Mahalakshmi Temple Uchila: ಅ. 3- 12; ಉಚ್ಚಿಲ ದಸರಾ -2024 ವೈಭವ


Team Udayavani, Sep 26, 2024, 6:40 AM IST

Mahalakshmi Temple Uchila: ಅ. 3- 12; ಉಚ್ಚಿಲ ದಸರಾ -2024 ವೈಭವ

ಕಾಪು: ದ.ಕ. ಮೊಗವೀರ ಮಹಾಜನ ಸಂಘದ ಆಡಳಿತಕ್ಕೊಳಪಟ್ಟಿರುವ ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಭಕ್ತಾಭಿಮಾನಿಗಳ ಸಹಕಾರದೊಂದಿಗೆ ಮೂರನೇ ವರ್ಷದ ಉಡುಪಿ ಉಚ್ಚಿಲ ದಸರಾ-2024 ಕಾರ್ಯಕ್ರಮವು ಅ. 3ರಿಂದ 12ರ ವರೆಗೆ ಶ್ರೀಮತಿ ಶಾಲಿನಿ ಡಾ| ಜಿ. ಶಂಕರ್‌ ಸಭಾಂಗಣದಲ್ಲಿ ಜರಗಲಿದೆ ಎಂದು ದ.ಕ. ಮೊಗವೀರ ಮಹಾಜನ ಸಂಘದ ಗೌರವ ಸಲಹೆಗಾರ ನಾಡೋಜ ಡಾ| ಜಿ. ಶಂಕರ್‌ ಹೇಳಿದರು.

ಉಚ್ಚಿಲ ಮೊಗವೀರ ಭವನದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ದಸರಾ ಮಹೋತ್ಸವಕ್ಕೆ ಸಿದ್ಧತೆ ನಡೆಸಲಾಗುತ್ತಿದೆ. ಆಕರ್ಷಕ ಮಂಟಪದಲ್ಲಿ ನವದುರ್ಗೆಯರು ಮತ್ತು ಶಾರದಾ ಮಾತೆಯ ವಿಗ್ರಹಗಳನ್ನು ಪ್ರತಿಷ್ಠಾಪಿಸಿ 10 ದಿನಗಳ ಕಾಲ ಶಾಸ್ತ್ರೋಕ್ತವಾಗಿ ಪೂಜಿಸಲಾಗುವುದು. ಅ. 12ರಂದು ವೈಭವದ ಶೋಭಾಯಾತ್ರೆಯೊಂದಿಗೆ ಜಲಸ್ತಂಭನ ನಡೆಯಲಿದೆ ಎಂದರು.

ಎಂಆರ್‌ಜಿ ಗ್ರೂಫ್‌ ಅಧ್ಯಕ್ಷ ಡಾ| ಕೆ. ಪ್ರಕಾಶ್‌ ಶೆಟ್ಟಿ ಬಂಜಾರ ಅವರ ಪ್ರಾಯೋಜಕತ್ವದಲ್ಲಿ ಪಡುಬಿದ್ರಿ ಯಿಂದ ಕಾಪು ಸಮುದ್ರ ತೀರದ ದೀಪಸ್ತಂಭದವರೆಗೆ ನಡೆಸಲಾಗುವ ವಿದುದ್ದೀಪಾಲಂಕಾರವು ಅ.2ರಂದು ಸಂಜೆ 6.30ಕ್ಕೆ ಗಣ್ಯರ ಉಪಸ್ಥಿತಿಯಲ್ಲಿ ಉದ್ಘಾಟನೆಗೊಳ್ಳಲಿದೆ.

ದಸರಾ ಉದ್ಘಾಟನೆ
ಅ.3ರಂದು ಬೆಳಗ್ಗೆ 9ಕ್ಕೆ ನವದುರ್ಗೆಯರು ಮತ್ತು ಶಾರದಾ ಮಾತೆಯ ವಿಗ್ರಹಗಳನ್ನು ಕ್ಷೇತ್ರದ ತಂತ್ರಿ ಕುಕ್ಕಿಕಟ್ಟೆ ರಾಘವೇಂದ್ರ ತಂತ್ರಿ ಮತ್ತು ಪ್ರಧಾನ ಅರ್ಚಕ ರಾಘವೇಂದ್ರ ಉಪಾಧ್ಯಾಯರ ನೇತೃತ್ವದಲ್ಲಿ ಪ್ರತಿಷ್ಠಾಪನೆಗೊಳ್ಳಲಿದೆ.

