ಖನಿಜ ರಕ್ಷಣಾ ಪಡೆಯ ಗಸ್ತು ವಾಹನಗಳಿಗೆ ಸಚಿವ ಹಾಲಪ್ಪ ಆಚಾರ್ ಚಾಲನೆ


Team Udayavani, Dec 27, 2022, 4:09 PM IST

ಖನಿಜ ರಕ್ಷಣಾ ಪಡೆಯ ಗಸ್ತು ವಾಹನಗಳಿಗೆ ಸಚಿವ ಹಾಲಪ್ಪ ಆಚಾರ್ ಚಾಲನೆ

ಸುವರ್ಣಸೌಧ: ರಾಜ್ಯದ ಖನಿಜ ಮತ್ತು ಉಪಖನಿಜ ಅನಧಿಕೃತ ಗಣಿಗಾರಿಕೆ ಮತ್ತು ಸಾಗಾಣಿಕೆಯನ್ನು ತಡೆಗಟ್ಟಲು ಹಾಗೂ ರಾಜ್ಯದ ಖನಿಜ ಸಂಪತ್ತನ್ನ ಸಂರಕ್ಷಿಸಿ ಆದಾಯವನ್ನು ಹೆಚ್ಚಿಸುವ ನಿಟ್ಟಿನಲ್ಲಿ ರಾಜ್ಯ ಸರಕಾರ ದಿಟ್ಟ ಹೆಜ್ಜೆಗಳನ್ನು ಇಟ್ಟಿದೆ. ಪ್ರಪ್ರಥಮ ಬಾರಿಗೆ ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಅಧೀನದಲ್ಲಿ ಪ್ರತಿ ಜಿಲ್ಲೆಯಲ್ಲಿ ಖನಿಜ ರಕ್ಷಣಾ ಪಡೆಯನ್ನು ಸ್ಥಾಪಿಸಲಾಗಿದ್ದು, ಇಂದು ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಗಸ್ತು ವಾಹನಗಳಿಗೆ ಚಾಲನೆ ನೀಡಲಾಗಿದೆ ಎಂದುಗಣಿ ಮತ್ತು ಭೂ ವಿಜ್ಞಾನ ಸಚಿವ ಹಾಲಪ್ಪ ಆಚಾರ್‌ ತಿಳಿಸಿದರು.

ಇಂದು ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಪ್ರಪ್ರಥಮ ಬಾರಿಗೆ ‘ಖನಿಜ ರಕ್ಷಣಾ ಪಡೆ’ ಯ ಗಸ್ತುವಾಹನಗಳಿಗೆ ಚಾಲನೆ ನೀಡಿ ಅವರು ಮಾತನಾಡಿದರು.

