Mangaluru-ಬೆಂಗಳೂರು ರೈಲು ಮಾರ್ಗ: ಪ್ರಾಯೋಗಿಕ ಸಂಚಾರ ಯಶಸ್ವಿ
ಹಳಿ ಮರುಸ್ಥಾಪನೆ ಕಾರ್ಯ ಬಹುತೇಕ ಪೂರ್ಣ, ಭರದಿಂದ ಸಾಗಿದೆ ಅಂತಿಮ ಹಂತದ ಕಾಮಗಾರಿಗಳು
Team Udayavani, Aug 5, 2024, 7:18 AM IST
ಸುಬ್ರಹ್ಮಣ್ಯ: ಮಂಗಳೂರು- ಬೆಂಗಳೂರು ರೈಲು ಮಾರ್ಗದ ಎಡಕುಮೇರಿ-ಕಡಗರವಳ್ಳಿ ನಡುವಿನ ದೋಣಿಹಗಲ್ನ ರೈಲು ಮಾರ್ಗದಲ್ಲಿ ಸಂಭವಿಸಿದ ಭೂಕುಸಿತದ ದುರಸ್ತಿ ಕಾರ್ಯ ಅಂತಿಮ ಹಂತಕ್ಕೆ ತಲುಪಿದ್ದು, ಸ್ಥಳದಲ್ಲಿ ರೈಲು ಎಂಜಿನ್ ಪ್ರಾಯೋಗಿಕ ಸಂಚಾರ ಯಶಸ್ವಿಯಾಗಿದೆ.
ರೈಲು ಮಾರ್ಗದಲ್ಲಿ ಭೂಕುಸಿತ ಸಂಭವಿಸಿದ ಕ್ಷಣದಿಂದ ದುರಸ್ತಿ ಕಾರ್ಯಗಳನ್ನು ಆರಂಭಿಸಲಾಗಿದ್ದು, ಶನಿವಾರ ಭೂಕುಸಿತದ ಸ್ಥಳದಲ್ಲಿ ತಡೆಗೋಡೆ ಗೋಡೆ ಕಾಮಗಾರಿ ಪೂರ್ಣಗೊಂಡಿತ್ತು. ಹಳಿ ಮರುಸ್ಥಾಪನೆ ಕಾರ್ಯ ಬಹುತೇಕ ಪೂರ್ಣಗೊಂಡಿದ್ದು, ಅಂತಿಮ ಹಂತದ ಕಾಮಗಾರಿಗಳು ಭರದಿಂದ ನಡೆಯುತ್ತಿದೆ.
ಕೆಳಭಾಗದಿಂದಲೇ ಬಂಡೆಗಳನ್ನು ಜೋಡಿಸಿ, ಕಬ್ಬಿಣದ ನೆಟ್ ಬಳಸಿ ಗೋಡೆ ನಿರ್ಮಿಸಲಾಗಿದೆ. ಇದರ ಮೇಲೆ ಇನ್ನೊಂದು ಹಂತದಲ್ಲಿ ಬಂಡೆ ಜೋಡಿಸುವ ಕಾರ್ಯ ಪ್ರಗತಿಯಲ್ಲಿದೆ. ಕಾಮಗಾರಿ ಬಹುತೇಕ ಅಂತಿಮಗೊಂಡ ಹಿನ್ನೆಲೆಯಲ್ಲಿ ಒಂದು ರೈಲು ಎಂಜಿನ್ ಅನ್ನು ಪ್ರಾಯೋಗಿಕವಾಗಿ ನಿಧಾನವಾಗಿ ಸಂಚರಿಸಲಾಗಿದ್ದು, ಅದು ಯಶಸ್ವಿಯಾಗಿದೆ ಎಂದು ಮಾಹಿತಿ ಲಭ್ಯವಾಗಿದೆ.
