ಭೇದಿಸಲಾಗದ ಹಲವು ಕಳವು, ದರೋಡೆ ಪ್ರಕರಣಗಳು; ನಗರದ ನಾಗರಿಕರಲ್ಲಿ ಹೆಚ್ಚುತ್ತಿರುವ ಆತಂಕ


Team Udayavani, Jun 23, 2024, 6:45 AM IST

ಭೇದಿಸಲಾಗದ ಹಲವು ಕಳವು, ದರೋಡೆ ಪ್ರಕರಣಗಳು; ನಗರದ ನಾಗರಿಕರಲ್ಲಿ ಹೆಚ್ಚುತ್ತಿರುವ ಆತಂಕ

ಮಂಗಳೂರು: ಮಂಗಳೂರು ನಗರ ಹಾಗೂ ಹೊರವಲಯದಲ್ಲಿ ಕೆಲವು ತಿಂಗಳು ಗಳಲ್ಲಿ ನಡೆದ ಕಳವು ಪ್ರಕರಣಗಳನ್ನು ಭೇದಿಸಲು ಪೊಲೀಸರಿಗೆ ಸಾಧ್ಯವಾಗಿಲ್ಲ. ಇದು ಇನ್ನಷ್ಟು ದರೋಡೆ ಯಂತಹ ಪ್ರಕರಣಗಳಿಗೆ ಪ್ರೇರಣೆ ಯಾಗುತ್ತಿದೆಯೇ ಎಂಬ ಆತಂಕ ನಾಗರಿ ಕರನ್ನು ಕಾಡುವಂತಾಗಿದೆ. ಶುಕ್ರವಾರ ರಾತ್ರಿ ಉಳಾಯಿಬೆಟ್ಟು ಪೆರ್ಮಂಕಿಯ ಉದ್ಯಮಿಯೋರ್ವರ ಮನೆಯಲ್ಲಿ ದರೋಡೆ ನಡೆದಿದೆ.

ಹಲವು ಮನೆಗಳನ್ನು ಹೊಕ್ಕಿದ್ದರು!
ಘಟನೆ 1: ಮನೆಯವರು ಮೈಸೂರಿಗೆ ಮೇ 5ರಂದು ಪ್ರವಾಸಕ್ಕೆ ಹೋಗಿದ್ದರು. ಮೇ 7ರಂದು ಮನೆಗೆ ಬಂದು ನೋಡಿದಾಗ ಮನೆಯಲ್ಲಿದ್ದ 1.60 ಲ.ರೂ. ಮೌಲ್ಯದ ಚಿನ್ನಾಭರಣ ಕಳವಾಗಿತ್ತು.

ಘಟನೆ 2: ಮೇ 10ರಂದು ಅಪರಾಹ್ನ ಮನೆಯವರು ಯಕ್ಷಗಾನ ನೋಡ ಲೆಂದು ಹೊರಗೆ ಹೋಗಿ ದ್ದು, ಮರುದಿನ ಸಂಜೆ ಮನೆಗೆ ವಾಪಸಾಗಿದ್ದರು. ಆಗ ಮನೆಯಲ್ಲಿದ್ದ ಚಿನ್ನದ ಬಳೆ, ಲ್ಯಾಪ್‌ಟಾಪ್‌, ನಗದು ಕಳವಾಗಿತ್ತು.

ಘಟನೆ 3: ಮನೆಯವರು ಮೇ 17ರಂದು ಸಂಜೆ ಮನೆಯಿಂದ ಸಂಬಂಧಿಕರ ಮನೆಗೆ ಹೋಗಿದ್ದರು. ಮೇ 20ರಂದು ಮಧ್ಯಾಹ್ನ ಬಂದು ನೋಡಿದಾಗ ಮನೆಯಲ್ಲಿದ್ದ ಚಿನ್ನದ ಪೆಂಡೆಂಟ್‌, ಬ್ರಾಸ್ಲೆಟ್‌, ಬೆಳ್ಳಿಯ ಉಂಗುರ, ವಾಚ್‌ ಇತ್ಯಾದಿ ಕಳವಾಗಿದ್ದವು.

