ಎಂಒ4 ಭತ್ತ ಪೂರೈಕೆಗೆ ಉಡುಪಿ ಜಿಲ್ಲೆಯ ಶಾಸಕರ ಆಗ್ರಹ
ಸಚಿವರ ಬಳಿಗೆ ಜಿಲ್ಲೆಯ ಶಾಸಕರ ನಿಯೋಗ: ತೀರ್ಮಾನ
Team Udayavani, Jun 8, 2024, 12:13 AM IST
ಕುಂದಾಪುರ: ರಾಜ್ಯ ಕೃಷಿ ಇಲಾಖೆಯಲ್ಲಿ ಎಂಒ4 ಭತ್ತದ ಬಿತ್ತನೆ ಬೀಜದ ಕೊರತೆಯಿರುವ ಕುರಿತು ರೈತರ ಪರವಾಗಿ ಉಡುಪಿ ಜಿಲ್ಲೆಯ ಶಾಸಕರು ಧ್ವನಿ ಎತ್ತಿದ್ದಾರೆ. ರೈತರಿಗೆ ಅಗತ್ಯವಿರುವ ಬೀಜ ಪೂರೈಸಲು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದು, ಸರಕಾರದ ಬಳಿ ನಿಯೋಗ ಒಯ್ಯುವುದಾಗಿ ಹೇಳಿದ್ದಾರೆ.
ಈ ವಿಷಯವಾಗಿ ಮುಖ್ಯಮಂತ್ರಿ, ಕೃಷಿ ಸಚಿವರು, ಕೃಷಿ ಇಲಾಖೆ ಆಯುಕ್ತರಿಗೆ ಶಾಸಕರಾದ ಕುಂದಾಪುರದ ಕಿರಣ್ ಕುಮಾರ್ ಕೊಡ್ಗಿ, ಕಾಪುವಿನ ಗುರ್ಮೆ ಸುರೇಶ್ ಶೆಟ್ಟಿ, ಬೈಂದೂರಿನ ಗುರುರಾಜ್ ಗಂಟಿಹೊಳೆ, ಉಡುಪಿಯ ಯಶ್ಪಾಲ್ ಸುವರ್ಣ ಶುಕ್ರವಾರ ಪತ್ರ ಬರೆದಿದ್ದಾರೆ. ವಿಧಾನಪರಿಷತ್ ಮಾಜಿ ಸಭಾಪತಿ, ರೈತ ಸಂಘದ ಅಧ್ಯಕ್ಷ ಪ್ರತಾಪಚಂದ್ರ ಶೆಟ್ಟಿ ಈ ಬಗ್ಗೆ ಸಂಬಂಧಪಟ್ಟವರ ಬಳಿ ಮಾತನಾಡುವುದಾಗಿ ಹೇಳಿದ್ದಾರೆ.
ನಿಯೋಗ
ಜಿಲ್ಲೆಯ ಎಲ್ಲ ಶಾಸಕರ ನಿಯೋಗ ವೊಂದು ಸಚಿವರನ್ನು ಭೇಟಿ ಮಾಡಿ ಈ ಬಗ್ಗೆ ಆಗ್ರಹಿಸಲಿದೆ. ಬೇಡಿಕೆ ಎಷ್ಟಿದೆ ಎಂದು ತಿಳಿದು ಅದನ್ನು ಪೂರೈಸಬೇಕಾದದ್ದು ಸಂಬಂಧಪಟ್ಟ ಇಲಾಖೆ ಹಾಗೂ ಬೀಜ ನಿಗಮದ ಕರ್ತವ್ಯ. ರೈತರ ಬೇಡಿಕೆಯ ಹೊರ ತಾದ ಬೀಜ ಪಡೆದುಕೊಂಡು ಬಿತ್ತು ವಂತೆ ಒತ್ತಾಯಿಸುವುದು ಸರಿಯಲ್ಲ. ಮುಂದಿನ ವರ್ಷಗಳಲ್ಲೂ ಸಮಸ್ಯೆ ಆಗಬಾರದು ಎಂಬ ನಿಟ್ಟಿನಲ್ಲಿ ಭೇಟಿ ಮಾಡಿ ರೈತಪರ ಮನವಿ ಮಂಡಿಸಲಾಗುವುದು ಎಂದು ಕಾರ್ಕಳದ ಶಾಸಕ ಸುನಿಲ್ ಕುಮಾರ್ ತಿಳಿಸಿದ್ದಾರೆ.
