ಲಾಕ್‌ಡೌನ್‌ ಸಂಕಷ್ಟ: ಚೈಲ್ಡ್‌ಲೈನ್‌ಗೆ ವಲಸೆ ಕಾರ್ಮಿಕರ ಆಹಾರ ಸಮಸ್ಯೆ ಕರೆಗಳು!


Team Udayavani, May 2, 2020, 5:43 AM IST

ಲಾಕ್‌ಡೌನ್‌ ಸಂಕಷ್ಟ: ಚೈಲ್ಡ್‌ಲೈನ್‌ಗೆ ವಲಸೆ ಕಾರ್ಮಿಕರ ಆಹಾರ ಸಮಸ್ಯೆ ಕರೆಗಳು!

ಸಾಂದರ್ಭಿಕ ಚಿತ್ರ.

ಮಂಗಳೂರು: ಸಂಕಷ್ಟದಲ್ಲಿರುವ ಮಕ್ಕಳ ರಕ್ಷಣೆಗಾಗಿ ತೊಡಗಿಸಿಕೊಂಡಿರುವ ಚೈಲ್ಡ್‌ಲೈನ್‌-1098ಕ್ಕೆ ಮಕ್ಕಳ ಸಂಬಂಧಿ ಸಮಸ್ಯೆಗಳ ಕರೆಗಳು ಹೆಚ್ಚಿನ ಸಂಖ್ಯೆಯಲ್ಲಿ ಬರುತ್ತವೆ. ಆದರೆ, ಲಾಕ್‌ಡೌನ್‌ ಅವಧಿಯಲ್ಲಿ ಬಂದ ಕರೆಗಳೆಲ್ಲವೂ ವಲಸೆ ಕಾರ್ಮಿಕರ ಸಮಸ್ಯೆ ಮತ್ತು ಆಹಾರ ಸಮಸ್ಯೆಗೆ ಸಂಬಂಧಿಸಿದವು.

ಕೋವಿಡ್- 19 ಭೀತಿಯಿಂದಾಗಿ ಮಾ. 23ರಿಂದ ಇಡೀ ಭಾರತವೇ ಲಾಕ್‌ಡೌನ್‌ ಆಗಿದೆ. ಕಳೆದೊಂದು ತಿಂಗಳಿನಿಂದ ಇಲ್ಲಿವರೆಗೆ ಲಾಕ್‌ಡೌನ್‌ ಪರಿಣಾಮವಾಗಿ ಕೆಲಸವಿಲ್ಲದೆ, ಸೇವಿಸಲು ಸರಿಯಾದ ಆಹಾರ ವ್ಯವಸ್ಥೆ ಇಲ್ಲದೆ ಹಲವಾರು ಮಂದಿ ಸಂಕಷ್ಟಕ್ಕೊಳಗಾಗಿದ್ದಾರೆ. ಅದರಲ್ಲೂ ಪ್ರಮುಖವಾಗಿ ಉತ್ತರ ಕರ್ನಾಟಕ ಭಾಗದಿಂದ ಬಂದ ವಲಸೆ ಕಾರ್ಮಿಕರೇ ಹೆಚ್ಚಿನ ಸಂಖ್ಯೆಯಲ್ಲಿ ಸಂಕಷ್ಟಕ್ಕೊಳಗಾಗಿದ್ದರು. ಹೆಚ್ಚಿನವರಿಗೆ ಜಿಲ್ಲಾಡಳಿತ, ವಿವಿಧ ಸಂಘ-ಸಂಸ್ಥೆಗಳ ಮುಖಾಂತರ ಆಹಾರ ವ್ಯವಸ್ಥೆ ಮಾಡಿದ್ದರೆ, ಕೆಲವರು ಆಹಾರ ಸಿಗದೇ ಪರದಾಟ ನಡೆಸಿದ್ದಾರೆ. ಅಂತಹವರ ಪೈಕಿ ಸುಮಾರು 50ಕ್ಕೂ ಹೆಚ್ಚು ಮಂದಿ ವಲಸೆ ಕಾರ್ಮಿಕರು ಮತ್ತು ಆಹಾರಕ್ಕೆ ಸಮಸ್ಯೆ ಇರುವವರು ಚೈಲ್ಡ್‌ಲೈನ್‌ ಸಂಖ್ಯೆ 1098ಕ್ಕೆ ಕರೆ ಮಾಡಿ ತಮ್ಮ ಸಮಸ್ಯೆಗಳನ್ನು ಪರಿಹರಿಸುವಂತೆ ಕೇಳಿಕೊಂಡಿದ್ದಾರೆ. ಆ ಮೂಲಕ ಮಕ್ಕಳ ಸಮಸ್ಯೆ ಪರಿಹಾರಕ್ಕಿರುವ ಚೈಲ್ಡ್‌ಲೈನ್‌ ಈ ಒಂದು ತಿಂಗಳ ಅವಧಿಯಲ್ಲಿ ಕಾರ್ಮಿಕರ ಸಮಸ್ಯೆಗಳನ್ನೂ ಆಲಿಸುವ ಕೆಲಸ ಮಾಡಿದೆ.

