ಗಣಿಗಾರಿಕೆಯಿಂದ ನಂದಿಗಿರಿಧಾಮಕ್ಕೆ ಧಕ್ಕೆ: ಪರಿಸರ ಪ್ರೇಮಿಗಳ ಆತಂಕ

ಗಿರಿಧಾಮದ ತಳಭಾಗ ಸಡಿಲ: ಆರೋಪ ಗುಡ್ಡ ಕುಸಿತಕ್ಕೆ ಗಣಿಗಾರಿಕೆ ಕಾರಣವಲ್ಲ: ಗಣಿ ಇಲಾಖೆ ಅಧಿಕಾರಿಗಳ ಸ್ಪಷ್ಟನೆ

Team Udayavani, Sep 2, 2021, 4:20 PM IST

ಗಣಿಗಾರಿಕೆಯಿಂದ ನಂದಿಗಿರಿಧಾಮಕ್ಕೆ ಧಕ್ಕೆ: ಪರಿಸರ ಪ್ರೇಮಿಗಳ ಆತಂಕ

ಚಿಕ್ಕಬಳ್ಳಾಪುರ: ವಿಶ್ವ ವಿಖ್ಯಾತ ಜಿಲ್ಲೆಯ ನಂದಿಬೆಟ್ಟದಲ್ಲಿ ಮಣ್ಣಿನ ಗುಡ್ಡೆ ಕುಸಿದು ರಸ್ತೆ ಸಂಚಾರ ಸ್ಥಗಿತಗೊಂಡು ಪ್ರವಾಸಿಗರು ಪರದಾಡಿದ
ಬೆನ್ನಲ್ಲೇ, ಈಗ, ಗಣಿಗಾರಿಕೆ ವಿರುದ್ಧ ಪರಿಸರ ಪ್ರೇಮಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನಂದಿಗಿರಿಧಾಮದಲ್ಲಿ ಮಣ್ಣಿನ ಗುಡ್ಡೆಕುಸಿದಿರುವುದು ಮಳೆಯ ಪ್ರಭಾವದಿಂದ ಅಲ್ಲ. ಅವ್ಯಾಹಿತವಾಗಿ ನಡೆಯುತ್ತಿರುವ ಗಣಿಗಾರಿಕೆಯಿಂದ ಎಂದು ಪರಿಸರ ಪ್ರೇಮಿಗಳಿಂದ ಅಪಸ್ವರ ಎದ್ದಿದೆ.

ಇದೇ ಮೊದಲು ಮಣ್ಣಿನ ಗುಡ್ಡೆ ಕುಸಿತ: ಚಿಕ್ಕಬಳ್ಳಾಪುರ ಜಿಲ್ಲಾದ್ಯಂತ ವ್ಯಾಪಕವಾಗಿ ಮಳೆ ಸುರಿದ ಪರಿಣಾಮಕೆರೆಕುಂಟೆಗಳು ಮತ್ತುಜಲಾಶಯ ಗಳು ಭರ್ತಿಯಾಗಿದ್ದವು. ಇದೇ ಸಂದರ್ಭದಲ್ಲಿ ವಿಶ್ವವಿಖ್ಯಾತ ಜಿಲ್ಲೆಯ ನಂದಿಗಿರಿಧಾಮದಲ್ಲಿ ಮಣ್ಣಿನ ಗುಡ್ಡೆಕುಸಿದು ಸಂಚಾರ ಸ್ಥಗಿತಗೊಂಡಿತ್ತು. ಜಿಲ್ಲಾಧಿಕಾರಿ ಆರ್‌.ಲತಾ ಅವರ ನೇತೃತ್ವದಲ್ಲಿ ಅಧಿಕಾರಿಗಳ ತಂಡ ಕಾರ್ಯಾಚರಣೆ ನಡೆಸಿ ತಾತ್ಕಾಲಿಕವಾಗಿ ರಸ್ತೆ ನಿರ್ಮಿಸಿ ಪ್ರವಾಸಿಗರನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಿ ಕೆಲಸ ಶುರು ಮಾಡಿದ್ದರು. ಆದರೆ, ತಾತ್ಕಾಲಿಕವಾಗಿ ನಿರ್ಮಿಸಿದ್ದ ರಸ್ತೆಯೂ ಕುಸಿದಿದ್ದರಿಂದ ನಂದಿಗಿರಿಧಾಮಕ್ಕೆ ಶಾಶ್ವತವಾಗಿ ರಸ್ತೆ ನಿರ್ಮಾಣ ಆಗುವವರೆಗೆ ಪ್ರವಾಸಿಗರಿಗೆ ಪ್ರವೇಶ ನಿಷೇಧಿಸಲಾಗಿದೆ.

