Mangaluru ಪ್ರತ್ಯೇಕ ರೈಲ್ವೇ ವಿಭಾಗಕ್ಕೆ ಅಭಿಯಾನ ಆರಂಭ


Team Udayavani, Jul 4, 2024, 12:27 AM IST

Mangaluru ಪ್ರತ್ಯೇಕ ರೈಲ್ವೇ ವಿಭಾಗಕ್ಕೆ ಅಭಿಯಾನ ಆರಂಭ

ಮಂಗಳೂರು: ನೈಋತ್ಯ ರೈಲ್ವೆ, ದಕ್ಷಿಣ ರೈಲ್ವೆ ಮತ್ತು ಕೊಂಕಣ ರೈಲು ನಿಗಮದ ಮಧ್ಯೆ ಹಂಚಿ ಹೋಗಿರುವುದರಿಂದ ರೈಲ್ವೇ ಮೂಲಸೌ ಲಭ್ಯಗಳಿಂದ ವಂಚಿತ ವಾಗಿರುವ ಮಂಗಳೂರಿಗೆ ಪ್ರತ್ಯೇಕ ರೈಲ್ವೆ ವಿಭಾಗ ಬೇಕು ಎನ್ನುವ ಅಭಿಯಾನ ಮತ್ತೆ ಚುರುಕುಗೊಂಡಿದೆ.

ಇದಕ್ಕಾಗಿಯೇ ರೈಲು ಪ್ರಯಾಣಿಕರು, ಸಂಘಟನೆಗಳೂ ಸೇರಿಕೊಂಡು ದಕ್ಷಿಣ ಕನ್ನಡ ಜಿಲ್ಲಾ ರೈಲ್ವೇ ಬಳಕೆದಾರರ ಸಮಿತಿ ನೇತೃತ್ವದಲ್ಲಿ ಸಹಿ ಅಭಿಯಾನವನ್ನು ಕೈಗೊಂಡಿದ್ದು, ಆಗಸ್ಟ್‌ 2ರ ವರೆಗೂ ಮುಂದುವರಿಯಲಿದೆ.

ಮಮತಾ ಬ್ಯಾನರ್ಜಿ ಅವರು ರೈಲು ಸಚಿವರಾಗಿದ್ದ ಸಂದರ್ಭದಲ್ಲಿ ಕೇಳಿ ಬಂದಿದ್ದ ಈ ಬೇಡಿಕೆ ಡಿ.ವಿ.ಸದಾನಂದ ಗೌಡ ಇದ್ದಾಗಲೂ ಪ್ರಬಲವಾಗಿ ಕೇಳಿಬಂದಿತ್ತು. ಆದರೆ ಬೇಡಿಕೆ ಈಡೇರಿರಲಿಲ್ಲ. ಹಿಂದಿನ ಸಂಸದ ನಳಿನ್‌ ಕುಮಾರ್‌ ಕಟೀಲು ಹಲವು ಬಾರಿ ಈ ಬೇಡಿಕೆ ಪ್ರಸ್ತಾವಿಸಿದ್ದರೂ ಕಾರ್ಯಗತಗೊಂಡಿಲ್ಲ.

ಹಲವು ತಾಂತ್ರಿಕ ಕಾರಣಗಳನ್ನು ಮುಂದಿಟ್ಟು ರೈಲ್ವೇ ಮಂಡಳಿ ಈ ಬೇಡಿಕೆಗೆ ಮಣಿದಿಲ್ಲ. ಈಗ ಹೊಸದಾಗಿ ಚೇಂಜ್‌.ಒಆರ್‌ಜಿ ವೆಬ್‌ಸೈಟ್‌ ಮೂಲಕ ಇದಕ್ಕಾಗಿಯೇ ರೈಲ್ವೇ ಆಸಕ್ತರು ಸಹಿ ಅಭಿಯಾನ ಪ್ರಾರಂಭಿಸಿದ್ದಾರೆ.

