Mangaluru ವಿಮಾನ ದುರಂತ: ಇಂದಿಗೆ 14 ವರ್ಷ
Team Udayavani, May 22, 2024, 7:20 AM IST
ಮಂಗಳೂರು: ಮಂಗಳೂರು ವಿಮಾನ ದುರಂತ ಸಂಭವಿಸಿ ಇಂದಿಗೆ (ಮೇ 22) 14 ವರ್ಷ.
2010ರ ಮೇ 22ರ ಬೆಳಗ್ಗೆ 6.20ಕ್ಕೆ ದುಬಾೖಯಿಂದ ಆಗಮಿಸಿದ ಏರ್ಇಂಡಿಯಾ ಎಕ್ಸ್ಪ್ರೆಸ್ ವಿಮಾನ ಮಂಗಳೂರು ವಿಮಾನ ನಿಲ್ದಾಣದ ಸಮೀಪದ ಕೆಂಜಾರಿನಲ್ಲಿ ಅಪಘಾತಕ್ಕೀಡಾಗಿತ್ತು.
ವಿಮಾನ ಲ್ಯಾಂಡ್ ಆಗುವ ವೇಳೆ ರನ್ವೇಯಲ್ಲಿ ನಿಲ್ಲದೆ ಸೂಚನಾ ಗೋಪುರದ ಕಂಬಗಳಿಗೆ ಢಿಕ್ಕಿ ಹೊಡೆದು ವಿದ್ಯುತ್ ತಂತಿಗಳಿಗೆ ಬಡಿಯುತ್ತಾ ಬಳಿಕ ಕೆಂಜಾರಿನಲ್ಲಿ ಕೆಳಕ್ಕೆ ಉರುಳಿ ಸ್ಫೋಟಗೊಂಡಿತ್ತು. ಇದಕ್ಕೂ ಮೊದಲು ಮರಕ್ಕೆ ಬಡಿದು ವಿಮಾನದ ಬಾಗಿಲು ತೆರೆದುಕೊಂಡಾಗ 8 ಮಂದಿ ಹೊರಗೆ ಎಸೆಯಲ್ಪಟ್ಟಿದ್ದರು. ಓರ್ವ ಯುವತಿ ಮರಗಳ ರೆಂಬೆಗಳಲ್ಲಿ ಸಿಲುಕಿಕೊಂಡಿದ್ದಳು. ವಿಮಾನದಲ್ಲಿದ್ದ 166 ಮಂದಿ ಪ್ರಯಾಣಿಕರಲ್ಲಿ ಎಲ್ಲ 8 ಸಿಬಂದಿ ಸಹಿತ 158 ಮಂದಿ ಸಜೀವ ದಹನಗೊಂಡಿದ್ದರು.
ವಿಮಾನದ ಬ್ಲ್ಯಾಕ್ ಬಾಕ್ಸ್ನ ವಿಶ್ಲೇಷಣೆಯ ಪ್ರಕಾರ ವಿಮಾನದ ಮುಖ್ಯ ಪೈಲಟ್ ಕ್ಯಾ| ಗ್ಲುಸಿಕಾ ಅವರು ಮಾಡಿದ ತಪ್ಪಿನಿಂದಾಗಿ ದುರಂತ ಸಂಭವಿಸಿತ್ತು. ಸಹ ಪೈಲಟ್ ಕ್ಯಾ| ಅಹ್ಲುವಾಲಿಯಾ ಅವರ ಎಚ್ಚರಿಕೆಯನ್ನು ಪರಿಗಣಿಸದೆ ಕ್ಯಾ| ಗ್ಲುಸಿಕಾ ಅವರು ವಿಮಾನವನ್ನು ಇಳಿಸಲು ನಿರ್ಧರಿಸಿದ್ದರು.
ಇಂದು ಶ್ರದ್ಧಾಂಜಲಿ
ವಿಮಾನ ದುರಂತದಲ್ಲಿ ಮೃತಪಟ್ಟವರಿಗೆ ಕೂಳೂರು ತಣ್ಣೀರು ಬಾವಿ ರಸ್ತೆ ಬಳಿ ಇರುವ ಪಾರ್ಕ್ನಲ್ಲಿ ಜಿಲ್ಲಾಡಳಿತದ ವತಿಯಿಂದ ಮೇ 22ರ ಬೆಳಗ್ಗೆ 9.30ಕ್ಕೆ ಶ್ರದ್ಧಾಂಜಲಿ ಕಾರ್ಯಕ್ರಮ ನಡೆಯಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru: ಸಂಸ್ಥೆಯ ಬೆಳವಣಿಗೆಯಲ್ಲಿ ಮಾನವ ಸಂಪನ್ಮೂಲ ಪಾತ್ರ ಪ್ರಮುಖ: ಮಂಜುನಾಥ ಭಂಡಾರಿ
Leopard: ಮೂಲ್ಕಿ ಕೊಯ್ಯಾರಿನಲ್ಲಿ ಚಿರತೆ?
Ullal;ಜನಪ್ರತಿನಿಧಿಗಳು ಸೇರಿ ಹಲವರಿಂದ ಅರ್ಜುನ್ ಅಂತಿಮ ದರ್ಶನ
Mangaluru: ರಾಷ್ಟ್ರೀಯ ಹೆದ್ದಾರಿಯಲ್ಲೇ ಹೊತ್ತಿ ಉರಿದ BMW ಕಾರು… ಪ್ರಯಾಣಿಕರು ಪಾರು
Mangaluru: ಮುಕ್ತಿ ಕಾಣದ “ಬ್ಲ್ಯಾಕ್ಸ್ಪಾಟ್’ಗಳು: ಮತ್ತಷ್ಟು ಹೆಚ್ಚುತ್ತಿರುವ ಅಪಘಾತಗಳು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.