Udupi ಪರಂಪರೆಯ ಕೌಶಲ ಬೆಳೆಯಲಿ: ಪುತ್ತಿಗೆ ಶ್ರೀ

ಶ್ರೀಕೃಷ್ಣ ಸಪ್ತೋತ್ಸವ, ಕರಕುಶಲ ಪ್ರದರ್ಶನ, ಮಾರಾಟ ಮೇಳಕ್ಕೆ ಚಾಲನೆ

Team Udayavani, Aug 23, 2024, 1:09 AM IST

Udupi ಪರಂಪರೆಯ ಕೌಶಲ ಬೆಳೆಯಲಿ: ಪುತ್ತಿಗೆ ಶ್ರೀ

ಉಡುಪಿ: ಜಾಗತೀಕರಣದ ಪ್ರಭಾವದಿಂದ ಪಾರಂಪರಿಕ ಕರಕುಶಲತೆ ಕ್ಷೀಣಿಸುತ್ತಿದೆ. ಹೀಗಾಗಿ ಆಧುನಿಕ ಶಿಕ್ಷಣದ ಜತೆಗೆ ಮನೆತನದ ವೃತ್ತಿ ಹಾಗೂ ವಂಶ ಪರಂಪರೆಯ ಕೌಶಲವನ್ನು ಮಕ್ಕಳಿಗೆ ಕಲಿಸಬೇಕು ಎಂದು ಪರ್ಯಾಯ ಶ್ರೀ ಪುತ್ತಿಗೆ ಮಠದ ಶ್ರೀ ಸುಗುಣೇಂದ್ರತೀರ್ಥ ಸ್ವಾಮೀಜಿ ಹೇಳಿದರು.

ಗೀತಾ ಮಂದಿರದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಅಂಗವಾಗಿ 7 ದಿನ ನಡೆಯುವ ಶ್ರೀಕೃಷ್ಣ ಸಪ್ತೋತ್ಸವ ಹಾಗೂ ಸಂಜೀವಿನಿ ಸಂಘಗಳ ಸದಸ್ಯರಿಂದ ತಯಾರಿಸಲ್ಪಟ್ಟ ಕರಕುಶಲ ವಸ್ತುಗಳ ಪ್ರದರ್ಶನ ಹಾಗೂ ಮಾರಾಟ ಮೇಳಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಯಾವುದೇ ವಿಷಯದಲ್ಲಿ ಕೌಶಲ ಪಡೆಯಬೇಕು ಎಂಬುದು ಕೃಷ್ಣನ ಸಂದೇಶ. ಇದರ ಪ್ರತೀಕವಾಗಿ ಕರಕುಶಲ ವಸ್ತುಗಳ ಪ್ರದರ್ಶನವನ್ನು ಆಯೋಜಿಸಲಾಗಿದೆ. ಕೇಂದ್ರ ಸರಕಾರವೂ ಕೌಶಲ ಅಭಿವೃದ್ಧಿಗೆ ಪ್ರೋತ್ಸಾಹ ನೀಡುತ್ತಿರುವುದು ಉತ್ತಮ ಬೆಳವಣಿಗೆಯಾಗಿದೆ. ಮಾಸೋತ್ಸವದ ನಡುವೆ ಸಪ್ತೋತ್ಸವ ನಡೆಯುತ್ತಿದೆ. ಪರಸ್ಪರ ಒಬ್ಬರಿಗೊಬ್ಬರು ಸಮ್ಮಾನ ಮಾಡಿದರೆ ಸಮಾಜದಲ್ಲಿ ಏಕತೆ, ಒಗ್ಗಟ್ಟು ನೆಲೆಸಲು ಸಾಧ್ಯ ಎಂದರು.

