Moodabidri: ಬಿರುಗಾಳಿಗೆ ಮನೆ, ಕಾರಿನ ಮೇಲೆ ಮರ ಬಿದ್ದು ಹಾನಿ
Team Udayavani, Jul 17, 2024, 12:18 AM IST
ಮೂಡುಬಿದಿರೆ: ಮಂಗಳವಾರ ಮುಂಜಾನೆ 3ರ ಸುಮಾರಿಗೆ ಬೀಸಿದ ಬಿರುಗಾಳಿಗೆ ಮೂಡುಬಿದಿರೆ ದೊಡ್ಮನೆ ರಸ್ತೆ ನಾಯಕ್ ಕಂಪೌಂಡ್ ಬಳಿ ಇದ್ದ ಭಾರೀ ಗಾತ್ರದ ಹುಣಿಸೆ ಮರ ಬುಡ ಸಮೇತ ಉರುಳಿ ಬಿದ್ದು ಮನೆ ಮತ್ತು ಕಾರಿಗೆ ಹಾನಿಯಾಗಿದೆ.
ಘಟನೆಯಲ್ಲಿ ಗಣೇಶ ನಾಯಕ್ ಅವರಿಗೆ ಸೇರಿದ, ಸರ್ವೋತ್ತಮ ಆಚಾರ್ಯ ಅವರು ವಾಸವಾಗಿರುವ ಬಾಡಿಗೆ ಮನೆಯ ಒಂದು ಭಾಗ, ಆವರಣ ಗೋಡೆ ಮತ್ತು ಹತ್ತಿರವೇ ನಿಲ್ಲಿಸಿದ್ದ ಕಾರಿನ ಎದುರಿನ ಗಾಜು ಸಂಪೂರ್ಣ ಪುಡಿಯಾಗಿದೆ.
ಘಟನೆಯಲ್ಲಿ ಕಾರಿನ ಹತ್ತಿರ ಇದ್ದ ವಿದ್ಯುತ್ ಕಂಬ ತುಂಡಾಗಿ ಬಿದ್ದಿದೆ. ಆ ಸಂದರ್ಭ ವಿದ್ಯುತ್ ಪೂರೈಕೆ ಇಲ್ಲದೇ ಇದ್ದಕಾರಣ ಹೆಚ್ಚಿನ ಅಪಾಯ ಸಂಭವಿಸಿಲ್ಲ. ಮಾಹಿತಿ ಪಡೆದ ಪುರಸಭೆಯವರು ಮರವನ್ನು ತೆರವುಗೊಳಿಸಿದ್ದಾರೆ ಮತ್ತು ಮೆಸ್ಕಾಂ ಸಿಬಂದಿ ಕಂಬ ಬದಲಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Udupi: ಕರ್ತವ್ಯಲೋಪ: 80 ಪೊಲೀಸ್ ಸಿಬಂದಿ ಅಮಾನತು; ಎಸ್ಪಿ ಕಟ್ಟುನಿಟ್ಟಿನ ಕ್ರಮ
Mangaluru: ಶ್ರೀಮತಿ ಶೆಟ್ಟಿ ಕೊ* ಪ್ರಕರಣ: ಮೂವರ ಅಪರಾಧ ಸಾಬೀತು
Nagamangala Case ಬಂಧನದ ಭೀತಿ: ಊರು ಬಿಟ್ಟ ಯುವಕರು
Officers Meeting: ವಸತಿ ಯೋಜನೆ ಫಲಾನುಭವಿಗಳಿಗೆ ಶೀಘ್ರ ಅನುದಾನ: ಸಂಸದ ಕೋಟ ಸೂಚನೆ
Daily Horoscope: ಭವಿಷ್ಯದ ಕುರಿತು ವಿನಾಕಾರಣ ಚಿಂತೆ ಬಿಡಿ,ಉದ್ಯಮದಲ್ಲಿ ಪ್ರಗತಿ ತೃಪ್ತಿಕರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.