School ಅಭಿವೃದ್ಧಿಗೆ ಯೋಜನೆ ರೂಪಿಸಿ: ಸಚಿವ ದಿನೇಶ್‌ ಗುಂಡೂರಾವ್‌

ಜಿಲ್ಲಾ ತ್ರೈಮಾಸಿಕ ಕೆಡಿಪಿ ಮುಂದುವರಿದ ಸಭೆ

Team Udayavani, Aug 31, 2024, 1:19 AM IST

School ಅಭಿವೃದ್ಧಿಗೆ ಯೋಜನೆ ರೂಪಿಸಿ: ಸಚಿವ ದಿನೇಶ್‌ ಗುಂಡೂರಾವ್‌

ಮಂಗಳೂರು: ಸರಕಾರಿ ಹಾಗೂ ಅನುದಾನಿತ ಶಾಲೆಗಳನ್ನು ಉಳಿಸಲು ಸರಕಾರ ಹಾಗೂ ಸರಕಾರೇತರ ಸಂಸ್ಥೆಗಳು ಪ್ರಯತ್ನಿಸ ಬೇಕು. ಕ್ರೌಡ್‌ ಸೋರ್ಸಿಂಗ್‌ ವಿಧಾನ ಅನುಸರಿಸಿ ದತ್ತು ಪಡೆದು ಅಭಿವೃದ್ಧಿಗೆ ಕಾರ್ಯಯೋಜನೆ ರೂಪಿಸಲು ಎಂದು ದ.ಕ. ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್‌ ಗುಂಡೂರಾವ್‌ ಹೇಳಿದರು.

ಶುಕ್ರವಾರ ಜಿ.ಪಂ. ನೇತ್ರಾವತಿ ಸಭಾಂ ಗಣದಲ್ಲಿ ಜಿಲ್ಲಾ ತ್ರೈಮಾಸಿಕ ಕೆಡಿಪಿ ಮುಂದುವರಿದ ಸಭೆಯ ಅಧ್ಯ ಕ್ಷತೆ ವಹಿಸಿ ಮಾತನಾಡಿ, ಶಾಲೆಯ ಹಳೆ ವಿದ್ಯಾರ್ಥಿಗಳು, ದಾನಿಗಳು, ಕಂಪೆನಿಗಳ ಸಿಎಸ್‌ಆರ್‌ ನಿಧಿ ಬಳಸು ವುದೂ ಸಹಿತ “ಕ್ರೌಡ್‌ ಸೋರ್ಸಿಂಗ್‌’ ಮೂಲಕ ಮಾದರಿ ಕಾರ್ಯಕ್ರಮ ರೂಪಿಸಲು ಸೂಚಿಸಿದರು.

ಶಾಸಕರ ಅನುದಾನ
ಬಳಸಿ: ಬೋಜೇಗೌಡ
ಬಂಟ್ವಾಳದ ದಡ್ಡಲಕಾಡು ಹಾಗೂ ಬೆಳ್ತಂಗಡಿಯ ಶಿರ್ಲಾಲಿನಲ್ಲಿ ಸರಕಾರಿ ಶಾಲೆಗಳನ್ನು ಹಳೆ ವಿದ್ಯಾರ್ಥಿಗಳು, ಸ್ಥಳೀಯರು ಹಾಗೂ ದಾನಿಗಳು ದತ್ತು ಪಡೆದು ಅಭಿವೃದ್ಧಿಪಡಿಸುವ ಕಾರ್ಯ ನಡೆದಿದೆ. ಅದೇ ರೀತಿ ಉಳಿದ ಶಾಲೆಗಳನ್ನು ಕೂಡ ಶಾಸಕರ ಅನುದಾನವನ್ನೂ ಬಳಸಿಕೊಂಡು ಅಭಿವೃದ್ಧಿಪಡಿಸಬೇಕು ಎಂದು ವಿಧಾನ ಪರಿಷತ್‌ ಸದಸ್ಯ ಎಸ್‌.ಎಲ್‌. ಬೋಜೇಗೌಡ ಸಲಹೆ ನೀಡಿದರು.

ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌ ಮಾತನಾಡಿ, ದಡ್ಡಲಕಾಡಿನಲ್ಲಿ 28 ಮಕ್ಕಳಿದ್ದ ಸರಕಾರಿ ಶಾಲೆಯಲ್ಲಿ ಈಗ 1,028 ಮಕ್ಕಳಿದ್ದು, ಆದ್ದರಿಂದ ಶಾಲೆಯನ್ನು ಮಾದರಿಯಾಗಿ ಅಭಿವೃದ್ಧಿಪಡಿಸಲಾಗಿದೆ. ಶಾಲೆಗಳನ್ನು ಅಭಿವೃದ್ಧಿಪಡಿಸಲು ಜಿಲ್ಲಾಡಳಿತದಿಂದ ಕ್ರೌಡ್‌ ಸೋರ್ಸಿಂಗ್‌ ಪೋರ್ಟಲ್‌ ವಿನ್ಯಾಸಪಡಿಸಲಾಗುತ್ತಿದೆ ಎಂದರು.

