ವಿಗ್ರಹ ನಕಲಿ ಅಲ್ಲ ಎಂದು ಪ್ರಮಾಣ ಮಾಡಲಿ:ಮುನಿಯಾಲು ಉದಯಕುಮಾರ್‌ ಶೆಟ್ಟಿ ಸವಾಲು

ಕಾರ್ಕಳದಲ್ಲಿ ಜಾತಿಗಳ ನಡುವೆ ವೈಷಮ್ಯದ ಬೀಜ ಬಿತ್ತಿ ಕಂದಕ ಮೂಡಿಸಿದ್ದಾರೆ.

Team Udayavani, Aug 7, 2024, 10:10 AM IST

ವಿಗ್ರಹ ನಕಲಿ ಅಲ್ಲ ಎಂದು ಪ್ರಮಾಣ ಮಾಡಲಿ ಮುನಿಯಾಲು ಉದಯಕುಮಾರ್‌ ಶೆಟ್ಟಿ ಸವಾಲು

ಕಾರ್ಕಳ: ಬೈಲೂರಿನ ಉಮಿಕ್ಕಳ ಬೆಟ್ಟದಲ್ಲಿ ಪ್ರತಿಷ್ಠಾಪಿಸಿದ ಪರಶುರಾಮ ವಿಗ್ರಹ ನಕಲಿ ಅಲ್ಲ. ಅಸಲಿ ಕಂಚಿನದ್ದೆ ಎಂದು ದೇವಸ್ಥಾನ, ದೈವಸ್ಥಾನ ಅಥವಾ ಪರಶುರಾಮ ಬೆಟ್ಟದ ಮೇಲೆ ಎಲ್ಲಿ ಬೇಕಾದರೂ ಶಾಸಕ ವಿ. ಸುನಿಲ್‌ಕುಮಾರ್‌ ಬಂದು ಪ್ರಮಾಣ ಮಾಡಲಿ ಎಂದು ಕಾಂಗ್ರೆಸ್‌ ಮುಖಂಡ ಮುನಿಯಾಲು ಉದಯಕುಮಾರ್‌ ಶೆಟ್ಟಿ ಹೇಳಿದರು.

ಕಾರ್ಕಳದಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಅವರು ಕಾರ್ಕಳದ ಚರಿತ್ರೆಯಲ್ಲಿ ಈ ಪರಿಸ್ಥಿತಿ ಬರುತ್ತದೆ ಎಂದು ಅಂದುಕೊಂಡಿರಲಿಲ್ಲ. ಬಾಯಿ ಚಪಲಕ್ಕೆ ಮಾತನಾಡುವವರಿಗೆ ಉತ್ತರ ನೀಡುವುದು ಪ್ರಜಾಪ್ರಭುತ್ವದಲ್ಲಿ ಅನಿವಾರ್ಯ. ನಕಲಿ ಮೂರ್ತಿ ಸ್ಥಾಪಿಸಿ ಧರ್ಮದ ವಿಷಯದಲ್ಲಿ ಇಡೀ ರಾಜ್ಯಕ್ಕೆ ಕಳಂಕ ತಂದಿದ್ದಾ ರೆ. ಆಗಿರುವ ತಪ್ಪನ್ನು ಮುಚ್ಚಿ ಹಾಕಲು ಪ್ರಯತ್ನಿಸುತ್ತಿದ್ದಾರೆ ಎಂದರು.

ಉಡುಪಿಯ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ನಡೆದ ಪ್ರತಿಭಟನೆಯಲ್ಲಿ ಕೆಲವರು ಮಾನಸಿಕ ಸ್ಥಿಮಿತ ಕಳೆದುಕೊಂಡಂತೆ
ಏನೇನೋ ಮಾತನಾಡಿದ್ದಾರೆ. ನಾನು ಧರಿಸಿದ್ದ ಉಡುಗೆಯ ಬಗ್ಗೆಯೂ ಮಾತನಾಡಿದ್ದಾರೆ. ಇನ್ನು ಮುಂದೆ ನಾನು ಬೇಕಾದರೆ ಅವರಲ್ಲಿ ಯಾವ ರೀತಿಯ ಉಡುಗೆ ಧರಿಸಬೇಕೆಂದು ಕೇಳಿಯೇ ಉಡುತ್ತೇನೆ ಎಂದರು.