ಇತರ ಘಟನೆ
ಉರ್ವ ಪೊಲೀಸ್‌ ಠಾಣೆ ವ್ಯಾಪ್ತಿಯ ಕೊಟ್ಟಾರದ ಪಿಜಿಯಲ್ಲಿದ್ದವರು ಮೇ 9ರಂದು ಸಂಜೆ ಹೊರಗೆ ಹೋಗಿ ರಾತ್ರಿ 7.20ಕ್ಕೆ ಬಂದು ನೋಡಿದಾಗ ಲ್ಯಾಪ್‌ಟಾಪ್‌, ಮೊಬೈಲ್‌ ಕಳವಾಗಿತ್ತು. ನಗರದ ಕಣ್ಣಿನ ಆಸ್ಪತ್ರೆಯೊಂದಕ್ಕೆ ಮೇ 18ರಂದು ರಾತ್ರಿ 9ಕ್ಕೆ ಅದರ ಆಡಳಿತ ಅಧಿಕಾರಿ ಲಾಕ್‌ ಮಾಡಿ ಹೋಗಿದ್ದರು. ಮೇ 20ರ ಬೆಳಗ್ಗೆ ಬಂದು ನೋಡಿದಾಗ ಬೀಗ ಒಡೆದು 74,000 ರೂ. ಕಳವು ಮಾಡಲಾಗಿತ್ತು.

ಈ ಹಿಂದಿನ ಇತರ ಪ್ರಕರಣ
ಕುಲಶೇಖರದಲ್ಲಿ ಜ. 11ರಂದು ಮನೆಯವರು ಬೆಳಗ್ಗೆ ಹೊರಗಡೆ ಹೋಗಿ ಅಪರಾಹ್ನ ಮರಳಿ ಬಂದಾಗ ಮನೆಯ ಹೆಂಚುಗಳನ್ನು ತೆಗೆದು ಅಂದಾಜು 3.50 ಲ.ರೂ. ಮೌಲ್ಯದ ಚಿನ್ನದ ಆಭರಣಗಳನ್ನು ಕಳವು ಮಾಡಲಾಗಿತ್ತು. ಡಿ. 19ರಂದು ರಾತ್ರಿ ನಗರದ ಮನೆಯೊಂದರಿಂದ 160 ಗ್ರಾಂ ಚಿನ್ನಾಭರಣ, 6,000 ರೂ. ಕಳವು ಮಾಡಲಾಗಿತ್ತು. ಕದ್ರಿಯ ಬಾಡಿಗೆ ಮನೆಯಲ್ಲಿದ್ದವರು ಮೈಸೂರಿಗೆ ಊರಿಗೆಂದು ತೆರಳಿ ವಾಪಸ್‌ ಜ. 16ರಂದು ಬಂದು ನೋಡಿದಾಗ ಮನೆಯ ಬಾಗಿಲಿನ ಲಾಕ್‌ ಮುರಿದು ಬೆಳ್ಳಿಯ ಸೊತ್ತುಗಳನ್ನು ಕಳವು ಮಾಡಿರುವುದು ಗೊತ್ತಾಗಿತ್ತು.

ರಾತ್ರಿ ಗಸ್ತು ಕಡಿಮೆಯಾಯಿತೆ?
ಬೀಟ್‌ ಪೊಲೀಸರಿಂದ ಏರಿಯಾ ಭೇಟಿ, ರಾತ್ರಿ ಗಸ್ತು, ವಾಹನಗಳ ತಪಾಸಣೆ, ಇಂಟರ್‌ಸೆಪ್ಟರ್‌, ಹೈವೇ ಪಟ್ರೋಲಿಂಗ್‌ ಮೂಲಕ ನಿಗಾ ಮೊದಲಾದವು ಕಡಿಮೆಯಾಗಿವೆ ಎಂಬ ದೂರುಗಳು ಕೂಡ ಸಾರ್ವಜನಿಕ ವಲಯದಿಂದ ಕೇಳಿಬರುತ್ತಿದೆ.