ನಂದಿಗಿರಿಧಾಮದ ತಪ್ಪಲಿನ ಕಣಿವೆಯಲ್ಲಿ ನಡೆಯುತ್ತಿರುವ ಕಲ್ಲು ಗಣಿಗಾರಿಕೆಯಿಂದ ವಿಶ್ವ ವಿಖ್ಯಾತ ಜಿಲ್ಲೆಯ ನಂದಿಗಿರಿಧಾಮದಲ್ಲಿ ಮಣ್ಣಿನ ಗುಡ್ಡೆ ಕುಸಿದಿದೆ. ಸುಮಾರು ವರ್ಷಗಳಿಂದ ಮಳೆ ಬೀಳುತ್ತಿದೆ. ಆದರೆ, ಅಷ್ಟೊಂದು ಪ್ರಮಾಣದಲ್ಲಿ ಮಣ್ಣಿನ ಗುಡ್ಡೆಕುಸಿದಿಲ್ಲ. ಏಕಾಏಕಿಯಾಗಿ ಮಣ್ಣಿನ ಗುಡ್ಡೆಕುಸಿಯಲು ಮಳೆಕಾರಣವಲ್ಲ.ನಂದಿಗಿರಿಧಾಮ ತಪ್ಪಲಿನ ನಾರಾಯಣಪುರದಲ್ಲಿ ನಡೆಯುತ್ತಿರುವ ಕಲ್ಲಿನ ಗಣಿಗಾರಿಕೆಯಿಂದ ಬೆಟ್ಟ ಒಡಲು ಸಡಿಲಗೊಂಡಿದೆ ಎಂದು ಪರಿಸರ ಪ್ರೇಮಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ:‘ಅನ್ಸಾರಿ ನಡಿಗೆ ಜನರ ಕಡೆಗೆ’ ಕಾಂಗ್ರೆಸ್ ಕಾರ್ಯಕ್ರಮಕ್ಕೆ ಜಿಲ್ಲಾಡಳಿತ ತಡೆ

ಅವೈಜ್ಞಾನಿಕ ಗಣಿಕಾರಿಕೆ: ನಂದಿಗಿರಿಧಾಮದ ಸುತ್ತಮುತ್ತ ಗಣಿಗಾರಿಕೆಗೆ ಅನುಮತಿ ನೀಡಲಾಗಿದೆಯಾದರೂ ಅಲ್ಲಿ ಅವೈಜ್ಞಾನಿಕವಾಗಿ ಗಣಿಗಾರಿಕೆ ನಡೆಸುತ್ತಿರುವುದರಿಂದ ಜೀವ ವೈವಿಧ್ಯ ತಾಣ ಹಲವು ನದಿಗಳ ಉಗಮಸ್ಥಾನ, ಆಧ್ಯಾತ್ಮಿಕ ಮತ್ತು ಪಾರಂಪರಿಕ ಕ್ಷೇತ್ರ ನಂದಿ ಗಿರಿಧಾಮಕ್ಕೆ ಭವಿಷ್ಯದಲ್ಲಿ ಧಕ್ಕೆಯಾಗಲಿದೆ ಎಂದು ಪರಿಸರ ಪ್ರೇಮಿಗಳು ಅಸಮಾಧಾನ ಹೊರಹಾಕಿದ್ದಾರೆ. ಭವಿಷ್ಯದ ಹಿತದೃಷ್ಟಿಯಿಂದ ಕೂಡಲೇ ಗಣಿಗಾರಿಕೆ ನಿಷೇಧಿಸಿ ನಂದಿಗಿರಿಧಾಮ ಉಳಿಸಿ ಎಂದು ಸರ್ಕಾರಕ್ಕೆ ಮನವಿ ಮಾಡಿದ್ದಾರೆ.