ಕಾರ್ಕಳದಲ್ಲಿ ಜಾತಿಗಳ ನಡುವೆ ವೈಷಮ್ಯದ ಬೀಜ ಬಿತ್ತಿ ಕಂದಕ ಮೂಡಿಸಿದ್ದಾರೆ. ನಾನು ರಾಜಕೀಯಕ್ಕೆ ಬಂದಿರುವುದು ಒಳ್ಳೆಯ ಸಾಮಾಜಿಕ ಕಾರ್ಯ ನಡೆಸಲು. ಸುನಿಲ್‌ ಕುಮಾರ್‌ ಅವರ ಹಾಗೆ ಅಧಿಕಾರ, ದುಡ್ಡು ಗಳಿಸಲು ಅಲ್ಲ. ಇವರು ಕಾಂಗ್ರೆಸ್‌ನವರಿಗೆ ಮಾಡಿದ ಅನ್ಯಾಯವನ್ನು ಎಳೆಎಳೆಯಾಗಿ ಹೇಳಬಲ್ಲೆ ಎಂದರು.

ಈಗ ಬಿಜೆಪಿಯವರ ಬಾಯಿಯಲ್ಲಿ ಮಾಜಿ ಮುಖ್ಯಮಂತ್ರಿ ಎಂ. ವೀರಪ್ಪ ಮೊಲಿ ಹಾಗೂ ಮಾಜಿ ಶಾಸಕ ಗೋಪಾಲ ಭಂಡಾರಿಯವರ ಹೆಸರು ಬರುತ್ತಿರುವುದು ಒಳ್ಳೆಯ ವಿಷಯ. ಆದರೆ ಅದೇ ಚುನಾವಣೆಯ ಸಂದರ್ಭ ಅವರ ವಿರುದ್ಧ ಏನೇನೋ ಮಾತನಾಡಿರುವುದನ್ನು ಮರೆಯಲು ಸಾಧ್ಯವೇ ಎಂದು ಪ್ರಶ್ನಿಸಿದರು.

ಇಡೀ ಪ್ರತಿಮೆಯೇ ನಕಲಿ: ಶುಭದ ರಾವ್‌ ಕಾಂಗ್ರೆಸ್‌ ವಕ್ತಾರ ಶುಭದ ರಾವ್‌ ಮಾತನಾಡಿ, ಬೆಂಗಳೂರಿನಿಂದ ಪರಶುರಾಮನ ಮೂರ್ತಿಯ ಭಾಗಗಳನ್ನು ಪೊಲೀಸರು ವಶಕ್ಕೆ ಪಡೆದು ತಂದ ಬಳಿಕ ಇಡೀ ಪ್ರತಿಮೆಯೇ ನಕಲಿಯಾಗಿದೆ ಎಂದು
ಜಗಜ್ಜಾಹೀರಾಗಿದೆ. ಬೆಂಗಳೂರಿನಲ್ಲಿ ಪರಶುರಾಮನ ಮೂರ್ತಿಯ ಕಾಲು ಸೇರಿದಂತೆ ಸೊಂಟದ ಕೆಳಗಿನ ಎಲ್ಲ ಭಾಗಗಳು ದೊರೆತಿರುವುದರಿಂದ ಬೆಟ್ಟದ ಮೇಲೆ ಈಗ ಇರುವ ಭಾಗವೂ ನಕಲಿ ಎಂದು ಸಾಬೀತಾಗಿದೆ.

ಶಾಸಕರು ಕಳೆದ ಒಂದೂವರೆ ವರ್ಷದಿಂದ ನಿರಂತರವಾಗಿ ಹೇಳಿದ್ದ ಸುಳ್ಳು ಜಗತ್ತಿಗೆ ಗೊತ್ತಾಗಿದೆ. ಕಾರ್ಕಳ ಶಾಸಕರು ಕ್ಷಮಾಪಣೆ ಕೇಳಿ ಪ್ರಾಯಶ್ಚಿತ್ತದ ಸಲುವಾಗಿ ರಾಜೀನಾಮೆ ನೀಡಬೇಕೆಂದು ಆಗ್ರಹಿಸುತ್ತೇನೆ ಎಂದರು. ಬಿಪಿನ್‌ಚಂದ್ರಪಾಲ್‌ ನಕ್ರೆ, ವಿವೆಕಾನಂದ ಶೆಣೈ, ದಿನೇಶ್‌, ಅಜಿತ್‌ಕುಮಾರ್‌ ಹೆಗ್ಡೆ, ತಾರಾನಾಥ ಕೋಟ್ಯಾನ್‌, ದಿನೇಶ್‌ ಶೆಟ್ಟಿ, ಶಶಿಕಲಾ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