ಆರೋಗ್ಯ ಉಪ
ಕೇಂದ್ರಗಳಿಗೆ ನಿವೇಶನ
ದ.ಕ. ಜಿಲ್ಲೆಯಲ್ಲಿ ಒಟ್ಟು 430 ಆರೋಗ್ಯ ಉಪಕೇಂದ್ರಗಳಿದ್ದು, 186 ಕೇಂದ್ರಗಳಿಗೆ ಸ್ವಂತ ಕಟ್ಟಡ ಇಲ್ಲ. 73 ಕಟ್ಟಡಗಳಿಗೆ ನಿವೇಶನ ದೊರಕಿದ್ದು, ಉಳಿದ 113 ಉಪ ಕೇಂದ್ರಗಳಿಗೆ ಜಾಗದ ಹುಡುಕಾಟ ನಡೆಯುತ್ತಿದೆ ಎಂದು ಸಭೆಯಲ್ಲಿ ಆರೋಗ್ಯ ಇಲಾಖೆ ಕುರಿತ ಚರ್ಚೆ ವೇಳೆ ಜಿಲ್ಲಾ ಆರೋಗ್ಯಾಧಿಕಾರಿ ಡಾ| ತಿಮ್ಮಯ್ಯ ಮಾಹಿತಿ ನೀಡಿದರು.

ಆರೋಗ್ಯ ಹಾಗೂ ಶಿಕ್ಷಣ ಅತಿ ಮುಖ್ಯವಾದ ಅಂಗವಾಗಿದ್ದು, ಇವು ಗಳಿಗೆ ನಿವೇಶನ, ಕಟ್ಟಡದ ಕೊರತೆ ಆಗ ಬಾರದು. ಯಾಕಾಗಿ ನಿವೇಶನ ದೊರೆ ತಿಲ್ಲ ಎಂಬ ಬಗ್ಗೆ ಮಾಹಿತಿ ನೀಡಬೇಕು ಎಂದು ವಿಧಾನ ಪರಿಷತ್‌ ಸದಸ್ಯ ಬೋಜೇಗೌಡರು ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ಡಿ.ಸಿ. ಪ್ರತಿಕ್ರಿಯಿಸಿ, ಮುಂದಿನ ಮೂರು ತಿಂಗಳೊಳಗೆ ಲಭ್ಯ ಇರುವಲ್ಲಿ ನಿವೇಶನ ಒದಗಿಸಲು ಕ್ರಮ ಕೈಗೊಳ್ಳುವುದಾಗಿ ತಿಳಿಸಿದರು.

ವೇತನ ನೇರ ಪಾವತಿಗೆ ಚಿಂತನೆ
ಗುತ್ತಿಗೆದಾರ ಸಂಸ್ಥೆಗಳಿಂದ ನೌಕರರಿಗೆ ವೇತನ ವಿಳಂಬ ಆಗುತ್ತಿರುವ ಹಿನ್ನೆಲೆಯಲ್ಲಿ ಅವರಿಗೆ ನೇರ ಪಾವತಿಗೆ ಕ್ರಮ ಕೈಗೊಳ್ಳಲು ರಾಜ್ಯ ಮಟ್ಟದಲ್ಲಿ ಚಿಂತನೆ ನಡೆಯುತ್ತಿದೆ ಎಂದರು.

ಜಿಲ್ಲಾ ವೆನ್ಲಾಕ್‌ ಆಸ್ಪತ್ರೆಯಲ್ಲಿ 186 ಡಿ ಗ್ರೂಪ್‌ ನೌಕರರಿಗೆ ಎರಡು ತಿಂಗಳಿನಿಂದ ವೇತನವಾಗಿಲ್ಲ ಎಂದು ಜಿ.ಪಂ. ನಾಮ ನಿರ್ದೇಶಿತ ಸದಸ್ಯ ಸಂತೋಷ್‌ ಕುಮಾರ್‌ ಹೇಳಿದರು.