ರಸ್ತೆ, ರೈಲ್ವೇ, ವಿಮಾನಯಾನ, ಜಲಸಾರಿಗೆ ಎಂಬ ಎಲ್ಲ ನಾಲ್ಕು ವಿವಿಗಳ ಸಂಪರ್ಕಗಳನ್ನು ಹೊಂದಿದ ಏಕೈಕ ನಗರವಾಗಿದೆ. ಪ್ರಮುಖ ಕೈಗಾರಿಕೆ ಸಂಸ್ಥೆಗಳಾದ ಎಂ.ಸಿ.ಎಫ್‌, ಕುದುರೆಮುಖ ಕಬ್ಬಿಣದ ಅದಿರು ಕಂಪೆನಿ, ಎಂ.ಆರ್‌.ಪಿ.ಎಲ್‌, ಕ್ಯಾಂಪ್ಕೋ ಸೇರಿ ಹಲವಾರು ಸಂಸ್ಥೆಗಳ ಕೇಂದ್ರ ಸ್ಥಾನ, ಫ್ಯಾಕ್ಟರಿಗಳು ಮಂಗಳೂರಿನಲ್ಲಿವೆ.

ಮಂಗಳೂರಿನ ನವಬಂದರಿನ ಮೂಲಕ ದಕ್ಷಿಣ ಭಾರತದಿಂದ ಹಲವಾರು ಉತ್ಪನ್ನಗಳು ರಫ್ತುಗೊಳ್ಳುತ್ತದೆ. ಕಚ್ಚಾತೈಲ ಸಹಿತ ಹಲವಾರು ಉತ್ಪನ್ನಗಳು ನವಮಂಗಳೂರು ಬಂದರಿನ ಮೂಲಕ ಆಮದುಗೊಳ್ಳುತ್ತದೆ.

ಎನ್‌.ಐ.ಟಿ.ಕೆ. ಮಂಗಳೂರು ಸಹಿತ ಹಲವು ಎಂಜಿನಿಯರಿಂಗ್‌ ಕಾಲೇಜು, ಮೆಡಿಕಲ್‌ ಕಾಲೇಜುಗಳು ಇಲ್ಲಿವೆ. ಆದರೆ ರೈಲ್ವೇ ವಿಷಯದಲ್ಲಿ ಮಂಗಳೂರು ಬೇರೆ ಪ್ರಮುಖ ನಗರಗಳಿಂದ ಹಿಂದೆ ಬಿದ್ದಿದೆ. ಪ್ರತ್ಯೇಕ ರೈಲ್ವೇ ವಿಭಾಗವಿಲ್ಲದೆ, ದಕ್ಷಿಣ ರೈಲ್ವೇ ವಲಯದ ಪಾಲಕ್ಕಾಡ್‌ ವಿಭಾಗ, ನೈಋತ್ಯ ರೈಲ್ವೇ ವಲಯದ ಮೈಸೂರು ವಿಭಾಗ ಹಾಗೂ ಕೊಂಕಣ ರೈಲ್ವೆ ನಿಗಮದ ಮಧ್ಯೆ ಮಂಗಳೂರಿನ ರೈಲ್ವೇ ಜಾಲ ಹಂಚಿ ಹೋಗಿದೆ. ಇದರಿಂದ ಮಂಗಳೂರಿಗೆ ಸಿಗಬೇಕಾದ ಸೌಕರ್ಯ ಗಳು, ರೈಲ್ವೇ ಸೇವೆಗಳು ಇಲ್ಲವಾಗಿದೆ ಎನ್ನುವುದು ಸಮಿತಿಯ ಅನಿಸಿಕೆ.

