ಹುಲಿಕೆರೆ, ಬೆರಟಿಕೆರೆಗಳಿಗೆ ಲಿಫ್ಟ್ ಮೂಲಕ ನೀರು ತುಂಬಿಸುವ ಪ್ರಸ್ತಾವ ಇದೆ: ಮಾಧುಸ್ವಾಮಿ


Team Udayavani, Feb 15, 2022, 10:30 PM IST

ಹುಲಿಕೆರೆ, ಬೆರಟಿಕೆರೆಗಳಿಗೆ ಲಿಫ್ಟ್ ಮೂಲಕ ನೀರು ತುಂಬಿಸುವ ಪ್ರಸ್ತಾವ ಇದೆ: ಮಾಧುಸ್ವಾಮಿ

ಬೆಂಗಳೂರು: ಚಿಕ್ಕಮಗಳೂರು ಕ್ಷೇತ್ರದ ಐಯ್ಯನ ಕೆರೆ ತುಂಬಿ ಕೋಡಿ ಬಿದ್ದ ನೀರು ಹುಲಿಕೆರೆ-ಬೆರಟಿಕೆರೆ ಕೆರೆಗಳಿಗೆ ಲಿಫ್ಟ್ ಮೂಲಕ ತುಂಬಿಸುವ ಯೋಜನೆ ಪ್ರಸ್ತಾವನೆ ಸರ್ಕಾರದ ಮುಂದಿದೆ ಎಂದು ಸಣ್ಣ ನೀರಾವರಿ ಸಚಿವ ಜೆ.ಸಿ.ಮಾಧುಸ್ವಾಮಿ ಹೇಳಿದ್ದಾರೆ.

ಪ್ರಶ್ನೋತ್ತರ ವೇಳೆಯಲ್ಲಿ ಬಿಜೆಪಿಯ ಸಿ.ಟಿ.ರವಿ ಅವರ ಪರವಾಗಿ ಬೆಳ್ಳಿ ಪ್ರಕಾಶ್‌ ಪ್ರಸ್ತಾಪಕ್ಕೆ ಉತ್ತರಿಸಿದ ಅವು, ಐಯ್ಯನ ಕೆರೆ ತುಂಬಿ ಕೋಡಿ ಮೂಲಕ ಹೆಚ್ಚುವರಿಯಾಗಿ ಹರಿದು ಹೋಗುವ ನೀರು ಹುಲಿಕೆರೆ, ಬೆರಟಿಕೆರೆ, ನಾಗೇನಹಳ್ಳಿ ಕೆರೆಗಳಿಗೆ ತುಂಬಿಸಲು ಏತ ನೀರಾವರಿ ಯೋಜನೆ ಕೈಗೊಳ್ಳಲು ಉದ್ದೇಶಿಸಲಾಗಿದೆ ಎಣದಯ ತಿಳಿಸಿದರು.

ಇದನ್ನೂ ಓದಿ:ಶ್ರೀರಂಗಪಟ್ಟಣ : ಹೈಕೋರ್ಟ್ ಆದೇಶ ಉಲ್ಲಂಘಿಸಿ ಹಿಜಾಬ್ ಧರಿಸಿ ಕಾಲೇಜಿಗೆ ಬಂದ ಶಿಕ್ಷಕಿ

ಅಂದಾಜು 9.96 ಕೋಟಿ ರೂ. ಮೊತ್ತದಲ್ಲಿ ಯೋಜನೆ ರೂಪಿಸಲಾಗಿದ್ದು ತಾಂತ್ರಿಕ ಮೌಲ್ಯ ನಿರ್ಣಯ ಸಮಿತಿ ಸಭೆಯ ಮುಂದೆ ಮಂಡಿಸಿ ತೀರುವಳಿ ಪಡೆಯಬೇಕು. ಆನುದಾನದ ಲಭ್ಯತೆ ಅನುಸಾರವಾಗಿ ಆದ್ಯತೆ ಮೇಲೆ ಕಾಮಗಾರಿ ಕೈಗೊಳ್ಳಲು ಪರಿಶೀಲಿಸಲಾಗುವುದು ಎಂದು ಹೇಳಿದರು.

