Mangaluru: ಕರ್ಣಾಟಕ ಬ್ಯಾಂಕ್: 336.07 ಕೋ.ರೂ. ನಿವ್ವಳ ಲಾಭ
Team Udayavani, Oct 24, 2024, 4:29 AM IST
ಮಂಗಳೂರು: ಕರ್ಣಾಟಕ ಬ್ಯಾಂಕ್ 2024-25ರ ಎರಡನೇ ತ್ತೈಮಾಸಿಕ ಅವಧಿಯಲ್ಲಿ 336.07 ಕೋಟಿ ರೂ. ನಿವ್ವಳ ಲಾಭ ಗಳಿಸಿದೆ. ಹಿಂದಿನ ಸಾಲಿನ ಇದೇ ಅವಧಿಯಲ್ಲಿ ಬ್ಯಾಂಕ್ 330.26 ಕೋಟಿ ರೂ. ಲಾಭ ಗಳಿಸಿತ್ತು.
ಮಂಗಳೂರಿನಲ್ಲಿ ಬುಧವಾರ ನಡೆದ ಆಡಳಿತ ಮಂಡಳಿ ಸಭೆಯಲ್ಲಿ 2024ರ ಸೆ.30ಕ್ಕೆ ಕೊನೆಗೊಂಡ ತ್ತೈಮಾಸಿಕ ಹಾಗೂ ಅರ್ಧವರ್ಷದ ಫಲಿತಾಂಶಗಳನ್ನು ಅನುಮೋದಿಸಲಾಯಿತು. ಪ್ರಸಕ್ತ ಹಣಕಾಸು ವರ್ಷದ ಮೊದಲ ಅರ್ಧ ವರ್ಷದಲ್ಲಿ 736.40 ಕೋಟಿ ರೂಪಾಯಿಗಳ ನಿವ್ವಳ ಲಾಭವನ್ನು ಗಳಿಸಿದೆ. ಕಳೆದ ವರ್ಷದ ಇದೇ ಅವಧಿಯಲ್ಲಿ ಇದ್ದ ರೂ. 700.96 ಕೋಟಿಗೆ ಹೋಲಿಸಿದರೆ ನಿವ್ವಳ ಲಾಭವು ಶೇ. 5.06ರಷ್ಟು ಸುಧಾರಿಸಿದೆ ಎಂದು ವ್ಯವಸ್ಥಾಪಕ ನಿರ್ದೇಶಕ ಮತ್ತು ಸಿಇಒ ಶ್ರೀಕೃಷ್ಣನ್ ಹೇಳಿದ್ದಾರೆ.
ಬ್ಯಾಂಕಿನ ಒಟ್ಟು ವ್ಯವಹಾರವು 2024ರ 2ನೇ ತ್ತೈಮಾಸಿಕದ ವೇಳೆಗೆ 1,75,284.08 ಕೋ. ರೂ. ಅಗಿತ್ತು. ಇದು ಹಿಂದಿನ ವರ್ಷದ ಅವಧಿಯಲ್ಲಿ 1,56,467.71 ಕೋಟಿ ರೂ. ಆಗಿದ್ದು, ಶೇ. 12.03 ಬೆಳವಣಿಗೆ ದಾಖಲಿಸಿದೆ. ಬ್ಯಾಂಕಿನ ಒಟ್ಟು ಠೇವಣಿಗಳು 2024ರ 2ನೇ ತ್ತೈಮಾಸಿಕದ ವೇಳೆಗೆ 99,967.99 ಕೋ. ರೂ. ಆಗಿದ್ದು, ಹಿಂದಿನ ಸಾಲಿಗೆ ಹೋಲಿಸಿದರೆ ಶೇ.11ರಷ್ಟು ಏರಿಕೆ ಕಂಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru: ಪಟಾಕಿ ಮಾರಾಟಕ್ಕೆ ಸ್ಥಳ ನಿಗದಿ; ವಿರೋಧ
Mangaluru: ಲೋಕೋಪಯೋಗಿ ನಿರೀಕ್ಷಣ ಮಂದಿರದ ಆವರಣದಿಂದ ಮರ ಸಾಗಾಟ: ಪ್ರಕರಣ ದಾಖಲು
Coastal: ಪ್ರವಾಸೋದ್ಯಮ ನೀತಿಯಲ್ಲಿ ಕರಾವಳಿಗೂ ಆದ್ಯತೆ: ಎಂಡಿ ಡಾ.ರಾಜೇಂದ್ರ ಕೆ.ವಿ.
Mangaluru: ಡ್ರಗ್ಸ್ ಪಾರ್ಸೆಲ್ ಕಸ್ಟಮ್ಸ್ ವಶ ಹೆಸರಲ್ಲಿ 68 ಲಕ್ಷ ರೂಪಾಯಿ ವಂಚನೆ
Udupi: ಪ್ರಾಚ್ಯ ವಿದ್ಯಾ ಸಮ್ಮೇಳನ: ಮಂಗಳೂರಿಗೆ ಆಗಮಿಸಿದ ಬಾಬಾ ರಾಮದೇವ್
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.