ಜೂನ್‌ ವರೆಗೆ ವೇತನ ಪಾವತಿ ಯಾಗಿದೆ. ಗುತ್ತಿಗೆ ವಹಿಸಿಕೊಂ ಡಿರು ವವರ ಅವಧಿ ಮುಗಿದಿದ್ದು, ಹೊಸ ಗುತ್ತಿಗೆದಾರರು ಮುಂದೆ ಬಂದಿಲ್ಲ ಎಂದು ವೆನ್‌ಲಾಕ್‌ ಅಧೀಕ್ಷಕಿ ಡಾ| ಜೆಸಿಂತಾ ಮಾಹಿತಿ ನೀಡಿದರು. ಗುತ್ತಿಗೆದಾರರಿಗೆ 3 ತಿಂಗಳು ಅವಧಿ ವಿಸ್ತರಿಸಲು ಸೂಚನೆ ನೀಡಲಾಗಿದೆ. ಆ ರೀತಿ ಬಿಟ್ಟು ಹೋದಲ್ಲಿ ಅವರನ್ನು ಕಪ್ಪು ಪಟ್ಟಿಗೆ ಸೇರಿಸಲು ಅವಕಾಶವಿದೆ ಎಂದು ಡಿಸಿ ತಿಳಿಸಿದರು.

ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ರಾಜ್ಯ ಅಧ್ಯಕ್ಷ ಎಚ್‌.ಎಂ. ರೇವಣ್ಣ, ಜಿ.ಪಂ. ಸಿಇಒ ಡಾ| ಆನಂದ್‌, ಪೊಲೀಸ್‌ ಆಯುಕ್ತ ಅನುಪಮ್‌ ಅಗರ್‌ವಾಲ್‌, ಎಸ್ಪಿ ಯತೀಶ್‌, ಮೆಸ್ಕಾಂ ಎಂಡಿ ಪದ್ಮಾವತಿ, ಡಿಸಿಎಫ್‌ ಆ್ಯಂಟನಿ ಮರಿಯಪ್ಪ ಉಪಸ್ಥಿತರಿದ್ದರು.

ಪಾಲನೆಯಾಗದ ಶಿಷ್ಟಾಚಾರ: ಬೋಜೇಗೌಡ ಅಸಮಾಧಾನ
ಕೆಡಿಪಿ ತ್ರೈಮಾಸಿಕ ಸಭೆಯ ವೇಳೆ ಆಸನ ವ್ಯವಸ್ಥೆಯಲ್ಲಿ ಶಿಷ್ಟಾಚಾರ ಪಾಲಿಸಿಲ್ಲ ಎಂದು ವಿಧಾನ ಪರಿಷತ್‌ ಸದಸ್ಯ ಬೋಜೇಗೌಡ ಅವರು ರೇಗಾಡಿದ ಪ್ರಸಂಗವೂ ಇದೇ ವೇಳೆ ನಡೆಯಿತು. ಶಿಷ್ಟಾಚಾರ ಬಗ್ಗೆ ಮಾಹಿತಿ ಇದೆಯಾ? ಯಾಕಾಗಿ ಬೇರೆಯವರನ್ನು ವೇದಿಕೆಯಲ್ಲಿ ಕುಳ್ಳಿರಿಸಿದ್ದೀರಿ ಎಂದು ತರಾಟೆಗೆ ತೆಗೆದುಕೊಂಡರು. ಪದ್ಧತಿ ಪ್ರಕಾರವೇ ಅವರನ್ನು ಕೂರಿಸಲಾಗಿದೆ ಎಂದು ಡಿಸಿ ಸಮಜಾಯಿಸಿ ನೀಡಿದರೂ ತೃಪ್ತರಾಗದ ಗೌಡರು, ಸಚಿವ ದಿನೇಶ್‌ ಗುಂಡೂರಾವ್‌ ಭರವಸೆ ಬಳಿಕ ತಣ್ಣಗಾದರು.