ಕೆಲವು ಆಧುನಿಕ ನಿಯಮಾ ವಳಿಗಳಿಂದ ಎಲ್ಲ ಸಮಾಜದ ಮೇಲೂ ಹೊಡೆತ ಬೀಳುತ್ತಿದೆ. ಎಲ್ಲ ಮನೆಯ ಮಕ್ಕಳೂ ಡಾಕ್ಟರ್‌, ಎಂಜಿನಿಯರ್‌ ಆದರೆ ಇತರ ವೃತ್ತಿಯ ಮೇಲೆ ಪರಿಣಾಮ ಬೀರಲಿದೆ. ಈ ಬಗ್ಗೆ ಚಿಂತನೆ ನಡೆಸುವ ಕೆಲಸವಾಗಬೇಕು. ಎಲ್ಲ ಉದ್ದಿಮೆಗಳಲ್ಲಿಯೂ ಸಮತೋಲನ ಅತ್ಯಗತ್ಯ. ಹೊಟೇಲ್‌ ಉದ್ಯಮ, ಶಿಲ್ಪಿಗಳ ಕೊರತೆ ಈಗ ಕಂಡುಬರುತ್ತಿದೆ. ಮನೆತನದಲ್ಲಿ ಕಲಿತಿರುವ ವೃತ್ತಿಯನ್ನು ಯಾವತ್ತೂ ಮರೆಯಬಾರದು ಎಂದು ಶ್ರೀಗಳು ತಿಳಿಸಿದರು.

ಕಿರಿಯ ಶ್ರೀ ಸುಶ್ರೀಂದ್ರತೀರ್ಥ ಸ್ವಾಮೀಜಿ ಆಶೀರ್ವಚನ ನೀಡಿದರು.ಶಾಸಕ ಯಶ್‌ಪಾಲ್‌ ಎ.ಸುವರ್ಣ ಮಾತನಾಡಿ, ಕರಕುಶಲ ಉದ್ದಿಮೆಗಳಿಗೆ ಪ್ರೋತ್ಸಾಹ ನೀಡಿದಾಗ ಮತ್ತಷ್ಟು ಉದ್ದಿಮೆಗಳು ಅಭಿವೃದ್ಧಿ ಹೊಂದಲು ಸಾಧ್ಯವಿದೆ ಎಂದರು.

ಕಟಪಾಡಿ ಕಾಳಿಕಾಂಬಾ ದೇವ ಸ್ಥಾನದ ಧರ್ಮದರ್ಶಿ ಮುರಹರಿ ಆಚಾರ್ಯ ಅವರಿಗೆ ಕೃಷ್ಣಾನುಗ್ರಹ ಪ್ರಶಸ್ತಿ ನೀಡಿ ಸಮ್ಮಾನಿಸಲಾಯಿತು.

ಮಾಜಿ ಶಾಸಕ ಕೆ. ರಘಪತಿ ಭಟ್‌, ಜಿಲ್ಲಾಧಿಕಾರಿ ಡಾ| ಕೆ.ವಿದ್ಯಾಕುಮಾರಿ, ಉದ್ಯಮಿಗಳಾದ ಹರಿಪ್ರಸಾದ್‌ ರೈ, ಭುವನೇಂದ್ರ ಕಿದಿಯೂರು, ಸುರೇಂದ್ರ ಕಲ್ಯಾಣಪುರ, ಪ್ರದೀಪ್‌ ಕಲ್ಕೂರ, ಪ್ರೇಮ್‌ ಮಿನೇಜಸ್‌ ಉಪಸ್ಥಿತರಿದ್ದರು. ಪುತ್ತಿಗೆ ಮಠದ ರಮೇಶ್‌ ಭಟ್‌ ನಿರೂಪಿಸಿದರು.

ಕರಕುಶಲ ವಸ್ತುಗಳ ಪ್ರದರ್ಶನ
ಶ್ರೀಕೃಷ್ಣ ಮಠದ ಗೀತಾಮಂದಿರದಲ್ಲಿ ಆ.30ರವರೆಗೆ ಸಂಜೀವಿನಿ ಕರಕುಶಲ ವಸ್ತುಪ್ರದರ್ಶನ ಮತ್ತು ಮಾರಾಟ ಮೇಳ ಆಯೋಜಿಸಲಾಗಿದ್ದು, ವಿವಿಧ ಬಗೆಯ ಊದುಬತ್ತಿ, ಸೋಪುಗಳು, ಕಲಶ ಕನ್ನಡಿ, ಗೃಹಪ್ರವೇಶ ಪರಿಕರ, ಹಳದಿ ಕಾರ್ಯಕ್ರಮ ಸಾಮಗ್ರಿ, ದೇವರ ಹರಿವಾಣ, ತೋರಣಗಳು, ವಿವಿಧ ಚಿತ್ತಾರಗಳ ಪೈಟಿಂಗ್‌, ಸೀರೆ, ಕುಂಬಾರಿಕೆ ವಸ್ತುಗಳು ಗಮನಸೆಳೆಯುತ್ತಿವೆ. ಉಡುಪಿ, ಕಾಪು, ಶಿರ್ವ, ಚೇರ್ಕಾಡಿ, ಉದ್ಯಾವರ, ಉತ್ತರಕನ್ನಡ ಸಹಿತ ವಿವಿಧ ಭಾಗದಿಂದ ವಿವಿಧ ಉತ್ಪನ್ನಗಳನ್ನು ಮಾರಾಟ ಮಾಡಲಾಗುತ್ತಿದೆ.