ಬೆಳೆ ನಮೂದಿಸಿ ಪಹಣಿಗೆ ಅವಕಾಶ
ಬೆಂಗಳೂರು: ರೈತರು ಪಹಣಿ ಪಡೆಯಲು ಬೆಳೆ ನಮೂದು ಮಾಡದಿದ್ದರೆ, ಹಿಂದಿನ ವರ್ಷದ ಬೆಳೆ ನಮೂದು ಮಾಡಿ ಪಹಣಿ ನೀಡಲು ಆದೇಶ ನೀಡಲಾಗಿದೆ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ.ಸಿ. ಮಾಧುಸ್ವಾಮಿ ಹೇಳಿದ್ದಾರೆ.

ವಿಧಾನಸಭೆಯಲ್ಲಿ ಗಮನ ಸೆಳೆಯುವ ಸೂಚನೆಯಲ್ಲಿ ಶೃಂಗೇರಿ ಶಾಸಕ ಟಿ.ಡಿ. ರಾಜೇಗೌಡ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ರೈತರು ತೆಂಗು, ಅಡಿಕೆ ಮಾವು ಸಹಿತ ತೋಟಗಾರಿಕೆ ಬೆಳೆಗಳಲ್ಲಿ ಇತರ ಬೆಳೆಗಳನ್ನು ಬೆಳೆದು ಅದನ್ನು ಪಹಣಿಯಲ್ಲಿ ಸೇರಿಸದಿದ್ದರೆ, ಪಹಣಿ ಪಡೆಯಲಾಗುತ್ತಿಲ್ಲ. ಹೀಗಾಗಿ ರೈತರಿಗೆ ಹಿಂದಿನ ವರ್ಷದ ಬೆಳೆ ನಮೂದಿಸಿ ಪಹಣಿ ನೀಡುವಂತೆ ಆದೇಶ ಹೊರಡಿಸಲಾಗಿದೆ ಎಂದರು.

ಇದಕ್ಕೂ ಮೊದಲ ಮಾತನಾಡಿದ ಶಾಸಕ ರಾಜೇಗೌಡ, ಮಲೆನಾಡು ಭಾಗದಲ್ಲಿ ರೈತರು ಬ್ಯಾಂಕ್‌ ಸಾಲ, ವಿಮಾ ಹಣ ಸಹಿತ ವಿವಿಧ ಸೌಲಭ್ಯ ಪಡೆಯಲು ಪಹಣಿ ಪಡೆಯಲು ತೊಂದರೆಯಾಗುತ್ತಿದೆ. ಕಳೆದ ಅಧಿವೇಶನದಲ್ಲಿ ಪಹಣಿ ಕೊಡಿಸುವ ಭರವಸೆ ನೀಡಿದ್ದರು. ಆದರೆ ಈಗಲೂ ಸರಕಾರಿ ಸವಲತ್ತು ಪಡೆಯಲು ಸಾಧ್ಯವಾಗುತ್ತಿಲ್ಲ. ಹೀಗಾಗಿ ರೈತರಿಗೆ ಪಹಣಿ ದೊರೆಯುವಂತೆ ಮಾಡಲು ಮನವಿ ಮಾಡಿದರು.

ಜೆಡಿಎಸ್‌ನ ಎಚ್‌.ಕೆ. ಕುಮಾರಸ್ವಾಮಿ ಪ್ರತಿಕ್ರಿಯಿಸಿ, ತೆಂಗು, ಅಡಿಕೆ, ರಬ್ಬರ್‌ ಪ್ರತಿವರ್ಷ ಬೆಳೆಯುವ ಬೆಳೆಗಳಲ್ಲ. ರೈತರು ಯಾವ ಬೆಳೆ ಬೆಳೆಯುತ್ತಾರೋ ಅದನ್ನು ನಮೂದಿಸಿ ಪಹಣಿ ನೀಡಲಿ ಎಂದು ಮನವಿ ಮಾಡಿದರು.