20ಕ್ಕೂ ಅಧಿಕ ವಾಹನಗಳ ಕಳವು
ನಗರದ ವಿವಿಧೆಡೆ ಕಳೆದ ಒಂದು ತಿಂಗಳಲ್ಲಿ 20ಕ್ಕೂ ಅಧಿಕ ವಾಹನಗಳು ಕಳವಾಗಿವೆ. ಬಹುತೇಕ ವಾಹನ ಕಳವು ಪ್ರಕರಣಗಳಲ್ಲಿ ವಾಹನ ಸವಾರರ ನಿರ್ಲಕ್ಷ್ಯವೇ ಕಳ್ಳರಿಗೆ ವರದಾನವಾಗಿರುವುದು ಗೊತ್ತಾಗಿದೆ. ಪದೇಪದೆ ದ್ವಿಚಕ್ರ ವಾಹನಗಳ ಕಳವು ನಡೆಯುತ್ತಿದ್ದರೂ ಕಳ್ಳರ ಪತ್ತೆ ಸಾಧ್ಯವಾಗಿಲ್ಲ.

ಟಾಪ್ ನ್ಯೂಸ್

Hamsa Moily

Bengaluru; ವೀರಪ್ಪ ಮೊಯ್ಲಿ ಅವರಿಗೆ ಪುತ್ರಿ ವಿಯೋಗ; ಹಂಸ ಮೊಯ್ಲಿ ವಿಧಿವಶ

8-health

PCOD (ಪಾಲಿಸಿಸ್ಟಿಕ್‌ ಅಂಡಾಶಯದ ಕಾಯಿಲೆ) ಸಮಸ್ಯೆ ಮತ್ತು ನಿರ್ವಹಣೆ

T20 World Cup: ಪ್ರೇಕ್ಷಕರನ್ನು ತುದಿಗಾಲಲ್ಲಿ ನಿಲ್ಲಿಸಿದ್ದ 5 ಪಂದ್ಯಗಳು

T20 World Cup: ಪ್ರೇಕ್ಷಕರನ್ನು ತುದಿಗಾಲಲ್ಲಿ ನಿಲ್ಲಿಸಿದ್ದ 5 ಪಂದ್ಯಗಳು

3

Yakshagana: ಚಪ್ಪಾಳೆಗಾಗಿ ರಸಾಭಾಸ ಮಾಡಬಾರದು

During the Lok Sabha election, there was a discussion about caste-wise DCM, but….: hc mahadevappa

Lok Sabha ಚುನಾವಣೆ ವೇಳೆ ಜಾತಿವಾರು ಡಿಸಿಎಂ ಚರ್ಚೆ ನಡೆದಿತ್ತು, ಆದರೆ….: ಮಹಾದೇವಪ್ಪ

7-kodagu

Madikeri: ಜು.1 ರಿಂದ ಭಾರಿ ವಾಹನಗಳ ಸಂಚಾರ ನಿಷೇಧ

2

T20 World Cup: ಭಾರತದ ವಿಶ್ವಕಪ್‌ ಗೆಲುವಿಗೆ 10 ಕಾರಣಗಳು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lokayukta ಭೂ ಮಾಪನ ಅಧಿಕಾರಿ, ಸರ್ವೇಯರ್‌ ಮನೆ, ಕಚೇರಿಗೆ ಲೋಕಾಯುಕ್ತ ಶೋಧ