ಬೇಡಿಕೆಯಷ್ಟು ಪೂರೈಸಿ
ಉಡುಪಿ ಜಿಲ್ಲೆಯಲ್ಲಿ 38 ಸಾವಿರ ಹೆಕ್ಟೇರ್ನಲ್ಲಿ ಶೇ. 95ರಷ್ಟು ಎಂಒ4 ಭತ್ತ ಬೆಳೆಯಲಾಗುತ್ತಿದೆ. ಆದರೆ ರೈತರ ಬೇಡಿಕೆಗೆ ಅನುಗುಣವಾಗಿ ಎಂಒ4 ಬಿತ್ತನೆ ಬೀಜ ಪೂರೈಕೆ ಆಗುತ್ತಿಲ್ಲ. ಬಿತ್ತನೆ ಬೀಜ ಪೂರೈಸಲು ರೈತರಿಂದ ಆಗ್ರಹ ಕೇಳಿ ಬರುತ್ತಿದೆ. ಪ್ರತೀ ವರ್ಷವೂ ಬೇಡಿಕೆಯಷ್ಟು ಪೂರೈಕೆ ಆಗುತ್ತಿಲ್ಲ ಎಂಬುದು ರೈತರ ಅಳಲು ಎಂದು ಶಾಸಕರು ಪತ್ರದಲ್ಲಿ ವಿವರಿಸಿದ್ದಾರೆ.
ಉದಯವಾಣಿ ವರದಿ
ಉಡುಪಿ ಜಿಲ್ಲೆಯಲ್ಲಿ ಎಂಒ4 ಬಿತ್ತನೆ ಬೀಜ ಕೊರತೆ ಕುರಿತು ಉದಯವಾಣಿ ಜೂ. 7ರಂದು ವರದಿ ಮಾಡಿತ್ತು.
ದರ ಇಳಿಸಲು ಆಗ್ರಹ
ಇಲಾಖೆ ನೀಡುವ ಬಿತ್ತನೆ ಬೀಜದ ದರವು ಹೆಚ್ಚಿರುವ ಬಗ್ಗೆಯೂ ದೂರುಗಳು ಕೇಳಿ ಬರುತ್ತಿವೆ. ಆದ್ದರಿಂದ ದರ ಇಳಿಸಿ ಸಕಾಲದಲ್ಲಿ ಬೀಜ ದೊರೆಯಲು ಕ್ರಮ ಕೈಗೊಳ್ಳಬೇಕೆಂದು ಶಾಸಕರು ಪತ್ರದಲ್ಲಿ ಒತ್ತಾಯಿಸಿದ್ದಾರೆ. ಈ ವರ್ಷಕ್ಕಷ್ಟೇ ಅಲ್ಲ, ಮುಂದಿನ ವರ್ಷಗಳಿಗೂ ಇದೇ ಕ್ರಮ ಕೈಗೊಳ್ಳುವ ಮೂಲಕ ರೈತರ ಹಿತ ಕಾಪಾಡಲು ಆಗ್ರಹಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi: ರಸ್ತೆ ಮಾರ್ಜಿನ್ ಮಾಹಿತಿ ಇಲ್ಲದೆ ಸಂಕಷ್ಟ: ನಗರಕ್ಕೆ 21ಮೀ.,ಗ್ರಾಮಾಂತರಕ್ಕೆ 40 ಮೀ.
Coconut: ಅಧಿಕ ಮಳೆ, ರೋಗಬಾಧೆ: ಕೆ.ಜಿ.ಗೆ 50 ರೂ. ಗಡಿ ದಾಟಿದ ತೆಂಗಿನಕಾಯಿ
Udupi: ತಾಯಿ ಮರಣ ಪ್ರಮಾಣ ಶೂನ್ಯಗೊಳಿಸಲು ಒತ್ತು ನೀಡಿ
Udupi: ಗೀತಾರ್ಥ ಚಿಂತನೆ-48: ಕರ್ಮ ಬಿಡುವಂತಿಲ್ಲ, ಫಲ ಬಿಡಬಹುದು
Fishing: ಬುಲ್ಟ್ರಾಲ್ ನಿಷೇಧ ಕಟ್ಟುನಿಟ್ಟು ಮಾಡಿ: ಸಚಿವರಿಗೆ ಮನವಿ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Mangaluru: ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ… ಅಪಾಯದಿಂದ ಪಾರಾದ ಪ್ರಯಾಣಿಕರು
SIT: ಶಾಸಕ ಮುನಿರತ್ನ ನಿವಾಸದ ಮೇಲೆ ಎಸ್ ಐಟಿ ತಂಡ ದಾಳಿ, ಸಾಕ್ಷ್ಯಾಧಾರಗಳ ಸಂಗ್ರಹ
ಭಾರತದಲ್ಲಿ ಪಾಕ್ ಸಿನಿಮಾ ದ ಲೆಜೆಂಡ್ ಆಫ್ ಮೌಲಾ ಜಟ್ ಪ್ರದರ್ಶನಕ್ಕೆ ಅವಕಾಶವಿಲ್ಲ: ಕೇಂದ್ರ
Shimoga; ನಿಮಗೊಂದು ಕಾನೂನು ನಮಗೊಂದು ಕಾನೂನು ಇದೆಯೇ..: ಸಿದ್ದರಾಮಯ್ಯ ವಿರುದ್ದ ಈಶ್ವರಪ್ಪ
Hosur: ಟಾಟಾ ಎಲೆಕ್ಟ್ರಾನಿಕ್ಸ್ ಘಟಕದಲ್ಲಿ ಅಗ್ನಿ ಅವಘಡ… ಕೋಟ್ಯಂತರ ಮೌಲ್ಯದ ಸೊತ್ತು ನಾಶ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.