ತುಳು ಚಿತ್ರರಂಗಕ್ಕೆ ಹೊಸ ಬೆಳಕಾಗಿ ಮೂಡಿಬರಲಿ: ಗಣೇಶ್ ರಾವ್
"ತುಡರ್' ತುಳು ಸಿನೆಮಾ ಕರಾವಳಿಯಾದ್ಯಂತ ತೆರೆಗೆ
Team Udayavani, Jun 15, 2024, 12:52 AM IST
ಮಂಗಳೂರು: ಸುಮುಖ ಪ್ರೊಡಕ್ಷನ್ಸ್ ಲಾಂಛನದಲ್ಲಿ ತಯಾರಾದ “ತುಡರ್’ ತುಳು ಸಿನೆಮಾ ಶುಕ್ರವಾರ ಕರಾವಳಿ ಜಿಲ್ಲೆಯಾದ್ಯಂತ ಬಿಡುಗಡೆಯಾಯಿತು. ಮಂಗಳೂರಿನ ಬಿಜೈನ ಭಾರತ್ ಸಿನಿಮಾಸ್ನಲ್ಲಿ ಬಿಡುಗಡೆ ಸಮಾರಂಭ ನಡೆಯಿತು.
ಕರಾವಳಿ ಗ್ರೂಪ್ ಆಫ್ ಎಜುಕೇಶನ್ ಸಂಸ್ಥೆಯ ಚೇರ್ಮನ್ ಗಣೇಶ್ ರಾವ್ ಮಾತನಾಡಿ, “ತುಡರ್’ ಅಂದರೆ ಕನ್ನಡದಲ್ಲಿ “ಬೆಳಕು’ ಎಂದರ್ಥ. ಒಂದು ಬೆಳಕಿನಿಂದ ಎಷ್ಟೋ ದೀಪಗಳನ್ನು ಬೆಳಗಿಸಬಹುದು. ಅದೇ ರೀತಿ ತುಡರ್ ಸಿನೆಮಾ ಚಿತ್ರರಂಗದಲ್ಲಿ ಹೊಸ ಬೆಳಕಾಗಿ ಮೂಡಿಬರಲಿ. ಸಮಾಜಕ್ಕೆ ಮನೋರಂಜನೆಯ ಜತೆಗೆ ಒಳ್ಳೆಯ ಸಂದೇಶ ನೀಡುವ ಸಿನೆಮಾಗಳು ಬರಲಿ ಎಂದು ಶುಭ ಹಾರೈಸಿದರು.
ನಟ ಅರವಿಂದ್ ಬೋಳಾರ್ ಮಾತನಾಡಿ, ತುಡರ್ ಸಿನೆಮಾ ವೀಕ್ಷಿಸಿದವರು ಚಿತ್ರತಂಡವನ್ನು ಮೆಚ್ಚಿ ಬೆನ್ನುತಟ್ಟಿದ್ದಾರೆ. ಈ ಸಿನೆಮಾ ಗೆಲ್ಲಲು ತುಳುವರು ಟಾಕಿಸ್ಗೆ ಹೋಗಿ ಸಿನೆಮಾ ನೋಡಬೇಕು ಎಂದರು. ನಿರ್ದೇಶಕ, ನಿರ್ಮಾಪಕ ವಿಜಯ ಕುಮಾರ್ ಕೊಡಿಯಾಲಬೈಲು ಮಾತಾಡಿ, ಸಿನೆಮಾಕುರಿತು ಎಲ್ಲೆಡೆ ಒಳ್ಳೆಯ ಮಾತುಗಳು ಕೇಳಿಬರುತ್ತಿವೆ. ಸಿನೆಮಾ ಗೆಲ್ಲಲು ತುಳು ವರ ಆಶೀರ್ವಾದ ಅಗತ್ಯ ಎಂದರು.
ದೈಜಿವರ್ಲ್ಡ್ ಸಂಸ್ಥೆಯ ಮುಖ್ಯಸ್ಥ ವಾಲ್ಟರ್ ನಂದಳಿಕೆ, ಭಾರತ್ ಸಿನೆಮಾಸ್ನ ಬಾಲಕೃಷ್ಣ ಶೆಟ್ಟಿ, ರವೀಂದ್ರ ಶೆಟ್ಟಿ ಉಳಿದೊಟ್ಟು, ಪತ್ರಕರ್ತ ಬಾಳ ಜಗನ್ನಾಥ ಶೆಟ್ಟಿ, ಮನೋಹರ್ ಶೆಟ್ಟಿ, ಉದಯ ಪೂಜಾರಿ ಬಲ್ಲಾಳ್ ಬಾಗ್, ಉಮೇಶ್ ರೈ ಪದವು ಮೇಗಿನಮನೆ, ಸ್ವರಾಜ್ ಶೆಟ್ಟಿ, ನಟ ಸಿದ್ದಾರ್ಥ್ ಶೆಟ್ಟಿ, ನಟಿ ದೀûಾ ಭಿಸೆ, ರೂಪ ವರ್ಕಾಡಿ, ನಿರ್ದೇಶಕ ತೇಜೇಶ್ ಪೂಜಾರಿ, ಪ್ರಕಾಶ್ ಮಹಾದೇವನ್, ವಿಲ್ಸನ್ ರೆಬೆಲ್ಲೋ, ವಿದ್ಯಾ, ಸಂಪತ್, ಹರೀಶ್ ಶೆಟ್ಟಿ, ವಿಕಾಸ್ ಪುತ್ರನ್, ಮೋಹನ್ ರಾಜ್, ಪ್ರೇಮ್ ಶೆಟ್ಟಿ ಸುರತ್ಕಲ್, ಹಂಚಿಕೆದಾರ ಸಚಿನ್ ಎಸ್. ಉಪ್ಪಿನಂಗಡಿ ಮತ್ತಿತರರು ಉಪಸ್ಥಿತರಿದ್ದರು. ಚಿರಾಗ್ ಬಜಾಲ್ ಕಾರ್ಯಕ್ರಮ ನಿರ್ವಹಿಸಿದರು.
