ, ಜಿಲ್ಲೆಯ ಪ್ರಮುಖ ಬ್ಯಾಂಕ್‌ಗಳ ಪ್ರತಿನಿಧಿಗಳೇ ಇರಲಿಲ್ಲ. ಇದಕ್ಕೆ ಸಿಟ್ಟಾದ ಸಿಇಒ ಅವರು, ಈ ಸಭೆ ಯಾಕಾಗಿ ಮಾಡಬೇಕು? ವಿವಿಧ ಯೋಜನೆಗಳ ಫ‌ಲಾನುಭವಿಗಳಿಗೆ ಸಾಲಸೌಲಭ್ಯ ಒದಗಿಸುವ ಬ್ಯಾಂಕ್‌ ಪ್ರತಿನಿಧಿಗಳೇ ನಿರ್ಲಕ್ಷ್ಯ ತೋರಿದರೆ ಹೇಗೆ? ಈ ರೀತಿಯಲ್ಲಿ ಸಭೆ ನಡೆಸುವ ಆವಶ್ಯಕೆಯಿಲ್ಲ. ವಾರದೊಳಗೆ ಪುನಃ ಸಭೆ ಆಯೋಜಿಸುವಂತೆ ಲೀಡ್‌ ಬ್ಯಾಂಕ್‌ ಅಧಿಕಾರಿಗಳಿಗೆ ನಿರ್ದೇಶಿಸಿದರು.

ಇಲಾಖೆಯ ಅಧಿಕಾರಿಗಳಿಗೆ ಸೂಚನೆ
ವಿವಿಧ ಇಲಾಖೆಯ ಅಧಿಕಾರಿಗಳು ಸರಕಾರದ ಯೋಜನೆಗಳನ್ನು ಜನರಿಗೆ ತಲುಪಿಸುವ ಕೆಲಸ ಮಾಡಬೇಕು. ಎಲ್ಲ ಯೋಜನೆಗಳ ಮಾಹಿತಿಯನ್ನು ಜನರಿಗೆ ನೀಡಬೇಕು ಮತ್ತು ಅದಕ್ಕೆ ಬ್ಯಾಂಕ್‌ಗಳ ಮೂಲಕ ಸಾಲಸೌಲಭ್ಯ ಸಿಗುತ್ತಿರುವ ಬಗ್ಗೆಯೂ ವಿವರ ನೀಡಬೇಕು. ಉಡುಪಿ ಯಂತಹ ಜಿಲ್ಲೆಯಲ್ಲಿ ಇಷ್ಟೊಂದು ವ್ಯವಸ್ಥೆ ಇದ್ದರೂ ಯೋಜನೆಗಳ ಅನು ಷ್ಠಾನ ಸಮರ್ಪಕವಾಗಿ ಆಗದೇ ಇರುವುದು ಸರಿಯಲ್ಲ. ಜನ ಸಾಮಾನ್ಯರು ವಾಣಿಜ್ಯೋದ್ಯಮಗಳಲ್ಲಿ ಬೆಳೆಯುವಂತೆ ಮಾಡಬೇಕು. ಮುಂದಿನ ಸಭೆಯಲ್ಲಿ ಈ ಬಗ್ಗೆ ಸ್ಪಷ್ಟ ಮಾಹಿತಿ ಇರಬೇಕು ಎಂದರು.

