Madanthyar: ಉದ್ಯೋಗ ಕೊಡಿಸುವುದಾಗಿ 19.90 ಲಕ್ಷ ರೂ. ವಂಚನೆ
Team Udayavani, Oct 8, 2024, 11:37 PM IST
ಮಡಂತ್ಯಾರು: ಟೆಲಿಗ್ರಾಂ ಆ್ಯಪ್ ಮೂಲಕ ಪರಿಚಯವಾದ ಅಪರಿಚಿತರು ತಾತ್ಕಾಲಿಕ ನೆಲೆಯಲ್ಲಿ ಉದ್ಯೋಗ ನೀಡುವುದಾಗಿ ನಂಬಿಸಿ ಕೊಯ್ಯೂರಿನ ವ್ಯಕ್ತಿಯೋರ್ವರಿಗೆ ಸುಮಾರು 19.90 ಲಕ್ಷ ರೂ. ವಂಚಿಸಿದ ಘಟನೆ ನಡೆದಿದೆ.
ಸೆ. 29ರಂದು ಮಲೆಬೆಟ್ಟು ಕೋಡಿಮಾರು ನಿವಾಸಿ ಅಮೃತೇಶ್ ಕುಮಾರ್ ಎ. ಅವರಿಗೆ ಟೆಲಿಗ್ರಾಂ ಆ್ಯಪ್ ಮೂಲಕ ಪರಿಚಯವಾದ ಅಪರಿಚಿತರು ತಾತ್ಕಾಲಿಕ ನೆಲೆಯಲ್ಲಿ ಉದ್ಯೋಗ ನೀಡುವುದಾಗಿ ಮೊಬೈಲ್ನಲ್ಲಿದ್ದ ಟೆಲಿಗ್ರಾಂ ಅಪ್ಲಿಕೇಶನ್ಗೆ ವೆಬ್ಸೈಟ್ನ ಲಿಂಕ್ ಅನ್ನು ಕಳುಹಿಸಿದ್ದರು. ಅದರಲ್ಲಿ ನೊಂದಾಯಿಸಿಕೊಂಡು ಆನ್ಲೈನ್ ವಸ್ತುಗಳನ್ನು ಉತ್ತೇಜಿಸಿದಲ್ಲಿ ಸಂಬಳದ ರೂಪದಲ್ಲಿ ಖಾತೆಗೆ ಹಣ ಜಮಾ ಮಾಡಲಾಗುವುದೆಂದು ತಿಳಿಸಿದ್ದ.
ಆತನ ಮಾತನ್ನು ನಂಬಿದ ಅಮೃತೇಶ್ ವಂಚಕರ ಸೂಚನೆಯಂತೆ ಲಿಂಕ್ ಅನ್ನು ತೆರೆದು ನೊಂದಾಯಿಸಿಕೊಂಡು ಅದರಲ್ಲಿ ನೀಡಿರುವ ಟಾಸ್ಕನ್ನು ಮುಂದುವರಿಸುತ್ತಾ ಹೋದಂತೆ ಅಪರಿಚಿತ ವ್ಯಕ್ತಿ ಹಂತ-ಹಂತವಾಗಿ 19,90,442 ರೂ. ಹಣವನ್ನು ವಿವಿಧ ಬ್ಯಾಂಕ್ ಖಾತೆಗೆ ವರ್ಗಾಯಿಸಿಕೊಂಡು ವಂಚಿಸಿದ್ದಾನೆ. ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Kateel: ಸಂಭ್ರಮದ ಲಲಿತಾ ಪಂಚಮಿ: 15 ಸಾವಿರಕ್ಕೂ ಮಿಕ್ಕಿ ಭಕ್ತರಿಗೆ ಶೇಷ ವಸ್ತ್ರ ವಿತರಣೆ
Belthangady: ವಿವಿಧೆಡೆ ಮಳೆ ಅಬ್ಬರ;ಘಾಟಿ ಪ್ರದೇಶದಲ್ಲಿ ಹೆಚ್ಚಿದ ಮಳೆ; ಉಕ್ಕಿ ಹರಿದ ನದಿಗಳು
PUC: ವಿಜ್ಞಾನದಲ್ಲಿ ಪ್ರೀತಂ, ವಾಣಿಜ್ಯದಲ್ಲಿ ಸಾನ್ವಿ, ಕಲಾ ವಿಭಾಗದಲ್ಲಿ ವೇದಾಂತ್ ಟಾಪರ್
Rain; ಶಂಕರನಾರಾಯಣ: ಮಳೆಗೆ ಅಪಾರ ಹಾನಿ: ಮರ ಬಿದ್ದು ಕಾರು ಜಖಂ
Udupi ಉಚ್ಚಿಲ ದಸರಾ 2024; ದಸರಾ ವೈಭವದ ಶೋಭೆ ಹೆಚ್ಚಿಸಿದ ಜನಸಾಗರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.