Manipur: ಮಣಿಪುರ ಸಂಘರ್ಷಕ್ಕೆ ಶೀಘ್ರ ಅಂತ್ಯ ಕಾಣಿಸಬೇಕು


Team Udayavani, Sep 12, 2023, 11:58 PM IST

army

ಕಳೆದ ನಾಲ್ಕೂವರೆ ತಿಂಗಳಿನಿಂದ ದೇಶದ ಈಶಾನ್ಯ ರಾಜ್ಯವಾದ ಮಣಿ ಪುರದಲ್ಲಿ ನಿರಂತರವಾಗಿ ನಡೆಯುತ್ತ ಬಂದಿರುವ ಜನಾಂಗೀಯ ಸಂಘರ್ಷ ಇನ್ನೂ ಮುಂದುವರಿದಿರುವುದು ಆತಂಕಕ್ಕೆ ಕಾರಣವಾಗಿದೆ. ರಾಜ್ಯದ ಬಹುಸಂಖ್ಯಾಕ ಮೈತೇಯಿ ಸಮುದಾಯ ಮತ್ತು ಬುಡಕಟ್ಟು ಸಮು ದಾಯಗಳ ನಡುವೆ ಮೇ 3ರಂದು ಆರಂಭಗೊಂಡಿದ್ದ ಈ ಜನಾಂಗೀಯ ಹಿಂಸಾಚಾರದ ನಡುವೆಯೇ ನಿಷೇಧಿತ ಉಗ್ರಗಾಮಿ ಸಂಘ ಟನೆಗಳು ಕೂಡ ಗುಡ್ಡಗಾಡು ಪ್ರದೇಶದಲ್ಲಿನ ತಮ್ಮ ಚಟುವಟಿಕೆ ಗಳನ್ನು ತೀವ್ರಗೊಳಿಸಿರುವುದು ರಾಜ್ಯ ಮತ್ತು ಕೇಂದ್ರ ಸರಕಾರದ ಪಾಲಿಗೆ ಬಲುದೊಡ್ಡ ತಲೆನೋವಾಗಿ ಪರಿಣಮಿಸಿದೆ.

ಮಂಗಳವಾರದಂದು ಕಾಂಗ್‌ಪೋಕ್ಪಿ ಜಿಲ್ಲೆಯ ಗುಡ್ಡಗಾಡು ಪ್ರದೇಶದಲ್ಲಿ ಸ್ಥಳೀಯ ಬುಡಕಟ್ಟು ಕುಕಿ-ಝೊ ಸಮುದಾಯದ ಮೂವರನ್ನು ನಿಷೇಧಿತ ಉಗ್ರಗಾಮಿ ಸಂಘಟನೆಯ ಉಗ್ರರು ಗುಂಡಿಕ್ಕಿ ಹತ್ಯೆಗೈದಿದ್ದಾರೆ. ಮೂರು ದಿನಗಳ ಹಿಂದೆಯಷ್ಟೇ ತೆಂಗೌ°ಪಾಲ್‌ ಜಿಲ್ಲೆ ಯಲ್ಲಿ ನಡೆದ ಹಿಂಸಾಚಾರದಲ್ಲಿ ಮೂವರು ಹತ್ಯೆಗೀಡಾಗಿದ್ದರು. ಮಣಿಪುರದಲ್ಲಿ ಬಹುಸಂಖ್ಯಾಕರಾಗಿರುವ ಮೈತೇಯಿ ಸಮುದಾಯವನ್ನು ಪರಿ ಶಿಷ್ಟ ಪಂಗಡಕ್ಕೆ ಸೇರ್ಪಡೆಗೊಳಿಸುವ ಪ್ರಸ್ತಾವಕ್ಕೆ ಬುಡಕಟ್ಟು ಪಂಗಡಕ್ಕೆ ಸೇರಿದ ಕುಕಿ ಮತ್ತು ನಾಗಾ ಸಮುದಾಯಗಳು ತೀವ್ರ ವಿರೋಧ ವ್ಯಕ್ತ ಪಡಿಸಿವೆ. ಇದೇ ವಿಚಾರವಾಗಿ ರಾಜ್ಯದಲ್ಲಿ ತೀವ್ರ ಹಿಂಸಾಚಾರ ನಡೆಯುತ್ತಿದ್ದು ಈವರೆಗೆ 160ಕ್ಕೂ ಅಧಿಕ ಮಂದಿ ಸಾವಿಗೀಡಾಗಿದ್ದಾರೆ. ಕುಕಿ ಮತ್ತು ಝೊ ಸಮುದಾಯಕ್ಕೆ ಪ್ರತ್ಯೇಕ ಆಡಳಿತದ ವ್ಯವಸ್ಥೆಯನ್ನು ಮಾಡಬೇಕೆಂಬ ನಾಗರಿಕ ಸಂಘಟನೆಯಾದ “ಯೂತ್‌ ಆಫ್ ಮಣಿಪುರ’ದ ಬೇಡಿಕೆ ಯನ್ನು ಸರಕಾರ ತಳ್ಳಿಹಾಕಿದೆ.