10 ಗಂಟೆಗೆ ಜಿಲ್ಲಾಧಿಕಾರಿ ಸಹಿತ ಗಣ್ಯರು ಮತ್ತು ದಾನಿಗಳ ಉಪಸ್ಥಿತಿಯಲ್ಲಿ ಉಚ್ಚಿಲ ದಸರಾ ಉದ್ಘಾಟಿಸಲಾಗುವುದು. ಬಳಿಕ ಫಲಪುಷ್ಪ ಪ್ರದರ್ಶನ, ಗುಡಿ ಕೈಗಾರಿಕೆ ಪ್ರಾತ್ಯಕ್ಷಿಕೆ, ಜೀವಂತ ಮೀನುಗಳ ಪ್ರದರ್ಶನ, ಕೇಂದ್ರ ಮತ್ತು ರಾಜ್ಯ ಸರಕಾರಗಳಲ್ಲಿ ಲಭ್ಯವಿರುವ ಮೀನುಗಾರಿಕೆ ಯೋಜನೆಗಳ ಮಾಹಿತಿ ಮತ್ತು ಮೀನುಗಾರಿಕೆ ಪರಿಕರಗಳ ಪ್ರದರ್ಶನ ಮುಂತಾದವುಗಳ ಪ್ರದರ್ಶನ ಉದ್ಘಾಟನೆ, ದ.ಕ. ಮೊಗವೀರ ಮಹಾಜನ ಸಂಘದ 100ನೇ ವರ್ಷದ ನೆನಪಿಗೆ ನವೀಕರಿಸಲ್ಪಟ್ಟ ನೂತನ ಆಡಳಿತ ಕಛೇರಿಯ ಶುಭಾರಂಭಗೊಳ್ಳಲಿದೆ. ಸಂಜೆ 5ಕ್ಕೆ 10 ದಿನಗಳ ಕಾಲ ನಡೆಯುವ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ, ಭಜನೆ, ಧಾರ್ಮಿಕ ಸಭಾ ಕಾರ್ಯಕ್ರಮಗಳ ಉದ್ಘಾಟನೆ ನಡೆಯಲಿದೆ ಎಂದರು.

ಶ್ರೀ ಶರನ್ನವರಾತ್ರಿ ಮಹೋತ್ಸವ ಮತ್ತು ದಸರಾ ಉತ್ಸವ ಪ್ರಯುಕ್ತ ಶ್ರೀ ಕ್ಷೇತ್ರದಲ್ಲಿ ಪ್ರತೀ ದಿನ ಬೆಳಗ್ಗೆ ಚಂಡಿಕಾಹೋಮ, ಭಜನೆ, ಮಧ್ಯಾಹ್ನ ಅನ್ನಸಂತರ್ಪಣೆ, ಸಂಜೆ ಲಘು ಉಪಾಹಾರ, ಸುಮಂಗಲೆಯರಿಂದ ಸಾಮೂಹಿಕ ಕುಂಕುಮಾರ್ಚನೆ, ಧಾರ್ಮಿಕ ಪ್ರಚವನ, ಕಲೊ³àಕ್ತ ಪೂಜೆ, ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು, ಉಚ್ಚಿಲ ದಸರಾ ಮಹೋತ್ಸವದ ಮಹತ್ವದ ಬಗ್ಗೆ ವಿಶೇಷ ಲೇಸರ್‌ ಶೋ ನಡೆಯಲಿದೆ.

ಅ. 12ರಂದು ವಿಜಯ ದಶಮಿಯಂದು ಸಾಮೂಹಿಕ ಮಹಾಚಂಡಿಕಾ ಯಾಗ ಹಾಗೂ ಪೂರ್ಣಾಹುತಿ ನಡೆಯಲಿದೆ.

ಅ.12ರಂದು ಶೋಭಾಯಾತ್ರೆ
ಅ. 12ರಂದು ಮಧ್ಯಾಹ್ನ 2.30ಕ್ಕೆ ವಿಸರ್ಜನಾ ಪೂಜೆ, ಮಧ್ಯಾಹ್ನ 3ಕ್ಕೆ ಶೋಭಾಯಾತ್ರೆಗೆ ಚಾಲನೆ, ಸಂಜೆ 5 ಗಂಟೆಗೆ ಶೋಭಾಯಾತ್ರೆ ಹೊರಟು ಕಾಪು ದೀಪಸ್ತಂಭದ ಬಳಿಯಲ್ಲಿ ವಿಸರ್ಜನೆಗೊಳ್ಳಲಿದೆ.

