Udupi; ನಂಬಿದವರನ್ನು ಕಾಪಾಡುವ ಶ್ರೀಕೃಷ್ಣ : ಪುತ್ತಿಗೆ ಶ್ರೀ


Team Udayavani, Jan 19, 2024, 11:55 PM IST

Udupi; ನಂಬಿದವರನ್ನು ಕಾಪಾಡುವ ಶ್ರೀಕೃಷ್ಣ : ಪುತ್ತಿಗೆ ಶ್ರೀ

ಉಡುಪಿ: ಶ್ರೀ ಕೃಷ್ಣನ ಆರಾಧನೆಯಿಂದ ಕಲಿಯುಗದ ಸಾಧಕರಿಗೆ ಎಲ್ಲ ರೀತಿಯ ಅನುಗ್ರಹವಾಗಲಿ ಮತ್ತು ನಂಬಿದ ಭಕ್ತರನ್ನು ಕಾಪಾಡಲಿ ಎಂದು ಶ್ರೀ ಮಧ್ವಾಚಾರ್ಯರು ಶ್ರೀ ಕೃಷ್ಣ ದೇವರನ್ನು ಉಡುಪಿಯಲ್ಲಿ ಪ್ರತಿಷ್ಠಾಪಿಸಿದ್ದರು ಎಂದು ಪರ್ಯಾಯ ಪುತ್ತಿಗೆ ಮಠದ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರು ಹೇಳಿದರು.

ಮಧ್ವಾಚಾರ್ಯರ ವಿಷ್ಣುತತ್ತ್ವ ನಿರ್ಣಯಕ್ಕೆ ಬಹುಶ್ರುತ ವಿದ್ವಾಂಸ ಡಾ| ಬನ್ನಂಜೆ ಗೋವಿಂದಾಚಾರ್ಯರು ಬರೆದ ವ್ಯಾಖ್ಯಾನ ಕೃತಿಯನ್ನು ವೈಶಿಷ್ಟ ಪೂರ್ಣವಾಗಿ ರಾಜಾಂಗಣದಲ್ಲಿ ಶುಕ್ರವಾರ ಬಿಡುಗಡೆಗೊಳಿಸಿ ಶ್ರೀಪಾದರು ಆಶೀರ್ವಚನ ನೀಡಿದರು.

ಮಧ್ವಾಚಾರ್ಯರು ತತ್ತ್ವ ಅನುಸಂಧಾನ ತೊಂದರೆ ನಿವಾರಣೆಗಾಗಿ ಶ್ರೀಕೃಷ್ಣನನ್ನು ಪ್ರತಿಷ್ಠಾಪನೆಗೈದು ಸಾಧಕರ ಸಾಧನೆಗೆ ಬೇಕಾದ ವ್ಯವಸ್ಥೆ ಮಾಡಿ ಸಜ್ಜನರನ್ನು ಅನುಗ್ರಹಿಸಿದ್ದಾರೆ. ಕಲಿಯುಗದಲ್ಲಿ ಶ್ರೀಕೃಷ್ಣನ ಉಪಾಸನೆಯಿಂದ ಸರ್ವಾಭಿಷ್ಟ ಸಿದ್ಧಿಯಾಗುತ್ತದೆ. ಕೃಷ್ಣನ ಅನುಗ್ರಹ ಆಗಬೇಕಾದರೆ ಪ್ರತಿಷ್ಠಾಪಕರಾದ ಮಧ್ವಾಚಾರ್ಯರ ಸ್ಮರಣೆ ಮಾಡುವುದು ಅಗತ್ಯ. ಆಚಾರ್ಯರ ತಣ್ತೀದ ವ್ಯಾಪಕ ಪ್ರಚಾರವಾಗಬೇಕು. ಇದಕ್ಕೆ ವಿಶ್ವವ್ಯಾಪಿ ಮನ್ನಣೆ ಸಿಗುವಂತಾಗಬೇಕು ಎಂದು ಅನುಗ್ರಹಿಸಿದರು.

ಭಂಡಾರಕೇರಿ ಮಠಾಧೀಶರಾದ ಶ್ರೀ ವಿದ್ಯೆಶತೀರ್ಥ ಶ್ರೀಪಾದರು ಅನುಗ್ರಹಿಸಿ, ಭಗವದ್ಗೀತೆಯನ್ನು ನಾವು ನಿತ್ಯವೂ ಪಠನೆ ಮಾಡಬೇಕು ಎಂದರು.