ಟಾಪ್ ನ್ಯೂಸ್

“ಹಾಲಿನ ದರ ಹೆಚ್ಚಳ ಬಗ್ಗೆ ಸಿಎಂ ಸಿದ್ದರಾಮಯ್ಯ ನಿರ್ಧಾರ’: ಕೆಎಂಎಫ್ ಅಧ್ಯಕ್ಷ

KMF; “ಹಾಲಿನ ದರ ಹೆಚ್ಚಳ ಬಗ್ಗೆ ಸಿಎಂ ಸಿದ್ದರಾಮಯ್ಯ ನಿರ್ಧಾರ’: ಭೀಮಾ ನಾಯ್ಕ

Karnataka ಸುವರ್ಣ ಸಂಭ್ರಮದಲ್ಲಿ ಕನ್ನಡ ಜನೋತ್ಸವ

Karnataka ಸುವರ್ಣ ಸಂಭ್ರಮದಲ್ಲಿ ಕನ್ನಡ ಜನೋತ್ಸವ

Tungabhadra ಡ್ಯಾಂನ ಎಲ್ಲ 33 ಗೇಟ್‌ ಬದಲಿಸಲು ತಜ್ಞರ ಸಲಹೆ

Tungabhadra ಡ್ಯಾಂನ ಎಲ್ಲ 33 ಗೇಟ್‌ ಬದಲಿಸಲು ತಜ್ಞರ ಸಲಹೆ

modi (4)

Congress-NC ಮೈತ್ರಿಗೆ ಪಾಕ್‌ ಬೆಂಬಲ, 370ನೇ ವಿಧಿ ಮರುಸ್ಥಾಪನೆ ಅಸಾಧ್ಯ: ಪ್ರಧಾನಿ: ಮೋದಿ

High Court: ಬಾಂಬ್‌ ಸ್ಫೋಟ ಹೇಳಿಕೆ; ಶೋಭಾ ಕರಂದ್ಲಾಜೆ ಮೇಲಿನ ಕೇಸ್‌ ರದ್ದು

High Court: ಬಾಂಬ್‌ ಸ್ಫೋಟ ಹೇಳಿಕೆ; ಶೋಭಾ ಕರಂದ್ಲಾಜೆ ಮೇಲಿನ ಕೇಸ್‌ ರದ್ದು

High Court; “ಅರ್ಧ ಪಾಕಿಸ್ಥಾನ’: ಯತ್ನಾಳ್‌ ಹೇಳಿಕೆಗೆ ಹೈಕೋರ್ಟ್‌ ಸಿಟ್ಟು

High Court; “ಅರ್ಧ ಪಾಕಿಸ್ಥಾನ’: ಯತ್ನಾಳ್‌ ಹೇಳಿಕೆಗೆ ಹೈಕೋರ್ಟ್‌ ಸಿಟ್ಟು

Kasturi Rangan ವರದಿ ಹಿನ್ನೆಲೆ: ನಯನಾ ಮೋಟಮ್ಮ ರಾಜೀನಾಮೆ ಬೆದರಿಕೆ

Kasturi Rangan ವರದಿ ಹಿನ್ನೆಲೆ: ನಯನಾ ಮೋಟಮ್ಮ ರಾಜೀನಾಮೆ ಬೆದರಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udayavani.com “ನಮ್ಮನೆ ಕೃಷ್ಣ”: ಮೆಚ್ಚುಗೆ ಗಳಿಸಿದ 3ನೇ ರೀಲ್ಸ್ ಪ್ರಸಾರ

