ಪರಿಸರಸ್ನೇಹಿ ಗಣೇಶೋತ್ಸವ ನಾಡಿನ ಜನತೆಯ ಸಂಕಲ್ಪವಾಗಲಿ


Team Udayavani, Sep 14, 2023, 10:44 PM IST

ganeshotsava

ಗಣಪನ ಹಬ್ಬವನ್ನು ಆಚರಿಸಲು ದೇಶಾದ್ಯಂತ ದಿನಗಣನೆ ಆರಂಭವಾಗಿದೆ. ಈಗಾಗಲೇ ಗಣೇಶನ ವಿಗ್ರಹಗಳ ತಯಾರಿಕೆ ಮತ್ತು ಮಾರಾಟ ಪ್ರಕ್ರಿಯೆ ಬಿರುಸುಗೊಂಡಿದೆ. ಗಣೇಶನ ಹಬ್ಬದ ಆಚರಣೆ ವೇಳೆ ಪರಿಸರದ ಮೇಲೆ ಯಾವುದೇ ಪ್ರತಿಕೂಲ ಪರಿಣಾಮ ಬೀರದಂತೆ ಮುನ್ನೆಚ್ಚರಿಕೆ ವಹಿಸುವಂತೆ ಸರಕಾರ ಮತ್ತು ವಿವಿಧ ಪರಿಸರಸ್ನೇಹಿ ಸಂಘಟನೆಗಳು ಸಾರ್ವಜನಿಕರಿಗೆ ಈಗಾಗಲೇ ಕರೆ ನೀಡಿವೆ. ಈ ನಿಟ್ಟಿನಲ್ಲಿ ಜನರು ಹೆಚ್ಚಿನ ಆಸಕ್ತಿ ತೋರಬೇಕಿದೆ.

ಗಣಪನ ಹಬ್ಬ ಎಂದಾಕ್ಷಣ ಮನೆಮನೆಗಳಲ್ಲಿ ಗಣಪತಿಯ ವಿಗ್ರಹವನ್ನು ಕೂರಿಸಿ ಭಕ್ತಿಯಿಂದ ಪೂಜಿಸಿ ಸಂಭ್ರಮಿಸುವುದು ವಾಡಿಕೆ. ಆದರೆ ಕಳೆದ ಕೆಲವು ವರ್ಷಗಳಿಂದೀಚೆಗೆ ಮಣ್ಣಿನ ವಿಗ್ರಹದ ಬದಲಿಗೆ ಪ್ಲಾಸ್ಟರ್‌ ಆಫ್ ಪ್ಯಾರಿಸ್‌(ಪಿಒಪಿ) ವಿಗ್ರಹಗಳನ್ನು ಮಾರುಕಟ್ಟೆಯಿಂದ ಖರೀದಿಸಿ ತಂದು ಪೂಜಿಸಿ ಅದನ್ನು ಜಲಮೂಲಗಳಲ್ಲಿ ವಿಸರ್ಜಿಸುವ ಕಾರ್ಯ ನಡೆಯುತ್ತಿದೆ. ಈ ಪಿಒಪಿ ವಿಗ್ರಹಗಳು ಹಗುರವಾಗಿರುವುದರಿಂದ ಮತ್ತು ಹೆಚ್ಚಿನ ಆಕರ್ಷಣೆಯನ್ನು ಹೊಂದಿರುವುದರಿಂದ ಈ ವಿಗ್ರಹಗಳತ್ತ ಜನರು ಸಹಜವಾಗಿಯೇ ಆಕರ್ಷಿತರಾಗುತ್ತಿದ್ದಾರೆ.