ಕರ್ನಾಟಕದ ಊಟಿಯೆಂದು ಖ್ಯಾತಿ ಹೊಂದಿರುವ ನಂದಿಗಿರಿಧಾಮದಲ್ಲಿ ಪ್ರವಾಸಿಗರಿಗೆ ಅನುಕೂಲ ಕಲ್ಪಿಸಲು ಸರ್ಕಾರ ರೋಪ್‌ ವೇ ನಿರ್ಮಿಸಲು ಮುಂದಾಗಿದೆ. ಈಗಾಗಲೇ ದೇಶಾದ್ಯಂತ ರೋಪ್‌ವೇ ನಿರ್ಮಿಸಿರುವ ಸಂಸ್ಥೆಗೆ ಟೆಂಡರ್‌ ನೀಡಲು ಪ್ರಕ್ರಿಯೆ ನಡೆಯುತ್ತಿದ್ದ ಸಂದರ್ಭ ದಲ್ಲಿ ನಂದಿಗಿರಿಧಾಮದಲ್ಲಿ ಇದೇ ಮೊದಲ ಬಾರಿಗೆ ಭಾರೀ ಪ್ರಮಾಣದಲ್ಲಿ ಮಣ್ಣಿನ ಗುಡ್ಡೆಕುಸಿದು ಪ್ರವಾಸಿಗರ ಮನದಲ್ಲಿ ಆತಂಕ ಸೃಷ್ಟಿಸಿದೆ. ಅಲ್ಲದೇ, ನಂದಿಗಿರಿಧಾಮದ ಸುತ್ತಮುತ್ತ ಗಣಿಗಾರಿಕೆಯಿಂದ ಗಿರಿಧಾಮಕ್ಕೆ ತೊಂದರೆಯಾಗುತ್ತಿದ್ದು ಕೂಡಲೇ ಗಣಿಗಾರಿಕೆ ನಿಷೇಧಿಸಬೇಕೆಂದು ಪರಿಸರ ಪ್ರೇಮಿಗಳು ಜಿಲ್ಲಾಡಳಿತವನ್ನು ಒತ್ತಾಯಿಸಿದ್ದಾರೆ.

ತಜ್ಞರ ಸಮಿತಿ ರಚನೆಯಾಗಲಿ:6 ನದಿಗಳ ಉಗಮ ಸ್ಥಾನವಾಗಿರುವ ನಂದಿಗಿರಿಧಾಮವನ್ನು ಉಳಿಸುವ ನಿಟ್ಟಿನಲ್ಲಿ ಸರ್ಕಾರ ಗಂಭೀರವಾಗಿ
ಪರಿಗಣಿಸಬೇಕು. ಮಣ್ಣಿನ ಗುಡ್ಡ ಕುಸಿದಿರುವ ಕಾರಣ ಪತ್ತೆ ಹಚ್ಚುವ ಸಲುವಾಗಿ ಪರಿಸರ ತಜ್ಞರನ್ನು ಒಳಗೊಂಡಂತೆ ವಿಶೇಷ ಸಮಿತಿ ರಚಿಸಿ
ಮಾಹಿತಿ ಕಲೆ ಹಾಕಬೇಕಾಗಿದೆ ಎಂದು ಆಗ್ರಹಿಸಿದ್ದಾರೆ.

ಮಣ್ಣು ಗುಡ್ಡ ಕುಸಿಯಲು ಗಣಿಗಾರಿಕೆ ಕಾರಣವಲ್ಲ
ನಾರಾಯಣಪುರದ ಸುತ್ತಮುತ್ತ 17 ಕ್ವಾರಿ,07 ಕ್ರಷರ್‌ ನಡೆಯುತ್ತಿವೆ. ಎಲ್ಲದಕ್ಕೂ ಪರವಾನಿಗೆ ನೀಡಲಾಗಿದೆ. ಯಾವುದೇ ಅಕ್ರಮ ಗಣಿಗಾರಿಕೆ ನಡೆಯುತ್ತಿಲ್ಲ.ಕಲ್ಲಿನ ಗಣಿಗಾರಿಕೆಯಿಂದ ಸುತ್ತಮುತ್ತಲಿನ ಪ್ರದೇಶದಲ್ಲಿ ಯಾವುದೇ ಹಾನಿಯಾಗಿಲ್ಲ. ಮಳೆ ಆರ್ಭಟದಿಂದ ನಂದಿಗಿರಿಧಾಮದಲ್ಲಿ ಮಣ್ಣಿನ ಗುಡ್ಡಕುಸಿದಿದೆ. ಆದರೆ, ಗಣಿಗಾರಿಕೆಯಿಂದ ಮಣ್ಣಿನ ಗುಡ್ಡೆ ಕುಸಿದಿಲ್ಲ ಎಂದು ಚಿಕ್ಕಬಳ್ಳಾಪುರ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿ ಎನ್‌.ಲೋಕೇಶ್‌ ತಿಳಿಸಿದರು.