Udayavani.com “ನಮ್ಮನೆ ಕೃಷ್ಣ”: ತೃತೀಯ ಬಹುಮಾನ ಗಳಿಸಿದ ರೀಲ್ಸ್

ಮುನಿಯಾಲ್‌ ಇನ್ಸ್ಟಿಟ್ಯೂಟ್‌ ಆಫ್ ಆಯುರ್ವೇದ ಮೆಡಿಕಲ್‌ ಕಾಲೇಜು

Sep.20: ಮುನಿಯಾಲ್‌ ಇನ್ಸ್ಟಿಟ್ಯೂಟ್‌ ಆಫ್ ಆಯುರ್ವೇದ ಮೆಡಿಕಲ್‌ ಕಾಲೇಜು ಘಟಿಕೋತ್ಸವ

Udupi: ಯುಜಿಡಿ ಚೇಂಬರ್‌ ಅವ್ಯವಸ್ಥೆಗಿಲ್ಲ ಪರಿಹಾರ

Udupi: ಯುಜಿಡಿ ಚೇಂಬರ್‌ ಅವ್ಯವಸ್ಥೆಗಿಲ್ಲ ಪರಿಹಾರ

ಮಲ್ಪೆ ಸೈಂಟ್‌ಮೇರೀಸ್‌ ದ್ವೀಪದಲ್ಲಿ ಸ್ವತ್ಛತೆ

Malpe ಸೈಂಟ್‌ಮೇರೀಸ್‌ ದ್ವೀಪದಲ್ಲಿ ಸ್ವಚ್ಛತೆ

Udupi: ಜಿಲ್ಲಾ ಕ್ರೀಡಾಂಗಣದ ಸಿಂಥೆಟಿಕ್‌ ಟ್ರ್ಯಾಕ್‌ಗೆ ಹಾನಿ

Udupi: ಜಿಲ್ಲಾ ಕ್ರೀಡಾಂಗಣದ ಸಿಂಥೆಟಿಕ್‌ ಟ್ರ್ಯಾಕ್‌ಗೆ ಹಾನಿ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

“ಹಾಲಿನ ದರ ಹೆಚ್ಚಳ ಬಗ್ಗೆ ಸಿಎಂ ಸಿದ್ದರಾಮಯ್ಯ ನಿರ್ಧಾರ’: ಕೆಎಂಎಫ್ ಅಧ್ಯಕ್ಷ

KMF; “ಹಾಲಿನ ದರ ಹೆಚ್ಚಳ ಬಗ್ಗೆ ಸಿಎಂ ಸಿದ್ದರಾಮಯ್ಯ ನಿರ್ಧಾರ’: ಭೀಮಾ ನಾಯ್ಕ

firee

Bihar;ಜಮೀನು ವಿವಾದ: 21 ದಲಿತರ ಮನೆಗಳಿಗೆ ಬೆಂಕಿ

Karnataka ಸುವರ್ಣ ಸಂಭ್ರಮದಲ್ಲಿ ಕನ್ನಡ ಜನೋತ್ಸವ

Karnataka ಸುವರ್ಣ ಸಂಭ್ರಮದಲ್ಲಿ ಕನ್ನಡ ಜನೋತ್ಸವ

J-P-Nadda

PM ಮೋದಿಗೆ ಕಾಂಗ್ರೆಸಿಗರಿಂದ ಬೈಗುಳ: ಖರ್ಗೆ ಪತ್ರಕ್ಕೆ ನಡ್ಡಾ ತೀಕ್ಷ್ಣ ಪ್ರತ್ಯುತ್ತರ

Tungabhadra ಡ್ಯಾಂನ ಎಲ್ಲ 33 ಗೇಟ್‌ ಬದಲಿಸಲು ತಜ್ಞರ ಸಲಹೆ

Tungabhadra ಡ್ಯಾಂನ ಎಲ್ಲ 33 ಗೇಟ್‌ ಬದಲಿಸಲು ತಜ್ಞರ ಸಲಹೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.