ಕಾಲಂನಲ್ಲಿ ನಮೂದಿಸಿ
ಇದಕ್ಕೆ ಸ್ಪೀಕರ್‌ ವಿಶ್ವೇಶ್ವರ ಹೆಗಡೆ ಕಾಗೇರಿ ಕೂಡ ಧ್ವನಿಗೂಡಿಸಿದ್ದು, ಪ್ರತಿ ವರ್ಷ ರೈತರು ಎರಡು ಬಾರಿ ಪಹಣಿ ಪಡೆಯಲು ಸಾಧ್ಯವಾಗುವುದಿಲ್ಲ. ತೆಂಗು, ಕಾಫಿ ಪ್ರತೀ ವರ್ಷ ಬೆಳೆಯುವ ಬೆಳೆಯಲ್ಲ. ಅದಕ್ಕೆ ಒಂದು ಕಾಲಂ ಮಾಡಿ, ಯಾವ ಬೆಳೆ ಬೆಳೆಯುತ್ತಾರೆ ಎನ್ನುವುದನ್ನು ನಮೂದಿಸಬೇಕು. ಅಧಿಕಾರಿಗಳು ಯಾವುದಕ್ಕೆ ಹೆಚ್ಚು ಆದ್ಯತೆ ನೀಡುತ್ತಾರೆ ಎನ್ನುವುದು ನಿಮಗೂ ಗೊತ್ತಿದೆ ಎಂದರು. ಅದಕ್ಕೆ ಉತ್ತರಿಸಿದ ಸಚಿವ ಮಾಧುಸ್ವಾಮಿ, ಕಾಫಿ, ತೆಂಗಿನ ತೋಟದಲ್ಲಿ ಹೂ, ರಾಗಿ ಬೇರೆ ಬೆಳೆ ಬೆಳೆದಾಗ ಅದನ್ನು ನಮೂದಿಸಬೇಕು. ಯಾವುದೇ ಬೆಳೆ ಬೆಳೆಯದಿದ್ದರೆ, ಹಿಂದಿನ ವರ್ಷದ ಬೆಳೆಯನ್ನು ನಮೂದಿಸಬೇಕೆಂದು ಸೂಚನೆ ನೀಡಲಾಗಿದೆ ಎಂದರು.

ಟಾಪ್ ನ್ಯೂಸ್

Siddaramaih 3

Guarantee Schemes; ಸಂಪನ್ಮೂಲ ಕುಸಿತ:ಗ್ಯಾರಂಟಿಗೆ ಕತ್ತರಿ?