ಈ ಜನಾಂಗೀಯ ಹಿಂಸಾಚಾರವನ್ನು ನಿಯಂತ್ರಣಕ್ಕೆ ತರಲು ರಾಜ್ಯ ಮತ್ತು ಕೇಂದ್ರ ಸರಕಾರ ನಿರಂತರ ಪ್ರಯತ್ನಗಳನ್ನು ನಡೆಸುತ್ತಲೇ ಬಂದಿವೆ. ಹೆಚ್ಚುವರಿ ಪಡೆಗಳನ್ನು ಗಲಭೆ ಪೀಡಿತ ಪ್ರದೇಶಗಳು ಮತ್ತು ಆಯಕಟ್ಟಿನ ಸ್ಥಳಗಳಲ್ಲಿ ನಿಯೋಜಿಸಲಾಗಿದೆಯಲ್ಲದೆ ಉಗ್ರ ಮತ್ತು ಬಂಡುಕೋರ ಸಂಘ ಟನೆ ಗಳನ್ನು ಮಟ್ಟ ಹಾಕಲು ಭದ್ರತಾ ಪಡೆಗಳು ಕಾರ್ಯಾ ಚರಣೆ ಯನ್ನು ತೀವ್ರಗೊಳಿಸಿವೆ. ಈ ಎಲ್ಲ ಕ್ರಮಗಳ ಹೊರತಾಗಿಯೂ ರಾಜ್ಯದಲ್ಲಿ ಪರಿಸ್ಥಿತಿ ಇನ್ನೂ ಸಹಜಸ್ಥಿತಿಗೆ ಮರಳಿಲ್ಲ. ರಾಜ್ಯ ಮತ್ತು ಕೇಂದ್ರದಲ್ಲಿನ ಬಿಜೆಪಿ ನೇತೃತ್ವದ ಸರಕಾರಗಳು ಮಣಿಪುರ ಸಮಸ್ಯೆಯನ್ನು ನಿರ್ಲಕ್ಷಿಸಿದ್ದು ಎಲ್ಲದಕ್ಕೂ ಬಲಪ್ರಯೋಗವೇ ಪರಿಹಾರ ಎಂಬ ಧೋರಣೆಯನ್ನು ತಳೆದಿರುವುದು ಮತ್ತು ಆಡಳಿತ ಪಕ್ಷ ಬಹುಸಂಖ್ಯಾಕರ ಪರವಾಗಿರುವುದೇ ಸಮಸ್ಯೆ ಇಷ್ಟೊಂದು ಉಲ್ಬಣ ಗೊಳ್ಳಲು ಕಾರಣ ಎಂಬುದು ವಿಪಕ್ಷಗಳ ಆರೋಪ.