ಆಗ ಬೋಟುಗಳಿಂದ ಸಮುದ್ರ ಮಧ್ಯೆ ಭವ್ಯ ವಿದ್ಯುದ್ದೀಪಾಲಂಕಾರ, ಆಕರ್ಷಕ ಸುಡುಮದ್ದು ಪ್ರದರ್ಶನ ಹಾಗೂ ನವದುರ್ಗೆಯರಿಗೆ, ಶಾರದಾ ಮಾತೆ ಹಾಗೂ ಅಂಬಾರಿ ಹೊತ್ತ ಆನೆಗೆ ಡ್ರೋನ್‌ ಮೂಲಕ ಪುಷ್ಪಾರ್ಚನೆ, ರಾತ್ರಿ ಸುಮಂಗಲೆಯ ವರಿಂದ ಸಾಮೂಹಿಕ ಮಂಗಳಾರತಿ, ಅರ್ಚಕರಿಂದ ಗಂಗಾರತಿ ನಡೆಯಲಿದೆ ಎಂದರು.

ದ. ಕ. ಮೊಗವೀರ ಮಹಾಜನ ಸಂಘದ ಅಧ್ಯಕ್ಷ ಜಯ ಸಿ. ಕೋಟ್ಯಾನ್‌, ದೇವಸ್ಥಾನದ ಕ್ಷೇತ್ರಾಡಳಿತ ಸಮಿತಿ ಅಧ್ಯಕ್ಷ ಗಿರಿಧರ್‌ ಸುವರ್ಣ, ದಸರಾ ಸಮಿತಿ ಅಧ್ಯಕ್ಷ ವಿನಯ್‌ ಕರ್ಕೇರ ಮಲ್ಪೆ, ಮಹಾಜನ ಸಂಘದ ಉಪಾಧ್ಯಕ್ಷ ಮೋಹನ್‌ ಬೇಂಗ್ರೆ, ಪ್ರ. ಕಾರ್ಯದರ್ಶಿ, ಕೋಶಾಧಿಕಾರಿ ರತ್ನಾಕರ ಸಾಲ್ಯಾನ್‌, ಜ. ಕಾರ್ಯದರ್ಶಿ ಸುಜಿತ್‌ ಸಾಲ್ಯಾನ್‌, ಪ್ರಬಂಧಕ ಸತೀಶ್‌ ಅಮೀನ್‌ ಪಡುಕೆರೆ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

K. Lakshminarayanana: ಬೈಂದೂರು ಕ್ಷೇತ್ರದ ಮಾಜಿ ಶಾಸಕ ಕೆ. ಲಕ್ಷ್ಮೀ ನಾರಾಯಣ ನಿಧನ

K. Lakshminarayanana: ಬೈಂದೂರು ಕ್ಷೇತ್ರದ ಮಾಜಿ ಶಾಸಕ ಕೆ. ಲಕ್ಷ್ಮೀ ನಾರಾಯಣ ನಿಧನ

2-bng

Bengaluru: ಮದುವೆ ಮರೆಮಾಚಿದಕ್ಕೆ 59 ತುಂಡು ಮಾಡಿ ಹತ್ಯೆ

MCD ಸ್ಥಾಯಿ ಸಮಿತಿ ಸ್ಥಾನಕ್ಕೆ ಇಂದೇ ಚುನಾವಣೆ… ಮಧ್ಯಾಹ್ನ 1 ಗಂಟೆಗೆ ಮುಹೂರ್ತ ಫಿಕ್ಸ್

MCD ಸ್ಥಾಯಿ ಸಮಿತಿ ಸ್ಥಾನಕ್ಕೆ ಇಂದೇ ಚುನಾವಣೆ… ಮಧ್ಯಾಹ್ನ 1 ಗಂಟೆಗೆ ಮುಹೂರ್ತ ಫಿಕ್ಸ್

World Tourism Day: ಹಂಪಿ ಪಯಣದ ಹ್ಯಾಪಿ ಕಥನ

World Tourism Day: ಹಂಪಿ ಪಯಣದ ಹ್ಯಾಪಿ ಕಥನ

SEMI-Cond

World Digital Revolution: ಜಾಗತಿಕ ರಾಜಕಾರಣಕ್ಕೆ ಸೆಮಿಕಂಡಕ್ಟರ್‌

CM-Mysore1

MUDA Scam: ಇಂದು ಸಿಎಂ ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತದಲ್ಲಿ ಎಫ್ಐಆರ್‌ ಸಾಧ್ಯತೆ

