Moodbidri ಮೊಸರು ಕುಡಿಕೆ ಉತ್ಸವ: ಅಭಯಚಂದ್ರರಿಗೆ ಶ್ರೀ ಕೃಷ್ಣ ಪ್ರಶಸ್ತಿ ಪ್ರದಾನ
Team Udayavani, Aug 27, 2024, 11:48 PM IST
ಮೂಡುಬಿದಿರೆ: ಇಲ್ಲಿನ ಶ್ರೀ ಗೋಪಾಲಕೃಷ್ಣ ದೇವಸ್ಥಾನದ 108ನೇ ವರ್ಷದ ಮೊಸರು ಕುಡಿಕೆ ಸಂಭ್ರಮದೊಂದಿಗೆ ಶ್ರೀ ಕೃಷ್ಣ ಫ್ರೆಂಡ್ಸ್ ಸರ್ಕಲ್ ಆಯೋಜಿಸಿದ ಮೊಸರು ಕುಡಿಕೆ ಉತ್ಸವ-ಸಾಂಸ್ಕೃತಿಕ ಕಲಾಪದ ಸಭಾ ಕಾರ್ಯಕ್ರಮದಲ್ಲಿ ಮಾಜಿ ಸಚಿವ ಕೆ. ಅಭಯಚಂದ್ರ ಅವರಿಗೆ “ಶ್ರೀಕೃಷ್ಣ ಪ್ರಶಸ್ತಿ-2024′ ಪ್ರದಾನಗೈದು ಸಮ್ಮಾನಿಸಲಾಯಿತು.
ಶ್ರೀಕೃಷ್ಣ ಫ್ರೆಂಡ್ಸ್ ಸರ್ಕಲ್ನ ಗೌರವ ಅಧ್ಯಕ್ಷ ಡಾ| ಎಂ. ಮೋಹನ ಆಳ್ವ ಮಾತನಾಡಿದರು. ಶಾಸಕ ಉಮಾನಾಥ ಕೋಟ್ಯಾನ್, ಸಂಸದ ಬ್ರಿಜೇಶ್ ಚೌಟ, ಜಿಲ್ಲಾ ಬಿಜೆಪಿ ಮಾಜಿ ಅಧ್ಯಕ್ಷ ಸುದರ್ಶನ ಎಂ., ಕೆ. ಶ್ರೀಪತಿ ಭಟ್, ಡಾ| ಎಂ. ವಿನಯ ಕುಮಾರ ಹೆಗ್ಡೆ, ಐ. ರಾಘವೇಂದ್ರ ಪ್ರಭು, ಪ್ರಭಾಚಂದ್ರ ಜೈನ್ ಉಪಸ್ಥಿತರಿದ್ದರು.
ಸಂಸ್ಥೆಯ ಗೌರವ ಅಧ್ಯಕ್ಷ ಬೊಕ್ಕಸ ಗಣೇಶ ರಾವ್, ಉದ್ಯಮಿ ಸುಗಂಧಿ ಹರೀಶ್ ಅಮೀನ್ ಮುಂಬಯಿ, ಡಾ| ಸಾತ್ವಿಕಾಕೃಷ್ಣ ಮಂಜೇಶ್ವರ ಇವರನ್ನು ಸಮ್ಮಾನಿಸಲಾಯಿತು. ಪುರಸಭೆ ನೂತನ ಅಧ್ಯಕ್ಷೆ ಜಯಶ್ರೀ ಕೇಶವ್, ಉಪಾಧ್ಯಕ್ಷ ನಾಗರಾಜ ಪೂಜಾರಿ, “ಮೂಡಾ’ ನೂತನ ಅಧ್ಯಕ್ಷ ಹರ್ಷವರ್ಧನ ಪಡಿವಾಳ, ವೃತ್ತನಿರೀಕ್ಷಕ ಸಂದೇಶ್ ಪಿ.ಜಿ., ಶ್ರೀಕೃಷ್ಣ ವೇಷಧಾರಿ ಚಂದ್ರ
ಶೇಖರ ಮಳಲಿ ಅವರನ್ನು, ನೇತಾಜಿ ಬ್ರಿಗೇಡ್, ಸರ್ವೋದಯ ಫ್ರೆಂಡ್ಸ್, ಪವರ್ ಫ್ರೆಂಡ್ಸ್ ಇವುಗಳನ್ನು ಗೌರವಿಸಲಾಯಿತು. ಅಧ್ಯಕ್ಷ ಸಂತೋಷ್ ಕುಮಾರ್ ಸ್ವಾಗತಿಸಿದರು. ಕೆ.ವಿ.ರಮಣ್ ನಿರೂಪಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Udupi: ಕರ್ತವ್ಯಲೋಪ: 80 ಪೊಲೀಸ್ ಸಿಬಂದಿ ಅಮಾನತು; ಎಸ್ಪಿ ಕಟ್ಟುನಿಟ್ಟಿನ ಕ್ರಮ
Mangaluru: ಶ್ರೀಮತಿ ಶೆಟ್ಟಿ ಕೊ* ಪ್ರಕರಣ: ಮೂವರ ಅಪರಾಧ ಸಾಬೀತು
Nagamangala Case ಬಂಧನದ ಭೀತಿ: ಊರು ಬಿಟ್ಟ ಯುವಕರು
Officers Meeting: ವಸತಿ ಯೋಜನೆ ಫಲಾನುಭವಿಗಳಿಗೆ ಶೀಘ್ರ ಅನುದಾನ: ಸಂಸದ ಕೋಟ ಸೂಚನೆ
Daily Horoscope: ಭವಿಷ್ಯದ ಕುರಿತು ವಿನಾಕಾರಣ ಚಿಂತೆ ಬಿಡಿ,ಉದ್ಯಮದಲ್ಲಿ ಪ್ರಗತಿ ತೃಪ್ತಿಕರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.