ಪ್ರತ್ಯೇಕ ವಿಭಾಗವಾಗಲಿ
ಎಲ್ಲ ಸಮಸ್ಯೆಗಳನ್ನು ಬಗೆಹರಿಸಲು ಹಾಗೂ ಮಂಗಳೂರು ಸೆಂಟ್ರಲ್‌ ಹಾಗೂ ಜಂಕ್ಷನ್‌ ಅನ್ನು ಪ್ರಮುಖ ರೈಲ್ವೆ ಕೇಂದ್ರವಾಗಿ ಅಭಿವೃದ್ಧಿಪಡಿಸಲು, ರಾಜ್ಯದ ಹಲವಾರು ನಗರಗಳಿಗೆ ಮಂಗ ಳೂರು ಸೆಂಟ್ರಲಿನಿಂದ ರೈಲು ಸೇವೆ ಆರಂಭಿಸಲು, ಅದನ್ನು ವಿಶ್ವ ದರ್ಜೆಯ ನಿಲ್ದಾಣವಾಗಿ ಅಭಿವೃದ್ಧಿಪಡಿಸಲು ಮಂಗಳೂರಿನಲ್ಲಿ ಪ್ರತ್ಯೇಕ ರೈಲ್ವೆ ವಿಭಾಗದ ನಿರ್ದೇಶಕ ಆಗಬೇಕಾಗಿದೆ. ಮಂಗಳೂರಿನಿಂದ ಮಡಗಾಂವ್‌ ತನಕ ಹಾಗೂ ಮಂಗಳೂರಿನಿಂದ ಸಕಲೇಶಪುರ/ಹಾಸನ ತನಕದ ರೈಲ್ವೇ ಜಾಲವನ್ನು ಸೇರಿಸಿ ಮಂಗಳೂರು ಸೆಂಟ್ರಲ್‌ ಅನ್ನು ಕೇಂದ್ರ ಸ್ಥಾನವಾಗಿ ಮಾಡಿ ಪ್ರತ್ಯೇಕ ರೈಲ್ವೇ ವಿಭಾಗದ ನಿರ್ಮಾಣವಾಗಬೇಕು ಎನ್ನುವ ಬೇಡಿಕೆ ವ್ಯಕ್ತವಾಗಿದೆ. ಸಹಿ ಅಭಿಯಾನಕ್ಕೆ ಬೆಂಬಲಿಸುವವರಿಗೆ ಲಿಂಕ್‌:https://chng.it/BPBQBkfdC9

ಟಾಪ್ ನ್ಯೂಸ್

Hathras; ಕಾಲ್ತುಳಿತಕ್ಕೆ ಕಾರಣವಾದ ಯಾರನ್ನೂ ಬಿಡುವುದಿಲ್ಲ…: ಭೋಲೆ ಬಾಬಾ

Hathras; ಕಾಲ್ತುಳಿತಕ್ಕೆ ಕಾರಣವಾದ ಯಾರನ್ನೂ ಬಿಡುವುದಿಲ್ಲ…: ಭೋಲೆ ಬಾಬಾ

Basavaraj Bommai

Basavaraj Bommai; ಒಂದುವರೆ ತಿಂಗಳುಗಳ‌ ಕಾಲ ಶಿಗ್ಗಾವಿಯಲ್ಲಿ ಧನ್ಯವಾದ ಯಾತ್ರೆ

ತರಾತುರಿಯ ಡಿಸಿ ವರ್ಗಾವಣೆಯು ಸಿಎಂ ಭ್ರಷ್ಟಾಚಾರವನ್ನು ಸಾಬೀತುಪಡಿಸಿದೆ: ಪ್ರಹ್ಲಾದ ಜೋಶಿ

Hubli;ತರಾತುರಿಯ ಡಿಸಿ ವರ್ಗಾವಣೆಯು ಸಿಎಂ ಭ್ರಷ್ಟಾಚಾರವನ್ನು ಸಾಬೀತುಪಡಿಸಿದೆ: ಪ್ರಹ್ಲಾದಜೋಶಿ

Desi Swara: ಕ್ಷಮೆ ಕೇಳುವುದು ಹಿರಿದೋ? ಕ್ಷಮಿಸುವುದು ಹಿರಿದೋ?