ಪುತ್ತಿಗೆ ಮಠದ ಕಿರಿಯ ಯತಿ ಶ್ರೀ ಸುಶ್ರೀಂದ್ರತೀರ್ಥ ಶ್ರೀಪಾದರು ಆಶೀರ್ವಚನ ನೀಡಿದರು. ಹಿರಿಯ ವಿದ್ವಾಂಸ ಡಾ| ವ್ಯಾಸನಕೆರೆ ಪ್ರಭಂಜನಾ ಚಾರ್ಯ ಅವರಿಗೆ ಶ್ರೀಕೃಷ್ಣಾನುಗ್ರಹ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಶತಾವಧಾನಿ ಡಾ| ರಾಮನಾಥ ಆಚಾರ್ಯ, ವಿಜಯಸಿಂಹ ತೋಟಂತಿ ಲ್ಲಾಯ, ಮಾಜಿ ಸಚಿವ ಆರಗ ಜ್ಞಾನೇಂದ್ರ ಉಪಸ್ಥಿತರಿದ್ದರು. ಡಾ| ಗೋಪಾಲಾಚಾರ್ಯ ನಿರ್ವಹಿಸಿದರು.

ಭಂಡಾರಕೇರಿ ಮಠಾಧೀಶರಿಂದ ವಿರಚಿತ ‘ಶ್ರೀಗುರುವಿಜಯಗೀತೆ’ ಸಾಕ್ಷ್ಯಚಿತ್ರ ಪ್ರದರ್ಶಿಸಲಾಯಿತು. ವಿದ್ವಾನ್‌ ಸಂದೀಪ್‌ ನಾರಾಯಣ್‌ ಮತ್ತು ಬಳಗದಿಂದ ಕರ್ಣಾಟಕ ಶಾಸ್ತ್ರೀಯ ಸಂಗೀತ ಸಂಪನ್ನಗೊಂಡಿತು.

ಟಾಪ್ ನ್ಯೂಸ್

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

nagavalli bangale kannada movie

Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು

ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Namma Santhe: ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Tollywood: ಚಿತ್ರರಂಗಕ್ಕೆ N.T ರಾಮರಾವ್ ಪರಿಚಯಿಸಿದ್ದ ಹಿರಿಯ ನಟಿ ಕೃಷ್ಣವೇಣಿ ನಿಧನ

Tollywood: ಚಿತ್ರರಂಗಕ್ಕೆ N.T ರಾಮರಾವ್ ಪರಿಚಯಿಸಿದ್ದ ಹಿರಿಯ ನಟಿ ಕೃಷ್ಣವೇಣಿ ನಿಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Namma Santhe: ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

5

Kaup: ಶಿಲಾಮಯ ಗುಡಿಯ ಮೆರುಗು ಹೆಚ್ಚಿಸಿದ ಕಾರ್ಕಳ, ಸಿರಾದ ಕಲ್ಲು

4(1

Manipal: ನಮ್ಮ ಸಂತೆಯಲ್ಲಿ ಜನ ಸಾಗರ

Namma-SANTHE-1

Manipal: ನಮ್ಮ ಸಂತೆಗೆ ಎರಡನೇ ದಿನವೂ ಅಭೂತಪೂರ್ವ ಸ್ಪಂದನೆ: ಇಂದೇ ಕೊನೆಯ ದಿನ

8

Karkala: ಚಾರ್ಚ್‌ಗಿಟ್ಟ ಮೊಬೈಲ್‌ ಸ್ಫೋ*ಟ; ಮನೆಗೆ ಬೆಂಕಿ

MUST WATCH

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

ಹೊಸ ಸೇರ್ಪಡೆ

17

Uv Fusion: ಎಡವುದು ಕೂಡ ಒಳ್ಳೆಯದೇ ಒಮ್ಮೊಮ್ಮೆ…

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

16

Uv Fusion: ಪೆನ್ನಿಗೊಂದು ಕಥೆ

1-jama

Yakshagana; ಮೇಳದ ಯಜಮಾನಿಕೆ ಎಂದರೆ ಆನೆ ಸಾಕಿದ ಹಾಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.