ಪ್ರತೀ ಪೇಜರ್‌ನಲ್ಲಿ 3 ಗ್ರಾಂ. ಸ್ಫೋಟಕ: ಪೇಜರಲ್ಲಿ ಸ್ಫೋಟಕ ಇಟ್ಟಿದ್ದು ಇಸ್ರೇಲ್‌ನ ಮೊಸಾದ್‌?

ಪ್ರತೀ ಪೇಜರ್‌ನಲ್ಲಿ 3 ಗ್ರಾಂ. ಸ್ಫೋಟಕ: ಪೇಜರಲ್ಲಿ ಸ್ಫೋಟಕ ಇಟ್ಟಿದ್ದು ಇಸ್ರೇಲ್‌ನ ಮೊಸಾದ್‌?

Legal Bid: ಯುರೋಪಿನಲ್ಲಿ 13,000 ಕೋಟಿ ರೂ. ಕಾನೂನು ಸಮರ ಗೆದ್ದ ಗೂಗಲ್‌!

Legal Bid: ಯುರೋಪಿನಲ್ಲಿ 13,000 ಕೋಟಿ ರೂ. ಕಾನೂನು ಸಮರ ಗೆದ್ದ ಗೂಗಲ್‌!

Mohana Singh: ತೇಜಸ್‌ ಯುದ್ಧ ವಿಮಾನಕ್ಕೆ ಮೊದಲ ಮಹಿಳಾ ಪೈಲಟ್‌ ಆಗಿ ಮೋಹನಾ ಸಿಂಗ್‌ ನೇಮಕ

Mohana Singh: ತೇಜಸ್‌ ಯುದ್ಧ ವಿಮಾನಕ್ಕೆ ಮೊದಲ ಮಹಿಳಾ ಪೈಲಟ್‌ ಆಗಿ ಮೋಹನಾ ಸಿಂಗ್‌ ನೇಮಕ

TTD: ತಿರುಪತಿ ಲಡ್ಡಿನಲ್ಲಿ ಪ್ರಾಣಿಗಳ ಕೊಬ್ಬು: ನಾಯ್ಡು ಆರೋಪಕ್ಕೆ YSR ಕಾಂಗ್ರೆಸ್ ತಿರುಗೇಟು

Laddoo: ತಿರುಪತಿ ಲಡ್ಡಿನಲ್ಲಿ ಪ್ರಾಣಿಗಳ ಕೊಬ್ಬು… YSR ಕಾಂಗ್ರೆಸ್ ವಿರುದ್ಧ ನಾಯ್ಡು ಆರೋಪ

Congress: ಮಹಿಳೆಯರಿಗೆ ಮಾಸಿಕ 2000, ಜಾತಿ ಸಮೀಕ್ಷೆ: ಹರಿಯಾಣ ಕೈ ಭರವಸೆ

Congress: ಮಹಿಳೆಯರಿಗೆ ಮಾಸಿಕ 2000, ಜಾತಿ ಸಮೀಕ್ಷೆ: ಹರಿಯಾಣ ಕೈ ಭರವಸೆ

3-rabakavi

Rabkavi Banhatti: ತೇರಿನ ಮೇಲಿನಿಂದ ಬಿದ್ದ ವ್ಯಕ್ತಿ ಸ್ಥಳದಲ್ಲೇ ಸಾವು

Ricky Ponting: ಡೆಲ್ಲಿಯಿಂದ ಪಂಜಾಬ್‌ ಗೆ ಬಂದ ರಿಕಿ ಪಾಂಟಿಂಗ್‌

Ricky Ponting: ಡೆಲ್ಲಿಯಿಂದ ಪಂಜಾಬ್‌ ಗೆ ಬಂದ ರಿಕಿ ಪಾಂಟಿಂಗ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-katapady

