Karnataka: ಸಕಾಲ ಅರ್ಜಿ ತಿರಸ್ಕೃತಗೊಂಡರೆ ಮೊಬೈಲ್ಗೆ ಸಂದೇಶ ರವಾನೆ
Team Udayavani, Dec 2, 2023, 11:23 PM IST
ಬೆಂಗಳೂರು: ಸಕಾಲ ಅಧಿಸೂಚಿತ ಸೇವೆಗಳ ಅಡಿಯಲ್ಲಿ ಸಲ್ಲಿಸುವ ಅರ್ಜಿಗಳು ತಿರಸ್ಕೃತಗೊಂಡಿದ್ದರೆ ಅಂತಹವರ ನೋಂದಾಯಿತ ಮೊಬೈಲ್ ಸಂಖ್ಯೆಗೆ ಪ್ರಥಮ ಮೇಲ್ಮನವಿ ಸಲ್ಲಿಸಲು ಅನುಕೂಲವಾಗುವಂತೆ ಲಿಂಕ್ಗಳನ್ನು ಕಳುಹಿಸುವ ವ್ಯವಸ್ಥೆಯನ್ನು ಸಕಾಲ ಮಿಷನ್ ಜಾರಿಗೆ ತಂದಿದೆ.
ಅರ್ಜಿ ತಿರಸ್ಕೃತಗೊಂಡಿದ್ದಲ್ಲಿ ಅರ್ಜಿದಾರರು ಸಕ್ಷಮ ಪ್ರಾಧಿಕಾರಿಗೆ ಪ್ರಥಮ ಮೇಲ್ಮನವಿ ಸಲ್ಲಿಸಲು ಸಕಾಲ ಮಿಷನ್ ಅವಕಾಶ ಕಲ್ಪಿಸಿದೆ. ನಾಗರಿಕರು ಈ ಅವಕಾಶವನ್ನು ಪರಿಣಾಮಕಾರಿಯಾಗಿ ಹಾಗೂ ಸುಲಭವಾಗಿ ಬಳಸಿಕೊಳ್ಳಲು ಅನುವು ಮಾಡಿಕೊಡುವ ಉದ್ದೇಶದಿಂದ ಮನವಿ ಹಾಕಲು ಲಿಂಕ್ನ್ನು ಎಸ್ಎಂಎಸ್ ಮೂಲಕ ಕಳುಹಿಸುವ ವ್ಯವಸ್ಥೆ ಮಾಡಲಾಗಿದೆ ಎಂದು ಸಕಾಲ ಮಿಷನ್ ಹೆಚ್ಚುವರಿ ಯೋಜನ ನಿರ್ದೇಶಕಿ ಪಲ್ಲವಿ ಆಕುರಾತಿ ಅವರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.
ತಿರಸ್ಕೃತಗೊಂಡ ಅರ್ಜಿಗಳಿಗೆ ಸಂಬಂಧಿಸಿದಂತೆ ಸ್ವಯಂಚಾಲಿತವಾಗಿ ಎಸ್ಎಂಎಸ್ ಕಳುಹಿಸುವ ಸೇವೆಯನ್ನು ಸಪ್ಟೆಂಬರ್ ತಿಂಗಳಿನಿಂದ ಚಾಲನೆಗೊಳಿಸಲಾಗಿದೆ. ವಿದ್ಯುನ್ಮಾನ ನಾಗರಿಕ ಸೇವಾ ವಿತರಣ ನಿರ್ದೇಶನಾಲಯದಿಂದ ಇದುವರೆಗೆ ಒಟ್ಟು 3,18,420 ಎಸ್ಎಂಎಸ್ಗಳನ್ನು ಕಳುಹಿಸಲಾಗಿದೆ. ಸಾರಿಗೆ ಇಲಾಖೆಯಲ್ಲಿ ಅರ್ಜಿಗಳ ಮಾಹಿತಿಯನ್ನು ಸಕಾಲ ತಂತ್ರಾಂಶಕ್ಕೆ ಮ್ಯಾನ್ಯುಯಲ್ ಆಗಿ ಪುಶ್ ಮಾಡುತ್ತಿದ್ದು, ಇದನ್ನು ಅಟೋಪುಷ್ಗೆ ಬದಲಾಯಿಸಲಾಗಿದೆ. ಇದರಿಂದ, ಸಕಾಲದಲ್ಲಿ ಬಾಕಿ ಇದ್ದ ಅರ್ಜಿಗಳ ಸಂಖ್ಯೆಯು ಗಣನೀಯವಾಗಿ ಇಳಿಕೆಗೊಂಡು 9691 ರಿಂದ 2682 ಗಳಿಗೆ ಇಳಿಕೆಯಾಗಿದೆ ಎಂದು ಪಲ್ಲವಿ ಅವರು ವಿವರಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Thirthahalli: ಬಾಳೆಬೈಲು ಬೈಪಾಸ್ ಗೆ ಮತ್ತೆ ಬ್ಯಾರಿಕೇಡ್ ಅಳವಡಿಕೆ
Ramanagara: ತಾನು ಸಿದ್ದರಾಮಯ್ಯ ಸಂಬಂಧಿ ಎಂದು ಸೆಕ್ಯೂರಿಟಿ ಗಾರ್ಡ್ ಗೆ ಹೊಡೆದ ಯುವಕ!
ಕುಶಾಲನಗರ ಪ.ಪಂ ಚುನಾವಣೆ ಗೊಂದಲ: ವಿಪಕ್ಷ ನಾಯಕ ಅಶೋಕ್ ಅಸಮಾಧಾನ
Kunigal: ಪುರಸಭೆಯಲ್ಲಿ ಅವ್ಯವಹಾರ… ಮುಖ್ಯಾಧಿಕಾರಿ ಪಿ.ಶಿವಪ್ರಸಾದ್ ಸೇವೆಯಿಂದ ಅಮಾನತು
Mysuru: ದಸರಾ ಆನೆಗಳ ಕಾದಾಟ: ರೋಡಿಗೆ ದೌಡು, ದಿಕ್ಕೆಟ್ಟ ಜನ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Langoti Man Movie Review: ಸಂಪ್ರದಾಯದ ಕೊಂಡಿಯಲ್ಲಿ ಲಂಗೋಟಿ!
Mangaluru: “ಜಾತ್ಯತೀತ’ ಬದಲು “ನಾಸ್ತಿಕ ಭಾರತ’ವಾಗಲಿ: ತುಷಾರ್ ಗಾಂಧಿ
Thirthahalli: ಬಾಳೆಬೈಲು ಬೈಪಾಸ್ ಗೆ ಮತ್ತೆ ಬ್ಯಾರಿಕೇಡ್ ಅಳವಡಿಕೆ
Sullia: ತೋಟಕ್ಕೆ ಕಾಡಾನೆ ಲಗ್ಗೆ… ಬಾಳೆ, ಅಡಿಕೆ, ತೆಂಗು ಕೃಷಿಗೆ ಹಾನಿ
Ramanagara: ತಾನು ಸಿದ್ದರಾಮಯ್ಯ ಸಂಬಂಧಿ ಎಂದು ಸೆಕ್ಯೂರಿಟಿ ಗಾರ್ಡ್ ಗೆ ಹೊಡೆದ ಯುವಕ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.