Youth: ಯುವ ಶ್ರೇಯೋಭಿವೃದ್ಧಿಗೆ “ಮೇರಾ ಯುವ ಭಾರತ್”
ಸಬಲೀಕರಣಕ್ಕಾಗಿ ಪ್ರತ್ಯೇಕ ಸ್ವಾಯತ್ತ ಸಂಸ್ಥೆ ಸ್ಥಾಪನೆಗೆ ನಿರ್ಧಾರ- 31ರಂದು ಸರ್ದಾರ್ ವಲ್ಲಭ ಭಾಯ್ ಜನ್ಮದಿನದಂದು ಲೋಕಾರ್ಪಣೆ
Team Udayavani, Oct 11, 2023, 8:14 PM IST
ನವದೆಹಲಿ: ದೇಶದ ಯುವ ಸಮುದಾಯದ ಶ್ರೇಯೋಭಿವೃದ್ಧಿಯ ನಿಟ್ಟಿನಲ್ಲಿ ಕೇಂದ್ರ ಸರ್ಕಾರ “ಮೇರಾ ಯುವ ಭಾರತ್’ ಎಂಬ ಸ್ವಾಯತ್ತ ಸಂಸ್ಥೆ ಸ್ಥಾಪಿಸಲು ನಿರ್ಧರಿಸಿದೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಬುಧವಾರ ನಡೆದ ಕೇಂದ್ರ ಸಂಪುಟ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ.
ಸಂಪುಟದ ನಿರ್ಧಾರಗಳ ಬಗ್ಗೆ ಮಾಹಿತಿ ನೀಡಿದ ಕೇಂದ್ರ ವಾರ್ತಾ ಮತ್ತು ಪ್ರಸಾರ ಸಚಿವ ಅನುರಾಗ್ ಠಾಕೂರ್ ಉದ್ದೇಶಿತ ಸಂಸ್ಥೆಯನ್ನು ಅ.31ರಂದು ಸರ್ದಾರ್ ವಲ್ಲಭ ಭಾಯ್ ಪಟೇಲ್ ಅವರ ಜನ್ಮದಿನದಂದು ಉದ್ಘಾಟಿಸಲಾಗುತ್ತದೆ ಎಂದು ಹೇಳಿದ್ದಾರೆ. ತಂತ್ರಜ್ಞಾನವನ್ನೇ ಕೇಂದ್ರೀಕರಿಸಿಕೊಂಡು ಈ ಸಂಸ್ಥೆಯನ್ನು ಅಭಿವೃದ್ಧಿಗೊಳಿಸಲಾಗುತ್ತದೆ.
ಭಾರತ ಮಾತ್ರವಲ್ಲದೆ ವಿದೇಶಗಳಲ್ಲಿ ಇರುವ ಭಾರತ ಮೂಲದ ಯುವಜನರಲ್ಲಿ ದೇಶವನ್ನು ಪ್ರಭಾವಶಾಲಿಯಾಗಿ ಕಟ್ಟುವ ನಿಲುವು ಬೆಳೆಸುವ ನಿಟ್ಟಿನಲ್ಲಿ ಹೊಸ ಸಂಸ್ಥೆ ಸ್ಥಾಪಿಸಲಾಗುತ್ತಿದೆ. ಅದರ ಮೂಲಕ ದೇಶವನ್ನು ಸಶಕ್ತ ಹಾಗೂ ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನಾಗಿ ನಿರ್ಮಿಸಲು ಸಾಧ್ಯವಾಗಲಿದೆ ಎಂದರು.
ಅನುಕೂಲಗಳೇನು?:
ಯುವ ಸಮುದಾಯದಲ್ಲಿ ನಾಯಕತ್ವ ಗುಣ ಅಭಿವೃದ್ಧಿ, ಸಮುದಾಯದ ಅಗತ್ಯ ಮತ್ತು ಯುವಜನರ ಆಶಯಗಳ ನಡುವೆ ಸಮನ್ವಯತೆ, ಯುವ ಸಮುದಾಯದ ಅಭಿವೃದ್ಧಿಗೆ ಇರುವ ಯೋಜನೆಗಳನ್ನು ಸಂಯೋಜನೆಗೊಳಿಸಿ ಜಾರಿ, ವಿವಿಧ ಸಚಿವಾಲಯಗಳು ಮತ್ತು ಯುವ ಜನರ ನಡುವೆ ಸಂಪರ್ಕಕ್ಕೆ ಒಂದು ಕೇಂದ್ರ, ಯುವ ಸಮುದಾಯದವರ ಮಾಹಿತಿ ಮತ್ತು ದಾಖಲೆಗೆ ಏಕೀಕೃತ ವ್ಯವಸ್ಥೆ, ಯುವಜನತೆಗೆ ಅಗತ್ಯವಾಗಿರುವ ಭೌತಿಕ ಪರಿಸರ ನಿರ್ಮಾಣ ಮಾಡಲು ಇದರಿಂದ ನೆರವಾಗಲಿದೆ.
ಲೀಥಿಯಂಗೆ ರಾಯಲ್ಟಿ
ಮೊಬೈಲ್ಗಳ ಬ್ಯಾಟರಿ ತಯಾರಿಕೆಯಲ್ಲಿ ಬಳಕೆ ಮಾಡಲು ಬೇಕಾಗುವ ಲೀಥಿಯಂಗೆ ಶೇ.3ನ್ನು ರಾಯಧನ ನೀಡಲು ಇದೇ ಮೊದಲ ಬಾರಿಗೆ ತೀರ್ಮಾನಿಸಲಾಗಿದೆ. ಇದಲ್ಲದೆ ನಿಯೋಬಿಯಮ್ಗೆ ಶೇ.3 ಮತ್ತು ಭೂಮಿಯಲ್ಲಿ ಇರುವ ಅತ್ಯಂತ ಅಪರೂಪದ ಖನಿಜಗಳಿಗೆ (ಆರ್ಇಇ)ಶೇ.1 ರಾಯಧನ ನೀಡಲು ಸಂಪುಟ ಸಭೆ ತೀರ್ಮಾನಿಸಿದೆ. ಇದರಿಂದಾಗಿ ಗಣಿಗಾರಿಕೆ ಕ್ಷೇತ್ರದಲ್ಲಿ ಉದ್ಯೋಗದ ಅವಕಾಶಗಳು ಹೆಚ್ಚಾಗುವ ನಿರೀಕ್ಷೆ ಇದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ
Canada Vs India: ನಿಜ್ಜರ್ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ
Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್
Recommendation: ನ್ಯಾ. ಸಂಜೀವ್ ಖನ್ನಾ ಸುಪ್ರೀಂಕೋರ್ಟ್ ಮುಂದಿನ ಮುಖ್ಯ ನ್ಯಾಯಮೂರ್ತಿ
NDA CMs Meet: ರಾಷ್ಟ್ರದ ಅಭಿವೃದ್ಧಿಗೆ ಎನ್ಡಿಎ ಬದ್ಧ: ಪ್ರಧಾನಿ ಮೋದಿ
MUST WATCH
ಹೊಸ ಸೇರ್ಪಡೆ
Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ
Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ
Canada Vs India: ನಿಜ್ಜರ್ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ
Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್
Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.