JK-Cab

JK Cabinet Meet: ಕಾಶ್ಮೀರಕ್ಕೆ ರಾಜ್ಯ ಸ್ಥಾನ ಕೊಡಿ: ಸಿಎಂ ಒಮರ್‌ ಸಂಪುಟ ಸಭೆ ನಿರ್ಣಯ

1–a-rcc

BPL; ದ.ಕ.- 54 ಸಾವಿರ, ಉಡುಪಿ- 39 ಸಾವಿರ ಬಿಪಿಎಲ್‌ ಕಾರ್ಡ್‌ ಪರಿಶೀಲನೆಗೆ ಸೂಚನೆ

1-eee

By-election;ವಿಧಾನ ಪರಿಷತ್‌ ಉಪ ಚುನಾವಣೆ: 392 ಮತಗಟ್ಟೆ ,6,032 ಮತದಾರರು

1-a-antr-bg

Konkani Movie; ‘ಅಂತ್ಯಾರಂಭ’ ಚಿತ್ರೀಕರಣ ಪೂರ್ಣ

ನ. 23ರಂದು ನಗರ ಸ್ಥಳೀಯ ಸಂಸ್ಥೆಗಳ 43 ವಾರ್ಡ್‌, ಗ್ರಾ.ಪಂ. 641 ಸ್ಥಾನಕ್ಕೆ ಚುನಾವಣೆ

ನ. 23ರಂದು ನಗರ ಸ್ಥಳೀಯ ಸಂಸ್ಥೆಗಳ 43 ವಾರ್ಡ್‌, ಗ್ರಾ.ಪಂ. 641 ಸ್ಥಾನಕ್ಕೆ ಚುನಾವಣೆ

Agricultural: ರೈತರ ಸಂಕಷ್ಟಕ್ಕೆ ಸ್ಪಂದನೆ ಮೊದಲ ಆದ್ಯತೆಯಾಗಲಿ

Agricultural: ರೈತರ ಸಂಕಷ್ಟಕ್ಕೆ ಸ್ಪಂದನೆ ಮೊದಲ ಆದ್ಯತೆಯಾಗಲಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Siddaramaih 3

Guarantee Schemes; ಸಂಪನ್ಮೂಲ ಕುಸಿತ:ಗ್ಯಾರಂಟಿಗೆ ಕತ್ತರಿ?

1–a-rcc

BPL; ದ.ಕ.- 54 ಸಾವಿರ, ಉಡುಪಿ- 39 ಸಾವಿರ ಬಿಪಿಎಲ್‌ ಕಾರ್ಡ್‌ ಪರಿಶೀಲನೆಗೆ ಸೂಚನೆ

ನ. 23ರಂದು ನಗರ ಸ್ಥಳೀಯ ಸಂಸ್ಥೆಗಳ 43 ವಾರ್ಡ್‌, ಗ್ರಾ.ಪಂ. 641 ಸ್ಥಾನಕ್ಕೆ ಚುನಾವಣೆ

ನ. 23ರಂದು ನಗರ ಸ್ಥಳೀಯ ಸಂಸ್ಥೆಗಳ 43 ವಾರ್ಡ್‌, ಗ್ರಾ.ಪಂ. 641 ಸ್ಥಾನಕ್ಕೆ ಚುನಾವಣೆ

ಅಂಚೆ ಮೂಲಕ ತರಿಸಿದ್ದ 21 ಕೋಟಿ ರೂ. ಡ್ರಗ್ಸ್‌ ಜಪ್ತಿ!ಅಂಚೆ ಮೂಲಕ ತರಿಸಿದ್ದ 21 ಕೋಟಿ ರೂ. ಡ್ರಗ್ಸ್‌ ಜಪ್ತಿ!

CCB Police: ಅಂಚೆ ಮೂಲಕ ತರಿಸಿದ್ದ 21 ಕೋಟಿ ರೂ. ಡ್ರಗ್ಸ್‌ ಜಪ್ತಿ!

ಡಿ. 9ರಿಂದ 20ರ ವರೆಗೆ ಚಳಿಗಾಲ ಅಧಿವೇಶನ?

Assembly Session: ಡಿ. 9ರಿಂದ 20ರ ವರೆಗೆ ಚಳಿಗಾಲ ಅಧಿವೇಶನ?

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

Siddaramaih 3

Guarantee Schemes; ಸಂಪನ್ಮೂಲ ಕುಸಿತ:ಗ್ಯಾರಂಟಿಗೆ ಕತ್ತರಿ?

JK-Cab

JK Cabinet Meet: ಕಾಶ್ಮೀರಕ್ಕೆ ರಾಜ್ಯ ಸ್ಥಾನ ಕೊಡಿ: ಸಿಎಂ ಒಮರ್‌ ಸಂಪುಟ ಸಭೆ ನಿರ್ಣಯ

1–a-rcc

BPL; ದ.ಕ.- 54 ಸಾವಿರ, ಉಡುಪಿ- 39 ಸಾವಿರ ಬಿಪಿಎಲ್‌ ಕಾರ್ಡ್‌ ಪರಿಶೀಲನೆಗೆ ಸೂಚನೆ

1-eee

By-election;ವಿಧಾನ ಪರಿಷತ್‌ ಉಪ ಚುನಾವಣೆ: 392 ಮತಗಟ್ಟೆ ,6,032 ಮತದಾರರು

1-a-antr-bg

Konkani Movie; ‘ಅಂತ್ಯಾರಂಭ’ ಚಿತ್ರೀಕರಣ ಪೂರ್ಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.