ಗೂಡ್ಸ್ ಸಂಚಾರಕ್ಕೆ ಅವಕಾಶ
ದುರಸ್ತಿ ಕಾರ್ಯ ಬಹುತೇಕ ಪೂರ್ಣಗೊಂಡ ಹಿನ್ನೆಲೆಯಲ್ಲಿ ರವಿವಾರ ಪ್ರಾಯೋಗಿಕವಾಗಿ ಗೂಡ್ಸ್ ರೈಲು ಸಂಚಾರಕ್ಕೆ ಅವಕಾಶ ನೀಡಲಾಗಿದೆ. ದುರಸ್ತಿ ಕಾರ್ಯ ನಡೆಯುತ್ತಿರುವ ಸ್ಥಳ ಹಾಗೂ ಆಸುಪಾಸಿನಲ್ಲಿ 15 ಕಿ.ಮೀ. ವೇಗದಲ್ಲಿ ಗೂಡ್ಸ್ ರೈಲು ಪ್ರಾಯೋಗಿಕ ಓಡಾಟಕ್ಕೆ ಸದ್ಯಕ್ಕೆ ಅನುಮತಿ ನೀಡಲಾಗಿದೆ ಎನ್ನಲಾಗಿದ್ದು, ಆದರೆ ರೈಲ್ವೇ ಇಲಾಖೆಯಿಂದ ಅಧಿಕೃತಗೊಂಡಿಲ್ಲ. ದುರಸ್ತಿ ಕಾರ್ಯ ಪೂರ್ಣಗೊಂಡ ನಡೆದ ಬಳಿಕ ಪ್ರಯಾಣಿಕರ ರೈಲು ಸಂಚಾರಕ್ಕೂ ಅವಕಾಶ ನೀಡಲಾಗುತ್ತದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಶೀಘ್ರ ಕಾಮಗಾರಿ ಪೂರ್ಣಗೊಂಡು ಸಂಚಾರಕ್ಕೆ ತೆರೆದುಕೊಳ್ಳುವ ನಿರೀಕ್ಷೆ ಇದೆ.
ಶಿರಾಡಿ: ವಾಹನ ಸಂಚಾರ ಪುನರಾರಂಭ
ಉಪ್ಪಿನಂಗಡಿ: ಸತತವಾಗಿ ಸುರಿಯುತ್ತಿದ್ದ ಮಳೆಗೆ ನಿರಂತರ ಭೂ ಕುಸಿತ ಕಂಡಿದ್ದ ಶಿರಾಡಿ ಘಾಟ್ ಪ್ರದೇಶದ ಸಕಲೇಶಪುರ ತಾಲೂಕಿನ ಮಾರ್ನಳ್ಳಿ ದೊಡ್ಡತಪ್ಪುಲಿನಲ್ಲಿ ಪರಿಸ್ಥಿತಿ ಸುಧಾರಿಸಿದ್ದು, ರವಿವಾರ ವಾಹನಗಳ ಸಂಚಾರಕ್ಕೆ ಅವಕಾಶ ನೀಡಲಾಗಿದೆ.
ಹೆದ್ದಾರಿ ಅಗಲಗೊಳಿಸುವ ಕಾಮಗಾರಿ ಕಾರಣಕ್ಕೆ ಕತ್ತರಿಸಲ್ಪಟ್ಟ ಗುಡ್ಡಗಳ ಭಾಗದಲ್ಲಿ ಭಾರೀ ಮಳೆಗೆ ಕೆಲವು ದಿನಗಳಿಂದ ಭಾರೀ ಭೂ ಕುಸಿತವಾಗಿತ್ತು. ಸರಕಾರಿ ಬಸ್ಗಳು ಮಾತ್ರ ಪರ್ಯಾಯ ರಸ್ತೆಯಲ್ಲಿಯೇ ಸಂಚರಿಸುತ್ತಿದ್ದು, ಮಂಗಳೂರು – ಬೆಂಗಳೂರು ನಡುವೆ ನೇರ ರಸ್ತೆ ಸಂಚಾ ರಕ್ಕೆ ಅವಕಾಶ ಕಲ್ಪಿಸಬೇಕಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Davanagere: ಗಣೇಶ ಮೆರವಣಿಗೆ ಕಲ್ಲು ತೂರಾಟ ಪ್ರಕರಣದಲ್ಲಿ 14 ಆರೋಪಿಗಳಿಗೆ ನ್ಯಾಯಾಂಗ ಬಂಧನ
Hubli; ಶಾಸಕ ಮುನಿರತ್ನ ಒಬ್ಬ ನಾಲಾಯಕ್, ಅಯೋಗ್ಯ: ಶಾಸಕ ಪ್ರಸಾದ ಅಬ್ಬಯ್ಯ
ರಾಂಗ್ ರೂಟ್ ನಲ್ಲಿ ಬಂದ ಕಾರಿಗೆ ಬೈಕ್ ಡಿಕ್ಕಿ… ಭಯಾನಕ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ
Belve ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ 108 ಆ್ಯಂಬುಲೆನ್ಸ್ ಬೇಕು
Mulki: ಕೊರಗ ಸಮುದಾಯದಿಂದ ಅಹೋರಾತ್ರಿ ಧರಣಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.