ಕರ್ನಾಟಕ ಉಪ ಖನಿಜ ರಿಯಾಯಿತಿ ನಿಯಮಗಳಂತೆ ಪೋಲೀಸ್ ಇಲಾಖೆ, ಕಂದಾಯ ಇಲಾಖೆ, ಅರಣ್ಯ ಇಲಾಖೆ, ಸಾರಿಗೆ ಇಲಾಖೆಯ ಅಧಿಕಾರಿಗಳಿಗೆ ಖನಿಜ ಮತ್ತು ಉಪಖನಿಜಗಳ ಅನಧಿಕೃತ ಗಣಿಗಾರಿಕೆ, ದಾಸ್ತಾನು ಮತ್ತು ಸಾಗಾಣಿಕೆ ವಿರುದ್ದ ಕ್ರಮಕೈಗೊಳ್ಳಲು ಅಧಿಕಾರ ಪ್ರತ್ಯೋಜಿಸಲಾಗಿರುತ್ತದೆ. ಆದಾಗ್ಯೂ ಸದರಿ ಇಲಾಖೆಗಳಿಂದ ಅಕ್ರಮ ಖನಿಜ ಮತ್ತು ಉಪಖನಿಜಗಳ ಗಣಿಗಾರಿಕೆ ಮತ್ತು ಸಾಗಾಣಿಕೆಯನ್ನು ತಡೆಗಟ್ಟುವ ಕ್ರಮಗಳು ಹೆಚ್ಚಿನ ಪರಿಣಾಮಕಾರಿ ಆಗಿರುವುದಿಲ್ಲ. ಈ ಹಿನ್ನಲೆಯಲ್ಲಿ ಅಕ್ರಮ ಖನಿಜ ಮತ್ತು ಉಪಖನಿಜಗಳ ಗಣಿಗಾರಿಕೆ ಮತ್ತು ಸಾಗಾಣಿಕೆ ತಡೆಗಟ್ಟಲು, ಸಂಬಂಧಿಸಿದ ಇಲಾಖೆಗಳಲ್ಲಿನ ಕೆಲಸದ ಒತ್ತಡಗಳಿಂದ ಹೆಚ್ಚಿನ ಯಶಸ್ಸು ಸಾಧ್ಯವಾಗಿರುವುದಿಲ್ಲ. ಹೀಗಾಗಿ ಪ್ರತಿ ಜಿಲ್ಲೆಯಲ್ಲಿ ಒಂದು ಖನಿಜ ರಕ್ಷಣಾ ಪಡೆಯನ್ನು ಸ್ಥಾಪಿಸಲು ಅನುಮೋದನೆ ನೀಡಲಾಗಿತ್ತು. ಈ ಹಿನ್ನೆಲೆಯಲ್ಲಿ ಪ್ರಪ್ರಥಮ ಬಾರಿಗೆ ಇಂದು ಬೆಳಗಾವಿಯಲ್ಲಿ ಗಸ್ತುವಾಹನಗಳಿಗೆ ಚಾಲನೆ ನೀಡುವ ಮೂಲಕ ಖನಿಜ ರಕ್ಷಣಾ ಪಡೆಗೆ ಚಾಲನೆ ನೀಡಲಾಗಿದೆ ಎಂದು ಸಚಿವರು ತಿಳಿಸಿದರು.

ಇದನ್ನೂ ಓದಿ:ಚೆಂಡೆ ವಾದನ ಬಡಿಯುತ್ತಾ ಮದುವೆ ಮಂಟಪಕ್ಕೆ ಬಂದ ವಧು: ವಿಡಿಯೋ ವೈರಲ್

ಮೊದಲ ಹಂತದಲ್ಲಿ ಖನಿಜ ರಕ್ಷಣಾ ಪಡೆಯನ್ನು ಹೆಚ್ಚಿನ ಖನಿಜ/ ಉಪಖನಿಜ ಗಣಿಗಾರಿಕೆ ಇರುವ ಎಂಟು ಜಿಲ್ಲೆಗಳಾದ ಕೋಲಾರ, ಚಿಕ್ಕಬಳ್ಳಾಪುರ, ರಾಯಚೂರು, ಹಾವೇರಿ, ಬೆಳಗಾವಿ, ಕಲಬುರಗಿ, ಕೊಪ್ಪಳ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಖನಿಜ ರಕ್ಷಣಾ ಪಡೆ ಸ್ಥಾಪಿಸಲು ಕ್ರಮವಹಿಸಲಾಗಿದೆ. ಇದರ ನಿರ್ವಹಣೆಗೆ ಪ್ರತಿ ಜಿಲ್ಲೆಗೆ ಹವಾಲ್ದಾರ್‌ ದರ್ಜೆಯ 03 ನಿವೃತ್ತ ಸೈನಿಕರನ್ನು ನೇಮಕ ಮಾಡಿಕೊಳ್ಳಲಾಗಿದೆ. ಜಿಲ್ಲಾ ಖನಿಜ ಪ್ರತಿಷ್ಠಾನ ನಿಧಿಯಿಂದ 44 ಹೊಸ ವಾಹನವನ್ನು ಖರೀದಿಸಲು ಅನುಮೋದನೆ ನೀಡಲಾಗಿದೆ ಎಂದು ಹೇಳಿದರು.

ಟಾಪ್ ನ್ಯೂಸ್

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

de

Vitla: ಕಾಲು ಜಾರಿ ಕೆರೆಗೆ ಬಿದ್ದು ಯುವಕ ಸಾವು

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.