ಇಲಾಖೆಗೆ ತಿಳಿಸುವ ಕೆಲಸ
ಚೈಲ್ಡ್‌ಲೈನ್‌ಗೆ ಬಂದ ಕರೆಗಳು ನಮಗೆ ಸಂಬಂಧಪಟ್ಟವಲ್ಲ ಎಂದು ಸುಮ್ಮನಾಗದ ಚೈಲ್ಡ್‌ಲೈನ್‌ ಸಿಬಂದಿ ಕಾರ್ಮಿಕರು ಮತ್ತು ಸಂಕಷ್ಟದಲ್ಲಿರುವವರ ಎಲ್ಲ ಸಮಸ್ಯೆಗಳನ್ನು ಆಲಿಸಿ, ಅವರ ಮಾಹಿತಿ ಪಡೆದುಕೊಂಡು ಸಂಬಂಧಪಟ್ಟ ಇಲಾಖೆಗಳಿಗೆ ಹಸ್ತಾಂತರಿಸುವ ಕೆಲಸ ಮಾಡುತ್ತಿದ್ದಾರೆ. ಆ ಮೂಲಕ ಸಂಕಷ್ಟದಲ್ಲಿರುವವರ ಸಮಸ್ಯೆಗಳಿಗೆ ಸ್ಪಂದಿಸುತ್ತಿದ್ದಾರೆ.

ಮಕ್ಕಳ ಸಮಸ್ಯೆಗೆ ಶೂನ್ಯ ಕರೆ
ಮಕ್ಕಳಿಗೆ ಸಂಬಂಧಪಟ್ಟಂತಹ ಯಾವುದೇ ಕರೆಗಳು ಲಾಕ್‌ಡೌನ್‌ ಅವಧಿಯಲ್ಲಿ ಚೈಲ್ಡ್‌ಲೈನ್‌ಗೆ ಬಂದಿಲ್ಲ. ಬೇರೆ ದಿನಗಳಲ್ಲಿ ಮಕ್ಕಳ ಮೇಲಿನ ದೌರ್ಜನ್ಯ, ಮಕ್ಕಳ ಕಳ್ಳಸಾಗಾಣಿಕೆ, ಮಕ್ಕಳ ಭಿಕ್ಷಾಟನೆಗೆ ಸಂಬಂಧಿಸಿದ ಕರೆಗಳು ಹೆಚ್ಚಿನ ಸಂಖ್ಯೆಯಲ್ಲಿ ಬರುತ್ತಿದ್ದವು ಎನ್ನುತ್ತಾರೆ ಚೈಲ್ಡ್‌ಲೈನ್‌ ಸಿಬಂದಿ.