ಕೇಂದ್ರ ಮತ್ತು ರಾಜ್ಯ ಸರಕಾರಗಳು ಮಣಿಪುರ ಹಿಂಸಾಚಾರವನ್ನು ನಿಯಂ ತ್ರಣಕ್ಕೆ ತರುವ ನಿಟ್ಟಿನಲ್ಲಿ ಪರಸ್ಪರ ಸಮನ್ವಯದಿಂದ ಕಾರ್ಯ ನಿರ್ವಹಿಸುವ ಅಗತ್ಯವಿದೆ. ಸಂಘರ್ಷದಲ್ಲಿ ನಿರತವಾಗಿರುವ ಜನಾಂಗಗಳ ಮುಖಂಡರು ಮತ್ತು ವಿವಿಧ ಸಂಘಟನೆಗಳ ಮುಖಂಡರ ಜತೆ ಸಮಾಲೋಚನೆ ನಡೆಸಿ ಈ ಸಂಘರ್ಷಕ್ಕೆ ಶೀಘ್ರ ಅಂತ್ಯ ಹಾಡಬೇಕು. ಈ ಸಂಘರ್ಷದ ಲಾಭ ಪಡೆದು ಉಗ್ರಗಾಮಿ ಸಂಘಟನೆಗಳು ರಾಜ್ಯದಲ್ಲಿ ಮತ್ತೆ ಚಿಗಿತುಕೊಳ್ಳಲು ಅವಕಾಶ ನೀಡಬಾರದು. ಅಷ್ಟು ಮಾತ್ರವಲ್ಲದೆ ಪ್ರತ್ಯೇಕತಾ ವಾದ, ಭಯೋತ್ಪಾದನೆಯಂಥ ದೇಶದ್ರೋಹಿ ಚಟುವಟಿಕೆ ಗಳಿಗೆ ಆಸ್ಪದ ನೀಡಬಾರದು. ಸಾರ್ವಜನಿಕರ ಪ್ರಾಣ, ಆಸ್ತಿ-ಪಾಸ್ತಿಯ ರಕ್ಷಣೆ ಸರಕಾರದ ಪ್ರಾಥಮಿಕ ಹೊಣೆಗಾರಿಕೆಯಾಗಿರುವುದರಿಂದ ಸರಕಾರ ಅತ್ಯಂತ ಸಮಚಿತ್ತದಿಂದ ಈ ಸಮಸ್ಯೆಗೆ ಪರಿಹಾರವನ್ನು ಕಂಡುಕೊಳ್ಳಬೇಕು.

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

10-editorial

Editorial: ವಿದ್ಯಾರ್ಹತೆಗೆ ದೇಶವ್ಯಾಪಿ ಮಾನ್ಯತೆ, ಹೈಕೋರ್ಟ್‌ ತೀರ್ಪು ನ್ಯಾಯೋಚಿತ

13-editorial

Temperature: ಸಂಪಾದಕೀಯ-ತಾಪಮಾನ ಹೆಚ್ಚಳದ ಆತಂಕ: ಮುಂಜಾಗ್ರತೆಯೇ ಮದ್ದು

ಉಚಿತಗಳ ಆಮಿಷಗಳಿಗೆ ಕಡಿವಾಣ: ಚು.ಆಯೋಗ ಬದ್ಧತೆ ತೋರಲಿ

ಉಚಿತಗಳ ಆಮಿಷಗಳಿಗೆ ಕಡಿವಾಣ: ಚು.ಆಯೋಗ ಬದ್ಧತೆ ತೋರಲಿ

vidhana-Soudha

Editorial: ಪ್ರಾಥಮಿಕ ಶಾಲಾ ಶಿಕ್ಷಕರ ಪಠ್ಯೇತರ ಹೊರೆ ಇಳಿಸಿ

ಮಹಿಳಾ ಆರೋಪಿಗಳ ಬಂಧನ ವೇಳೆ ವಿವೇಚನೆ ಅತ್ಯವಶ್ಯ

ಮಹಿಳಾ ಆರೋಪಿಗಳ ಬಂಧನ ವೇಳೆ ವಿವೇಚನೆ ಅತ್ಯವಶ್ಯ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.