ಅಧ್ಯಯನದ ಶಿಫಾರಸು ಪಾಲನೆ ಅವಶ್ಯ
ನಂದಿಬೆಟ್ಟ ಜೀವವೈವಿದ್ಯ ತಾಣ. ಹಲವು ನದಿಗಳ ಉಗಮಸ್ಥಾನ, ಆಧ್ಯಾತ್ಮಿಕ ಮತ್ತು ಪಾರಂಪರಿಕ ಕ್ಷೇತ್ರ. ಸುತ್ತಮುತ್ತ ಗಣಿಗಾರಿಕೆಗೆ ಅಧಿಕೃತ ವಾಗಿ ಪರವಾನಿಗೆ ಕೊಟ್ಟದ್ದರೂ ಗಣಿಗಾರಿಕೆ ವೈಜ್ಞಾನಿಕವಾಗಿ ನಡೆಯುತ್ತಿಲ್ಲ. ಸ್ಫೋಟಿಸಲು ಕಾನೂನಿನಲ್ಲಿ ಅವಕಾಶವಿಲ್ಲ. ಈಗಾಗಲೇಆಗಿರುವ ಆಗಬಹುದಾದ ಅನಾಹುತದ ಕುರಿತು ಅಧ್ಯಯನ ನಡೆಸಿ ಸಂಸ್ಥೆಗಳು ನೀಡುವ ಶಿಫಾರಸು ಅನುಷ್ಠಾನಗೊಳಿಸಿದರೆ ಮಾತ್ರ ನಂದಿ ಬೆಟ್ಟಕ್ಕೆ ಉಳಿಗಾಲವಿದೆ ಎಂದು ಪರಿಸರ ಪ್ರೇಮಿ ಆಂಜಿನೇಯರೆಡ್ಡಿ ತಿಳಿಸಿದರು.

-ಎಂ.ಎ.ತಮೀಮ್‌ ಪಾಷಾ

ಟಾಪ್ ನ್ಯೂಸ್

1

Crime: ಯೂಟ್ಯೂಬ್‌ ನೋಡಿ ಪ್ರೇಯಸಿಯ 59 ತುಂಡು ಮಾಡಿದ್ದ ಹಂತಕ!

INDvsBAN: New openers for India in T20; Who is the opener with Sharma?

INDvsBAN: ಟಿ20ಯಲ್ಲಿ ಭಾರತಕ್ಕೆ ಹೊಸ ಆರಂಭಿಕರು; ಶರ್ಮಾ ಜತೆ ಓಪನರ್‌ ಯಾರು?

3-doctor-patient

Doctor-Patient relationship: ವೈದ್ಯ – ರೋಗಿ ಸಂಬಂಧ ಮುಂದೇನು?

vidya balan in bhool bhulaiya 3

Vidya Balan; ಮತ್ತೆ ಬಂದಳು ಮಂಜುಳಿಕಾ!

mumbai

Short Circuit; ಅಗ್ನಿ ಆಕಸ್ಮಿಕದಲ್ಲಿ ಒಂದೇ ಕುಟುಂಬದ ಏಳು ಮಂದಿ ಸಜೀವ ದಹನ

Agra: ಶಿಕ್ಷಕಿಯ ಆಕ್ಷೇಪಾರ್ಹ ವಿಡಿಯೋ ಹಂಚಿಕೊಂಡ ವಿದ್ಯಾರ್ಥಿಗಳು; ನಾಲ್ವರ ಬಂಧನ

Agra: ಶಿಕ್ಷಕಿಯ ಆಕ್ಷೇಪಾರ್ಹ ವಿಡಿಯೋ ಹಂಚಿಕೊಂಡ ವಿದ್ಯಾರ್ಥಿಗಳು; ನಾಲ್ವರ ಬಂಧನ

2-kulur-1

Kuloor: ಮೊಯ್ದೀನ್‌ ಬಾವಾ ಸೋದರ ಮಮ್ತಾಜ್‌ ಅಲಿ ನಾಪತ್ತೆ; ಅಪಘಾತ ಸ್ಥಿತಿಯಲ್ಲಿ ಕಾರು ಪತ್ತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