ಮಂಗಳೂರಿನಲ್ಲಿ ರೂಪವಾಣಿ, ಭಾರತ್ ಸಿನಿಮಾಸ್, ಪಿವಿಆರ್, ಸಿನಿಪೊಲಿಸ್, ಸುರತ್ಕಲ್ನಲ್ಲಿ ಸಿನಿಗ್ಯಾ ಲಕ್ಸಿ, ಪಡುಬಿದ್ರೆಯಲ್ಲಿ ಭಾರತ್ ಸಿನಿಮಾಸ್, ಉಡುಪಿಯಲ್ಲಿ ಕಲ್ಪನಾ,ಭಾರತ್ ಸಿನಿಮಾಸ್, ಮಣಿಪಾಲದಲ್ಲಿ ಐನಾಕ್ಸ್, ಭಾರತ್ ಸಿನಿಮಾಸ್, ಕಾರ್ಕಳ ದಲ್ಲಿ ಪ್ಲಾನೆಟ್, ರಾ ಕಾ, ಪುತ್ತೂರಿನಲ್ಲಿ ಭಾರತ್ ಸಿನಿಮಾಸ್ ಬೆಳ್ತಂಗಡಿಯಲ್ಲಿ ಭಾರತ್ ಚಿತ್ರಮಂದಿರದಲ್ಲಿ ಬಿಡು ಗಡೆಯಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru: ರಾಷ್ಟ್ರೀಯ ಹೆದ್ದಾರಿಯಲ್ಲೇ ಹೊತ್ತಿ ಉರಿದ BMW ಕಾರು… ಪ್ರಯಾಣಿಕರು ಪಾರು
Mangaluru: ಮುಕ್ತಿ ಕಾಣದ “ಬ್ಲ್ಯಾಕ್ಸ್ಪಾಟ್’ಗಳು: ಮತ್ತಷ್ಟು ಹೆಚ್ಚುತ್ತಿರುವ ಅಪಘಾತಗಳು
Airport: ಭದ್ರತೆಯಿಂದ ಜೂಲಿ ನಿವೃತ್ತಿ: 8 ವರ್ಷಗಳಿಂದ ಸೇವೆಯಲ್ಲಿದ್ದ ಶ್ವಾನ
Mangaluru: “ಜನಸಂಖ್ಯಾ ಲಾಭಾಂಶ’ ಸದ್ಬಳಕೆಯಾಗಲಿ: ನ್ಯಾ| ಅಬ್ದುಲ್ ನಜೀರ್
Gulf Medical University: ವಿದ್ಯಾರ್ಥಿಗಳ ಪ್ರತಿಜ್ಞಾ ವಿಧಿ ಸ್ವೀಕಾರ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Food Adulteration: ನೀವೇ ಮನೆಯಲ್ಲಿ ಆಹಾರ ಕಲಬೆರಕೆಯನ್ನು ಪತ್ತೆ ಹಚ್ಚಿ!
BBK11: ಬಿಗ್ ಬಾಸ್ ಕನ್ನಡ-11ರ ಮೊದಲ ಅಧಿಕೃತ ಸ್ಪರ್ಧಿ ಇವರೇ ನೋಡಿ..
Dharwad; ಸಿದ್ದರಾಮಯ್ಯ ಮುಡಾ ಪ್ರಕರಣವನ್ನು ಸಿಬಿಐಗೆ ವಹಿಸಬೇಕು: ಪ್ರಹ್ಲಾದ ಜೋಶಿ
Theater, Stage Artist: ನಗುವಿನ ಸವಿ ಹಂಚಿದ ಅಮ್ಮ ಮನೋರಮಾ
Maharashtra ವಿಧಾನಸಭಾ ಚುನಾವಣೆ: ಸಿದ್ಧತೆ ಪರಿಶೀಲಿಸಿದ ಚುನಾವಣ ಆಯೋಗ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.