24 ಗಂಟೆ ಕೆಲಸ
18 ವರ್ಷ ಪ್ರಾಯದೊಳಗಿನ ಮಕ್ಕಳ ಮೇಲೆ ದೈಹಿಕ ಹಾಗೂ ಮಾನಸಿಕ ಹಿಂಸೆ, ಲೈಂಗಿಕ ದೌರ್ಜನ್ಯ, ಶೋಷಣೆಗಳು ಹಾಗೂ ಆಹಾರ, ವಸತಿ ಮತ್ತಿತರ ಮೂಲ ಆವಶ್ಯಕತೆಗಳಿಂದ ವಂಚಿತವಾದ ಮಕ್ಕಳು ಕಂಡುಬಂದರೆ, ಸಾರ್ವಜನಿಕರು ಉಚಿತ ಕರೆ ದೂರವಾಣಿ ಸಂಖ್ಯೆ 1098 ಇಲ್ಲಿಗೆ ಕರೆ ಮಾಡಿ ಮಾಹಿತಿ ನೀಡಲು ಅವಕಾಶವಿದೆ. ಚೈಲ್ಡ್‌ಲೈನ್‌ ದಿನದ 24 ಗಂಟೆಗಳೂ ಕೆಲಸ ನಿರ್ವಹಿಸುತ್ತಿದೆ.

 ಸಂಬಂಧಪಟ್ಟವರಿಗೆ ಹಸ್ತಾಂತರ
ಲಾಕ್‌ಡೌನ್‌ ಅವಧಿಯಲ್ಲಿ ಚೈಲ್ಡ್‌ಲೈನ್‌ಗೆ ಮಕ್ಕಳ ದೌರ್ಜನ್ಯ, ಭಿಕ್ಷಾಟನೆ, ಕಳ್ಳ ಸಾಗಾಟ ಸಂಬಂಧಿಸಿದ ಯಾವುದೇ ಕರೆಗಳು ಬಂದಿಲ್ಲ. ಆದರೆ, ವಲಸೆ ಕಾರ್ಮಿಕರಿಗೆ ಸಂಬಂಧಿಸಿದ ಮತ್ತು ಆಹಾರ ಸಮಸ್ಯೆ ಸಂಬಂಧಿಸಿದಂತೆ ಹೆಚ್ಚು ಕರೆಗಳು ಬಂದಿವೆ. ಸಂಬಂಧಪಟ್ಟ ಇಲಾಖೆ ಅಧಿಕಾರಿಗಳ ಗಮನಕ್ಕೆ ತಂದು ಈ ಸಮಸ್ಯೆ ಪರಿಹರಿಸುವ ಪ್ರಯತ್ನ ಮಾಡಲಾಗಿದೆ.
 - ಲವಿತಾ ಡಿ’ಸೋಜಾ
ಕೋ-ಆರ್ಡಿನೇಟರ್‌, ಚೈಲ್ಡ್‌ಲೈನ್‌

ಟಾಪ್ ನ್ಯೂಸ್

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vamanjoor Thiruvailuguthu Sankupoonja – Devupoonja Jodukare Kambala Result

Kambala Result: ವಾಮಂಜೂರು ತಿರುವೈಲುಗುತ್ತು ಸಂಕುಪೂಂಜ -ದೇವುಪೂಂಜ ಜೋಡುಕರೆ ಕಂಬಳ ಫಲಿತಾಂಶ

Dinesh-Gundurao

Congress: ದಲಿತ ಸಮಾವೇಶ ಯಾವ ರೀತಿ ಎಂಬ ಬಗ್ಗೆಯಷ್ಟೇ ಚರ್ಚೆ: ದಿನೇಶ್‌ ಗುಂಡೂರಾವ್‌

Mangaluru: ಮಾದಕ ವಸ್ತು ಸೇವನೆ; ಮೂವರು ವಶಕ್ಕೆ

Mangaluru: ಮಾದಕ ವಸ್ತು ಸೇವನೆ; ಮೂವರು ವಶಕ್ಕೆ

Mangaluru: ಬಾಲಕಿಗೆ ಕಿರುಕುಳ: ಅಂಗಡಿ ಮಾಲಕನಿಗೆ 5 ವರ್ಷ ಸಜೆ

Mangaluru: ಬಾಲಕಿಗೆ ಕಿರುಕುಳ: ಅಂಗಡಿ ಮಾಲಕನಿಗೆ 5 ವರ್ಷ ಸಜೆ

Arrested: ಜೂಜಾಟದ ಅಡ್ಡೆಗೆ ದಾಳಿ 20 ಮಂದಿಯ ಬಂಧನ

Arrested: ಜೂಜಾಟದ ಅಡ್ಡೆಗೆ ದಾಳಿ 20 ಮಂದಿಯ ಬಂಧನ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.