Desi Swara: ಕ್ಷಮೆ ಕೇಳುವುದು ಹಿರಿದೋ? ಕ್ಷಮಿಸುವುದು ಹಿರಿದೋ?

lakshmi hebbalkar

CM-DCM ಬದಲಾವಣೆ  ಚರ್ಚೆಯಲ್ಲಿ ನಾನಿಲ್ಲ: ಸಚಿವೆ ಹೆಬ್ಬಾಳ್ಕರ್

prahlad-joshi

Mahadayi ಪ್ರವಾಹ್ ಸಮಿತಿ ಭೇಟಿ ಬಗ್ಗೆ ಬೇರೆ ಅರ್ಥ ಕೊಡಬಾರದು: ಜೋಶಿ

samanta

Health illiterate; ‘ಆರೋಗ್ಯ ಅನಕ್ಷರಸ್ಥೆ’ ಎಂದ ವೈದ್ಯನಿಗೆ ನಟಿ ಸಮಂತಾ ತಿರುಗೇಟು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

CC Camera ದೃಶ್ಯಾವಳಿ; ಫೂರೆನ್ಸಿಕ್‌ ವರದಿ ಸಾಕ್ಷಿಯಾಗಿಸಿ ಶಿಕ್ಷೆ ವಿಧಿಸಿದ ನ್ಯಾಯಾಲಯ

CC Camera ದೃಶ್ಯಾವಳಿ; ಫೂರೆನ್ಸಿಕ್‌ ವರದಿ ಸಾಕ್ಷಿಯಾಗಿಸಿ ಶಿಕ್ಷೆ ವಿಧಿಸಿದ ನ್ಯಾಯಾಲಯ

Yakshagana ಮುಮ್ಮೇಳದ ಸವ್ಯಸಾಚಿ ಕುಂಬ್ಳೆ ಶ್ರೀಧರ್‌ ರಾವ್‌

Yakshagana ಮುಮ್ಮೇಳದ ಸವ್ಯಸಾಚಿ ಕುಂಬ್ಳೆ ಶ್ರೀಧರ್‌ ರಾವ್‌

Mangaluru ವಸತಿ ಯೋಜನೆ: 4 ವರ್ಷಗಳಿಂದ ದ.ಕ.ಕ್ಕೆ ಮನೆಯೇ ಸಿಕ್ಕಿಲ್ಲ!

Mangaluru ವಸತಿ ಯೋಜನೆ: 4 ವರ್ಷಗಳಿಂದ ದ.ಕ.ಕ್ಕೆ ಮನೆಯೇ ಸಿಕ್ಕಿಲ್ಲ!

