Politics: ಮೋದಿ ಸೆಲ್ಫಿ ಪಾಯಿಂಟ್: ಸದನದಲ್ಲಿ ಪ್ರತಿಧ್ವನಿ
Team Udayavani, Dec 8, 2023, 11:44 PM IST
ಬೆಳಗಾವಿ: ಕಾಲೇಜು ಮತ್ತು ವಿವಿಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾವಚಿತ್ರದೊಂದಿಗಿನ ಸೆಲ್ಫಿ ಪಾಯಿಂಟ್ ಸ್ಥಾಪನೆ ಮೇಲ್ಮನೆಯಲ್ಲೂ ಪ್ರತಿಧ್ವನಿಸಿ, ಕೋಲಾಹಲಕ್ಕೆ ಕಾರಣವಾಯಿತು.
ಎನ್ಇಪಿ ಬದಲು ಎಸ್ಇಪಿ ಜಾರಿಗೊಳಿಸುವ ವಿಚಾರಕ್ಕೆ ಸಂಬಂಧಿಸಿದ ಚರ್ಚೆ ವೇಳೆ ವಿಷಯ ಪ್ರಸ್ತಾಪಿಸಿದ ಉನ್ನತ ಶಿಕ್ಷಣ ಸಚಿವ ಡಾ| ಎಂ.ಸಿ.ಸುಧಾಕರ್, ಕ್ಯಾಂಪಸ್ಗಳಲ್ಲಿ ಸೆಲ್ಫಿ ಪಾಯಿಂಟ್ ಸ್ಥಾಪಿಸುವಂತೆ ಯುಜಿಸಿ ಎಲ್ಲ ಕಾಲೇಜು ಮತ್ತು ವಿವಿಗಳಿಗೆ ಸೂಚಿಸಿದೆ. ಆದರೆ ಅಲ್ಲಿನ ಗುಂಡಿ ಒತ್ತಿದರೆ, ಪ್ರಧಾನಿ ಫೋಟೋ ಬರುತ್ತದೆ. ಯಾವುದಾದರೂ ಸಾಧಕರೊಂದಿಗೆ ಫೋಟೋ ತೆಗೆಸಿಕೊಳ್ಳುವುದಾದರೆ ಆಗಬಹುದು. ಆದರೆ ನಮ್ಮ ಪ್ರಧಾನಿ ಏನು ಓದಿದ್ದಾರೆ ಎಂಬುದೇ ಇಂದಿಗೂ ಯಾರಿಗೂ ಗೊತ್ತಿಲ್ಲ ಎಂದು ಹೇಳಿದರು.
ಇದು ಆಕ್ರೋಶದ ಕಿಡಿಹೊತ್ತಿಸಿತು. ವಿಪಕ್ಷ ಬಿಜೆಪಿ ಸದಸ್ಯರು ಆಡಳಿತ ಪಕ್ಷದ ಮೇಲೆ ಮುಗಿಬಿದ್ದರು. ಒಬ್ಬ ಪ್ರಧಾನಿ ಬಗ್ಗೆ ಹೀಗೆ ಮಾತನಾಡುವುದು ಎಷ್ಟು ಸರಿ? ಹೀಗಾದರೆ, ನಿಮ್ಮ ಸೋನಿಯಾ ಗಾಂಧಿ ಏನು ಓದಿದ್ದಾರೆ ಅಂತ ಕೇಳಬೇಕಾಗುತ್ತದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಸಭಾಪತಿ ಬಸವರಾಜ ಹೊರಟ್ಟಿ, ಪ್ರಧಾನಿ ಬಗ್ಗೆ ಹಾಗೆಲ್ಲ ಮಾತನಾಡುವುದು ಸರಿಯಲ್ಲ. ಅದನ್ನು ಕಡತದಿಂದ ತೆಗೆದುಹಾಕುವಂತೆ ಸೂಚಿಸಿದರು. ಇದಾದ ಮೇಲೂ ವಾಗ್ವಾದ ಮುಂದುವರಿದಾಗ, ಗದ್ದಲದ ವಾತಾವರಣ ಸೃಷ್ಟಿಯಾಯಿತು. ಕೊನೆಗೆ ಸದನವನ್ನು ಸೋಮವಾರಕ್ಕೆ ಮುಂದೂಡಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Kolkata: ಶನಿವಾರದಿಂದ ತುರ್ತು ಸೇವೆ ಪುನರಾರಂಭಿಸಲು ಕಿರಿಯ ವೈದ್ಯರ ನಿರ್ಧಾರ
ತಿಮ್ಮಾಪುರ ಮಾತಿಗೆ ಯತ್ನಾಳ ಪರೋಕ್ಷ ಟಾಂಗ್;ನಾನು ಕಾನೂನಿಗೆ ಗೌರವ ನೀಡುವ ನಿಯತ್ತಿನ ನಾಯಿ
Tragedy: ಜ್ಯೂಸ್ ಕುಡಿದು ಅನಾರೋಗ್ಯಕ್ಕೆ ಒಳಗಾಗಿದ್ದ ಜನಪ್ರಿಯ ಗಾಯಕಿ ನಿಧನ… ಕೊಲೆ ಶಂಕೆ
Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ
Belagavi: ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.