Lokayukta ಭೂ ಮಾಪನ ಅಧಿಕಾರಿ, ಸರ್ವೇಯರ್‌ ಮನೆ, ಕಚೇರಿಗೆ ಲೋಕಾಯುಕ್ತ ಶೋಧ

Rain ಕರಾವಳಿಯಲ್ಲಿ ಬಿಡುವು ನೀಡಿದ ಮಳೆ

Rain ಕರಾವಳಿಯಲ್ಲಿ ಬಿಡುವು ನೀಡಿದ ಮಳೆ

Ivan D’Souza”ನೀಟ್‌’ನಿಂದ ರಾಜ್ಯ ಹೊರಗೆ ಬರಲು ನಿಲುವಳಿ ಸೂಚನೆ

Ivan D’Souza”ನೀಟ್‌’ನಿಂದ ರಾಜ್ಯ ಹೊರಗೆ ಬರಲು ನಿಲುವಳಿ ಸೂಚನೆ

Captain Brijesh Chowta ಹಿಂದುತ್ವದ ಆಧಾರದಲ್ಲಿ ವಿಕಸಿತ ದಕ್ಷಿಣ ಕನ್ನಡ

Captain Brijesh Chowta ಹಿಂದುತ್ವದ ಆಧಾರದಲ್ಲಿ ವಿಕಸಿತ ದಕ್ಷಿಣ ಕನ್ನಡ

dc

Electrical failure: ವರದಿ ನೀಡುವಂತೆ ಮೆಸ್ಕಾಂ ಎಂ.ಡಿ.ಗೆ ಜಿಲ್ಲಾಧಿಕಾರಿ ಸೂಚನೆ

MUST WATCH

udayavani youtube

ವಿಧಿಯಾಟಕ್ಕೆ ಬಲಿಯಾದ ಅಂಧರ ಪುಟ್ ಬಾಲ್ ತಂಡದ ಕ್ಯಾಪ್ಟನ್

udayavani youtube

ಮಾತು ಬರದ ಮಗುವಿಗೆ ಮಾತು ಬರಿಸಿದ ಕಾಪು ಮಾರಿಯಮ್ಮ | ಕಾಪುವಿನ ಅಮ್ಮನ ಪವಾಡ

udayavani youtube

ಡಿಸಿಎಂ ವಿಚಾರ ಇನ್ನೊಮ್ಮೆ ಮಾತನಾಡೋಣ; ಕುಕ್ಕೆಯಲ್ಲಿ ಡಿ.ಕೆ.ಶಿವಕುಮಾರ್

udayavani youtube

ಆನೆಗುಡ್ಡೆ ಶ್ರೀ ವಿನಾಯಕ ದೇಗುಲದಲ್ಲಿ ಅಂಗಾರ ಸಂಕಷ್ಟಹರ ಚತುರ್ಥಿ|

udayavani youtube

ಬಸ್ಸೇರಿ ಸಮಸ್ಯೆ ಆಲಿಸಿದ ಶಾಸಕ ರೈ

ಹೊಸ ಸೇರ್ಪಡೆ

Hamsa Moily

Bengaluru; ವೀರಪ್ಪ ಮೊಯ್ಲಿ ಅವರಿಗೆ ಪುತ್ರಿ ವಿಯೋಗ; ಹಂಸ ಮೊಯ್ಲಿ ವಿಧಿವಶ

8-health

PCOD (ಪಾಲಿಸಿಸ್ಟಿಕ್‌ ಅಂಡಾಶಯದ ಕಾಯಿಲೆ) ಸಮಸ್ಯೆ ಮತ್ತು ನಿರ್ವಹಣೆ

T20 World Cup: ಪ್ರೇಕ್ಷಕರನ್ನು ತುದಿಗಾಲಲ್ಲಿ ನಿಲ್ಲಿಸಿದ್ದ 5 ಪಂದ್ಯಗಳು

T20 World Cup: ಪ್ರೇಕ್ಷಕರನ್ನು ತುದಿಗಾಲಲ್ಲಿ ನಿಲ್ಲಿಸಿದ್ದ 5 ಪಂದ್ಯಗಳು

ajagrata producer gave fortuner car gift to the director

Sandalwood; ನಿರ್ದೇಶಕರಿಗೆ ಫಾರ್ಚೂನರ್ ಗಿಫ್ಟ್ ನೀಡಿದ ಅಜಾಗ್ರತ ನಿರ್ಮಾಪಕ

3

Yakshagana: ಚಪ್ಪಾಳೆಗಾಗಿ ರಸಾಭಾಸ ಮಾಡಬಾರದು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.