ಯಾವುದೇ ಯೋಜನೆಯ ಅರ್ಜಿ ಅಥವಾ ಪ್ರಸ್ತಾವನೆ ಇಲಾಖೆಯಿಂದ ಬ್ಯಾಂಕ್‌ಗೆ ಹೋದ ಸಂದರ್ಭದಲ್ಲಿ ಅದು ತಿರಸ್ಕೃತಗೊಂಡಲ್ಲಿ ಯಾಕೆ ಎಂಬುದನ್ನು ತಿಳಿಸಬೇಕು ಎಂದರು. ಆರ್‌ಬಿಐ ಪ್ರತಿನಿಧಿ ಇಳಾ ಶಾಹು ಮಾತನಾಡಿ, ಸಭೆಗೆ ಬಾರದ ಎಲ್ಲ ಬ್ಯಾಂಕ್‌ಗಳ ಪ್ರತಿನಿಧಿಗಳಿಗೂ ನೋಟಿಸ್‌ ನೀಡಲಾಗುವುದು ಎಂದರು. ನಬಾರ್ಡ್‌ ಡಿಡಿಎಂ ರಮೇಶ್‌ ಅವರು ಮಾತನಾಡಿದರು. ಎಸ್‌ಸಿಡಿಸಿಸಿ ಬ್ಯಾಂಕ್‌ ಕೇಂದ್ರ ಕಚೇರಿಯ ಡಿಜಿಎಂ ನಿತ್ಯಾನಂದ ಸೇರಿಗಾರ್‌ ಉಪಸ್ಥಿತರಿದ್ದರು.

ಗುರಿ ಮುಟ್ಟದ ಸಾಲ ವಿತರಣೆ ಯೋಜನೆ
ಕೃಷಿ ಹಾಗೂ ಕೃಷಿಯೇತರ ವಲಯದಲ್ಲಿ 2023-24ನೇ ಸಾಲಿನಲ್ಲಿ 13,877.95 ಕೋ.ರೂ. ಸಾಲಸೌಲಭ್ಯ ಒದಗಿಸುವ ಯೋಜನೆ ಹಾಕಿಕೊಳ್ಳಲಾಗಿತ್ತು. 2024ರ ಮಾರ್ಚ್‌ ಅಂತ್ಯಕ್ಕೆ 11,046.76 ಕೋ.ರೂ. ಸಾಲ ವಿತರಿಸಿ, ಶೇ.79.60ರಷ್ಟು ಗುರಿ ಸಾಧನೆ ಮಾಡಲಾಗಿದೆ. ಕೃಷಿಕರಿಗೆ ಸಾಲ ನೀಡಿಕೆಯಲ್ಲಿ ಶೇ.102.43ರಷ್ಟು ಸಾಧನೆಯಾಗಿದ್ದರೆ, ಕೃಷಿ ಮೂಲಸೌಕರ್ಯ ಸುಧಾರಣೆಯ ಸಾಲ ನೀಡಿಕೆ ಕೇವಲ ಶೇ.6.95ರಷ್ಟಿದೆ. ಕೃಷಿ ಪೂರಕ ಚಟುವಟಿಕೆಗಾಗಿ ಶೇ.33.96ರಷ್ಟು ಸಾಲ ನೀಡಲಾಗಿದೆ. ಸಣ್ಣ, ಮಧ್ಯಮ ಕೈಗಾರಿಕೆಗೆ ಶೇ.79.38ರಷ್ಟು, ಶಿಕ್ಷಣಕ್ಕೆ ಶೇ.57.6ರಷ್ಟು, ಮನೆ ನಿರ್ಮಾಣಕ್ಕೆ ಶೇ.33ರಷ್ಟು, ಸಾಮಾಜಿಕ ಮೂಲಸೌಕರ್ಯಕ್ಕೆ ಶೇ.0.14ರಷ್ಟು ಸೇರಿ ಒಟ್ಟಾರೆಯಾಗಿ ಆದ್ಯತ ವಲಯಕ್ಕೆ ಶೇ.65.65ರಷ್ಟು ಸಾಲ ನೀಡಲಾಗಿದೆ. ದುರ್ಬಲ ವರ್ಗಕ್ಕೆ ಶೇ/72.55ರಷ್ಟು ಹಾಗೂ ಆದ್ಯತೇತರ ವಲಯಕ್ಕೆ ಶೇ.125.55ರಷ್ಟು ಸಾಲ ನೀಡಲಾಗಿದೆ.