Katapady:ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಮೇಲೇರಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ವಾಹನ

Nirashritha

Udupi: ಭಿಕ್ಷುಕರ ಪರಿಹಾರ ಕೇಂದ್ರಕ್ಕೆ ಜಿಲ್ಲಾಡಳಿತದಲ್ಲಿ ಭಿಕ್ಷೆ ಬೇಡಬೇಕಾದ ಸ್ಥಿತಿ

Kapu2

ISPRL Programme: ಪಾದೂರು ಜಲ್ಲಿ ಕ್ರಷರ್‌: ಸರ್ವೆಗೆ ಬಂದ ಅಧಿಕಾರಿಗಳಿಗೆ ತಡೆ

THIRU

MAHE University: ವಾಗ್ಶಾ ವಿದ್ಯಾರ್ಥಿಗೆ ವಿಶ್ವ ಪಾಕಶಾಲೆ ಶ್ರೇಷ್ಠತೆ ಗರಿ

Tarpana

Konkani Movie: “ತರ್ಪಣ’ ಚಲನಚಿತ್ರಕ್ಕೆ ಅಂತಾರಾಷ್ಟ್ರೀಯ ಪ್ರಶಸ್ತಿ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

ಪ್ರತೀ ಪೇಜರ್‌ನಲ್ಲಿ 3 ಗ್ರಾಂ. ಸ್ಫೋಟಕ: ಪೇಜರಲ್ಲಿ ಸ್ಫೋಟಕ ಇಟ್ಟಿದ್ದು ಇಸ್ರೇಲ್‌ನ ಮೊಸಾದ್‌?

ಪ್ರತೀ ಪೇಜರ್‌ನಲ್ಲಿ 3 ಗ್ರಾಂ. ಸ್ಫೋಟಕ: ಪೇಜರಲ್ಲಿ ಸ್ಫೋಟಕ ಇಟ್ಟಿದ್ದು ಇಸ್ರೇಲ್‌ನ ಮೊಸಾದ್‌?

Legal Bid: ಯುರೋಪಿನಲ್ಲಿ 13,000 ಕೋಟಿ ರೂ. ಕಾನೂನು ಸಮರ ಗೆದ್ದ ಗೂಗಲ್‌!

Legal Bid: ಯುರೋಪಿನಲ್ಲಿ 13,000 ಕೋಟಿ ರೂ. ಕಾನೂನು ಸಮರ ಗೆದ್ದ ಗೂಗಲ್‌!

Mohana Singh: ತೇಜಸ್‌ ಯುದ್ಧ ವಿಮಾನಕ್ಕೆ ಮೊದಲ ಮಹಿಳಾ ಪೈಲಟ್‌ ಆಗಿ ಮೋಹನಾ ಸಿಂಗ್‌ ನೇಮಕ

Mohana Singh: ತೇಜಸ್‌ ಯುದ್ಧ ವಿಮಾನಕ್ಕೆ ಮೊದಲ ಮಹಿಳಾ ಪೈಲಟ್‌ ಆಗಿ ಮೋಹನಾ ಸಿಂಗ್‌ ನೇಮಕ

TTD: ತಿರುಪತಿ ಲಡ್ಡಿನಲ್ಲಿ ಪ್ರಾಣಿಗಳ ಕೊಬ್ಬು: ನಾಯ್ಡು ಆರೋಪಕ್ಕೆ YSR ಕಾಂಗ್ರೆಸ್ ತಿರುಗೇಟು

Laddoo: ತಿರುಪತಿ ಲಡ್ಡಿನಲ್ಲಿ ಪ್ರಾಣಿಗಳ ಕೊಬ್ಬು… YSR ಕಾಂಗ್ರೆಸ್ ವಿರುದ್ಧ ನಾಯ್ಡು ಆರೋಪ

Congress: ಮಹಿಳೆಯರಿಗೆ ಮಾಸಿಕ 2000, ಜಾತಿ ಸಮೀಕ್ಷೆ: ಹರಿಯಾಣ ಕೈ ಭರವಸೆ

Congress: ಮಹಿಳೆಯರಿಗೆ ಮಾಸಿಕ 2000, ಜಾತಿ ಸಮೀಕ್ಷೆ: ಹರಿಯಾಣ ಕೈ ಭರವಸೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.