ಆದರೆ ಈ ಪಿಒಪಿ ವಿಗ್ರಹಗಳು ಪರಿಸರಕ್ಕೆ ಮಾರಕವಾಗಿದ್ದು ಜೀವಜಂತುಗಳ ಪ್ರಾಣಕ್ಕೇ ಕುತ್ತು ತರುತ್ತವೆ. ಈ ವಿಗ್ರಹಗಳ ತಯಾರಿ ಮತ್ತು ಮಾರಾಟವನ್ನು ರಾಜ್ಯದಲ್ಲಿ ನಿಷೇಧಿಸಲಾಗಿದೆ ಎಂಬುದನ್ನು ಜನರು ಮರೆಯಬಾರದು. ಈ ಹಿನ್ನೆಲೆಯಲ್ಲಿ ಜನರು ಗಣಪನ ಮಣ್ಣಿನ ವಿಗ್ರಹಗಳನ್ನು ಖರೀದಿಸಿ, ಮನೆಗೆ ತಂದು ಪೂಜಿಸುವುದು ಕೇವಲ ಪರಿಸರ ಮಾತ್ರವಲ್ಲದೆ ನಮ್ಮ ಆರೋಗ್ಯಕ್ಕೂ ಹಿತಕರ ಹಾಗೂ ಧಾರ್ಮಿಕ ದೃಷ್ಟಿಯಿಂದಲೂ ಶ್ರೇಯಸ್ಕರ. ಅಲ್ಲದೆ ಅರಿಶಿನ, ಗೋಮಯ, ವಿವಿಧ ಬೇಳೆಕಾಳುಗಳಿಂದ ತಯಾರಿಸಲಾದ ಗಣೇಶನ ವಿಗ್ರಹಗಳನ್ನು ಪೂಜಿಸುವುದು ಕೂಡ ಪರಿಸರಸ್ನೇಹಿ ನಡೆಯಾಗಿದೆ.

ಮಣ್ಣಿನ ವಿಗ್ರಹಗಳಿಗೆ ಬಣ್ಣ ಬಳಿಯುವ ಸಂದರ್ಭದಲ್ಲೂ ವಿಗ್ರಹ ತಯಾರಕರು ಎಚ್ಚರಿಕೆ ವಹಿಸುವುದು ಅತ್ಯವಶ್ಯ. ರಾಸಾಯನಿಕ ಬಣ್ಣಗಳ ಬದಲಾಗಿ ಸಸ್ಯಜನ್ಯ ಬಣ್ಣಗಳನ್ನು ಬಳಸುವುದರಿಂದ ಜಲಮೂಲಗಳು ಮಾಲಿನ್ಯಗೊಳ್ಳುವುದನ್ನು ತಡೆಯಬಹುದು. ಅಲ್ಲದೆ ಇಂಥ ಸಾವಯವ ಬಣ್ಣಗಳು ಜಲಮೂಲಗಳನ್ನು ಶುದ್ದೀಕರಿಸಲೂ ಸಹಕಾರಿ.

ಇನ್ನು ಸಾರ್ವಜನಿಕ ಗಣೇಶೋತ್ಸವ ಸಂದರ್ಭಗಳಲ್ಲಿ ಪ್ರಚಾರ ಮತ್ತು ಅಲಂಕಾರಕ್ಕೆ ಬಳಸಲಾಗುವ ಬ್ಯಾನರ್‌, ಬಂಟಿಂಗ್‌ಗಳಲ್ಲೂ ಪ್ಲಾಸ್ಟಿಕ್‌, ಪಿಒಪಿ, ಥರ್ಮಾಕೋಲ್‌ ಮತ್ತಿತರ ಪರಿಸರಕ್ಕೆ ಹಾನಿ ಮಾಡುವಂಥ ವಸ್ತುಗಳ ಬದಲಾಗಿ ಸಾಧ್ಯವಾದಷ್ಟು ಹತ್ತಿ ಬಟ್ಟೆಗಳನ್ನು ಬಳಸಲು ಸಂಘಟಕರು ಆಸಕ್ತಿ ತೋರಬೇಕು. ಹಬ್ಬದ ಆಚರಣೆ ವೇಳೆ ಹೆಚ್ಚಿನ ಶಬ್ದಮಾಲಿನ್ಯವಾಗದಂತೆ ಎಚ್ಚರಿಕೆ ವಹಿಸಬೇಕು. ಏಕಬಳಕೆಯ ಪ್ಲಾಸ್ಟಿಕ್‌ ಉತ್ಪನ್ನಗಳ ಬದಲಾಗಿ ಮರುಬಳಕೆಯ ಉತ್ಪನ್ನ ಅಥವಾ ಪರಿಸರಕ್ಕೆ ಪೂರಕವಾದ ಉತ್ಪನ್ನಗಳಿಗೆ ಆದ್ಯತೆ ನೀಡಬೇಕು. ಗಣಪನ ಅಲಂಕಾರಕ್ಕಾಗಿ ಬಳಸಲಾದ ಹೂವುಗಳನ್ನು ವಿಗ್ರಹಗಳಿಂದ ತೆಗೆದು ಆ ಬಳಿಕ ನೀರಿನಲ್ಲಿ ವಿಸರ್ಜಿಸುವುದರಿಂದ ಜಲ ಮಾಲಿನ್ಯವನ್ನು ತಪ್ಪಿಸಬಹುದಾಗಿದೆ. ದೇವರ ಅಲಂಕಾರ, ಪೂಜೆಗೆ ಬಳಸಲಾದ ಹೂವುಗಳನ್ನು ಲೋಬಾನ, ಸುಗಂಧ ದ್ರವ್ಯ ತಯಾರಿಗೆ ಬಳಸಬಹುದಾಗಿದೆ. ಇನ್ನು ತ್ಯಾಜ್ಯದ ಸಮರ್ಪಕ ವಿಲೇವಾರಿಗಾಗಿ ಸ್ಥಳೀಯಾಡಳಿತ ಸಂಸ್ಥೆಗಳೊಂದಿಗೆ ಸಾರ್ವಜನಿಕ ಗಣೇಶೋತ್ಸವ ಆಯೋಜಕರು ಕೈಜೋಡಿಸಬೇಕು.