dinesh-gu

COVID ಹಗರಣದಲ್ಲಿ ಯಾರೇ ತಪ್ಪು ಮಾಡಿದ್ದರೂ ಕ್ರಮ:ಚಿಕ್ಕಬಳ್ಳಾಪುರದಲ್ಲಿ ದಿನೇಶ್‌ ಗುಂಡೂರಾವ್‌

Gudibande: ದಪ್ಪರ್ತಿ ಶ್ರೀ ವೇಣುಗೋಪಾಲ ಸ್ವಾಮಿ ದೇವಸ್ಥಾನಕ್ಕೆ ಕನ್ನ…

Gudibande: ದಪ್ಪರ್ತಿ ಶ್ರೀ ವೇಣುಗೋಪಾಲ ಸ್ವಾಮಿ ದೇವಸ್ಥಾನಕ್ಕೆ ಕನ್ನ…

0421472757

Nandi Hills: ವಿಶ್ವ ವಿಖ್ಯಾತ ನಂದಿಬೆಟ್ಟಕ್ಕೆ ಪ್ರವಾಸಿಗರ ಪ್ರವಾಹ

Chikkaballapur: ಸ್ವಂತ ಕಟ್ಟಡ ಇಲ್ಲದೇ ಶಿಕ್ಷಣ ತರಬೇತಿಗೆ ಡಯಟ್‌ ಪರದಾಟ!

Chikkaballapur: ಸ್ವಂತ ಕಟ್ಟಡ ಇಲ್ಲದೇ ಶಿಕ್ಷಣ ತರಬೇತಿಗೆ ಡಯಟ್‌ ಪರದಾಟ!

Chikkaballapura; ಎಸ್ಎಫ್ ಐ ರಾಜ್ಯ ಸಮ್ಮೇಳನಕ್ಕೆ ಚಾಲನೆ

Chikkaballapura; ಎಸ್ಎಫ್ ಐ ರಾಜ್ಯ ಸಮ್ಮೇಳನಕ್ಕೆ ಚಾಲನೆ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

7

Road Mishap: ಲಾರಿ ಚಕ್ರ ಹರಿದು ದ್ವಿಚಕ್ರ ವಾಹನ ಸವಾರ ಸ್ಥಳದಲ್ಲೇ ದುರ್ಮರಣ

‌Fraud: ಚೀಟಿ ವ್ಯವಹಾರದಲ್ಲಿ ವಂಚನೆ; ಪತಿ, ಪತ್ನಿ, ಪುತ್ರ ಬಂಧನ

‌Fraud: ಚೀಟಿ ವ್ಯವಹಾರದಲ್ಲಿ ವಂಚನೆ; ಪತಿ, ಪತ್ನಿ, ಪುತ್ರ ಬಂಧನ

Arrested: ದೇವರಾಜ ಅರಸು ಟ್ರಕ್‌ ಟರ್ಮಿನಲ್‌ ಪ್ರಕರಣ; ಮತ್ತೂಬ್ಬ ಅಧಿಕಾರಿ ಬಂಧನ

Arrested: ದೇವರಾಜ ಅರಸು ಟ್ರಕ್‌ ಟರ್ಮಿನಲ್‌ ಪ್ರಕರಣ; ಮತ್ತೂಬ್ಬ ಅಧಿಕಾರಿ ಬಂಧನ

Udupi: ಎಸ್‌ಬಿಐ ಗೃಹ ಮತ್ತು ಕಾರು ಸಾಲ ಹಬ್ಬದ ಉದ್ಘಾಟನೆ

Udupi: ಎಸ್‌ಬಿಐ ಗೃಹ ಮತ್ತು ಕಾರು ಸಾಲ ಹಬ್ಬದ ಉದ್ಘಾಟನೆ

4

Bengaluru: ಮಲ್ಲೇಶ್ವರ ಮೈದಾನದಲ್ಲಿ ಮಗು ಸಾವಿಗೆ ಗೇಟ್‌ ವೆಲ್ಡಿಂಗ್‌ ದೋಷ ಕಾರಣ; ಸಮಿತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.