“Dengue ಪರೀಕ್ಷೆಗೆ ಹೆಚ್ಚು ಶುಲ್ಕ ಪಡೆದಲ್ಲಿ ಕ್ರಮ’: ಸಚಿವ ದಿನೇಶ್‌ ಗುಂಡೂರಾವ್‌

“Dengue ಪರೀಕ್ಷೆಗೆ ಹೆಚ್ಚು ಶುಲ್ಕ ಪಡೆದಲ್ಲಿ ಕ್ರಮ’: ಸಚಿವ ದಿನೇಶ್‌ ಗುಂಡೂರಾವ್‌

Dakshina Kannada ಡೆಂಗ್ಯೂ ಹೆಚ್ಚಳ; ಲಾರ್ವಾ ಸಮೀಕ್ಷೆಗೆ ಆದ್ಯತೆ

Dakshina Kannada ಡೆಂಗ್ಯೂ ಹೆಚ್ಚಳ; ಲಾರ್ವಾ ಸಮೀಕ್ಷೆಗೆ ಆದ್ಯತೆ

MUST WATCH

udayavani youtube

ಮರವಂತೆ ಬೀಚ್ ಅಪಾಯ ಲೆಕ್ಕಿಸದೆ ಪ್ರವಾಸಿಗರ ಹುಚ್ಚಾಟ

udayavani youtube

ಕಮಲಶಿಲೆ ದುರ್ಗೆಯ ಪಾದ ಸ್ಪರ್ಶಿಸಿದ ಕುಬ್ಜಾ ನದಿ

udayavani youtube

ಅಬ್ಬಬ್ಬಾ ನೀವೆಂದೂ ಕಂಡಿರದ Coin Collection ನೋಡಿ

udayavani youtube

ಹತ್ರಾಸ್‌ನಲ್ಲಿ ಸತ್ಸಂಗದ ವೇಳೆ ಕಾಲ್ತುಳಿತ ಸಾವಿನ ಸಂಖ್ಯೆ 121 ಕ್ಕೆ ಏರಿಕೆ

udayavani youtube

ಕರ್ನಾಟಕ ಪ್ರವಾಸೋದ್ಯಮದ ಕುರಿತು ರಾಜ್ಯಸಭೆಯಲ್ಲಿ ಸುಧಾಮೂರ್ತಿ ಹೇಳಿದ್ದೇನು

ಹೊಸ ಸೇರ್ಪಡೆ

Hathras; ಕಾಲ್ತುಳಿತಕ್ಕೆ ಕಾರಣವಾದ ಯಾರನ್ನೂ ಬಿಡುವುದಿಲ್ಲ…: ಭೋಲೆ ಬಾಬಾ

Hathras; ಕಾಲ್ತುಳಿತಕ್ಕೆ ಕಾರಣವಾದ ಯಾರನ್ನೂ ಬಿಡುವುದಿಲ್ಲ…: ಭೋಲೆ ಬಾಬಾ

Desi Swara:ತವರು ಮನೆ ಮಿಲನದ ಸಂಭ್ರಮ: ಕುಟುಂಬ, ಸಂಬಂಧದ ಮೌಲ್ಯವನ್ನು ತಿಳಿಸಿದ ಭೇಟಿ

Desi Swara:ತವರು ಮನೆ ಮಿಲನದ ಸಂಭ್ರಮ: ಕುಟುಂಬ, ಸಂಬಂಧದ ಮೌಲ್ಯವನ್ನು ತಿಳಿಸಿದ ಭೇಟಿ

Desi Swara: “ಆದ್ಯ ಪೂಜ್ಯ’ ಗಣೇಶನ ಅಷ್ಟ ಅವತಾರಗಳ ವಿಭಿನ್ನ, ಮನಮೋಹಕ ಪ್ರಸ್ತುತಿ

Desi Swara: “ಆದ್ಯ ಪೂಜ್ಯ’ ಗಣೇಶನ ಅಷ್ಟ ಅವತಾರಗಳ ವಿಭಿನ್ನ, ಮನಮೋಹಕ ಪ್ರಸ್ತುತಿ

Basavaraj Bommai

Basavaraj Bommai; ಒಂದುವರೆ ತಿಂಗಳುಗಳ‌ ಕಾಲ ಶಿಗ್ಗಾವಿಯಲ್ಲಿ ಧನ್ಯವಾದ ಯಾತ್ರೆ

ತರಾತುರಿಯ ಡಿಸಿ ವರ್ಗಾವಣೆಯು ಸಿಎಂ ಭ್ರಷ್ಟಾಚಾರವನ್ನು ಸಾಬೀತುಪಡಿಸಿದೆ: ಪ್ರಹ್ಲಾದ ಜೋಶಿ

Hubli;ತರಾತುರಿಯ ಡಿಸಿ ವರ್ಗಾವಣೆಯು ಸಿಎಂ ಭ್ರಷ್ಟಾಚಾರವನ್ನು ಸಾಬೀತುಪಡಿಸಿದೆ: ಪ್ರಹ್ಲಾದಜೋಶಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.