ಬ್ಯಾಂಕಿಂಗ್‌ ವ್ಯವಹಾರ ವೃದ್ಧಿ
ಜಿಲ್ಲೆಯ ಬ್ಯಾಂಕಿಂಗ್‌ ವ್ಯವಹಾರಗಳಲ್ಲಿ ವೃದ್ಧಿಯಾಗಿದೆ. ಸಿಡಿ ರೇಷಿಯೋ(ಸಾಲ ಮತ್ತು ಠೇವಣಿ ಅನುಪಾತ) ಕುಸಿತವಾಗಿದೆ. ಸಿಡಿ ರೇಷಿಯೋದಲ್ಲಿ ಉಡುಪಿಯು ರಾಜ್ಯದಲ್ಲಿಯೇ ಕೊನೆಯ ಸ್ಥಾನದಲ್ಲಿದೆ. ಕಳೆದ ವರ್ಷ ಶೇ. 46.06ರಷ್ಟಿದ್ದ ಸಿ.ಡಿ.ರೇಷಿಯೋ ಈ ಬಾರಿ 46.94ರಷ್ಟಾಗಿದೆ. ಶೇ.0.88ರಷ್ಟು ಏರಿಕೆಯಾಗಿದ್ದರೂ ನಿರೀಕ್ಷಿತ ಪ್ರಮಾಣದಲ್ಲಿ ಆಗಿಲ್ಲ. ಈ ನಿಟ್ಟಿನಲ್ಲಿ ಎಲ್ಲ ಬ್ಯಾಂಕ್‌ಗಳು ಸೂಕ್ತ ಯೋಜನೆ ರೂಪಿಸಿಕೊಳ್ಳಬೇಕು. ಬ್ಯಾಂಕಿಂಗ್‌ ವ್ಯವಹಾರದಲ್ಲಿ ಶೇ.11ರಷ್ಟು ವೃದ್ಧಿಯಾಗಿದೆ. ಈ ವರ್ಷದ ಮಾರ್ಚ್‌ ಅಂತ್ಯಕ್ಕೆ ಅದು 57,467 ಕೋಟಿ ರೂ.ಗೆ ಏರಿಕೆಯಾಗಿದೆ. ಒಟ್ಟು 5,973 ಕೋಟಿ ರೂ. ಬ್ಯಾಂಕಿಂಗ್‌ ವ್ಯವಹಾರದಲ್ಲಿ ಏರಿಕೆ ಕಂಡಿದೆ. ಬ್ಯಾಂಕ್‌ ಸಾಲ ನೀಡುವ ಪ್ರಮಾಣದಲ್ಲೂ ಏರಿಕೆಯಾಗಿದೆ. ಕಳೆದ ವರ್ಷ 16,241 ಕೋಟಿ ರೂ. ಸಾಲ ನೀಡಲಾಗಿತ್ತು.

ಟಾಪ್ ನ್ಯೂಸ್

July 4: ರಾಜ್ಯ ಬಿಜೆಪಿ ಕಾರ್ಯಕಾರಿಣಿ

July 4: ರಾಜ್ಯ ಬಿಜೆಪಿ ಕಾರ್ಯಕಾರಿಣಿ

Mann Ki Baat ಕಬ್ಬನ್‌ ಪಾರ್ಕ್‌ನಲ್ಲಿ ಸಂಸ್ಕೃತ ಕಲರವ: ಮೋದಿ ಮೆಚ್ಚುಗೆ

Mann Ki Baat ಕಬ್ಬನ್‌ ಪಾರ್ಕ್‌ನಲ್ಲಿ ಸಂಸ್ಕೃತ ಕಲರವ: ಮೋದಿ ಮೆಚ್ಚುಗೆ

DK Shivakumar ಅವಳಿ ಹುದ್ದೆ ಮೇಲೆ ಜಿ. ಪರಮೇಶ್ವರ್‌ ಬಾಂಬ್‌!

