ವಿಟ್ಲ: ಆಕಸ್ಮಿಕವಾಗಿ ಕೆರೆಗೆ ಬಿದ್ದು ವ್ಯಕ್ತಿ ಸಾವು
Team Udayavani, Jun 7, 2024, 9:54 PM IST
ವಿಟ್ಲ: ಕನ್ಯಾನ ಗ್ರಾಮದ ಪರಕ್ಕಜೆಯಲ್ಲಿ ತೋಟಕ್ಕೆ ಹೋಗಿದ್ದ ವ್ಯಕ್ತಿಯೋರ್ವರು ಆಕಸ್ಮಿಕವಾಗಿ ಕಾಲು ಜಾರಿ ತೋಟದ ಕೆರೆಗೆ ಬಿದ್ದು ಮೃತಪಟ್ಟ ಘಟನೆ ಜೂ. 6ರ ರಾತ್ರಿ 10ರ ಸುಮಾರಿಗೆ ಸಂಭವಿಸಿದೆ.
ಪರಕಜೆ ನಿವಾಸಿ ಬಾಲಕೃಷ್ಣ ಭಂಡಾರಿ (56) ಮೃತರು. ಅವರು ಜೂ. 6ರ ಅಪರಾಹ್ನ 3ರ ಸುಮಾರಿಗೆ ತೋಟಕ್ಕೆ ಹೋಗಿದ್ದು, ರಾತ್ರಿ 10 ಗಂಟೆ ಕಳೆದರೂ ಮನೆಗೆ ಬಂದಿರಲಿಲ್ಲ. ಹೀಗಾಗಿ ಹುಡುಕಾಡಿದಾಗ ಅವರ ಮೃತದೇಹ ತೋಟದ ಕೆರೆಯಲ್ಲಿ ಪತ್ತೆಯಾಗಿದೆ.
ಅವರು ಸುಮಾರು 10 ಅಡಿ ಆಳದ ಕೆರೆಗೆ ಇಳಿಯಲು ಮಾಡಿದ ಮೆಟ್ಟಿಲಿನಿಂದ ಕಾಲು ಜಾರಿ ನೀರಿಗೆ ಬಿದ್ದು ಉಸಿರುಗಟ್ಟಿ ಮೃತಪಟ್ಟಿದ್ದಾಗಿ ಅವರ ಅಣ್ಣನ ಪುತ್ರ ಅಶೋಕ್ ಪಿ. ಅವರು ನೀಡಿದ ದೂರಿನಂತೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
India vs England ಸೆಮಿ ಪಂದ್ಯ; ನಿರೀಕ್ಷೆಯಂತೆ ಮಳೆಯಿಂದ ಟಾಸ್ ವಿಳಂಬ
Mundargi; ನೀರಾವರಿ ಇಲಾಖೆ ಕಚೇರಿ ಒಳಗೇ ಆತ್ಮಹತ್ಯೆಗೆ ಮುಂದಾದ ರೈತ
Kundapura: ಗೋಪಾಡಿ; ತಾಯಿಯ ಸಾವು ಸಹಜ ; ಮರಣೋತ್ತರ ಪರೀಕ್ಷೆ ವರದಿ
Parkala: ಚಾಲಕನಿಗೆ ಮೂರ್ಛೆ; ಹಿಮ್ಮುಖವಾಗಿ ಚಲಿಸಿದ ಬಸ್
Lakshmi Hebbalkar;ಅಂಗನವಾಡಿಗಳಿಗೆ ಕಳಪೆ ಆಹಾರ ಉತ್ಪನ್ನಗಳು ಪೂರೈಕೆಯಾದರೆ ಕಠಿನ ಕ್ರಮ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.