ಗಣೇಶೋತ್ಸವವನ್ನು ಪರಿಸರಸ್ನೇಹಿಯಾಗಿ ಆಚರಿಸುವ ಮೂಲಕ ನಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳುವ ಮೂಲಕ ದೇಶಕ್ಕೆ ಮಾದರಿಯಾಗೋಣ. ಇದು ನಾಡಿನ ಜನತೆಯ ಒಕ್ಕೊರಲ ಸಂಕಲ್ಪವಾಗಲಿ.

 

ಟಾಪ್ ನ್ಯೂಸ್

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

nagavalli bangale kannada movie

Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು

ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Namma Santhe: ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

10-editorial

Editorial: ವಿದ್ಯಾರ್ಹತೆಗೆ ದೇಶವ್ಯಾಪಿ ಮಾನ್ಯತೆ, ಹೈಕೋರ್ಟ್‌ ತೀರ್ಪು ನ್ಯಾಯೋಚಿತ

13-editorial

Temperature: ಸಂಪಾದಕೀಯ-ತಾಪಮಾನ ಹೆಚ್ಚಳದ ಆತಂಕ: ಮುಂಜಾಗ್ರತೆಯೇ ಮದ್ದು

ಉಚಿತಗಳ ಆಮಿಷಗಳಿಗೆ ಕಡಿವಾಣ: ಚು.ಆಯೋಗ ಬದ್ಧತೆ ತೋರಲಿ

ಉಚಿತಗಳ ಆಮಿಷಗಳಿಗೆ ಕಡಿವಾಣ: ಚು.ಆಯೋಗ ಬದ್ಧತೆ ತೋರಲಿ

vidhana-Soudha

Editorial: ಪ್ರಾಥಮಿಕ ಶಾಲಾ ಶಿಕ್ಷಕರ ಪಠ್ಯೇತರ ಹೊರೆ ಇಳಿಸಿ

ಮಹಿಳಾ ಆರೋಪಿಗಳ ಬಂಧನ ವೇಳೆ ವಿವೇಚನೆ ಅತ್ಯವಶ್ಯ

ಮಹಿಳಾ ಆರೋಪಿಗಳ ಬಂಧನ ವೇಳೆ ವಿವೇಚನೆ ಅತ್ಯವಶ್ಯ

MUST WATCH

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

ಹೊಸ ಸೇರ್ಪಡೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

18

Uv Fusion: ಗೆಳೆತನವೆಂಬ ನಿಸ್ವಾರ್ಥ ಬಾಂಧವ್ಯ

17

Uv Fusion: ಎಡವುದು ಕೂಡ ಒಳ್ಳೆಯದೇ ಒಮ್ಮೊಮ್ಮೆ…

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.