DK Shivakumar ಅವಳಿ ಹುದ್ದೆ ಮೇಲೆ ಜಿ. ಪರಮೇಶ್ವರ್‌ ಬಾಂಬ್‌!

Rain ಉಡುಪಿ,ದಕ್ಷಿಣ ಕನ್ನಡದಲ್ಲಿ ಸಾಧಾರಣ ಮಳೆ; ಕಾಂಕ್ರೀಟ್‌ ತೋಡು ಕುಸಿತ

Rain ಉಡುಪಿ,ದಕ್ಷಿಣ ಕನ್ನಡದಲ್ಲಿ ಸಾಧಾರಣ ಮಳೆ; ಕಾಂಕ್ರೀಟ್‌ ತೋಡು ಕುಸಿತ

Ullal ಮದನಿ ನಗರ ದುರಂತ: ಮೃತರ ಕುಟುಂಬಕ್ಕೆ ಪರಿಹಾರ ವಿತರಣೆ

Ullal ಮದನಿ ನಗರ ದುರಂತ: ಮೃತರ ಕುಟುಂಬಕ್ಕೆ ಪರಿಹಾರ ವಿತರಣೆ

Ullal ಕಡಲ್ಕೊರೆತ ಪ್ರದೇಶಗಳಿಗೆ ಸಂಸದ ಬ್ರಿಜೇಶ್‌ ಚೌಟ ಭೇಟಿ

Ullal ಕಡಲ್ಕೊರೆತ ಪ್ರದೇಶಗಳಿಗೆ ಸಂಸದ ಬ್ರಿಜೇಶ್‌ ಚೌಟ ಭೇಟಿ

Natural Disaster; ವಿಪತ್ತು ನಿರ್ವಹಣ ಯೋಜನೆ ವಿಕೇಂದ್ರೀಕರಣ : ಡಿಸಿ ಮುಲ್ಲೈ ಮುಗಿಲನ್

Natural Disaster; ವಿಪತ್ತು ನಿರ್ವಹಣ ಯೋಜನೆ ವಿಕೇಂದ್ರೀಕರಣ : ಡಿಸಿ ಮುಲ್ಲೈ ಮುಗಿಲನ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi ಆಟೋ ರಿಕ್ಷಾ ಢಿಕ್ಕಿ: ಕಾರು ಜಖಂ