Sky-dia

Tourism Spot: ರಾಜ್ಯದ ಎರಡನೇ “ಸ್ಕೈ ಡೈನಿಂಗ್‌’ ತಾಣವಾಗಲಿದೆ ಕುಂದಾಪುರದ ತ್ರಾಸಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi-DC

Udupi: ಸೆಪ್ಟೆಂಬರ್ 28-29: ದಸರಾ ಕ್ರೀಡಾಕೂಟ

Santhekatte Road ; ಸ್ವಾಮಿ, ನಮ್ಮ ಗೋಳನ್ನೂ ಕೇಳಿ ಸ್ವಲ್ಪ

Santhekatte Road ; ಸ್ವಾಮಿ, ನಮ್ಮ ಗೋಳನ್ನೂ ಕೇಳಿ ಸ್ವಲ್ಪ

Udupi: ಜಿಲ್ಲಾಸ್ಪತ್ರೆಯಲ್ಲಿ ಸ್ಕ್ಯಾನಿಂಗ್‌, ಎಂಆರ್‌ಐ ಸೇವೆ ವ್ಯತ್ಯಯ

Udupi: ಜಿಲ್ಲಾಸ್ಪತ್ರೆಯಲ್ಲಿ ಸ್ಕ್ಯಾನಿಂಗ್‌, ಎಂಆರ್‌ಐ ಸೇವೆ ವ್ಯತ್ಯಯ

Udupi: ಗೀತಾರ್ಥ ಚಿಂತನೆ-47: ಅಪರೋಕ್ಷಜ್ಞಾನದ ಬಳಿಕವೂ ನಿಷ್ಕಾಮಕರ್ಮ

Udupi: ಗೀತಾರ್ಥ ಚಿಂತನೆ-47: ಅಪರೋಕ್ಷಜ್ಞಾನದ ಬಳಿಕವೂ ನಿಷ್ಕಾಮಕರ್ಮ

k

Protest: ಗ್ರಾಮ ಆಡಳಿತಾಧಿಕಾರಿಗಳ ಮುಷ್ಕರ: ಕಂದಾಯ ಸೇವೆ ವ್ಯತ್ಯಯ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

K. Lakshminarayanana: ಬೈಂದೂರು ಕ್ಷೇತ್ರದ ಮಾಜಿ ಶಾಸಕ ಕೆ. ಲಕ್ಷ್ಮೀ ನಾರಾಯಣ ನಿಧನ

K. Lakshminarayanana: ಬೈಂದೂರು ಕ್ಷೇತ್ರದ ಮಾಜಿ ಶಾಸಕ ಕೆ. ಲಕ್ಷ್ಮೀ ನಾರಾಯಣ ನಿಧನ

2-bng

Bengaluru: ಮದುವೆ ಮರೆಮಾಚಿದಕ್ಕೆ 59 ತುಂಡು ಮಾಡಿ ಹತ್ಯೆ

MCD ಸ್ಥಾಯಿ ಸಮಿತಿ ಸ್ಥಾನಕ್ಕೆ ಇಂದೇ ಚುನಾವಣೆ… ಮಧ್ಯಾಹ್ನ 1 ಗಂಟೆಗೆ ಮುಹೂರ್ತ ಫಿಕ್ಸ್

MCD ಸ್ಥಾಯಿ ಸಮಿತಿ ಸ್ಥಾನಕ್ಕೆ ಇಂದೇ ಚುನಾವಣೆ… ಮಧ್ಯಾಹ್ನ 1 ಗಂಟೆಗೆ ಮುಹೂರ್ತ ಫಿಕ್ಸ್

World Tourism Day: ಹಂಪಿ ಪಯಣದ ಹ್ಯಾಪಿ ಕಥನ

World Tourism Day: ಹಂಪಿ ಪಯಣದ ಹ್ಯಾಪಿ ಕಥನ

SEMI-Cond

World Digital Revolution: ಜಾಗತಿಕ ರಾಜಕಾರಣಕ್ಕೆ ಸೆಮಿಕಂಡಕ್ಟರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.