ಟಾಪ್ ನ್ಯೂಸ್

9

Imran Khan: ದಂಗೆ ಏಳಲು ಪ್ರಚೋದನೆ; ಇಮ್ರಾನ್‌ ವಿರುದ್ಧ ಕೇಸು

Dodda Ganesh: ಕೀನ್ಯಾ ಕೋಚ್‌ ಸ್ಥಾನದಿಂದ ದೊಡ್ಡ ಗಣೇಶ್‌ ವಜಾ

Dodda Ganesh: ಕೀನ್ಯಾ ಕೋಚ್‌ ಸ್ಥಾನದಿಂದ ದೊಡ್ಡ ಗಣೇಶ್‌ ವಜಾ

1-mmm

Jammu and Kashmir ಉಗ್ರವಾದ ಕೊನೆಯುಸಿರೆಳೆಯುತ್ತಿದೆ : ಪ್ರಧಾನಿ ಮೋದಿ

1-ddsadsa

Hindi ಮತ್ತು ಇತರ ಭಾಷೆಗಳ ನಡುವೆ ಎಂದಿಗೂ ಸ್ಪರ್ಧೆ ಇರಬಾರದು: ಅಮಿತ್ ಶಾ

Udayavani.com “ನಮ್ಮನೆ ಕೃಷ್ಣ”: ಮೆಚ್ಚುಗೆ ಗಳಿಸಿದ 8ನೇ ರೀಲ್ಸ್ ಪ್ರಸಾರ

Udayavani.com “ನಮ್ಮನೆ ಕೃಷ್ಣ”: ಮೆಚ್ಚುಗೆ ಗಳಿಸಿದ 8ನೇ ರೀಲ್ಸ್ ಪ್ರಸಾರ

Sudden rise in cooking oil prices

Price Hike; ಅಡುಗೆ ಎಣ್ಣೆ ದರ ದಿಢೀರ್ ಏರಿಕೆ: ಹಬ್ಬದ ಸಂಭ್ರಮದಲ್ಲಿರುವ ಜನತೆಗೆ ಶಾಕ್

Mamath2

Doctors Protest: ಇದು ನನ್ನ ಕಡೇ ಪ್ರಯತ್ನ, ನಿಮ್ಮ ಅಕ್ಕನಾಗಿ ಬಂದಿರುವೆ ಎಂದ ಸಿಎಂ ಮಮತಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

13-bedra

ಅಶಕ್ತರಿಗೆ ಮನೆ ಕಟ್ಟುವ ಕಾಯಕದಲ್ಲಿ ಚಾರಿಟೆಬಲ್ ಟ್ರಸ್ಟ್-3ನೇ ಮನೆ ‘ಆಸರೆ’ ಪ್ರವೇಶಕ್ಕೆಸಿದ್ಧ

Mang-Murder

Mangaluru: ಶ್ರೀಮತಿ ಶೆಟ್ಟಿ ಕೊ* ಪ್ರಕರಣ: ಮೂವರ ಅಪರಾಧ ಸಾಬೀತು

MP-Meeting

Surathkal-B.C.Road Highway: ಶಾಶ್ವತ ನಿರ್ವಹಣೆ, ಬೈಪಾಸ್‌ ರಸ್ತೆ ಪ್ರಸ್ತಾವನೆ ಸಲ್ಲಿಸಿ

-Hindu-yuvasene

Ganesh Procession: ಮಂಗಳೂರು ಗಣೇಶೋತ್ಸವ ಸಂಪನ್ನ

Father-Muller

Father Muller: ಔಷಧ ವಿಜ್ಞಾನ ಮಹಾವಿದ್ಯಾಲಯ ಬಿ ಫಾರ್ಮ ಕೋರ್ಸ್‌ಗೆ ಅನುಮತಿ

MUST WATCH

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

udayavani youtube

ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ

udayavani youtube

ಉಡುಪಿ ಕೃಷ್ಣ ಮಠದಲ್ಲಿರುವ ಸುಬ್ರಹ್ಮಣ್ಯ ಸನ್ನಿಧಿ

udayavani youtube

ಕೃಷ್ಣ ಮಠದ ಗಣಪತಿ ವಿಸರ್ಜನೆ ವೇಳೆ ತಾಸೆಯ ಪೆಟ್ಟಿಗೆ ಕುಣಿದು ಕುಪ್ಪಳಿಸಿದ ಭಕ್ತರು|

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

ಹೊಸ ಸೇರ್ಪಡೆ

16

Kumble: ವಿದ್ಯಾರ್ಥಿಗೆ ಹಲ್ಲೆ

15

Belthangady: ನೇಣುಬಿಗಿದು ವ್ಯಕ್ತಿ ಸಾವು

Duleep Trophy: ಪ್ರಥಮ್‌ ಸಿಂಗ್‌, ತಿಲಕ್‌ ವರ್ಮ ಶತಕ

Duleep Trophy: ಪ್ರಥಮ್‌ ಸಿಂಗ್‌, ತಿಲಕ್‌ ವರ್ಮ ಶತಕ

Thekkatte: ಸುಟ್ಟು ಕರಕಲಾದ ಎರಡು ದ್ವಿಚಕ್ರ ವಾಹನ

Thekkatte: ಸುಟ್ಟು ಕರಕಲಾದ ಎರಡು ದ್ವಿಚಕ್ರ ವಾಹನ

12

Arrested: ನಿಷೇಧಿತ ಇ-ಸಿಗರೆಟ್‌ ಮಾರಾಟ: ನಾಲ್ವರ ಸೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.