Udupi ಆಟೋ ರಿಕ್ಷಾ ಢಿಕ್ಕಿ: ಕಾರು ಜಖಂ

Manipal ಗಸ್ತು ನಿರತ ಪೊಲೀಸ್‌ ಸಿಬಂದಿಗೆ ಸ್ಕೂಟರ್‌ ಢಿಕ್ಕಿ

Parkala: ಕೆರೆದಂಡೆ ನಾಲ್ಕನೇ ಬಾರಿ ಕುಸಿತ; ಜಿಲ್ಲಾಧಿಕಾರಿ ಭೇಟಿ, ಪರಿಶೀಲನೆ

Parkala: ಕೆರೆದಂಡೆ ನಾಲ್ಕನೇ ಬಾರಿ ಕುಸಿತ; ಜಿಲ್ಲಾಧಿಕಾರಿ ಭೇಟಿ, ಪರಿಶೀಲನೆ

Udupi “ದೊಡ್ಡ ಸಾಮಗರ ನಾಲ್ಮೊಗ’ ಗ್ರಂಥ ಲೋಕಾರ್ಪಣೆ

Udupi “ದೊಡ್ಡ ಸಾಮಗರ ನಾಲ್ಮೊಗ’ ಗ್ರಂಥ ಲೋಕಾರ್ಪಣೆ

Student ಇನ್‌ಸ್ಪಾಯರ್‌ ಅವಾರ್ಡ್‌ ಸ್ಪರ್ಧೆ: ಕಾರ್ಕಳದ ಮೂವರು ರಾಷ್ಟ್ರಮಟ್ಟಕ್ಕೆ

Student ಇನ್‌ಸ್ಪಾಯರ್‌ ಅವಾರ್ಡ್‌ ಸ್ಪರ್ಧೆ: ಕಾರ್ಕಳದ ಮೂವರು ರಾಷ್ಟ್ರಮಟ್ಟಕ್ಕೆ

MUST WATCH

udayavani youtube

ಸಂಸದೆ ಪ್ರಿಯಾಂಕಾ ಅಭಿನಂದನಾ‌ ಸಮಾವೇಶದಲ್ಲಿ ಸತೀಶ ಜಾರಕಿಹೊಳಿ ಭಾಷಣ

udayavani youtube

Congress ಪಾರ್ಟಿಯ ಯಾರೂ ನಮ್ಮನ್ನು ಸಂಪರ್ಕಿಸಿಲ್ಲ ಬಸವರಾಜ ಬೊಮ್ಮಾಯಿ

udayavani youtube

ರುಚಿ ರುಚಿ ಮನೆ ತಿಂಡಿ ಬೇಕು ಅನ್ನೋರು ವಿವಿ ಪುರಂಗೆ ಹೋಗಲೇಬೇಕು

udayavani youtube

ವಿಧಿಯಾಟಕ್ಕೆ ಬಲಿಯಾದ ಅಂಧರ ಪುಟ್ ಬಾಲ್ ತಂಡದ ಕ್ಯಾಪ್ಟನ್

udayavani youtube

ಮಾತು ಬರದ ಮಗುವಿಗೆ ಮಾತು ಬರಿಸಿದ ಕಾಪು ಮಾರಿಯಮ್ಮ | ಕಾಪುವಿನ ಅಮ್ಮನ ಪವಾಡ

ಹೊಸ ಸೇರ್ಪಡೆ

July 4: ರಾಜ್ಯ ಬಿಜೆಪಿ ಕಾರ್ಯಕಾರಿಣಿ

July 4: ರಾಜ್ಯ ಬಿಜೆಪಿ ಕಾರ್ಯಕಾರಿಣಿ

Mann Ki Baat ಕಬ್ಬನ್‌ ಪಾರ್ಕ್‌ನಲ್ಲಿ ಸಂಸ್ಕೃತ ಕಲರವ: ಮೋದಿ ಮೆಚ್ಚುಗೆ

Mann Ki Baat ಕಬ್ಬನ್‌ ಪಾರ್ಕ್‌ನಲ್ಲಿ ಸಂಸ್ಕೃತ ಕಲರವ: ಮೋದಿ ಮೆಚ್ಚುಗೆ

DK Shivakumar ಅವಳಿ ಹುದ್ದೆ ಮೇಲೆ ಜಿ. ಪರಮೇಶ್ವರ್‌ ಬಾಂಬ್‌!

DK Shivakumar ಅವಳಿ ಹುದ್ದೆ ಮೇಲೆ ಜಿ. ಪರಮೇಶ್ವರ್‌ ಬಾಂಬ್‌!

Rain ಉಡುಪಿ,ದಕ್ಷಿಣ ಕನ್ನಡದಲ್ಲಿ ಸಾಧಾರಣ ಮಳೆ; ಕಾಂಕ್ರೀಟ್‌ ತೋಡು ಕುಸಿತ

Rain ಉಡುಪಿ,ದಕ್ಷಿಣ ಕನ್ನಡದಲ್ಲಿ ಸಾಧಾರಣ ಮಳೆ; ಕಾಂಕ್ರೀಟ್‌ ತೋಡು ಕುಸಿತ

Ullal ಮದನಿ ನಗರ ದುರಂತ: ಮೃತರ ಕುಟುಂಬಕ್ಕೆ ಪರಿಹಾರ ವಿತರಣೆ

Ullal ಮದನಿ ನಗರ ದುರಂತ: ಮೃತರ ಕುಟುಂಬಕ್ಕೆ ಪರಿಹಾರ ವಿತರಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.